Homeಮುಖಪುಟಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

- Advertisement -
- Advertisement -

ರೈತ ಆಂದೋಲನಕ್ಕೆ ನೆರವು ನೀಡಿದವರ ಮೇಲೆ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ. ಒಬ್ಬ ಹೋಟೆಲ್ ಮಾಲೀಕ ಆಂದೋಲನಕ್ಕೆ ಬೆಂಬಲ ನೀಡಿದ್ದಕ್ಕೆ ಅವರ ಮೇಲೆ ಇಡಿ ದಾಳಿ ಮಾಡಲಾಗಿದೆ. ಇದು ರಾಜ್ಯ ಆಳುವ ಲಕ್ಷಣವೇ? ಇವರು ಅಧಿಕಾರಕ್ಕೆ ಬರಲು ಕಾರಣರಾದ ನಾವು ನೀವು ಈ ಕುರಿತು ಯೋಚಿಸಬೇಕು? ಎಂದು ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ಕಾರ್ಯದರ್ಶಿ ಯುದುವೀರ್ ಸಿಂಗ್ ಕರೆ ನೀಡಿದರು.

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸೌಧ ಚಲೋ ರ್‍ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೋದಿ ಸರ್ಕಾರ ಮೊದಲು ಎಂಎಸ್‌ಪಿ ಕೊಡುತ್ತೇವೆ, ಖಾಸಗಿ ಮಂಡಿಗಳ ವಿರುದ್ಧ, ಗುತ್ತಿಗೆ ಕೃಷಿ ಪದ್ದತಿ ವಿರುದ್ಧ ಮಾತನಾಡಿದರು. ಎಪಿಎಂಪಿ ಬಲಪಡಿಸುತ್ತೇವೆ, ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದರು. ಆದರೆ ಇಂದು ಅದಕ್ಕೆ ಬೆನ್ನು ತಿರುಗಿಸಿ ರೈತರ ವಿರುದ್ಧ ಸಮರ ಹೂಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ದೇಶದಲ್ಲಿ ಪ್ರಜಾತಂತ್ರ, ಅಭಿವ್ಯಕ್ತಿ ಸ್ವಾತಂತ್ರ್ಯ ಇದೆಯೆಂದು ಹೇಳಲಾಗುತ್ತಿದೆ. ಆದರೆ ಫ್ಯಾಸಿಸ್ಟರು ಯಾವ ರೀತಿ ಆಳ್ವಿಕೆ ನಡೆಸುತ್ತಿದ್ದಾರೆ ಎಂಬುದು ಕರ್ನಾಟಕದ ಜನರಿಗೆ ತಿಳಿದಿದೆ. ಗೌರಿ ಲಂಕೇಶ್‌ರವರನ್ನು ಗುಂಡು ಹೊಡೆದು ಹತ್ಯೆ ಮಾಡಲಾಯಿತು. ಅವರು ಯಾವ ತಪ್ಪು ಮಾಡಿದ್ದರು? ಅನ್ಯಾಯದ ವಿರುದ್ಧವಾಗಿ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ಮಾತನಾಡುವುದು ತಪ್ಪೇ? ಏನು ತಪ್ಪಿತ್ತು ಎಂದು ದಿಶಾರವಿಯೆಂಬ ಪುಟ್ಟು ಹುಡುಗಿಯನ್ನು ಬಂಧಿಸಿ ಹಿಂಸಿಸಲಾಯಿತು? ಇಂದು ಪೊಲೀಸರನ್ನು ಮತ್ತು ಸಂಘಪರಿವಾರದ ಗೂಂಡಾಗಳನ್ನು ಮುಂದಿಟ್ಟುಕೊಂಡು ಆಂದೋಲನವನ್ನು ದಮನಿಸುತ್ತಿರುವುದನ್ನು ದೇಶವೇ ನೋಡುತ್ತಿದೆ ಎಂದರು.

ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ. ಶತಮಾನಗಳಿಂದ ನಾವು ಧರ್ಮದ ಗುಲಾಮರಾಗಿ ಬದುಕಿದ್ದೇವೆ, ಇಂದು ಮತ್ತೆ ಅದೇ ಧರ್ಮದ ಗುಲಾಮಗಿರಿಗೆ ತಳ್ಳಲಾಗುತ್ತಿದೆ. ಈ ಸರ್ಕಾರ ರಾಮಮಂದಿರದ ಅಜೆಂಡಾ ಇಟ್ಟುಕೊಂಡಿದೆ. ನಮ್ಮ ದೇಶದಲ್ಲಿ ಮಂದಿರಗಳು ಮುಂಚೆಯೇ ಇದ್ದವು. ಹಾಗಾಗಿ ರಾಮಮಂದಿರ ಒಂದು ಪಕ್ಷದ ಅಜೆಂಡಾವಾಗಬೇಕಿಲ್ಲ ಬದಲಿಗೆ ಬಡವರ, ಜನಸಾಮಾನ್ಯರ ಅಭಿವೃದ್ದಿ, ಯುವಜನರಿಗೆ ಉದ್ಯೋಗ, ರೈತರಿಗೆ ನ್ಯಾಯ ಎಂಬುದು ಅಜೆಂಡಾವಾಗಬೇಕಿದೆ. ಆದರೆ ಅವರ ಬಳಿ ಅದಿಲ್ಲ. ರಾಮಮಂದಿರ ಕಟ್ಟಲು ಇವರು ಬೇಕಾಗಿಲ್ಲ. ರಾಮ ಯಾರಪ್ಪನ ಆಸ್ತಿಯಲ್ಲ, ರಾಮ ಈ ದೇಶದ ಜನರ ಹೃದಯದಲ್ಲಿದ್ದಾನೆ. ರೈತರು-ಕಾರ್ಮಿಕರು ರಾಮನನ್ನು ಹುಡುಕಲು ಮಂದಿರಕ್ಕೆ ಹೋಗಬೇಕಾಗಿಲ್ಲ, ಹೊಲದಲ್ಲಿ ಮತ್ತು ಇತರೆಡೆ ದುಡಿಯುವ ರೈತ ಕಾರ್ಮಿಕರು ಬೆಳಿಗ್ಗೆಯಿಂದ ಸಂಜೆಯವರೆಗೆ ರಾಮನ ಜೊತೆಗಿರುತ್ತಾರೆ. ಅವರ ರಾಮ ಅವರ ದುಡಿಮೆಯಲ್ಲಿದ್ದಾನೆ, ಅವರ ಶ್ರಮದಲ್ಲಿದ್ದಾನೆ, ಅವರ ಬೆವರಿನಲ್ಲಿದ್ದಾನೆ ಮತ್ತು ಅವರ ಹೃದಯದಲ್ಲಿದ್ದಾನೆ ಮತ್ತು ಅವರಿಗಾಗಿ ರಾಮನ ಹೆಸರಿನಲ್ಲಿ ಜನರನ್ನು ಒಡೆದು ಆಳಬೇಕಾಗಿಲ್ಲ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು ಎಂದರು.

