Homeಮುಖಪುಟ100 ಕೋಟಿ ಲಂಚದ ಆರೋಪ, ಮೈತ್ರಿ ಪಕ್ಷಗಳ ಸಭೆಯಲ್ಲಿ ಅನಿಲ್ ದೇಶ್‌ಮುಖ್ ಭವಿಷ್ಯ

100 ಕೋಟಿ ಲಂಚದ ಆರೋಪ, ಮೈತ್ರಿ ಪಕ್ಷಗಳ ಸಭೆಯಲ್ಲಿ ಅನಿಲ್ ದೇಶ್‌ಮುಖ್ ಭವಿಷ್ಯ

- Advertisement -
- Advertisement -

ತಿಂಗಳಿಗೆ 100 ಕೋಟಿ ಲಂಚ ಸಂಗ್ರಹಿಸಿ ಕೊಡಲು ಗೃಹ ಸಚಿವರು ಸೂಚಿಸಿದ್ದರು ಎಂಬ ಐಪಿಎಸ್ ಅಧಿಕಾರಿ ಪರಮ್ ಬೀರ್ ‌ಸಿಂಗ್ ಆರೋಪದ ಹಿನ್ನೆಲೆ ಇಂದು ಮಹಾರಾಷ್ಟ್ರ ಸರ್ಕಾರದ ಮೈತ್ರಿಪಕ್ಷಗಳು ದೆಹಲಿಯಲ್ಲಿ ಸಭೆ ನಡೆಸಲಿವೆ. ಗೃಹ ಸಚಿವ ಅನಿಲ್ ದೇಶ್‌ಮುಖ್ ರಾಜೀನಾಮೆಗೆ ಪ್ರತಿಪಕ್ಷಗಳು ಒತ್ತಾಯಿಸಿವೆ ಹಾಗಾಗಿ ದೇಶ್‌ಮುಖ್‌ ಮೇಲಿನ ಆರೋಪದ ಕುರಿತು ಸಭೆಯಲ್ಲಿ ಚರ್ಚಿಸಲಿವೆ.

ಮುಖೇಶ್ ಅಂಬಾನಿ ಮನೆ ಮುಂದೆ ಜಿಲೆಟಿನ್ ಕಡ್ಡಿಗಳಿದ್ದ ವಾಹನ ಪತ್ತೆಯಾದ ಪ್ರಕರಣದ ತನಿಖೆಯಲ್ಲಿ ಲೋಪ ಎಸಗಿದ ಆರೋಪದ ಮೇಲೆ ಮುಂಬೈ ಪೊಲೀಸ್ ಕಮಿಷನರ್ ಹುದ್ದೆಯಿಂದ ವರ್ಗಾವಣೆಗೊಂಡ ಪರಮ್ ಬೀರ್ ಸಿಂಗ್ ಗೃಹ ಸಚಿವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿ, ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದರು.

ಅನಿಲ್ ದೇಶಮುಖ್ ರಾಜೀನಾಮೆಗೆ ಬಿಜೆಪಿ ಒತ್ತಾಯಿಸುತ್ತಿದ್ದು, ಮೈತ್ರಿಪಕ್ಷಗಳಲ್ಲೂ ಕೆಲವರು ಇಂಥದ್ದೇ ಅಭಿಪ್ರಾಯ ಹೊಂದಿದ್ದಾರೆ. ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ್ದ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಮಾಜಿ ಪೊಲೀಸ್ ಅಧಿಕಾರಿ ಜುಲಿಯೊ ರಿಬೆರೋ ಅವರಿಂದ ಈ ಬಗ್ಗೆ ತನಿಖೆ ಮಾಡಿಸಬೇಕು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ತಿಂಗಳಿಗೆ 100 ಕೋಟಿ ಲಂಚ ಆರೋಪ: ಗೃಹ ಸಚಿವ ದೇಶ್‌ಮುಖ್ ರಾಜೀನಾಮೆಗೆ ಒತ್ತಡ

