Homeಮುಖಪುಟಚುನಾವಣೆ ಗೆಲ್ಲಲು AAP ಕೋಮು ತಂತ್ರವನ್ನು ಬಳಸಿದೆ: ಬಿಜೆಪಿ ಆರೋಪ

ಚುನಾವಣೆ ಗೆಲ್ಲಲು AAP ಕೋಮು ತಂತ್ರವನ್ನು ಬಳಸಿದೆ: ಬಿಜೆಪಿ ಆರೋಪ

- Advertisement -
- Advertisement -

ದೆಹಲಿಯ ಎಎಪಿ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುತ್ತಾ ನಾವು ಮನೆ ಮನೆಗೆ ಹೋಗುತ್ತಿದ್ದೇವೆ. ಅವರು ಆಡಳಿತದ ವಿಚಾರದಲ್ಲಿ ಜನರನ್ನು ದಾರಿ ತಪ್ಪಿಸಿದ್ದಾರೆ ಮತ್ತು ಚುನಾವಣೆಯನ್ನು ಗೆಲ್ಲಲು ಕೋಮು ತಂತ್ರಗಳನ್ನು ಬಳಸಿದ್ದಾರೆ ಎಂದು ದೆಹಲಿ ಬಿಜೆಪಿಯ ವಕ್ತಾರ ಪ್ರವೀಣ್ ಶಂಕರ್ ಕಪೂರ್ ಭಾನುವಾರ ಆರೋಪಿಸಿದ್ದಾರೆ.

ಲೋಕಸಭೆಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ರಾಜಧಾನಿಯ ಆಡಳಿತಾತ್ಮಕ ವ್ಯವಹಾರಗಳ ಬಗ್ಗೆ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರವನ್ನು ನೀಡುವ ಮಸೂದೆಯ ಪ್ರಸ್ತಾಪವನ್ನು ಆಮ್ ಆದ್ಮಿ ಪಕ್ಷ ಟೀಕಿಸಿದೆ. ಬಿಜೆಪಿಯ ದೆಹಲಿ ಘಟಕವು ಮನೆ ಮನೆಗೆ ತೆರಳಿ ಚುನಾಯಿತ ಸರ್ಕಾರದ ಬದಲು ಲೆಪ್ಟಿನೆಂಟ್ ಗವರ್ನರ್‌ ಆಡಳಿತದ ದೆಹಲಿಯ ಕಲ್ಪನೆಯನ್ನು ಅನುಮೋದಿಸುತ್ತಿದೆ ಎಂದು ಆರೋಪಿಸಿದೆ.

“ಬಿಜೆಪಿ ಸ್ವಯಂಸೇವಕರನ್ನು ಮನೆಮನೆಗಳಿಗೆ ಕಳುಹಿಸಿ, ಚುನಾಯಿತ ಸರ್ಕಾರಕ್ಕಿಂತ ಲೆಫ್ಟಿನೆಂಟ್ ಗವರ್ನರ್‌ ದೆಹಲಿಯನ್ನು ಆಳುವುದು ಉತ್ತಮ ಎಂದು ಜನರಿಗೆ ಹೇಳುತ್ತಿದೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತಿದೆ. ಪುರಸಭೆಯ ಮಟ್ಟದಲ್ಲಿಯೂ ಅವರು ವಿಫಲರಾಗುತ್ತಿದ್ದಾರೆ” ಎಂದು ಎಎಪಿಯ ಮುಖ್ಯ ವಕ್ತಾರ ಸೌರಭ್ ಭಾರದ್ವಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ತೆಲಂಗಾಣ: ಬಿಜೆಪಿ ಅಭ್ಯರ್ಥಿ ವಿರುದ್ಧ ಜಯ ಸಾಧಿಸಿದ ಪಿ.ವಿ ನರಸಿಂಹ ರಾವ್ ಪುತ್ರಿ

“ದೆಹಲಿಯಲ್ಲಿ ಚುನಾಯಿತ ಸರ್ಕಾರದ ಹಕ್ಕುಗಳನ್ನು ಕೇಂದ್ರ ಸರ್ಕಾರ ಕಿತ್ತುಕೊಳ್ಳುವ ಕಲ್ಪನೆಯನ್ನು ಅವರು ಅನುಮೋದಿಸಲು ಇದು ಒಂದೇ ಕಾರಣವಾಗಿದೆ. ಈ ವಿಷಯದ ಬಗ್ಗೆ ಚರ್ಚೆ ನಡೆಸಲು ನಾನು ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ಅವರಿಗೆ ಸವಾಲು ಹಾಕುತ್ತೇನೆ” ಎಂದು ಭಾರದ್ವಾಜ್ ಹೇಳಿದ್ದಾರೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಸೂದೆಯನ್ನು “ಅಸಂವಿಧಾನಿಕ” ಮತ್ತು “ಪ್ರಜಾಪ್ರಭುತ್ವ ವಿರೋಧಿ” ಎಂದು ಕರೆದಿದ್ದರು.

ಈ ಬಗ್ಗೆ ಪ್ರತಿಕ್ರಿಯಸಿರುವ ದೆಹಲಿ ಬಿಜೆಪಿ ವಕ್ತಾರ ಪ್ರವೀಣ್ ಶಂಕರ್ ಕಪೂರ್, “ಲೆಫ್ಟಿನೆಂಟ್ ಗವರ್ನರ್‌ ಆಡಳಿತದ ದೆಹಲಿಯ ಕಲ್ಪನೆಯನ್ನು ನಾವು ಎಂದಿಗೂ ಅನುಮೋದಿಸಿಲ್ಲ. ದೆಹಲಿಯ ಎಎಪಿ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುತ್ತಾ ನಾವು ಮನೆ ಮನೆಗೆ ಹೋಗುತ್ತಿದ್ದೇವೆ” ಎಂದು ಹೇಳಿದ್ದಾರೆ.

“ಅವರು ಆಡಳಿತದ ವಿಚಾರದಲ್ಲಿ ಜನರನ್ನು ದಾರಿ ತಪ್ಪಿಸಿದ್ದಾರೆ ಮತ್ತು ಚುನಾವಣೆಯನ್ನು ಗೆಲ್ಲಲು ಕೋಮು ತಂತ್ರಗಳನ್ನು ಬಳಸಿದ್ದಾರೆ. ನಮ್ಮ ಘಟಕದ ಅಧ್ಯಕ್ಷರಿಗೆ ಸವಾಲು ಹಾಕುವ ಬದಲು, ಆಡಳಿತದ ಮುಂಚೂಣಿಯಲ್ಲಿ ಎಎಪಿ ಹೇಗೆ ಕಾರ್ಯನಿರ್ವಹಿಸಿದೆ ಎಂಬುದರ ಕುರಿತು ಚರ್ಚೆಗೆ ಭಾರದ್ವಾಜ್ ಸಿದ್ಧರಾಗಬೇಕು” ಎಂದು ಕಪೂರ್‌ ಹೇಳಿದ್ದಾರೆ.

ಇದನ್ನೂ ಓದಿ: ಚುನಾವಣಾ ಭಾಷಣದಲ್ಲಿ ಮೋದಿ, ಶಾ ಮತ್ತು ಪ್ರಿಯಾಂಕಾ ಗಾಂಧಿ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...