Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣ: ಫಾದರ್ ಸ್ಟಾನ್ ಸ್ವಾಮಿಗೆ ಮತ್ತೆ ಜಾಮೀನು ನಿರಾಕರಣೆ

ಭೀಮಾ ಕೋರೆಗಾಂವ್ ಪ್ರಕರಣ: ಫಾದರ್ ಸ್ಟಾನ್ ಸ್ವಾಮಿಗೆ ಮತ್ತೆ ಜಾಮೀನು ನಿರಾಕರಣೆ

- Advertisement -
- Advertisement -

2018 ರಲ್ಲಿ ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಫಾದರ್ ಸ್ಟಾನ್ ಸ್ವಾಮಿ ಅವರಿಗೆ ಜಾಮೀನು ನೀಡಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯ ವಿಶೇಷ ನ್ಯಾಯಾಲಯ ಸೋಮವಾರ ನಿರಾಕರಿಸಿದೆ.

2018 ರಲ್ಲಿ ಭೀಮಾ ಕೋರೆಗಾಂವ್‌ನಲ್ಲಿ ಗಲಭೆಗಳನ್ನು ಪ್ರಚೋದಿಸುವಲ್ಲಿ ಪಾತ್ರವಹಿಸಿದ ಆರೋಪದ ಮೇಲೆ ಸ್ವಾಮಿ ಅವರನ್ನು ಅಕ್ಟೋಬರ್ 8 ರಂದು ರಾಂಚಿಯಲ್ಲಿರುವ ಅವರ ಮನೆಯಿಂದ ಬಂಧಿಸಲಾಗಿತ್ತು. ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತಾಲೋಜ ಜೈಲಿನಲ್ಲಿರಿಸಲಾಯಿತು. 83 ವರ್ಷದ ರಾಂಚಿ ನಿವಾಸಿ ಸ್ವಾಮಿ ಕಳೆದ ಐದು ತಿಂಗಳಿನಿಂದ ತಾಲೋಜ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದಾರೆ.

ಎನ್‌ಐಎ ಸ್ವಾಮಿಯವರನ್ನು ಅಕ್ಟೋಬರ್ 7 ರಂದು ರಾಂಚಿಯಲ್ಲಿ ಬಂಧಿಸಿ, ಮರುದಿನ ಮುಂಬೈಗೆ ಕರೆತಂದು ಅವರು ಮತ್ತು ಇತರ ಏಳು ಜನರ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿತ್ತು. ಅಂದಿನಿಂದ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಸ್ವಾಮಿ ಅವರು ಪ್ರಕರಣದ ಅರ್ಹತೆಗಳ ಜೊತೆಗೆ ಪ್ರಾಥಮಿಕವಾಗಿ ವೈದ್ಯಕೀಯ ಆಧಾರದ ಮೇಲೆ ಜಾಮೀನು ಕೋರಿದ್ದರು.

ತನ್ನ ಜಾಮೀನು ಅರ್ಜಿಯಲ್ಲಿ, ಸ್ವಾಮಿ ತನ್ನ ಬಂಧನವು ಅಸಮರ್ಪಕವಾಗಿದೆ ಮತ್ತು ದೊಷಪೂರಿತವಾಗಿದೆ ಎಂದು ಹೇಳಿದ್ದರು. ಎಫ್‌ಐಆರ್ ದಾಖಲಾದ ಎರಡು ವರ್ಷಗಳ ನಂತರವೂ ಬಂಧನ ಮಾಡಿರಲಿಲ್ಲ. ಅವರು ವಿದೇಶಕ್ಕೆ ಪರಾರಿಯಾಗಬಲ್ಲರು ಅಥವಾ ಸಾಕ್ಷಾಧಾರಗಳನ್ನು ಹಾಳುಮಾಡುವ ವ್ಯಕ್ತಿಯೆಂದು ಪರಿಗಣಿಸಲಾಗಿಲ್ಲ ಎಂಬುದಕ್ಕೆ ಇದೇ ಸಾಕ್ಷಿ ಎಂದು ಅರ್ಜಿಯಲ್ಲಿ ವಿವರಿಸಲಾಗಿತ್ತು.