ಅನಿಲ್ ದೇಶ್‌ಮುಖ್ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷ ಬಿಜೆಪಿ ಮುಂಬೈ, ಪುಣೆ ಮತ್ತು ನಾಗಪುರಗಳಲ್ಲಿ ಪ್ರತಿಭಟನೆ ನಡೆಸಿದೆ. ಗೃಹ ಸಚಿವರು 100 ಕೋಟಿ ರೂ. ಸಂಗ್ರಹಿಸಲು ಸೂಚಿಸಿದ್ದಾರೆ ಎನ್ನುವುದಾದರೆ, ಉಳಿದ ಸಚಿವರು ಎಷ್ಟೆಷ್ಟು ಸಂಗ್ರಹಕ್ಕೆ ಸೂಚಿಸಿದ್ದರು ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಪ್ರಶ್ನಿಸಿದ್ದಾರೆ.

ಆರೋಪ ಸುಳ್ಳು, ತಮ್ಮನ್ನು ಉಳಿಸಿಕೊಲ್ಳಲು ಪರಮ್ ಬೀರ್ ಸಿಂಗ್ ಹೀಗೆ ಹೇಳುತ್ತಿದ್ದಾರೆ. ತಮ್ಮ ಮತ್ತು ಮಹಾ ವಿಕಾಸ್ ಅಘಾಡಿ ಮೈತ್ರಿ ಸರ್ಕಾರದ ವಿರುದ್ಧ ನಡೆದಿರುವ  ಷಡ್ಯಂತ್ರವಿದು ಎಂದು ಗೃಹ ಸಚಿವ ಅನಿಲ್ ದೇಶ್‌ಮುಖ್ ಪ್ರಕಟಣೆ ನೀಡಿದ್ದಾರೆ.

ಪ್ರಕರಣ ಸಂಬಂಧ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಶರದ್ ಪವಾರ್, ಈ ಆರೋಪ ಬಂದಿರುವ ಸಂದರ್ಭವೇ ಅನುಮಾನಾಸ್ಪದವಾಗಿದೆ. ವರ್ಗಾವಣೆಗೊಂಡ ನಂತರ ಮಾಜಿ ಪೊಲೀಸ್ ಆಯುಕ್ತರು 100 ಕೋಟಿ ಲಂಚದ ಆರೋಪ ಮಾಡಿದ್ದಾರೆ. ಮೈತ್ರಿ ಸರ್ಕಾರವನ್ನು ಬೀಳಿಸುವ ಸಂಚು ಇದರ ಹಿಂದೆ ಇರಬಹುದು. ಆದರೆ ನಾವು ಸಮಲೋಚನೆ ನಡೆಸಿ ಎಲ್ಲ ಸರಿಪಡಿಸುತ್ತೇವೆ. ಸರ್ಕಾರ ಐದು ವರ್ಷ ಗಟ್ಟಿಯಾಗಿ ಇರಲಿದೆ ಎಂದಿದ್ದಾರೆ.

ಜುಲಿಯೋ ರಿಬೆರೋ ದಕ್ಷತೆ ಬಗ್ಗೆ ಎಲ್ಲರಿಗೂ ತಿಳಿದಿದೆ. ಅವರ ತನಿಖೆಯಲ್ಲಿ ಯಾರೂ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ಪವಾರ್ ಅಭಿಪ್ರಾಯ ಪಟ್ಟಿದ್ದಾರೆ. ಇದು ಗಂಭೀರ ಪ್ರಕರಣವಾದ್ದರಿಂದ ದೇಶ್‌ಮುಖ್ ರಾಜೀನಾಮೆ ಪಡೆಯುವುದು ಸೂಕ್ತ ಎಂದು ಸಿಎಮ ಠಾಕ್ರೆ ಕೂಡ ಯೋಚಿಸಿದ್ದಾರೆ ಎಂದು ಮೈತ್ರಿಕೂಟದ ಉನ್ನತ ನಾಯಕರೊಬ್ಬರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ತಿಂಗಳಿಗೆ 100 ಕೋಟಿ ಲಂಚ ಸಂಗ್ರಹಕ್ಕೆ ಗೃಹ ಸಚಿವರ ಸೂಚನೆ- ಪರಮ್ ಬೀರ್ ಸಿಂಗ್ ಆರೋಪ

