Homeಮುಖಪುಟಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನ ಮೆಚ್ಚಿಕೊಂಡಿದ್ದಾರೆ: ರಾಕೇಶ್ ಟಿಕಾಯತ್

ಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನ ಮೆಚ್ಚಿಕೊಂಡಿದ್ದಾರೆ: ರಾಕೇಶ್ ಟಿಕಾಯತ್

- Advertisement -
- Advertisement -

ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವಂತೆ ಮತ್ತು ಎಂಎಸ್‌ಪಿಗಾಗಿ ಕಾನೂನು ತರಲು ದೆಹಲಿಯಲ್ಲಿ ಒಂದು ದೊಡ್ಡ ಆಂದೋಲನ ನಡೆಯುತ್ತಿದೆ. ದೆಹಲಿಯನ್ನು ನಾಲ್ಕು ದಿಕ್ಕೂಗಳಿಂದ ರೈತರು ಸುತ್ತುವರೆದಿದ್ದಾರೆ. ಸರ್ಕಾರದೊಂದಿಗೆ 12 ಸುತ್ತಿನ ಮಾತುಕತೆಗಳು ನಡೆದಿವೆ. ಜನಪರ ಸರ್ಕಾರವಾಗಿದ್ದರೆ ರೈತರ ಸಮಸ್ಯೆಯನ್ನು ಬಗೆಹರಿಸುತ್ತಿತ್ತು. ಆದರೆ ಇದು ಬಂಡವಾಳಶಾಹಿಪರ ಸರ್ಕಾರವಾಗಿದೆ. ಎರಡು ತಿಂಗಳಿನಿಂದ ಸರ್ಕಾರ ಮಾತುಕತೆ ಸ್ಥಗಿತಗೊಳಿಸಿದೆ. ಆದರೆ ಜನ ಎಚ್ಚೆತ್ತುಕೊಂಡಿದ್ದಾರೆ. ನಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಿ, ಮುನ್ನಡೆಯಲು ಸಹಕರಿಸುತ್ತಿದ್ದಾರೆ, ಇದು ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದರು.

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸೌಧ ಚಲೋ ರ್‍ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, 26 ಸಾರ್ವಜನಿಕ ಕಂಪನಿಗಳನ್ನು ಖಾಸಗೀಕರಣ ಮಾಡಲು ಸರ್ಕಾರ ಯತ್ನಿಸುತ್ತಿದೆ. ರೈಲ್ವೇ, ಏರ್‌ಪೋರ್ಟ್, ದೊಡ್ಡ ತೈಲ ಕಂಪನಿಗಳು, ಎಲ್‌ಐಸಿಯಂತಹ ದೊಡ್ಡ ಸಾರ್ವಜನಿಕ ಸಂಸ್ಥೆಗಳು ಮಾರಾಟವಾಗುತ್ತಿವೆ. ಆದರೆ ಜನರನ್ನು ಮಂದಿರದ ಸುತ್ತ ಸುತ್ತಿಸಲಾಗುತ್ತಿದೆ. ಜಾತಿ ಧರ್ಮ ವಿಷಯದಲ್ಲಿ ಹೊಡೆದಾಡುವಂತೆ ಮಾಡಲಾಗುತ್ತಿದೆ. ಇದನ್ನು ಪ್ರಶ್ನಿಸಬಾರದಂತೆ ಜನರನ್ನು ಕಟ್ಟಿಹಾಕಲಾಗುತ್ತಿದೆ ಎಂದು ಅವರು ವಿಷಾಧ ವ್ಯಕ್ತಪಡಿಸಿದರು.