ಈ ಹಿರಿಯ ನಾಗರಿಕರರಾದ ಸ್ಟಾನ್ ಸ್ವಾಮಿ ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಅವರ ವಕೀಲ ಷರೀಫ್ ಶೇಖ್ ವರದಿ ಸಲ್ಲಿಸಿದರು ಮತ್ತು ಆರೋಗ್ಯ ಕಾರಣಗಳಿಂದಾಗಿ ಅವರನ್ನು ಜೈಲು ಆಸ್ಪತ್ರೆಗೆ ವರ್ಗಾಯಿಸಬೇಕಾಯಿತು ಎಂಬುದನ್ನು ಎತ್ತಿ ತೋರಿಸಿದರು.

ನವೆಂಬರ್‌ನಲ್ಲಿ ಅವರ ವಕೀಲ ಷರೀಫ್ ಶೇಖ್ ಅವರ ಮೂಲಕ ಸಲ್ಲಿಸಲಾದ 31 ಪುಟಗಳ ಜಾಮೀನು ಅರ್ಜಿಯಲ್ಲಿ, ಭಾರತದಲ್ಲಿ ಸ್ವಾಮಿ ಅವರು ಕೈಗೊಂಡ ಜಾತಿ ಮತ್ತು ಭೂ ಹೋರಾಟಗಳು, ಆದಿವಾಸಿಗಳ ಹೋರಾಟಗಳು ಹಾಗೂ ಅವರ ಬರಹಗಳ ಕಾರಣದಿಂದ ತನಿಖಾ ಸಂಸ್ಥೆ ಅವರನ್ನು ಗುರಿಯಾಗಿಸಿಕೊಂಡಿದೆ ಎಂದು ತಿಳಿಸಿತ್ತು.

ಸ್ವಾಮಿಯವರ ಸಂಘಟನೆ ಪರ್‌ಸುಕ್ಯುಟೆಡ್ ಪ್ರಿಸರ್ಸ್‌ ಸಾಲಿಡೆಟರಿ ಕಮೀಟಿ (ಪಿಪಿಎಸ್‌ಸಿ) ಜೊತೆಗೆ ವಿವಿದ ಶೋಷಿತ ಜನರು ಕಾನೂನು ನೆರವು ಪಡೆಯಲು ನಡೆಸಿದ ಪತ್ರ ವ್ಯವಹಾರಗಳೇ ಪುರಾವೆಗಳು ಎಂದು ಎನ್‌ಐಎ ಹೇಳಿಕೊಂಡಿದೆ. ಪಿಪಿಎಸ್‌ಸಿ ಸಂಘಟನೆಯು ಮಾವೋವಾದಿಗಳೆಂದು ಸುಳ್ಳು ಆರೋಪ ಹೊರಿಸಿರುವ ವಿಚಾರಣಾಧೀನ ಆದಿವಾಸಿಗಳು ಮತ್ತು ದಲಿತರಿಗಾಗಿ ಕೆಲಸ ಮಾಡುತ್ತದೆ ಎಂದು ವಕೀಲರು ವಿವರಿಸಿದ್ದರು.

ಸ್ವಾಮಿ ಅವರ ನಿವಾಸದಲ್ಲಿ ಎರಡು ದಾಳಿಗಳನ್ನು ನಡೆಸಿದ ನಂತರ ಏನೂ ಕಂಡುಬಂದಿಲ್ಲ. ವಾಸ್ತವವಾಗಿ, ಬಾಂಬೆ ಹೈಕೋರ್ಟ್‌ನಲ್ಲಿ ಸ್ವಾಮಿ ಸಲ್ಲಿಸಿದ್ದ ಮನವಿಯಲ್ಲಿ ಪುಣೆ ಪೊಲೀಸರು ದಾಖಲೆಯಲ್ಲಿ “ಅವರು ಆರೋಪಿಯಲ್ಲದ ಕಾರಣ ಅವರನ್ನು ಬಂಧಿಸುವ ಉದ್ದೇಶವಿರಲಿಲ್ಲ” ಎಂದು ಹೇಳಿದ್ದಾರೆ.