ಅಂಬಾನಿ ಮನೆ ಎದುರು ಪತ್ತೆಯಾದ ಜಿಲೆಟಿನ್ ಕಡ್ಡಿಗಳಿದ್ದ ವಾಹನ ಸುತ್ತಲಿನ ತನಿಖೆಯಲ್ಲಿ ಪರಮ್ ಬೀರ್ ಸಿಂಗ್ ಲೋಪ ಎಸಗಿದ್ದು ಖಾತರಿಯಾದ ಕಾರಣ ತಾನು ಮತ್ತು ಸಿಎಂ ಠಾಕ್ರೆ ಅವರನ್ನು ಕಮೀಷನರ್ ಹುದ್ದೆಯಿಂದ ವರ್ಗಾವಣೆ ಮಾಡಿದ್ದೆವು. ಈ ಕಾರಣಕ್ಕೆ ಸಿಂಗ್ ಈಗ ತಮ್ಮ ವಿರುದ್ಧ ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಅವರ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸುವುದಾಗಿ ಅನಿಲ್ ದೇಶಮುಖ್ ತಿಳಿಸಿದ್ದಾರೆ.

’ಆ ಹುದ್ದೆಯಿಂದ ತೆಗೆದು ಹಾಕುವ ಒಂದು ದಿನ ಮೊದಲೆ ಸಿಂಗ್ ಅವರಿಗೆ ತಿಳಿದಿತ್ತು. ಹಿಂದಿನ ದಿನ ಅವರು ಸಹಾಯಕ ಪೊಲೀಸ್ ಕಮೀಷನರ್ ಸಂಜಯ್ ಪಾಟೀಲರೊಂದಿಗೆ ವ್ಯಾಟ್ಸಾಪ್ ಚಾಟ್ ನಡೆಸಿ, ತಮ್ಮ ವಿರುದ್ಧ ಸಾಕ್ಷ್ಯ ಸಂಗ್ರಹಕ್ಕೆ ಯತ್ನಿಸಿದ್ದರು’ ಎಂದು ದೇಶಮುಖ್ ಆರೋಪಿಸಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಜಿಲೆಟಿನ್ ಪ್ರಕರಣ ಮತ್ತು ವಾಹನ ಮಾಲೀಕ ಹಿರೇನ್ ಅವರ ಸಾವಿಗೆ ಸಂಬಧಿಸಿದಂತೆ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ಎನ್‌ಐಎ ಬಂಧಿಸಿದ ನಂತರ ಈ ಬೆಳವಣಿಗೆಗಳು ನಡೆದಿವೆ.

ಪರಮ್ ಬೀರ್ ಸಿಂಗ್ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಬರೆದ ಪತ್ರದಲ್ಲಿ, ಸಚಿವರು ಮುಂಬೈ ಪೊಲೀಸ್ ಅಧಿಕಾರಿಗಳಿಗೆ ಪ್ರತಿ ತಿಂಗಳು 100 ಕೋಟಿ ರೂಪಾಯಿ ಕಲೆಕ್ಷನ್ ಗುರಿಯನ್ನು ನಿಗದಿಪಡಿಸಿದ್ದರು. ರೆಸ್ಟೋರೆಂಟ್‌ಗಳು, ಪಬ್‌ಗಳು, ಬಾರ್‌ಗಳು ಮತ್ತು ಹುಕ್ಕಾ ಪಾರ್ಲರ್‌ಗಳಿಂದ ಹಣವನ್ನು ಸಂಗ್ರಹಿಸಲು ಸೂಚಿಸಿದ್ದರು. ಫೆಬ್ರವರಿಯಲ್ಲಿ ಈ ಬೇಡಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾಡುತ್ತಾರೆ ಎಚ್ಚರ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...