ಇಂದು ಮಣ್ಣಿನ ಮತ್ತು ಆಹಾರದ ವ್ಯಾಪಾರಕ್ಕೆ ದೊಡ್ಡ ಬಂಡವಾಳಶಾಹಿಗಳು ಮುಂದಾಗಿದ್ದಾರೆ. ದಿನನಿತ್ಯದ ಹಸಿವಿನ ವ್ಯಾಪಾರಕ್ಕಿಳಿದಿದ್ದಾರೆ. ಎಷ್ಟು ಜನ ಹಸಿದುಕೊಂಡಿದ್ದಾರೆ, ಹಸಿವಿನ ಪ್ರಮಾಣವೆಷ್ಟು ಎಂಬುದರ ಆಧಾರದಲ್ಲಿ ಅವರು ಆಹಾರದ ದರಗಳನ್ನು ನಿಗಧಿಮಾಡುತ್ತಿದ್ದಾರೆ. ಇಂದು ನೀವು ಮ್ಯಾಕ್‌ಡೋನಾಲ್ಡ್, ಕೆಎಫ್‌ಸಿ ಯಂತಹ ಹೋಟೆಲ್‌ಗಳನ್ನು ನೋಡಿರಬಹುದು. ಅವು ಆಹಾರವನ್ನು ಪ್ಯಾಕ್ ಮಾಡಿ ಮಾರುತ್ತವೆ. ಆಹಾರ ಉಳಿದುಕೊಂಡರೆ ಅಂದೇ ಅದನ್ನು ಕಸದ ಬುಟ್ಟಿಗೆ ಹಾಕುತ್ತಾರೆ. ಅದನ್ನು ನಿಮ್ಮದೇ ಕಂಪನಿಯ ಕಾರ್ಮಿಕರೇಕೆ ಕೊಡುವುದಿಲ್ಲ ಎಂದು ನಾನು ಕೇಳಿದರೆ ಅವರ ಬಳಿ ಉತ್ತರವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಯುವಜನರಿಂದ ಉದ್ಯೋಗಗಳನ್ನು ಕಿತ್ತುಕೊಳ್ಳಲಾಗುತ್ತಿದೆ. ಶಾಸಕರು, ಸಂಸದರಿಗೆ ಎರಡು ಮೂರು ರೀತಿಯ ಪಿಂಚಣಿಗಳನ್ನು ಕೊಡಲಾಗುತ್ತಿದೆ. ಆದರೆ ದೇಶ ಕಟ್ಟುತ್ತಿರುವ ಸಾಮಾನ್ಯ ಕಾರ್ಮಿಕರಿಗೆ-ನೌಕರರಿಗೆ, ದೇಶಕಾಯುತ್ತಿರುವ ಸೈನಿಕರಿಗೆ ಮಾತ್ರ ಪಿಂಚಣಿ ಕೊಡುತ್ತಿಲ್ಲ. ಎಲ್‌ಪಿಜಿ ಸಬ್ಸಿಡಿ ಬಿಡಿ ಎಂದು ಸರ್ಕಾರ ಹೇಳುತ್ತಿದೆ. ಆದರೆ ನಾವು ಶಾಸಕರು, ಸಂಸದರಿಗೆ ಪಿಂಚಣಿ ಬಿಡಿ ಎಂದು ನಾವು ಕೇಳಬೇಕು ಎಂದರು.

ನಮ್ಮೊಂದಿಗೆ ಸಂಪರ್ಕದಲ್ಲಿರುವ ಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನವನ್ನು ಮೆಚ್ಚಿಕೊಂಡಿದ್ದಾರೆ. ಅದನ್ನು ಮುಂದುವರೆಸಿ ಎಂದು ಹಾರೈಸಿದ್ದಾರೆ. ಸದನದ ಒಳಗೆ ವಿರೋಧ ಪಕ್ಷಗಳ ದನಿ ಕ್ಷೀಣಿಸುತ್ತಿರುವಾಗ ನಾವು ದೇಶದ ಎಲ್ಲಾ ಮೂಲೆಗಳಲ್ಲಿ ರೈತ ಆಂದೋಲನವನ್ನು ಹುಟ್ಟುಹಾಕಬೇಕಾಗಿದೆ ಎಂದರು.

