Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣ: ಫಾದರ್ ಸ್ಟಾನ್ ಸ್ವಾಮಿಗೆ ಮತ್ತೆ ಜಾಮೀನು ನಿರಾಕರಣೆ

ಭೀಮಾ ಕೋರೆಗಾಂವ್ ಪ್ರಕರಣ: ಫಾದರ್ ಸ್ಟಾನ್ ಸ್ವಾಮಿಗೆ ಮತ್ತೆ ಜಾಮೀನು ನಿರಾಕರಣೆ

- Advertisement -
- Advertisement -

2018 ರಲ್ಲಿ ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಫಾದರ್ ಸ್ಟಾನ್ ಸ್ವಾಮಿ ಅವರಿಗೆ ಜಾಮೀನು ನೀಡಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯ ವಿಶೇಷ ನ್ಯಾಯಾಲಯ ಸೋಮವಾರ ನಿರಾಕರಿಸಿದೆ.

2018 ರಲ್ಲಿ ಭೀಮಾ ಕೋರೆಗಾಂವ್‌ನಲ್ಲಿ ಗಲಭೆಗಳನ್ನು ಪ್ರಚೋದಿಸುವಲ್ಲಿ ಪಾತ್ರವಹಿಸಿದ ಆರೋಪದ ಮೇಲೆ ಸ್ವಾಮಿ ಅವರನ್ನು ಅಕ್ಟೋಬರ್ 8 ರಂದು ರಾಂಚಿಯಲ್ಲಿರುವ ಅವರ ಮನೆಯಿಂದ ಬಂಧಿಸಲಾಗಿತ್ತು. ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತಾಲೋಜ ಜೈಲಿನಲ್ಲಿರಿಸಲಾಯಿತು. 83 ವರ್ಷದ ರಾಂಚಿ ನಿವಾಸಿ ಸ್ವಾಮಿ ಕಳೆದ ಐದು ತಿಂಗಳಿನಿಂದ ತಾಲೋಜ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದಾರೆ.

ಎನ್‌ಐಎ ಸ್ವಾಮಿಯವರನ್ನು ಅಕ್ಟೋಬರ್ 7 ರಂದು ರಾಂಚಿಯಲ್ಲಿ ಬಂಧಿಸಿ, ಮರುದಿನ ಮುಂಬೈಗೆ ಕರೆತಂದು ಅವರು ಮತ್ತು ಇತರ ಏಳು ಜನರ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿತ್ತು. ಅಂದಿನಿಂದ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಸ್ವಾಮಿ ಅವರು ಪ್ರಕರಣದ ಅರ್ಹತೆಗಳ ಜೊತೆಗೆ ಪ್ರಾಥಮಿಕವಾಗಿ ವೈದ್ಯಕೀಯ ಆಧಾರದ ಮೇಲೆ ಜಾಮೀನು ಕೋರಿದ್ದರು.

ತನ್ನ ಜಾಮೀನು ಅರ್ಜಿಯಲ್ಲಿ, ಸ್ವಾಮಿ ತನ್ನ ಬಂಧನವು ಅಸಮರ್ಪಕವಾಗಿದೆ ಮತ್ತು ದೊಷಪೂರಿತವಾಗಿದೆ ಎಂದು ಹೇಳಿದ್ದರು. ಎಫ್‌ಐಆರ್ ದಾಖಲಾದ ಎರಡು ವರ್ಷಗಳ ನಂತರವೂ ಬಂಧನ ಮಾಡಿರಲಿಲ್ಲ. ಅವರು ವಿದೇಶಕ್ಕೆ ಪರಾರಿಯಾಗಬಲ್ಲರು ಅಥವಾ ಸಾಕ್ಷಾಧಾರಗಳನ್ನು ಹಾಳುಮಾಡುವ ವ್ಯಕ್ತಿಯೆಂದು ಪರಿಗಣಿಸಲಾಗಿಲ್ಲ ಎಂಬುದಕ್ಕೆ ಇದೇ ಸಾಕ್ಷಿ ಎಂದು ಅರ್ಜಿಯಲ್ಲಿ ವಿವರಿಸಲಾಗಿತ್ತು.

