Homeಮುಖಪುಟಕನ್ನಡದ ಅಕ್ಷಿ ಚಿತ್ರಕ್ಕೆ ಪ್ರಶಸ್ತಿ: ನಟ ಧನುಷ್‌ಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

ಕನ್ನಡದ ಅಕ್ಷಿ ಚಿತ್ರಕ್ಕೆ ಪ್ರಶಸ್ತಿ: ನಟ ಧನುಷ್‌ಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

- Advertisement -
- Advertisement -

2019 ರಲ್ಲಿ ಬಿಡುಗಡೆಯಾದ ಚಿತ್ರಗಳಿಗೆ ತಡವಾಗಿ ರಾಷ್ಟ್ರೀಯ ಪ್ರಶಸ್ತಿಗಳನ್ನು ಸೋಮವಾರ (ಮಾರ್ಚ್ 22) ನವದೆಹಲಿಯಲ್ಲಿ ಪ್ರಕಟಿಸಲಾಗಿದೆ. ಕಳೆದ ವರ್ಷ ಅಸಹಜ ಸಾವಿಗೀಡಾದ ನಟ ಸುಶಾಂತ್ ಸಿಂಗ್ ರಜ‌ಪೂತ್ ಅಭಿನಯದ ಚಿಚೋರೆ ಅತ್ಯುತ್ತಮ ಹಿಂದಿ ಚಲನಚಿತ್ರ ಪ್ರಶಸ್ತಿ ಪಡೆದಿದೆ.

ಕನ್ನಡದ ಮನೋಜ್ ಕುಮಾರ್ ನಿರ್ದೇಶನದ ಅಕ್ಷಿ ಕನ್ನಡದ ಉತ್ತಮ ಚಲನಚಿತ್ರ ಪ್ರಶಸ್ತಿ ಪಡೆದಿದೆ. ಉತ್ತಮ ನಟ ಪ್ರಶಸ್ತಿಯನ್ನು ಭೋಂಸ್ಲೆ ಚಿತ್ರಕ್ಕಾಗಿ ನಟ ಮನೋಜ್ ಬಾಜಪೇಯಿ ಮತ್ತು ಅಸುರನ್ ನಟನೆಗಾಗಿ ಧನುಷ್ ಪಡೆದುಕೊಂಡಿದ್ದಾರೆ. ಅತ್ಯುತ್ತಮ ತಮಿಳು ಚಿತ್ರ ಪ್ರಶಸ್ತಿಯನ್ನು ಅಸುರನ್ ಪಡೆದಿದೆ.

ಮಣಿಕರ್ಣಿಕಾ ಮತ್ತು ಪಂಗಾ ಚಿತ್ರಗಳ ಅಭಿನಯಕ್ಕಾಗಿ ಅತ್ಯತ್ತಮ ನಟಿ ಪ್ರಶಸ್ತಿಯನ್ನು ಕಂಗನಾ ರಾಣಾವತ್ ಪಡೆದುಕೊಂಡಿದ್ದಾರೆ. ಸೂಪರ್ ಡಿಲಕ್ಸ್ ಚಿತ್ರದ ಅಭಿನಯಕ್ಕಾಗಿ ವಿಜಯ್ ಸೇತುಪತಿ ಅತ್ಯುತ್ತಮ ಪೋಷಕ ನಟ ಮತ್ತು ಪಲ್ಲವಿ ಜೋಶಿ ದಿ ತಾಷ್ಕೆಂಟ್ ಫೈಲ್ಸ್ ಚಿತ್ರಕ್ಕೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದಿದ್ದಾರೆ.

ಇದನ್ನೂ ಓದಿ: ‘ಬಾಂಬೆ ತಂಡ’ದ ಶಾಸಕರ ಕ್ಷೇತ್ರಗಳು ಭೂಲೋಕದ ಸ್ವರ್ಗಗಳಾಗಿವೆಯೇ: ಸಿಎಂಗೆ ಕುಮಾರಸ್ವಾಮಿ ಪ್ರಶ್ನೆ

ಮಲಯಾಳಂ ಭಾಷೆಯ Marakkar Arabikadalinte Simham ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿದೆ. ಸಿಕ್ಕಿಂ ರಾಜ್ಯವನ್ನು ಅನ್ನು ಅತ್ಯಂತ ಚಲನಚಿತ್ರ ಸ್ನೇಹಿ ರಾಜ್ಯವೆಂದು ಘೋಷಿಸಲಾಗಿದೆ.