ಟ್ರ್ಯಾಕ್ಟರ್ ಎಂಬುದು ರೈತನ ಅವಿಭಾಜ್ಯ ಅಂಗವಾಗಿದೆ. ಅದು ಎಲ್ಲಾ ಕಷ್ಟಗಳನ್ನು ಬದಿಗೊತ್ತಿ ರೈತನಿಗೆ ಅವರ ಸ್ವಂತ ದಾರಿ ಮಾಡಿಕೊಡುತ್ತದೆ. ಟ್ರ್ಯಾಕ್ಟರ್‌ಗಳಿಲ್ಲದಿದ್ದರೆ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ರೈತರು ದೆಹಲಿ ತಲುಪುವುದು ಕಷ್ಟವಾಗುತ್ತಿತ್ತು. ಈಗ ಹತ್ತು ವರ್ಷ ಹಳೆಯದಾಗಿರುವ ಟ್ರ್ಯಾಕ್ಟರ್‌ಗಳನ್ನು ಬಳಸಬಾರದು ಎಂದು ಸರ್ಕಾರ ಹೊಸ ಕಾನೂನು ತರಲು ಹೊರಟಿದೆ. ರೈತರು ಹತ್ತು ವರ್ಷಕ್ಕೊಮ್ಮೆ ಹೊಸ ಟ್ರ್ಯಾಕ್ಟರ್ ಖರೀದಿಸಲು ಸಮರ್ಥರಾಗಿದ್ದಾರೆಯೇ? ಬೀಜ ಕಾಯ್ದೆ ತಂದು ರೈತರ ಸ್ವಾಯುತ್ತತ್ತೆ ಕಸಿದುಕೊಳ್ಳಲಾಗುತ್ತಿದೆ. ಅದೇ ಸಮಯದಲ್ಲಿ ವಿದ್ಯುತ್ ತಿದ್ದುಪಡಿ ಕಾಯ್ದೆಯ ಮೂಲಕ ರೈತರಿಗೆ ಸಮರ್ಪಕ ವಿದ್ಯುತ್ ನೀಡದೆ ದುಪ್ಪಟ್ಟು ಹಣ ವಸೂಲಿ ಮಾಡಲಾಗುತ್ತದೆ. ಇದೆಲ್ಲವೂ ರೈತರನ್ನು ಕೃಷಿಯಿಂದ ಒಕ್ಕಲೆಬ್ಬಿಸಿ ದೊಡ್ಡ ಬಂಡವಾಳಶಾಹಿಗಳು ಕೃಷಿಯ್ನು ವಶಪಡಿಸಿಕೊಳ್ಳಲು ಮಾಡುತ್ತಿರುವ ಹುನ್ನಾರ ಎಂದು ರಾಕೇಶ್ ಟಿಕಾಯತ್ ಆತಂಕ ವ್ಯಕ್ತಪಡಿಸಿದರು.

ರೈತರ ಬೆಳೆಗಳನ್ನು ಮಾರಲು ಎಪಿಎಂಸಿ ಬೇಕಾಗಿಲ್ಲ ಎಲ್ಲಿ ಬೇಕಾದರೂ ಮಾರಬಹುದು ಎಂದು ಸರ್ಕಾರ ಹೇಳುತ್ತಿದೆ. ಹಾಗಾಗಿ ನೀವು ಬೆಳೆದ ಬೆಳೆಯನ್ನು ವಿಧಾನಸೌಧಕ್ಕೆ ತಂದು ಮಾರಬೇಕು. ಯಾರಾದರೂ ತಡೆದರೆ ನೀವು ಸರ್ಕಾರವನ್ನು ಪ್ರಶ್ನಿಸಿ ಎಂದು ಹೇಳಬೇಕು ಎಂದರು.

ಸರ್ಕಾರದ ವತಿಯಿಂದ ಕೃಷಿ ಸಚಿವರಾದ ಬಿ.ಸಿ ಪಾಟೀಲ್‌ರವರು ರೈತರ ಹಕ್ಕೊತ್ತಾಯ ಪತ್ರ ಪಡೆದರು. ಇಂದಿನ ಹೋರಾಟದಲ್ಲಿ ದೆಹಲಿಯ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ ಡಾ.ದರ್ಶನ್ ಪಾಲ್, ಬಿಕೆಯು ಪ್ರಧಾನ ಕಾರ್ಯದರ್ಶಿ ಯುಧುವೀರ್ ಸಿಂಗ್, ಕುಲ್‌ಬೀರ್‌ ಸಿಂಗ್, ರಾಜ್ಯದ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ನಟ ಚೇತನ್ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...