Homeಕರ್ನಾಟಕತುಮಕೂರು: ಸಮಾಧಿ ಗುಂಡಿಯಿಂದ ದಲಿತ ಶಿಶುವಿನ ಮೃತದೇಹ ಹೊರತೆಗೆಸಿ ಅಮಾನವೀಯತೆ!

ತುಮಕೂರು: ಸಮಾಧಿ ಗುಂಡಿಯಿಂದ ದಲಿತ ಶಿಶುವಿನ ಮೃತದೇಹ ಹೊರತೆಗೆಸಿ ಅಮಾನವೀಯತೆ!

- Advertisement -
- Advertisement -

ಕಲ್ಲುಬಂಡೆ ಸಿಡಿದ ಶಬ್ದಕ್ಕೆ ಬೆಚ್ಚಿಬಿದ್ದು ಮೃತಪಟ್ಟಿದ್ದ ದಲಿತ ಕೂಲಿಕಾರ ಕುಟುಂಬವೊಂದರ ಮೂರು ತಿಂಗಳ ಶಿಶುವೊಂದರ ಶವವನ್ನು ಗುಂಡಿಯಿಂದ ಹೊರತೆಗೆಸಿ ಶವ ಸಂಸ್ಕಾರಕ್ಕೆ ಬೇರೆಡೆಗೆ ಕಳುಹಿಸಿರುವ ಅಮಾನವೀಯ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಜಂಪೇನ ಹಳ್ಳಿಯಲ್ಲಿ ಭಾನುವಾರ ನಡೆದಿದೆ.

ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಎತ್ತಿನಹೊಳೆ ಪೈಪ್‌ಲೈನ್‌‌ ಕಾಮಗಾರಿಗಾಗಿ ನಡೆದ ಕಲ್ಲುಬಂಡೆ ಸಿಡಿದ ಶಬ್ದಕ್ಕೆ ಮೂರು ತಿಂಗಳ ಶಿಶು ಮೃತಪಟ್ಟಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಮೃತಪಟ್ಟ ಶಿಶುವನ್ನು ಗ್ರಾಮದ ಕ್ರಾಸ್ ಬಳಿಯ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ಮಾಡಲು ಗುಂಡಿ ತೋಡಿ, ವಿಧಿ ವಿಧಾನ ಮುಗಿಸಿ ಗುಂಡಿಯಲ್ಲಿಟ್ಟ ನಂತರ ಪಕ್ಕದ ಜಮೀನಿನ ಕಾವಲುಗಾರನೊಬ್ಬ ಆಗಮಿಸಿ ಹಸುಳೆಯ ಮೃತ ದೇಹವನ್ನು ಗುಂಡಿಯಿಂದ ಹೊರತೆಗೆಸಿ, ದಲಿತ ಕುಟುಂಬವನ್ನು ಬೆದರಿಸಿ ಬೇರೆಡೆಗೆ ಕಳುಹಿಸಿದ್ದಾನೆ.

ಇದನ್ನೂ ಓದಿ: ಎಲ್ಲೆಲ್ಲೋ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ ನಾಯಕರಿಗಾಗಿ ಬಟ್ಟೆ ಖರೀದಿ- ಸಿದ್ದರಾಮಯ್ಯ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಮುಖಂಡ ಅಗ್ರಹಾರ ನಾಗರಾಜ್, “ಅದೇ ಸ್ಮಶಾನದಲ್ಲಿ ಹಿಂದಿನಿಂದಲೂ ಶವಸಂಸ್ಕಾರ ಮಾಡುತ್ತಿದ್ದಾರೆ. ಹಲವಾರು ಸಮಾಧಿಗಳು ಈಗಲೂ ಅಲ್ಲಿ ಇವೆ. ಆದರೆ ಈಗ ಆ ಜಮೀನನ್ನು ‘ಶಾಹಿ ಗಾರ್ಮೆಂಟ್ಸ್’ ಅವರು ತಮ್ಮದು ಎಂದು ವಾದಿಸುತ್ತಿದ್ದಾರೆ. ಹೀಗಾದರೆ ಜಮೀನು ಇಲ್ಲದ ಬಡ ದಲಿತ ಕುಟುಂಬಗಳು ಏನು ಮಾಡಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆಯ ವಿಡಿಯೋ ನೋಡಿ►►

