Homeಮುಖಪುಟ‘ಹಿಂದೂಗಳಲ್ಲದವರಿಗೆ ಪ್ರವೇಶವಿಲ್ಲ’ ಪೋಸ್ಟರ್: ಹಿಂದೂ ಯುವ ವಾಹಿನಿ ಸದಸ್ಯರ ಮೇಲೆ FIR

‘ಹಿಂದೂಗಳಲ್ಲದವರಿಗೆ ಪ್ರವೇಶವಿಲ್ಲ’ ಪೋಸ್ಟರ್: ಹಿಂದೂ ಯುವ ವಾಹಿನಿ ಸದಸ್ಯರ ಮೇಲೆ FIR

ದೇವಸ್ಥಾನದಲ್ಲಿ ನೀರು ಕುಡಿದಿದ್ದಕ್ಕಾಗಿ ಮುಸ್ಲಿಂ ಹುಡುಗನ ಮೇಲೆ ಹಲ್ಲೆ ನಡೆದಿತ್ತು. ಈ ಘಟನೆಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ನಂತರದಲ್ಲಿ ಆ ಹಲ್ಲೆಯನ್ನು ಸಮರ್ಥಿಸಿಕೊಂಡು ಈ ಪೋಸ್ಟರ್‌ಗಳನ್ನು ಹಾಕಲಾಗುತ್ತಿದೆ.

- Advertisement -
- Advertisement -

ಉತ್ತರಾಖಂಡ್‌ನ ಡೆಹ್ರಾಡೂನ್‌ನಲ್ಲಿ ಮಾರ್ಚ್ 20 ಮತ್ತು 21 ರಂದು 150-200 ದೇವಾಲಯಗಳ ಹೊರಭಾಗದಲ್ಲಿ, ‘ಹಿಂದೂಗಳಲ್ಲದವರನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ’ ಎಂಬ ಪೋಸ್ಟರ್‌ಗಳನ್ನು ಹಾಕಿದ ಆರೋಪದಲ್ಲಿ ಹಿಂದೂ ಯುವ ವಾಹಿನಿ ಎಂಬ ಬಲಪಂಥೀಯ ಸಂಘಟನೆಯ ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಉತ್ತರಪ್ರದೇಶದ ಘಾಜಿಯಾಬಾದ್ ಜಿಲ್ಲೆಯ ದಾಸ್ನಾ ಊರಿನ ದೇವಸ್ಥಾನವೊಂದರಲ್ಲಿ ನಲ್ಲಿ ನೀರು ಕುಡಿದಿದ್ದಕ್ಕಾಗಿ ಮುಸ್ಲಿಂ ಹುಡುಗನ ಮೇಲೆ ಹಲ್ಲೆ ನಡೆದಿತ್ತು. ಈ ಘಟನೆಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ನಂತರದಲ್ಲಿ ಆ ಹಲ್ಲೆಯನ್ನು ಸಮರ್ಥಿಸಿಕೊಂಡಿದ್ದ ಈ ಸಂಘಟನೆ ಇತ್ತೀಚೆಗೆ ಈ ಪೋಸ್ಟರ್ ‘ಅಭಿಯಾನ’ ನಡೆಸಲು ನಿರ್ಧರಿಸಿದೆ.

