Homeನಿಜವೋ ಸುಳ್ಳೋಕಾಲುಭಾಗ ಸತ್ಯ, ಮುಕ್ಕಾಲು ಪಾಲು ಮಿಥ್ಯ: ಚೌಕಿದಾರ್ ಚೋರ್ ಹೈ ಮತ್ತು ಸುಪ್ರಿಂಗೆ ರಾಹುಲ್ ಉತ್ತರ!

ಕಾಲುಭಾಗ ಸತ್ಯ, ಮುಕ್ಕಾಲು ಪಾಲು ಮಿಥ್ಯ: ಚೌಕಿದಾರ್ ಚೋರ್ ಹೈ ಮತ್ತು ಸುಪ್ರಿಂಗೆ ರಾಹುಲ್ ಉತ್ತರ!

- Advertisement -
- Advertisement -

ಒಂದು ಫೇಕ್ ನ್ಯೂಸ್ ಅನ್ನು ಅತ್ಯಂತ ತ್ವರಿತಗತವಾಗಿ ಬಿಜೆಪಿ ಐಟಿ ಸೆಲ್ ಹರಿಬಿಟ್ಟಿದೆ. ಅದು ದೇಶದ ಬಹುಭಾಷೆಗಳಲ್ಲಿ ಈಗ ಹರಿದಾಡುತ್ತಿದೆ. ಅದರ ಪ್ರಕಾರ, ‘ಸುಳ್ಳು ಹೇಳಿ ಸುಪ್ರಿಂ ಮುಂದೆ ಬೆತ್ತಲಾದ ರಾಹುಲ್ ಗಾಂಧಿ..’

ಇದರಲ್ಲಿ ಕಾಲುಭಾಗ ಸತ್ವವಷ್ಟೇ ಇದೆ. ಬಿಜೆಪಿ ಹಬ್ಬಿಸಿರುವ ಸುದ್ದಿ ಪ್ರಕಾರ, ‘ಸುಪ್ರಿಂಕೋರ್ಟೆ ಚೌಕಿದಾರ್ ಚೋರ್ ಹೈ ಎಂದಿದೆಯೆಂದು ಹೇಳಿದ್ದ ರಾಹುಲ್ ಸುಪ್ರಿಂಕೋರ್ಟಿಗೆ ಇವತ್ತು ಸಲ್ಲಿಸಿದ ಅಫಿಡವೆಟ್‍ನಲ್ಲಿ ತಮ್ಮ ತಪ್ಪು ಒಪ್ಪಿಕೊಂಡು ಕ್ಷಮೆ ಯಾಚಿಸಿದ್ದಾರೆ. ಇದರಿಂದ ರಫೆಲ್‍ನಲ್ಲಿ ಮೋದಿ ತಪ್ಪು ಮಾಡಿಲ್ಲ. ರಾಹುಲ್ ಬರೀ ಸುಳ್ಳಲ್ಲೇ ಪ್ರಚಾರ ಮಾಡುತ್ತಿದ್ದಾರೆ’ ಎಂದೆಲ್ಲ ವಿವರಿಸಲಾಗಿದೆ.


ಇದರಲ್ಲಿ ಕಾಲುಭಾಗ ಮಾತ್ರ ಸತ್ವವಷ್ಟೇ. ಬಿಜೆಪಿ ನಾಯಕಿ ಮೀನಾಕ್ಷಿ ಲೇಣಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿ, ರಫೆಲ್ ವಿಚಾರ ಇನ್ನೂ ಸಂಪೂರ್ಣ ಇತ್ಯರ್ಥವಾಗುವ ಮೊದಲೇ ರಾಹುಲ್ ಅವರು ‘ಸುಪ್ರಿಂಕೋರ್ಟೆ ಮೋದಿಯವರನ್ನು ಚೋರ್’ ಎಂದಿದೆ ಎಂಬರ್ಥದಲ್ಲಿ ಮಾತಾಡಿದ್ದಾರೆ ಎಂದು ದೂರು ಸಲ್ಲಿಸಿದ್ದರು. ಏ. 22ರೊಳಗೆ ಇದಕ್ಕೆ ಉತ್ತರ ನೀಡಲು ಸುಪ್ರಿಂ ರಾಹುಲ್‍ಗೆ ನೋಟಿಸ್ ನೀಡಿತ್ತು.
ಇಂದು (ಏ 22) ರಾಹುಲ್ ಸುಪ್ರಿಂಗೆ ನೀಡಿದ ಉತ್ತರ/ವಿವರಣೆಯಲ್ಲಿ, ‘ಚುನಾವಣಾ ಭಾಷಣ ಮಾಡುವಾಗ ಮಾತಿನ ಭರಾಟೆ ಮತ್ತು ಜೋಶ್‍ನಲ್ಲಿ ಹಾಗೆ ತಪ್ಪಾಗಿ ಹೇಳಿದ್ದೇನೆ. ಆದರೆ ನನ್ನ ಬಹುತೇಕ ಚುನಾವಣಾ ಭಾಷಣಗಳಲ್ಲಿ ‘ಬಡವರ ದುಡ್ಡನ್ನು ಹೊಡೆದು ಶ್ರೀಮಂತರನ್ನು ಉದ್ಧಾರ ಮಾಡುವ ಚೌಕಿದಾರ್ ಚೋರ್’ ಎಂದು ಹೇಳುತ್ತಲೇ ಬಂದಿದ್ದೇನೆ’ ಎಂದು ಸ್ಪಷ್ಟೀಕರಣ ನೀಡಿದ್ದಾರೆಯೇ ಹೊರತು ಅವರೆಲ್ಲೂ ಕ್ಷಮೆ ಯಾಚನೆ ಮಾಡಿಲ್ಲ.

ಬಿಜೆಪಿಗೊಂದು ಪ್ರಶ್ನೆ: ರಾಹುಲ್ ತಪ್ಪಾಗಿ ನುಡಿದಿದ್ದನ್ನು ಒಪ್ಪಿಕೊಂಡ ಕೂಡಲೇ ಮೋದಿ ರಫೆಲ್ ಹಗರಣದಿಂದ ಮುಕ್ತರಾಗುವುದಿಲ್ಲ. ಚೌಕಿದಾರ್ ಚೋರ್ ಹೈ ಎಂಬುದು ಬರೀ ರಫೆಲ್‍ಗೆ ಸಂಬಂಧಿಸಿದ್ದಲ್ಲ, ಒಟ್ಟೂ ಐದು ವರ್ಷಗಳ ಆಡಳಿತ ನಿರ್ವಹಣೆಯಲ್ಲಿ ಈ ಚೌಕಿದಾರ್ ಚೋರ್ ಆಗಿಯೇ ಕೆಲಸ ಮಾಡಿದ್ದಾರೆ ಎಂಬ ಅಪಾದನೆಗಳು ಈಗಲೂ ಚಾಲ್ತಿಯಲ್ಲಿವೆ. ಈ ಕುರಿತಾಗಿ ಮೀನಾಕ್ಷಿ ಲೇಣಿ ಮತ್ತು ಬಿಜೆಪಿ ಐಟಿ ಸೆಲ್ ಸುಪ್ರಿಂಕೋರ್ಟ್ ಮೊರೆ ಹೋಗುತ್ತಾರೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...