ಈ ಹಿರಿಯ ನಾಗರಿಕರರಾದ ಸ್ಟಾನ್ ಸ್ವಾಮಿ ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಅವರ ವಕೀಲ ಷರೀಫ್ ಶೇಖ್ ವರದಿ ಸಲ್ಲಿಸಿದರು ಮತ್ತು ಆರೋಗ್ಯ ಕಾರಣಗಳಿಂದಾಗಿ ಅವರನ್ನು ಜೈಲು ಆಸ್ಪತ್ರೆಗೆ ವರ್ಗಾಯಿಸಬೇಕಾಯಿತು ಎಂಬುದನ್ನು ಎತ್ತಿ ತೋರಿಸಿದರು.

ನವೆಂಬರ್‌ನಲ್ಲಿ ಅವರ ವಕೀಲ ಷರೀಫ್ ಶೇಖ್ ಅವರ ಮೂಲಕ ಸಲ್ಲಿಸಲಾದ 31 ಪುಟಗಳ ಜಾಮೀನು ಅರ್ಜಿಯಲ್ಲಿ, ಭಾರತದಲ್ಲಿ ಸ್ವಾಮಿ ಅವರು ಕೈಗೊಂಡ ಜಾತಿ ಮತ್ತು ಭೂ ಹೋರಾಟಗಳು, ಆದಿವಾಸಿಗಳ ಹೋರಾಟಗಳು ಹಾಗೂ ಅವರ ಬರಹಗಳ ಕಾರಣದಿಂದ ತನಿಖಾ ಸಂಸ್ಥೆ ಅವರನ್ನು ಗುರಿಯಾಗಿಸಿಕೊಂಡಿದೆ ಎಂದು ತಿಳಿಸಿತ್ತು.

ಸ್ವಾಮಿಯವರ ಸಂಘಟನೆ ಪರ್‌ಸುಕ್ಯುಟೆಡ್ ಪ್ರಿಸರ್ಸ್‌ ಸಾಲಿಡೆಟರಿ ಕಮೀಟಿ (ಪಿಪಿಎಸ್‌ಸಿ) ಜೊತೆಗೆ ವಿವಿದ ಶೋಷಿತ ಜನರು ಕಾನೂನು ನೆರವು ಪಡೆಯಲು ನಡೆಸಿದ ಪತ್ರ ವ್ಯವಹಾರಗಳೇ ಪುರಾವೆಗಳು ಎಂದು ಎನ್‌ಐಎ ಹೇಳಿಕೊಂಡಿದೆ. ಪಿಪಿಎಸ್‌ಸಿ ಸಂಘಟನೆಯು ಮಾವೋವಾದಿಗಳೆಂದು ಸುಳ್ಳು ಆರೋಪ ಹೊರಿಸಿರುವ ವಿಚಾರಣಾಧೀನ ಆದಿವಾಸಿಗಳು ಮತ್ತು ದಲಿತರಿಗಾಗಿ ಕೆಲಸ ಮಾಡುತ್ತದೆ ಎಂದು ವಕೀಲರು ವಿವರಿಸಿದ್ದರು.

ಸ್ವಾಮಿ ಅವರ ನಿವಾಸದಲ್ಲಿ ಎರಡು ದಾಳಿಗಳನ್ನು ನಡೆಸಿದ ನಂತರ ಏನೂ ಕಂಡುಬಂದಿಲ್ಲ. ವಾಸ್ತವವಾಗಿ, ಬಾಂಬೆ ಹೈಕೋರ್ಟ್‌ನಲ್ಲಿ ಸ್ವಾಮಿ ಸಲ್ಲಿಸಿದ್ದ ಮನವಿಯಲ್ಲಿ ಪುಣೆ ಪೊಲೀಸರು ದಾಖಲೆಯಲ್ಲಿ “ಅವರು ಆರೋಪಿಯಲ್ಲದ ಕಾರಣ ಅವರನ್ನು ಬಂಧಿಸುವ ಉದ್ದೇಶವಿರಲಿಲ್ಲ” ಎಂದು ಹೇಳಿದ್ದಾರೆ.