ಕೊಟ್ವಾಲಿಯ ಠಾಣಾಣಾಧಿಕಾರಿ (ಎಸ್‌ಎಚ್‌ಒ) ಶಿಶುಪಾಲ್ ಸಿಂಗ್ ನೇಗಿ ಅವರು ಮಾರ್ಚ್ 21 ರ ಸಂಜೆ ಈ ವಿವಾದಾತ್ಮಕ ಪೋಸ್ಟರ್‌ಗಳನ್ನು ತೆಗೆದುಹಾಕಲು ಸಂಘಟನೆಯ ಸದಸ್ಯರೊಂದಿಗೆ ಮಾತನಾಡಲು ಪ್ರಯತ್ನಿಸಿದರು. ಅವರ ಸಭೆ ಮುಗಿದ ಕೂಡಲೇ ಹಿಂದೂ ಯುವ ವಾಹಿನಿಯ ಪ್ರಧಾನ ಕಾರ್ಯದರ್ಶಿ ಜೀತು ರಾಂಧವ ದಿ ಕ್ವಿಂಟ್ ವರದಿಗಾರರ ಜೊತೆ ಮಾತನಾಡಿದ್ದು, ‘ನಗರದಲ್ಲಿ ಇಂತಹ ಪೋಸ್ಟರ್‌ಗಳನ್ನು ಹಾಕದಂತೆ ಪೊಲೀಸರು ಬೆದರಿಕೆ ಹಾಕಿದ್ದಾರೆ. ಅವರು ಈ ರೀತಿ ಮುಸ್ಲಿಮರ ಪರವಾಗಿರಲು ಏಕೆ ಪ್ರಯತ್ನಿಸುತ್ತಿದ್ದಾರೆ? ಉತ್ತರಾಖಂಡದಂತಹ ಸ್ಥಳದಲ್ಲಿ ಇದು ನಡೆಯುತ್ತಿದೆ ಎಂದು ನಾನು ನಂಬಲು ಸಾಧ್ಯವಿಲ್ಲ. ಅವರು ನನ್ನ ವಿರುದ್ಧ ಪ್ರಕರಣ ದಾಖಲಿಸಿಕೊಂಡರೆ ನಾನೇನು ಹೆದರುವುದಿಲ್ಲ, ಆದರೆ ಉತ್ತರಾಖಂಡದ ಪ್ರತಿಯೊಂದು ದೇವಾಲಯದ ಹೊರಗೆ ಈ ಪೋಸ್ಟರ್‌ಗಳು ಇರುವುದನ್ನು ನಾನು ಖಚಿತಪಡಿಸಿಕೊಳ್ಳಲಿದ್ದೇನೆ ” ಎಂದು ಅವರು ಕೋಪದಿಂದ ಹೇಳಿದ್ದರು.

ಐಪಿಸಿಯ ಸೆಕ್ಷನ್ 153 ಎ ಅಡಿಯಲ್ಲಿ (ಧರ್ಮ, ಜನಾಂಗ, ಜನ್ಮಸ್ಥಳ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಹಿಂದೂ ಯುವ ವಾಹಿನಿ ಸದಸ್ಯರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಕ್ವಿಂಟ್ ಎಸ್‌ಎಚ್‌ಒ ನೇಗಿ ಮೂಲಕ ದೃಢಪಡಿಸಿಕೊಂಡಿದೆ.

ದಿ ಕ್ವಿಂಟ್ ಡೆಹ್ರಾಡೂನ್ ಎಸ್‌ಎಸ್‌ಪಿ ಕಚೇರಿಯನ್ನು ಸಂಪರ್ಕಿಸಿ, ಸಾರ್ವಜನಿಕ ಸಂಪರ್ಕ ಅಧಿಕಾರಿ (ಪಿಆರ್‌ಒ) ಪ್ರದೀಪ್ ಸಿಂಗ್ ರಾವತ್ ಅವರೊಂದಿಗೆ ಮಾತನಾಡಿತ್ತು. ಆಗ ‘ಈ ಪೋಸ್ಟರ್‌ಗಳ ಸುದ್ದಿ ಬೆಳಕಿಗೆ ಬಂದಿದೆ, ಪರಿಸ್ಥಿತಿಯನ್ನು ಗಮನಿಸಲಾಗುತ್ತಿದೆ ಮತ್ತು ಮಾರ್ಚ್ 21 ರ ಮಧ್ಯಾಹ್ನದ ವೇಳೆಗೆ ಹಲವಾರು ಪೋಸ್ಟರ್‌ಗಳನ್ನು ತೆಗೆದುಹಾಕಲಾಗಿದೆ ಎಂದು ರಾವತ್ ಹೇಳಿದ್ದರು.

ಎಲ್ಲಾ ಪೋಸ್ಟರ್‌ಗಳನ್ನು ತೆಗೆಯಲಾಗಿದೆಯೆ ಎಂದು ಪುನರ್ ದೃಢಪಡಿಸಿಕೊಳ್ಳಲು ನಾವು ಹಿಂದೂ ಯುವ ವಾಹಿನಿಯ ರಾಂಧವಾ ಅವರಿಗೆ ಕರೆ ಮಾಡಿದೆವು. ಕೆಲವು ಪೋಸ್ಟರ್‌ಗಳನ್ನು ತೆಗೆದಿರುವುದು ನಿಜ, ಆದರೆ ಅನೇಕರು ಪೋಸ್ಟರ್ ಹಾಕುವ ಕೆಲಸ ಮುಂದುವರೆಸಿದ್ದಾರೆ ಎಂದು ಹೇಳಿದರು. “ನನ್ನ ವಿರುದ್ಧದ ಪ್ರಕರಣಗಳ ಬಗ್ಗೆ ನಾನು ಹೆದರುವುದಿಲ್ಲ, ಪೋಸ್ಟರ್‌ಗಳನ್ನು ತೆಗೆಯದಂತೆ ನಾವು ನೋಡಿಕೊಳ್ಳುತ್ತೇವೆ. ನನ್ನ ಸಮುದಾಯದ ಜನರು ನನ್ನೊಂದಿಗೆ ನಿಲ್ಲುತ್ತಾರೆ, ಇಡೀ ಹಿಂದೂ ಸಮುದಾಯವು ನನ್ನೊಂದಿಗೆ ನಿಲ್ಲುತ್ತದೆ. ನೀವು ನೋಡುತ್ತೀರಿ!’ ಎಂದು ತಿಳಿಸಿದರು.