ನೇತಾಜಿ ಸುಭಾಷ್ ಬೋಸ್ ಆಧಾರಿತ ಗುಮ್ನಾಮಿ ಅತ್ಯುತ್ತಮ ಬಂಗಾಳಿ ಚಲನಚಿತ್ರ ಮತ್ತು ಅತ್ಯುತ್ತಮ ಚಿತ್ರಕಥೆಯನ್ನು ಗೆದ್ದಿದ್ದಾರೆ. ಈ ವರ್ಷ ಭಾರತದಿಂದ ಆಸ್ಕರ್ ಪ್ರವೇಶ ಪಡೆದ ಜಲ್ಲಿಕಟ್ಟು ಅತ್ಯುತ್ತಮ ಛಾಯಾಗ್ರಹಣ ಗೆದ್ದಿದ್ದಾರೆ. COVID-19 ಸಾಂಕ್ರಾಮಿಕ ರೋಗದಿಂದಾಗಿ ಚಲನಚಿತ್ರೋತ್ಸವಗಳ ನಿರ್ದೇಶನಾಲಯವು ನೀಡಿದ ರಾಷ್ಟ್ರೀಯ ಪ್ರಶಸ್ತಿಗಳನ್ನು ಕಳೆದ ವರ್ಷ ಘೋಷಿಸಲಾಗಿಲ್ಲ.

ಪ್ರಶಸ್ತಿ ಪಟ್ಟಿ ಹೀಗಿದೆ.

ಅತ್ಯುತ್ತಮ ಚಲನಚಿತ್ರ: Marakkar Arabikadalinte Simham (ಮಲಯಾಳಂ)

ಅತ್ಯುತ್ತಮ ನಿರ್ದೇಶನ: ಬಹಟ್ಟರ್ ಹುರೈನ್

ಅತ್ಯುತ್ತಮ ನಟಿ: ಕಂಗನಾ ರಾಣಾವತ್ (ಮಣಿಕರ್ಣಿಕಾ, ಪಂಗಾ)

ಅತ್ಯುತ್ತಮ ನಟ: ಮನೋಜ್ ಬಾಜಪೇಯಿ (ಭೋಂಸ್ಲೆ) ಮತ್ತು ಧನುಷ್ ( ಅಸುರನ್)

ಅತ್ಯುತ್ತಮ ಪೋಷಕ ನಟಿ:  ಪಲ್ಲವಿ ಜೋಶಿ (ದಿ ತಾಷ್ಕೆಂಟ್ ಫೈಲ್ಸ್)

ಅತ್ಯುತ್ತಮ ಪೋಷಕ ನಟ: ವಿಜಯ ಸೇತುಪತಿ (ಸೂಪರ್ ಡಿಲಕ್ಸ್)

ಅತ್ಯುತ್ತಮ ಮಕ್ಕಳ ಚಿತ್ರ: ಕಸ್ತೂರಿ (ಹಿಂದಿ)

ನಿರ್ದೇಶಕರ ಅತ್ಯುತ್ತಮ ಚೊಚ್ಚಲ ಚಿತ್ರಕ್ಕಾಗಿ ಇಂದಿರಾ ಗಾಂಧಿ ಪ್ರಶಸ್ತಿ: ಹೆಲೆನ್ (ಮಲಯಾಳಂ)

ವಿಶೇಷವಾಗಿ ಉಲ್ಲೇಖಿತ ಸಿನಿಮಾಗಳು: ಬಿರಿಯಾನಿ (ಮಲಯಾಳಂ), ಜೊನಕಿ ಪೊರುವಾ (ಅಸ್ಸಾಮೀಸ್), ಲತಾ ಭಗವಾನ್ ಕರೇ (ಮರಾಠಿ), ಪಿಕಾಸೊ (ಮರಾಠಿ)

