Homeಚಳವಳಿರೈತ ವಿರೋಧಿ ಕೃಷಿ ಕಾಯ್ದೆ ತಂದು ಶೋಷಿಸುತ್ತಿರುವವರೆ ನಿಜ ಭಯೋತ್ಪಾದಕರು- ನಟ ಚೇತನ್ ಕಿಡಿ

ರೈತ ವಿರೋಧಿ ಕೃಷಿ ಕಾಯ್ದೆ ತಂದು ಶೋಷಿಸುತ್ತಿರುವವರೆ ನಿಜ ಭಯೋತ್ಪಾದಕರು- ನಟ ಚೇತನ್ ಕಿಡಿ

- Advertisement -
- Advertisement -

“ಇದು ಎರಡನೇ ಸ್ವಾತಂತ್ರ್ಯ ಹೋರಾಟ. ರೈತ ಹೋರಾಟಗಾರರನ್ನು ಇಂದು ಭಯೋತ್ಪಾದಕರು ಎಂದು ಹೀಯಾಳಿಸಲಾಗುತ್ತಿದೆ. ಆದರೆ, ಭಯೋತ್ಪಾದಕರು ನಾವಲ್ಲ. ಬದಲಾಗಿ ರೈತ ವಿರೋಧಿ ಮಸೂದೆಗಳನ್ನು ಜಾರಿಗೆ ತಂದು ರೈತರನ್ನು ಶೋಷಣೆ ಮಾಡುತ್ತಿರುವ ಸರ್ಕಾರಗಳು ಹಾಗೂ ನಾಯಕರುಗಳೇ ನಿಜವಾದ ಭಯೋತ್ಪಾದಕರು” ಎಂದು ಹೋರಾಟಗಾರ, ನಟ ಚೇತನ್ ಕಿಡಿಕಾರಿದ್ದಾರೆ.

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸೌಧ ಚಲೋ ರ್‍ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಭಯೋತ್ಪಾದಕರು ನಾವಲ್ಲ. ಬದಲಾಗಿ ಜನ ವಿರೋಧಿ, ರೈತ ವಿರೋಧಿ ಕಾಯ್ದೆಗಳನ್ನು ಜಾರಿ ಮಾಡುವ ಮೂಲಕ ಜನರನ್ನು ಶೋಷಣೆ ಮಾಡುತ್ತಿರುವ ಕೇಂದ್ರ, ರಾಜ್ಯ ಸರ್ಕಾರ ಮತ್ತು ಅವುಗಳನ್ನು ನಾಯಕರುಗಳೇ ನಿಜವಾದ ಭಯೋತ್ಪಾದಕರು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ಕೇಂದ್ರ ಮತ್ತು ರಾಜ್ಯ ಸರ್ಕಾರದ ಕುತಂತ್ರವನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ರೈತ ವಿರೋಧಿ ಮಸೂದೆಗಳನ್ನು ಜಾರಿ ಮಾಡಿದ್ದಾರೆ. ರೈತರ ಪರ ಯಾರು ನಿಲ್ಲುತ್ತಾರೊ ಅಂತವರನ್ನು ಭಯೋತ್ಪಾದಕರು ಎಂದು ಹಣೆಪಟ್ಟಿ ಕಟ್ಟಲಾಗುತ್ತಿದೆ’ ಎಂದು ಆರೋಪಿಸಿದ್ದಾರೆ.

“ಯಡಿಯೂರಪ್ಪನವರು ಹಸಿರು ಶಾಲು ಹೊದ್ದು ಪ್ರಮಾಣ ವಚನ ಸ್ವೀಕರಿಸಿ ಇದೀಗ ರೈತ ವಿರೋಧಿ ಕಾನೂನನ್ನು ಬೆಂಬಲಿಸುತ್ತಿದ್ದಾರೆ. ರೈತರ ಹೆಸರನ್ನು ಹೇಳಲು ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ. ವಿರೋಧ ಪಕ್ಷದವರು ಎಪಿಎಂಸಿ ಕಾಯ್ದೆ ಬೇಕು ಎಂದು ಹೇಳುತ್ತಾರೆ. ಈ‌ ಮೂರು ಪಕ್ಷಗಳ ಗುರಿ ಒಂದೇ, ಅದೇ ದಬ್ಬಾಳಿಕೆಯ ಗುರಿ” ಎಂದು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನಾಯಕರ ವಿರುದ್ಧವೂ ನಟ ಚೇತನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯಲ್ಲಿ ಕಳೆದ ನಾಲ್ಕು ತಿಂಗಳಿನಿಂದ ರೈತ ಹೋರಾಟ ನಡೆಯುತ್ತಿದೆ. ದೆಹಲಿಯ ಗಡಿಗಳಲ್ಲಿ ರೈತ ಹೋರಾಟಗಾರರು ಬೀಡು ಬಿಟ್ಟಿದ್ದು, ಈ ಹೋರಾಟ ದೇಶದೆಲ್ಲೆಡೆ ವ್ಯಾಪಿಸಿದೆ.

ಇದನ್ನೂ ಓದಿ: ‘ಮೊದಲ ಕ್ಯಾಬಿನೆಟ್ ಸಭೆಯಲ್ಲೆ ಸಿಎಎ ಜಾರಿ’- ಪಶ್ಚಿಮ ಬಂಗಾಳ ಬಿಜೆಪಿ ಪ್ರಣಾಳಿಕೆ ಭರವಸೆ

ರೈತರ ಹೋರಾಟಕ್ಕೆ ಬೆಂಬಲ ಸೂಚಿಸಲು ದೇಶಾದ್ಯಂತ ಮಹಾಪಂಚಾಯತ್‌ಗಳು ನಡೆಯುತ್ತಿದ್ದು, ರಾಜ್ಯದಲ್ಲೂ ಶಿವಮೊಗ್ಗ ಮತ್ತು ಹಾವೇರಿಯಲ್ಲಿ ರೈತ ಮಹಾ ಪಂಚಾಯತ್​ ನಡೆಸಲಾಗಿದೆ. ಸೋಮವಾರ (ಮಾರ್ಚ್ 22) ಬೆಂಗಳೂರಿನಲ್ಲಿ ರೈತರು ವಿಧಾನಸೌಧ ಚಲೋ ಹೋರಾಟಕ್ಕೆ ಕರೆ ನೀಡಿದ್ದರು.

ಇಂದಿನ ಹೋರಾಟದಲ್ಲಿ ದೆಹಲಿಯ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ ಡಾ.ದರ್ಶನ್ ಪಾಲ್, ರಾಕೇಶ್ ಟಿಕಾಯತ್, ಯುದುವೀರ್ ಸಿಂಗ್, ಕುಲ್‌ಬೀರ್‌ ಸಿಂಗ್, ರಾಜ್ಯದ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ಎಲ್ಲೆಲ್ಲೋ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ ನಾಯಕರಿಗಾಗಿ ಬಟ್ಟೆ ಖರೀದಿ- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...