ಈ ಆಂದೋಲನ ಮೂರು ಕರಾಳ ಕಾನೂನುಗಳ ರದ್ಧತಿಗೆ ಮತ್ತು ಎಂಎಸ್‌ಪಿ ಜಾರಿಗಾಗಿ ಆರಂಭವಾಯಿತು. ಆದರೆ ಇಂದು ಅದು ಅಷ್ಟಕ್ಕೆ ಸೀಮಿತವಾಗದೆ ಎಲ್ಲಾ ಜನವರ್ಗಗಳ ಆಂದೋಲನವಾಗಿ ಮಾರ್ಪಟ್ಟಿದೆ. ರೈತರು-ಕಾರ್ಮಿಕರು-ದಲಿತರು ಮತ್ತುಎಲ್ಲಾ ಶೋಷಿತರ ಹೋರಾಟವಾಗಿ ಮಾರ್ಪಟ್ಟಿದೆ. ಇದು ಸುಧೀರ್ಘ ಹೋರಾಟವಾಗಲಿದೆ. ನೀವು ದೆಹಲಿತನಕ ಬರಲು ಸಾಧ್ಯವಾಗದಿರಬಹುದು. ಹಾಗಾಗಿ ಇಲ್ಲಿರುವ ರೈತರು ಕಾರ್ಮಿಕರು ಸೇರಿ ಬೆಂಗಳೂರನ್ನೇ ದೆಹಲಿ ಮಾಡಬೇಕಾಗಿದೆ. ಉತ್ತರ ಭಾರತದ ರೈತರು ದೆಹಲಿಯಲ್ಲಿ ಯಾವ ರೀತಿ ಸುತ್ತುವರಿದಿದ್ದಾರೋ, ಅದೇ ರೀತಿ ಬೆಂಗಳೂರನ್ನು ಕರ್ನಾಟಕದ ಎಲ್ಲಾ ರೈತ-ಕಾರ್ಮಿಕರು ಮುತ್ತಿಗೆ ಹಾಕಿ ಸಂಪೂರ್ಣ ಹಿಡಿತಕ್ಕೆ ತೆಗೆದುಕೊಳ್ಳಬೇಕು ಎಂದು ಯುದುವೀರ್ ಸಿಂಗ್ ಮನವಿ ಮಾಡಿದರು.

ಇದು ಒಂದು ದಿನದ ಹೋರಾಟ ಮತ್ತು ಭಾಷಣಕ್ಕೆ ಸೀಮಿತವಾಗಬಾರದು. ಇಲ್ಲಿ ಒಂದು ಖಾಯಂ ಹೋರಾಟದ ಟೆಂಟ್ ಹಾಕಬೇಕು. ನಾನು ಕರ್ನಾಟಕಕ್ಕೆ ಹಲವಾರು ಬಂದಿದ್ದೇನೆ. ಪ್ರೊ.ನಂಜುಂಡಸ್ವಾಮಿಯವರೊಂದಿಗೆ ಹೋರಾಟ ನಡೆಸಿದ್ದೇವೆ. ಇದು ಪವಿತ್ರ ಜಾಗವಾಗಿದ್ದು, ಶೋಷಣೆ ವಿರುದ್ಧದ ಹೋರಾಟಕ್ಕೆ ಸಾಕ್ಷಿಯಾಗಿದೆ. ಇಲ್ಲಿ ನೀವು ಸುದೀರ್ಘ ಹೋರಾಟ ನಡೆಸುವ ಮೂಲಕ ಬೆಂಗಳೂರಿನಿಂದ ದೇಶಕ್ಕೆ ಉತ್ತಮ ಸಂದೇಶ ನೀಡುತ್ತಿರಿ ಎಂದು ನಂಬಿದ್ದೇನೆ ಎಂದರು.

ಇಂದಿನ ಹೋರಾಟದಲ್ಲಿ ದೆಹಲಿಯ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ ಡಾ.ದರ್ಶನ್ ಪಾಲ್, ರಾಕೇಶ್ ಟಿಕಾಯತ್, ಕುಲ್‌ಬೀರ್‌ ಸಿಂಗ್, ರಾಜ್ಯದ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ನಟ ಚೇತನ್ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ರೈತ ವಿರೋಧಿ ಕೃಷಿ ಕಾಯ್ದೆ ತಂದು ಶೋಷಿಸುತ್ತಿರುವವರೆ ನಿಜ ಭಯೋತ್ಪಾದಕರು- ನಟ ಚೇತನ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...