ಸ್ವಾಮಿ ವಿರುದ್ಧ ದಾಖಲಾದ ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ವಾಮಿಯವರು ನಿಷೇಧಿತ ಸಂಘಟನೆಯ ಸಿಪಿಐ (ಮಾವೋವಾದಿ) ಸದಸ್ಯರೆಂದು ಅಪಾದಿಸಿದ್ದು, ಪಕ್ಷದ ಅನೇಕ ಸದಸ್ಯರ ಬಂಧನದ ನಂತರ ಅದರ ಚಟುವಟಿಕೆಗಳನ್ನು ಹರಡುವ ಜವಾಬ್ದಾರಿಯನ್ನು ಅವನಿಗೆ ನೀಡಲಾಗಿತ್ತು ಎಂದೂ ಆರೋಪ ಮಾಡಿದೆ. ಸ್ವಾಮಿ ವಿಸ್ತಾಪನ್ ವಿರೋಧಿ ಜನ್ ವಿಕಾಸ್ ಆಂದೋಲನ್ ಮತ್ತು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್‌ನಂತಹ ಸಿಪಿಐ (ಮಾವೋವಾದಿಗಳ) ಬೆಂಬಲಿತ ಸಂಘಟನೆಗಳ ತೀವ್ರ ಬೆಂಬಲಿಗರಾಗಿದ್ದರು ಎಂದು ಆರೋಪ ಮಾಡಲಾಗಿದೆ.

ಜಾರ್ಖಂಡ್‌ನಲ್ಲಿ ಎನ್‌ಜಿಒ ನಡೆಸುತ್ತಿರುವ ಸ್ವಾಮಿ, ತಮ್ಮ ಲ್ಯಾಪ್‌ಟಾಪ್‌ನಲ್ಲಿ ಕಂಡುಬರುವ ಪುರಾವೆಗಳನ್ನು “ಸುಲಭವಾಗಿ ಕುಶಲತೆಯಿಂದ ಸೇರಿಸಬಹುದು” ಎಂದು ವಿವರಿಸಿ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದರು.

ಡಿಸೆಂಬರ್ 31, 2017 ರಂದು ಎಲ್ಗರ್ ಪರಿಷತ್ ಕಾರ್ಯಕ್ರಮದ ಸಂಘಟನೆಯೊಂದಿಗೆ ಅವರು ಎಲ್ಲಿಯೂ ಸಂಪರ್ಕ ಹೊಂದಿಲ್ಲ ಎಂದು ಜಾಮೀನು ಅರ್ಜಿಯಲ್ಲಿ ತಿಳಿಸಲಾಗಿದೆ.
ಈ ಪ್ರಕರಣದಲ್ಲಿ ಇತರರ ಬಂಧನವನ್ನು ಖಂಡಿಸಿ ಸ್ವಾಮಿ ಸಭೆಗಳನ್ನು ನಡೆಸುತ್ತಿದ್ದುದು ಕಂಡುಬಂದಿದೆ ಎಂದು ಎನ್‌ಐಎ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಕಾಶ್ ಶೆಟ್ಟಿ ಮೂಲಕ ತಿಳಿಸಿತ್ತು ಮತ್ತು ಅವರ ಎನ್‌ಜಿಒ ವಿದೇಶಿ ಹಣವನ್ನು ಪಡೆದಿರುವುದಕ್ಕೆ ಪುರಾವೆಗಳಿವೆ ಎಂದು ಆರೋಪಿಸಿತ್ತು.

ಕಳೆದ ವರ್ಷ ಅಕ್ಟೋಬರ್‌ನಲ್ಲಿ, ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ ನೇಮಕಗೊಂಡ ಉನ್ನತ ಸಮಿತಿಯು ಕೊವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಜೈಲುಗಳಲ್ಲಿ ಸಂದಣಿಯನ್ನು ನಿಯಂತ್ರಿಸಲು ಶಿಫಾರಸು ಮಾಡಿದ್ದ ಮಾರ್ಗಸೂಚಿಗಳನ್ನು ಉಲ್ಲೇಖಿಸಿ ಸ್ವಾಮಿ ಮಧ್ಯಂತರ ಜಾಮೀನು ಕೋರಿದ್ದರು.


ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...