ಬ್ಯಾನರ್‌ಗಳನ್ನು ಏಕೆ ಹಾಕಲಾಯಿತು? ಇದಕ್ಕೆ ಪ್ರೇರಣೆ ಏನು?

“ಈ ತಾಣವು ಹಿಂದೂಗಳಿಗೆ ಪವಿತ್ರ ಸ್ಥಳವಾಗಿದೆ, ಹಿಂದೂಗಳಲ್ಲದವರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ” ಎಂದು ಬ್ಯಾನರ್‌ನಲ್ಲಿ ಬರೆಯಲಾಗಿದೆ.

ಉತ್ತರ ಪ್ರದೇಶದ ಗಾಜಿಯಾಬಾದ್‌ನ ದಾಸ್ನಾದ ದೇವಸ್ಥಾನದ ಎದುರು ಅಲ್ಲಿನ ಅರ್ಚಕ ನರಸಿಂಗಾನಂದ ಇಂಥದ್ದೇ ಪೋಸ್ಟರ್ ಹಾಕಿದ್ದಾರೆ. ಇದು 14 ವರ್ಷದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆಗೆ ಕಾರಣವಾಯಿತು. ಈ ಘಟನೆಯ ನಂತರ ಹಿಂದೂ ಯುವ ವಾಹಿನಿ ಸದಸ್ಯರು ಮುಖ್ಯ ಅರ್ಚಕ ನರಸಿಂಗಾನಂದರನ್ನು ಭೇಟಿಯಾಗಿ ಬೆಂಬಲಿಸಿದ್ದರು.

ದೆಹಲಿ ಗಲಭೆ ಮತ್ತು ನರಸಿಂಗಾನಂದ ಸ್ವಾಮಿ

ದೆಹಲಿ ಗಲಭೆಯ ಅಸಲಿ ಪಿತೂರಿಕೋರರು ಭಾಗ 2ರಲ್ಲಿ ನಾನುಗೌರಿ.ಕಾಂ ದಿ ವೈರ್ ಉಲ್ಲೇಖಿಸಿ ಈ ಸ್ವಾಮಿಯ ಪ್ರಚೋದನೆ, ಪಾತ್ರಗಳ ಕುರಿತು ಬರೆದಿತ್ತು. ಈ ವರದಿಯಲ್ಲಿ, ತಾವು ಪೋಸ್ಟರ್ ಹಾಕಲು ನರಸಿಂಗಾನಂದ ಸ್ವಾಮಿಯೇ ಪ್ರೇರಣೆ ಎಂದು ಹಿಂದೂ ಯುವ ವಾಹಿನಿ ಹೇಳಿದೆ. ಯಾರೀತ? ಉತ್ತರಪ್ರದೇಶದ ದಾಸ್ನಾದ ದೇವಸ್ಥಾನದಲ್ಲಿ ನೀರು ಕುಡಿದಿದ್ದಕ್ಕೆ ಮುಸ್ಲಿಂ ಬಾಲಕನ ಮೇಲೆ ಹಲ್ಲೆ ಮಾಡಲಾಗಿತು. ಆ ದೇವಸ್ಥಾನದ ಪ್ರಧಾನ ಅರ್ಚಕ ಈ ನರಸಿಂಗಾನಂದ ಸ್ವಾಮಿಯೇ. ಈತನಿಗೆ ಬಿಜೆಪಿಯೊಂದಿಗೆ ನಿಕಟ ಸಂಪರ್ಕ ಇರುವುದುನ್ನು, ದೆಹಲಿ ಗಲಭೆಗೆ ಕಾರಣವಾದ ಪ್ರಚೋದನಾಕಾರಿ ಭಾಷಣಗಳ ವಿಡಿಯೋಗಳನ್ನು ಈತ ವೈರಲ್ ಮಾಡಿದ್ದನ್ನು ದಿ ವೈರ್ ಸಾಬೀತು ಮಾಡಿತ್ತು. ನಾನುಗೌರಿ ಕೂಡ ಅದನ್ನು ಪ್ರಕಟಿಸಿತ್ತು.