ಅತ್ಯುತ್ತಮ ತುಳು ಚಿತ್ರ: ಪಿಂಗರಾ

ಅತ್ಯುತ್ತಮ ಪಾನಿಯಾ ಚಿತ್ರ: ಕೆಂಜೀರಾ

ಅತ್ಯುತ್ತಮ ಮಿಶಿಂಗ್ ಚಿತ್ರ: ಅನು ರುವಾಡ್

ಅತ್ಯುತ್ತಮ ಖಾಸಿ ಚಲನಚಿತ್ರ: Lewduh

ಅತ್ಯುತ್ತಮ ಹರಿಯಾಣಿ ಚಿತ್ರ: ಚೋರಿಯನ್ ಚೋರೊನ್ ಸೆ ಕಾಮ್ ನಹಿ ಹೋತಿ

ಅತ್ಯುತ್ತಮ ಛತ್ತೀಸ್‌ಗಢ ಚಲನಚಿತ್ರ: ಭೂಲನ್ ದಿ ಮೇಜ್

ಅತ್ಯುತ್ತಮ ತೆಲುಗು ಚಲನಚಿತ್ರ: ಜರ್ಸಿ

ಅತ್ಯುತ್ತಮ ತಮಿಳು ಚಿತ್ರ: ಅಸುರನ್

ಅತ್ಯುತ್ತಮ ಪಂಜಾಬಿ ಚಲನಚಿತ್ರ: ರಬ್ ಡಾ ರೇಡಿಯೋ 2

ಅತ್ಯುತ್ತಮ ಒಡಿಯಾ ಚಿತ್ರ: ಸಲಾ ಬುಧರ್ ಬದ್ಲಾ ಮತ್ತು ಕಲಿರಾ ಅತಿತಾ

ಅತ್ಯುತ್ತಮ ಮಣಿಪುರಿ ಚಿತ್ರ: ಈಗಿ ಕೋನಾ

ಅತ್ಯುತ್ತಮ ಮಲಯಾಳಂ ಚಿತ್ರ: ಕಳ್ಳಾ ನೋಟಂ

ಅತ್ಯುತ್ತಮ ಮರಾಠಿ ಚಿತ್ರ: ಬಾರ್ಡೋ

ಅತ್ಯುತ್ತಮ ಕೊಂಕಣಿ ಚಲನಚಿತ್ರ: ಕಾಜ್ರೊ

ಅತ್ಯುತ್ತಮ ಕನ್ನಡ ಚಿತ್ರ: ಅಕ್ಷಿ

ಅತ್ಯುತ್ತಮ ಹಿಂದಿ ಚಲನಚಿತ್ರ: ಚಿಚೋರೆ

ಅತ್ಯುತ್ತಮ ಬಂಗಾಳಿ ಚಲನಚಿತ್ರ: ಗುಮ್ನಾಮಿ

ಅತ್ಯುತ್ತಮ ಅಸ್ಸಾಮೀಸ್ ಚಲನಚಿತ್ರ: ರೋನುವಾ- ಹೂ ನೆವರ್‌ ಸರೆಂಡರ್‌

ಅತ್ಯುತ್ತಮ ಸಾಹಸ: ಅವನೇ ಶ್ರೀಮನ್ನಾರಾಯಣ (ಕನ್ನಡ)

ಅತ್ಯುತ್ತಮ ನೃತ್ಯ ಸಂಯೋಜನೆ: ಮಹರ್ಷಿ (ತೆಲುಗು)

ಅತ್ಯುತ್ತಮ ಸ್ಪೆಷಲ್ ಎಫೆಕ್ಟ್: Marakkar Arabikadalinte Simham (ಮಲಯಾಳಂ)

ವಿಶೇಷ ತೀರ್ಪುಗಾರರ ಪ್ರಶಸ್ತಿ: Oththa Seruppu Size-7 (ತಮಿಳು)

ಅತ್ಯುತ್ತಮ ಸಾಹಿತ್ಯ: ಕೋಲಾಂಬಿ (ಮಲಯಾಳಂ)

ಅತ್ಯುತ್ತಮ ಸಂಗೀತ ನಿರ್ದೇಶನ ಹಾಡುಗಳು: ವಿಶ್ವಾಸಂ (ತಮಿಳು)

ಸಂಗೀತ ನಿರ್ದೇಶನ: Jyeshthoputro

ಅತ್ಯುತ್ತಮ ಮೇಕಪ್ : ಹೆಲೆನ್ (ಮಲಯಾಳಂ)


ಇದನ್ನೂ ಓದಿ: ಎಲ್ಲೆಲ್ಲೋ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ ನಾಯಕರಿಗಾಗಿ ಬಟ್ಟೆ ಖರೀದಿ- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...