ಮಂಗಳವಾರ (ಮಾರ್ಚ್ 23) ಭಗತ್ ಸಿಂಗ್, ರಾಜ್ಗುರು ಮತ್ತು ಸುಖದೇವ್ ಅವರ ಹುತಾತ್ಮ ದಿನದಂದು ರೈತ ಹೋರಾಟ ನಡೆಯುತ್ತಿರುವ ದೆಹಲಿಯ ಗಡಿಗಳಲ್ಲಿ ಯುವಜನರ ಬೃಹತ್ ಸಮಾವೇಶಗಳು ನಡೆಯಲಿವೆ. ದೇಶದಾದ್ಯಂತದ ಯುವಜನರು ದೆಹಲಿಯ ಪ್ರತಿಭಟನಾ ಸ್ಥಳಗಳನ್ನು ತಲುಪುತ್ತಿದ್ದು, ಬೆಳಿಗ್ಗೆ 11 ಗಂಟೆಗೆ ಸಮಾವೇಶ ಆರಂಭವಾಗಲಿವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಸಮಾವೇಶಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹ ಪ್ರಸ್ತುತಪಡಿಸಲಾಗುವುದು, ಅಲ್ಲಿ ಭಗತ್ ಸಿಂಗ್, ರಾಜ್ಗುರು ಮತ್ತು ಸುಖದೇವ್ ಅವರ ವಿಚಾರಗಳನ್ನು ಪ್ರಸ್ತುತ ಪಡಿಸಲಾಗುವುದು. ಈ ಹುತಾತ್ಮ ದಿನವನ್ನು ರೈತರಿಗೆ ಸಮರ್ಪಿಸಲಾಗುವುದು, ಇದರಲ್ಲಿ ರೈತರು ಮತ್ತು ಕಾರ್ಮಿಕರ ಶೋಷಣೆಯ ಬಗ್ಗೆ ಭಗತ್ ಸಿಂಗ್ ಅವರ ಅಭಿಪ್ರಾಯಗಳನ್ನು ತೋರಿಸಲಾಗುವುದು ಮತ್ತು ಆಂದೋಲನವನ್ನು ಮತ್ತಷ್ಟು ಬಲಪಡಿಸಲಾಗುತ್ತದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನು ಖಟ್ಕಾಡ್ ಕಲನ್, ಹಿಸಾರ್ ಮತ್ತು ಮಥುರಾದಿಂದ ಪಾದ ಯಾತ್ರೆಗಳು ದೆಹಲಿಯ ಗಡಿಯನ್ನು ತಲುಪುತ್ತಿವೆ. ಈ ಯಾತ್ರೆಗಳಿಗೆ ಭಾರಿ ಸಾರ್ವಜನಿಕ ಬೆಂಬಲ ಸಿಗುತ್ತಿದೆ. ಮಾರ್ಚ್ 26 ರ ಸಂಪೂರ್ಣ ಭಾರತ್ ಬಂದ್ ಸಂದೇಶಗಳನ್ನು ಈ ಯಾತ್ರೆಗಳ ಮೂಲಕ ಸಾರ್ವಜನಿಕರಿಗೆ ರವಾನಿಸಲಾಗುತ್ತಿದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ: ‘ಬಾಂಬೆ ತಂಡ’ದ ಶಾಸಕರ ಕ್ಷೇತ್ರಗಳು ಭೂಲೋಕದ ಸ್ವರ್ಗಗಳಾಗಿವೆಯೇ: ಸಿಎಂಗೆ ಕುಮಾರಸ್ವಾಮಿ ಪ್ರಶ್ನೆ
ಬಿಜೆಪಿ ಸರ್ಕಾರ ತನ್ನ ವೈಫಲ್ಯವನ್ನು ರೈತರ ಮೇಲೆ ಹೇರಲು ಬಯಸುತ್ತಿದೆ. ವಾಸ್ತವವಾಗಿ, ರೈತರ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ಬದಲು, ಅನಾನುಕೂಲತೆಯನ್ನು ಸೃಷ್ಟಿಸಿ ರೈತರನ್ನು ದೂಷಿಸುತ್ತಿದ್ದಾರೆ. ಸಂಧಾನ ಮಾತುಕತೆಯನ್ನು ರೈತರು ನಿಗದಿಪಡಿಸಬೇಕು ಎಂದು ಮನೋಹರ್ ಲಾಲ್ ಖಟ್ಟರ್ ಹೇಳಿದ್ದಾರೆ. ರೈತ ಮುಖಂಡರು ಮಾತುಕತೆಗೆ ಸಂಪೂರ್ಣವಾಗಿ ಸಿದ್ಧರಾಗಿದ್ದಾರೆ. ಆದರೆ, ಸರಿಯಾದ ವಾತಾವರಣದಲ್ಲಿ ಸಂವಾದದ ಪ್ರಸ್ತಾಪವನ್ನು ಸರ್ಕಾರ ಕಳುಹಿಸಬೇಕು ಎಂದು ನಾವು ಮತ್ತೆ ಸ್ಪಷ್ಟಪಡಿಸುತ್ತೇವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.
ಕರ್ನಾಟಕದ ರಾಜಧಾನಿಯಾದ ಬೆಂಗಳೂರಿನಲ್ಲಿ ವಿಧಾನಸೌಧ ಚಲೋ ರ್ಯಾಲಿ ನಡೆದಿದೆ, ಇದರಲ್ಲಿ ಸಮುಕ್ತ ಕಿಸಾನ್ ಮೋರ್ಚಾದ ನಾಯಕರು ಭಾಗವಹಿಸಿದ್ದರು. ರಾಜ್ಯದ ಕೃಷಿ ಸಚಿವರು ರೈತರನ್ನು ಭೇಟಿಯಾಗಿ ಅವರಿಂದ ಮನವಿ ಪತ್ರವನ್ನು ಸ್ವೀಕರಿಸಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಎಸ್ಕೆಎಂ ತಿಳಿಸಿದೆ.
ಸೋಮವಾರ ನಡೆದ ವಿಧಾನಸೌಧ ಚಲೋ ರ್ಯಾಲಿಯಲ್ಲಿ, ದೆಹಲಿಯ ರೈತ ಹೋರಾಟ ಮುನ್ನಡೆಸುತ್ತಿರುವ ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ಕಾರ್ಯದರ್ಶಿ ಯುದುವೀರ್ ಸಿಂಗ್, ಸಂಯುಕ್ತ ಕಿಸಾನ್ ಮೋರ್ಚಾದ ಡಾ.ದರ್ಶನ್ ಪಾಲ್, ರಾಕೇಶ್ ಟಿಕಾಯತ್, ಕುಲ್ಬೀರ್ ಸಿಂಗ್, ರಾಜ್ಯದ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ನಟ ಚೇತನ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಇದನ್ನೂ ಓದಿ: ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್