ಮಾರ್ಚ್ 20 ರಂದು ಅಭಿಯಾನ ಪ್ರಾರಂಭವಾಯಿತು ಎಂದು ಹಿಂದೂ ಯುವ ವಾಹಿನಿ ಅಧ್ಯಕ್ಷ 47 ವರ್ಷದ ಗೋವಿಂದ್ ವಾಧ್ವಾ ಹೇಳಿದ್ದಾರೆ. 150-200 ದೇವಾಲಯಗಳಲ್ಲಿ ಸ್ವಯಂಸೇವಕರು ಈಗಾಗಲೇ ಸ್ಥಳೀಯರ ಸಹಾಯದಿಂದ ಪೋಸ್ಟರ್‌ಗಳನ್ನು ಹಾಕಿದ್ದರು ಮತ್ತು ಮುಂದಿನ ವಾರದಲ್ಲಿ ಈ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. “ಕೆಲವೊಮ್ಮೆ ನಮ್ಮ ವಿಗ್ರಹಗಳು ಒಡೆಯಲ್ಪಡುತ್ತವೆ, ಅಥವಾ ಜನರು ಶಿವ ವಿಗ್ರಹಗಳ ಮೇಲೆ ಇಣುಕಿ ನೋಡುತ್ತಾರೆ, ನೀವು ಇದನ್ನೆಲ್ಲಾ ನೋಡಿರಬೇಕು. ಅದು ಪದೇ ಪದೇ ಸಂಭವಿಸುತ್ತದೆ. ಇದನ್ನು ಹಿಂದೂ ಸಮುದಾಯದ ಸದಸ್ಯರು ಎಂದಿಗೂ ಮಾಡುವುದಿಲ್ಲ, ಆದರೆ ಹಿಂದೂಯೇತರರು ಮಾಡುತ್ತಾರೆ. ಅಂತಹ ಹಿಂದೂಯೇತರರಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಹಿಂದೂಗಳಲ್ಲದವರು ಬರದಂತೆ ಮತ್ತು ದೇವಾಲಯಗಳ ಪಾವಿತ್ರ‍್ಯವು ಅಳಿಯದಂತೆ ನೋಡಿಕೊಳ್ಳಲು ಈ ಬ್ಯಾನರ್‌ಗಳನ್ನು ಹಾಕಿದ್ದೇವೆ’ ಎಂದರು.

ಹಿಂದೂಯೇತರರು ಆಕ್ಷೇಪಾರ್ಹವಾದುದನ್ನು ಮಾಡಿದ್ದಾರೆಯೇ ಮತ್ತು ಅಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿವೆಯೇ ಎಂಬ ಪ್ರಶ್ನೆಗೆ ವಾಧ್ವಾ, “ಇತ್ತೀಚೆಗೆ ಡೆಹ್ರಾಡೂನ್ ಅಥವಾ ಉತ್ತರಾಖಂಡದಲ್ಲಿ ಎಲ್ಲಿಯೂ ಈ ರೀತಿಯ ಪ್ರಕರಣಗಳು ಸಂಭವಿಸಿಲ್ಲ. ಆದರೆ ರಕ್ಷಣೆಯ ಉದ್ದೇಶದಿಂದ ನಾವು ಇದನ್ನು ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ತಪ್ಪು ಮಾಡಿಲ್ಲ” ಎಂದಿದ್ದಾರೆ.

ಡೆಹ್ರಾಡೂನ್‌ನ ದೇವಾಲಯಗಳಿಗಷ್ಟೇ ಇದು ಸಿಮೀತವಲ್ಲ ಎಂದು ವಾಧ್ವಾ ಹೇಳಿದ್ದಾರೆ. “ಉತ್ತರಾಖಂಡದಾದ್ಯಂತದ ನಾಲ್ಕು ಮಹತ್ವದ ದೇವಾಲಯಗಳಲ್ಲಿ ಒಂದೇ ರೀತಿಯ ಪೋಸ್ಟರ್‌ಗಳನ್ನು ಹಾಕುವ ಯೋಜನೆ ನಮ್ಮಲ್ಲಿದೆ. ಇದಕ್ಕಾಗಿ ನಾವು ಒಂದು ಯೋಜನೆಯನ್ನು ರೂಪಿಸುತ್ತಿದ್ದೇವೆ ಮತ್ತು ಶೀಘ್ರದಲ್ಲೇ ಉತ್ತರಾಖಂಡದ ಸಿಎಂ ಅವರನ್ನು ಭೇಟಿ ಮಾಡಲಿದ್ದೇವೆ ಎನ್ನುವ ಅವರು, ಯಮುನೋತ್ರಿ, ಗಂಗೋತ್ರಿ, ಕೇದಾರನಾಥ ಮತ್ತು ಬದ್ರಿನಾಥ್ ನಾಲ್ಕು ಪವಿತ್ರ ಹಿಂದೂ ಕ್ಷೇತ್ರಗಳು ಎಂದು ಉಲ್ಲೇಖಿಸಿದರು.