ಘಟನೆಯ ಬಗ್ಗೆ ನಾನುಗೌರಿ.ಕಾಂ‌‌ ಜೊತೆ ಮಾತನಾಡಿದ ಕೊರಟಗೆರೆ ತಾಲೂಕಿನ ತಹಸೀಲ್ದಾರ್‌ ಗೋವಿಂದರಾಜು ಅವರು, “ಘಟನೆ ಗಮನಕ್ಕೆ ಬಂದ ಕೂಡಲೆ ಅಲ್ಲಿಗೆ ತೆರಳಿದ್ದು, ಶವವನ್ನು ಹೊರತೆಗೆಸಿರುವ ಕಾವಲುಗಾರ ಪರಾರಿಯಾಗಿದ್ದ. ಶವ ಸಂಸ್ಕಾರ ಮಾಡಲು ಪ್ರಯತ್ನಪಟ್ಟ ಜಮೀನಿನಲ್ಲಿ ಹಿಂದಿನಿಂದಲೂ ಸಮಾಧಿ ಮಾಡುತ್ತಾ ಬರುತ್ತಿದ್ದರಾದರೂ, ಅದು ಖಾಸಗಿ ಹಿಡುವಳಿಯ ಜಮೀನಾಗಿದೆ. ಅದನ್ನು ಈಗ ಶಾಹಿ ಗಾರ್ಮೆಂಟ್ಸ್‌ ಅವರು ಖರೀದಿಸಿದ್ದು, ಅದಕ್ಕೆ ಕಾಂಪೌಂಡ್ ಹಾಕಿದ್ದಾರೆ ಎಂದು ತಿಳಿದುಬಂದಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಖಾಸಗೀಕರಣ ವಿರೋಧಿ ದಿನಕ್ಕೆ ರೈತರು, ಕಾರ್ಮಿಕರು ಒಂದಾಗಿದ್ದಾರೆ- ಸಂಯುಕ್ತ ಕಿಸಾನ್ ಮೋರ್ಚಾ

“ನಮ್ಮ ಇಲಾಖೆಯಿಂದ ‘ಶಾಹಿ ಗಾರ್ಮೆಟ್ಸ್’ ಜಮೀನುನಿರುವ ಹಳ್ಳವು ಒತ್ತುವರಿ ಆಗಿದೆಯೆ ಎಂದು ಸರ್ವೆ ಮಾಡಿಸಿ ತನಿಖೆ ಮಾಡುತ್ತೇವೆ. ಮಗುವಿನ ಪೋಷಕರು ವ್ಯಕ್ತಿಯ ವಿರುದ್ದ ದೂರು ದಾಖಲಿಸಲಿದ್ದೇವೆ ಎಂದು ತಿಳಿಸಿದ್ದಾರೆ. ನಾವು ಸಮಾಜ ಕಲ್ಯಾಣ ಇಲಾಖೆಯ ಜೊತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಮಗುವೊಂದು ಮೃತಪಡುವಷ್ಟು ಶಬ್ದ ಹೇಗೆ ಉಂಟಾಯಿತು ಎಂಬ ಬಗ್ಗೆ ಪ್ರಶ್ನೆ ಉತ್ತರಿಸಿದ ಅವರು, “ಸ್ಥಳದಲ್ಲಿ ಎತ್ತಿನ ಹೊಳೆ ಪೈಪ್‌ಲೈನ್ ಕೆಲಸ ನಡೆಯುತ್ತಿದೆ. ಸ್ಪೋಟವನ್ನು ಯಾವ ದಿನ ಮಾಡಿದರು ಎಂಬ ಬಗ್ಗೆ ಪರಿಶೀಲಿಸುತ್ತೇವೆ” ಎಂದು ತಿಳಿಸಿದ್ದಾರೆ.

ಘಟನೆಯ ನಂತರ ದಲಿತ ಕುಟುಂಬವು ಶವವನ್ನು ಪಕ್ಕದ ರಾಜಕಾಲುವೆಯ ಬಳಿ ಸಂಸ್ಕಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.


ಇದನ್ನೂ ಓದಿ: ‘ಆಟ ಶುರು – ಬಂಗಾಳದಲ್ಲಿ ಬಿಜೆಪಿ ತೊಲಗಿಸಿ’: ರಾಕೇಶ್ ಟಿಕಾಯತ್ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...