ಸ್ವಾಮಿ ವಿರುದ್ಧ ದಾಖಲಾದ ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ವಾಮಿಯವರು ನಿಷೇಧಿತ ಸಂಘಟನೆಯ ಸಿಪಿಐ (ಮಾವೋವಾದಿ) ಸದಸ್ಯರೆಂದು ಅಪಾದಿಸಿದ್ದು, ಪಕ್ಷದ ಅನೇಕ ಸದಸ್ಯರ ಬಂಧನದ ನಂತರ ಅದರ ಚಟುವಟಿಕೆಗಳನ್ನು ಹರಡುವ ಜವಾಬ್ದಾರಿಯನ್ನು ಅವನಿಗೆ ನೀಡಲಾಗಿತ್ತು ಎಂದೂ ಆರೋಪ ಮಾಡಿದೆ. ಸ್ವಾಮಿ ವಿಸ್ತಾಪನ್ ವಿರೋಧಿ ಜನ್ ವಿಕಾಸ್ ಆಂದೋಲನ್ ಮತ್ತು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್‌ನಂತಹ ಸಿಪಿಐ (ಮಾವೋವಾದಿಗಳ) ಬೆಂಬಲಿತ ಸಂಘಟನೆಗಳ ತೀವ್ರ ಬೆಂಬಲಿಗರಾಗಿದ್ದರು ಎಂದು ಆರೋಪ ಮಾಡಲಾಗಿದೆ.

ಜಾರ್ಖಂಡ್‌ನಲ್ಲಿ ಎನ್‌ಜಿಒ ನಡೆಸುತ್ತಿರುವ ಸ್ವಾಮಿ, ತಮ್ಮ ಲ್ಯಾಪ್‌ಟಾಪ್‌ನಲ್ಲಿ ಕಂಡುಬರುವ ಪುರಾವೆಗಳನ್ನು “ಸುಲಭವಾಗಿ ಕುಶಲತೆಯಿಂದ ಸೇರಿಸಬಹುದು” ಎಂದು ವಿವರಿಸಿ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದರು.

ಡಿಸೆಂಬರ್ 31, 2017 ರಂದು ಎಲ್ಗರ್ ಪರಿಷತ್ ಕಾರ್ಯಕ್ರಮದ ಸಂಘಟನೆಯೊಂದಿಗೆ ಅವರು ಎಲ್ಲಿಯೂ ಸಂಪರ್ಕ ಹೊಂದಿಲ್ಲ ಎಂದು ಜಾಮೀನು ಅರ್ಜಿಯಲ್ಲಿ ತಿಳಿಸಲಾಗಿದೆ.
ಈ ಪ್ರಕರಣದಲ್ಲಿ ಇತರರ ಬಂಧನವನ್ನು ಖಂಡಿಸಿ ಸ್ವಾಮಿ ಸಭೆಗಳನ್ನು ನಡೆಸುತ್ತಿದ್ದುದು ಕಂಡುಬಂದಿದೆ ಎಂದು ಎನ್‌ಐಎ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಕಾಶ್ ಶೆಟ್ಟಿ ಮೂಲಕ ತಿಳಿಸಿತ್ತು ಮತ್ತು ಅವರ ಎನ್‌ಜಿಒ ವಿದೇಶಿ ಹಣವನ್ನು ಪಡೆದಿರುವುದಕ್ಕೆ ಪುರಾವೆಗಳಿವೆ ಎಂದು ಆರೋಪಿಸಿತ್ತು.

ಕಳೆದ ವರ್ಷ ಅಕ್ಟೋಬರ್‌ನಲ್ಲಿ, ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ ನೇಮಕಗೊಂಡ ಉನ್ನತ ಸಮಿತಿಯು ಕೊವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಜೈಲುಗಳಲ್ಲಿ ಸಂದಣಿಯನ್ನು ನಿಯಂತ್ರಿಸಲು ಶಿಫಾರಸು ಮಾಡಿದ್ದ ಮಾರ್ಗಸೂಚಿಗಳನ್ನು ಉಲ್ಲೇಖಿಸಿ ಸ್ವಾಮಿ ಮಧ್ಯಂತರ ಜಾಮೀನು ಕೋರಿದ್ದರು.


ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...