ಈ ಪೋಸ್ಟರ್ ಹಾಕಲು ಅನುಮತಿ ಪಡೆದಿದ್ದೀರಾ ಎಂದು ಕೇಳಿದಾಗ, “ನನ್ನ ಮನೆಯನ್ನು ರಕ್ಷಿಸಲು ನನಗೆ ಪೊಲೀಸರಿಂದ ಅನುಮತಿ ಬೇಕೇ?” ಎಂದಿದ್ದಾರೆ. ‘ಈ ದೇವಾಲಯಗಳು ಯಾರ ವ್ಯಾಪ್ತಿಗೆ ಬರುತ್ತವೆ, ಅವು ಸರ್ಕಾರಿ ಸ್ವಾಮ್ಯದಲ್ಲಿವೆಯೇ ಅಥವಾ ಖಾಸಗಿ ಟ್ರಸ್ಟ್‌ನವರ ಕೈಯಲ್ಲಿವೆಯೇ?’ ಎಂದು ಕೇಳಿದಾಗ, “ಇದು ಹಿಂದೂ ಸಮುದಾಯದ ಆಸ್ತಿ ಮತ್ತು ಯಾವುದೇ ಒಬ್ಬ ವ್ಯಕ್ತಿಗೆ ಸೇರಿಲ್ಲ. ಇಲ್ಲಿ ಪೋಸ್ಟರ್ ಹಾಕಲು ಯಾವ ಅನುಮತಿಯೂ ಬೇಕಿಲ್ಲ’ ಎಂದಿದ್ದಾರೆ. ಅಲ್ಲದೇ ನಮ್ಮದು 2002 ರಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸ್ಥಾಪಿಸಿದ ಹಿಂದೂ ಯುವ ವಾಹಿನಿ ಅಲ್ಲ, ಇದೇ ಬೇರೆ ಎಂದು ವಾಧ್ವಾ ಸ್ಪಷ್ಟಪಡಿಸಿದರು.

ಪಶ್ಚಿಮ ಯುಪಿಯ ದಾಸ್ನಾದಲ್ಲಿ ದೇವಾಲಯದಲ್ಲಿ ಮುಸ್ಲಿಂ ಬಾಲಕನಿಗೆ ಥಳಿಸಿದ ನಂತರ, ಬಿಎಸ್ಪಿಯ ಧೌಲಾನಾ ಅಸ್ಲಂ ಚೌಧರಿ ದಾಸ್ನಾದಲ್ಲಿನ ದೇವಾಲಯವು ತನ್ನ ಪೂರ್ವಜರಿಗೆ ಸೇರಿದ್ದು ಮತ್ತು ಆಡಳಿತ ಮಂಡಳಿಯನ್ನು ತೆಗೆದುಹಾಕುತ್ತೇವೆ ಎಂದು ಹೇಳಿದ್ದಾರೆ. ಚೌಧರಿ ಹೀಗೆ ಹೇಳಿದ ನಂತರ, ವಾಧ್ವಾ ದಾಸ್ನಾದ ದೇವಾಲಯದ ಪ್ರಧಾನ ಅರ್ಚಕನನ್ನು ಭೇಟಿಯಾದರು ಮತ್ತು ಉತ್ತರಾಖಂಡದ ಇನ್ನೂ ಹಲವಾರು ದೇವಾಲಯಗಳ ಹೊರಗೆ ಇಂತಹ ಪೋಸ್ಟರ್‌ಗಳನ್ನು ಹಾಕುವುದಾಗಿ ಹೇಳಿದರು.

(ಕೃಪೆ: ದಿ ಕ್ವಿಂಟ್)


ಇದನ್ನೂ ಓದಿ: ದೆಹಲಿ ಗಲಭೆಯ ಅಸಲಿ ಪಿತೂರಿ ಭಾಗ-2: ‘ಅಂತಿಮ ಯುದ್ಧಕ್ಕೆ ಕರೆ ನೀಡಿದ್ದ ಮುಸ್ಲಿಂ-ವಿರೋಧಿ ‘ದೇವಮಾನವ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...