Homeನಿಜವೋ ಸುಳ್ಳೋಕಾಲುಭಾಗ ಸತ್ಯ, ಮುಕ್ಕಾಲು ಪಾಲು ಮಿಥ್ಯ: ಚೌಕಿದಾರ್ ಚೋರ್ ಹೈ ಮತ್ತು ಸುಪ್ರಿಂಗೆ ರಾಹುಲ್ ಉತ್ತರ!

ಕಾಲುಭಾಗ ಸತ್ಯ, ಮುಕ್ಕಾಲು ಪಾಲು ಮಿಥ್ಯ: ಚೌಕಿದಾರ್ ಚೋರ್ ಹೈ ಮತ್ತು ಸುಪ್ರಿಂಗೆ ರಾಹುಲ್ ಉತ್ತರ!

- Advertisement -
- Advertisement -

ಒಂದು ಫೇಕ್ ನ್ಯೂಸ್ ಅನ್ನು ಅತ್ಯಂತ ತ್ವರಿತಗತವಾಗಿ ಬಿಜೆಪಿ ಐಟಿ ಸೆಲ್ ಹರಿಬಿಟ್ಟಿದೆ. ಅದು ದೇಶದ ಬಹುಭಾಷೆಗಳಲ್ಲಿ ಈಗ ಹರಿದಾಡುತ್ತಿದೆ. ಅದರ ಪ್ರಕಾರ, ‘ಸುಳ್ಳು ಹೇಳಿ ಸುಪ್ರಿಂ ಮುಂದೆ ಬೆತ್ತಲಾದ ರಾಹುಲ್ ಗಾಂಧಿ..’

ಇದರಲ್ಲಿ ಕಾಲುಭಾಗ ಸತ್ವವಷ್ಟೇ ಇದೆ. ಬಿಜೆಪಿ ಹಬ್ಬಿಸಿರುವ ಸುದ್ದಿ ಪ್ರಕಾರ, ‘ಸುಪ್ರಿಂಕೋರ್ಟೆ ಚೌಕಿದಾರ್ ಚೋರ್ ಹೈ ಎಂದಿದೆಯೆಂದು ಹೇಳಿದ್ದ ರಾಹುಲ್ ಸುಪ್ರಿಂಕೋರ್ಟಿಗೆ ಇವತ್ತು ಸಲ್ಲಿಸಿದ ಅಫಿಡವೆಟ್‍ನಲ್ಲಿ ತಮ್ಮ ತಪ್ಪು ಒಪ್ಪಿಕೊಂಡು ಕ್ಷಮೆ ಯಾಚಿಸಿದ್ದಾರೆ. ಇದರಿಂದ ರಫೆಲ್‍ನಲ್ಲಿ ಮೋದಿ ತಪ್ಪು ಮಾಡಿಲ್ಲ. ರಾಹುಲ್ ಬರೀ ಸುಳ್ಳಲ್ಲೇ ಪ್ರಚಾರ ಮಾಡುತ್ತಿದ್ದಾರೆ’ ಎಂದೆಲ್ಲ ವಿವರಿಸಲಾಗಿದೆ.


ಇದರಲ್ಲಿ ಕಾಲುಭಾಗ ಮಾತ್ರ ಸತ್ವವಷ್ಟೇ. ಬಿಜೆಪಿ ನಾಯಕಿ ಮೀನಾಕ್ಷಿ ಲೇಣಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿ, ರಫೆಲ್ ವಿಚಾರ ಇನ್ನೂ ಸಂಪೂರ್ಣ ಇತ್ಯರ್ಥವಾಗುವ ಮೊದಲೇ ರಾಹುಲ್ ಅವರು ‘ಸುಪ್ರಿಂಕೋರ್ಟೆ ಮೋದಿಯವರನ್ನು ಚೋರ್’ ಎಂದಿದೆ ಎಂಬರ್ಥದಲ್ಲಿ ಮಾತಾಡಿದ್ದಾರೆ ಎಂದು ದೂರು ಸಲ್ಲಿಸಿದ್ದರು. ಏ. 22ರೊಳಗೆ ಇದಕ್ಕೆ ಉತ್ತರ ನೀಡಲು ಸುಪ್ರಿಂ ರಾಹುಲ್‍ಗೆ ನೋಟಿಸ್ ನೀಡಿತ್ತು.
ಇಂದು (ಏ 22) ರಾಹುಲ್ ಸುಪ್ರಿಂಗೆ ನೀಡಿದ ಉತ್ತರ/ವಿವರಣೆಯಲ್ಲಿ, ‘ಚುನಾವಣಾ ಭಾಷಣ ಮಾಡುವಾಗ ಮಾತಿನ ಭರಾಟೆ ಮತ್ತು ಜೋಶ್‍ನಲ್ಲಿ ಹಾಗೆ ತಪ್ಪಾಗಿ ಹೇಳಿದ್ದೇನೆ. ಆದರೆ ನನ್ನ ಬಹುತೇಕ ಚುನಾವಣಾ ಭಾಷಣಗಳಲ್ಲಿ ‘ಬಡವರ ದುಡ್ಡನ್ನು ಹೊಡೆದು ಶ್ರೀಮಂತರನ್ನು ಉದ್ಧಾರ ಮಾಡುವ ಚೌಕಿದಾರ್ ಚೋರ್’ ಎಂದು ಹೇಳುತ್ತಲೇ ಬಂದಿದ್ದೇನೆ’ ಎಂದು ಸ್ಪಷ್ಟೀಕರಣ ನೀಡಿದ್ದಾರೆಯೇ ಹೊರತು ಅವರೆಲ್ಲೂ ಕ್ಷಮೆ ಯಾಚನೆ ಮಾಡಿಲ್ಲ.

ಬಿಜೆಪಿಗೊಂದು ಪ್ರಶ್ನೆ: ರಾಹುಲ್ ತಪ್ಪಾಗಿ ನುಡಿದಿದ್ದನ್ನು ಒಪ್ಪಿಕೊಂಡ ಕೂಡಲೇ ಮೋದಿ ರಫೆಲ್ ಹಗರಣದಿಂದ ಮುಕ್ತರಾಗುವುದಿಲ್ಲ. ಚೌಕಿದಾರ್ ಚೋರ್ ಹೈ ಎಂಬುದು ಬರೀ ರಫೆಲ್‍ಗೆ ಸಂಬಂಧಿಸಿದ್ದಲ್ಲ, ಒಟ್ಟೂ ಐದು ವರ್ಷಗಳ ಆಡಳಿತ ನಿರ್ವಹಣೆಯಲ್ಲಿ ಈ ಚೌಕಿದಾರ್ ಚೋರ್ ಆಗಿಯೇ ಕೆಲಸ ಮಾಡಿದ್ದಾರೆ ಎಂಬ ಅಪಾದನೆಗಳು ಈಗಲೂ ಚಾಲ್ತಿಯಲ್ಲಿವೆ. ಈ ಕುರಿತಾಗಿ ಮೀನಾಕ್ಷಿ ಲೇಣಿ ಮತ್ತು ಬಿಜೆಪಿ ಐಟಿ ಸೆಲ್ ಸುಪ್ರಿಂಕೋರ್ಟ್ ಮೊರೆ ಹೋಗುತ್ತಾರೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...