Homeಮುಖಪುಟದೆಹಲಿ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ಬಿಲ್ ಪಾಸ್: ಜನತೆಗೆ ಅವಮಾನ ಎಂದ ಕೇಜ್ರಿವಾಲ್

ದೆಹಲಿ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ಬಿಲ್ ಪಾಸ್: ಜನತೆಗೆ ಅವಮಾನ ಎಂದ ಕೇಜ್ರಿವಾಲ್

ಚುನಾಯಿತ ಸರ್ಕಾರ ತನ್ನ ಎಲ್ಲ ಪ್ರಮುಖ ನಿರ್ಧಾರಗಳಿಗೆ ಲೆಫ್ಟಿನೆಂಟ್ ಜನರಲ್ ಒಪ್ಪಿಗೆ ಪಡೆಯಬೇಕಾಗುತ್ತದೆ. ಒಂದರ್ಥದಲ್ಲಿ ಎಲ್-ಜಿ ಅವರೇ ಸರ್ಕಾರವಾಗುತ್ತಾರೆ ಎನ್ನಲಾಗಿದೆ.

- Advertisement -
- Advertisement -

ದೆಹಲಿಯ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ಉದ್ದೇಶ ಹೊಂದಿರುವ 2021 ರ ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆಯನ್ನು ಲೋಕಸಭೆ ಸೋಮವಾರ ಅಂಗೀಕರಿಸಿದೆ. ದೆಹಲಿಯಲ್ಲಿ ಚುನಾಯಿತ ಸರ್ಕಾರ ಮತ್ತು ನಾಮನಿರ್ದೇಶಿತ ಲೆಫ್ಟಿನೆಂಟ್ ಗವರ್ನರ್ ಪಾತ್ರಗಳನ್ನು ನಿರ್ದಿಷ್ಟಪಡಿಸುವ ಕಾಯಿದೆಯ ತಿದ್ದುಪಡಿಗಳನ್ನು ಮಸೂದೆ ಸೂಚಿಸುತ್ತದೆ.

ಲೋಕಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸುವುದು ದೆಹಲಿ ಜನರಿಗೆ ಮಾಡಿದ ಅವಮಾನ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಏಕೆಂದರೆ ಇದು ಜನರಿಂದ ಚುನಾಯಿತರಾದವರ ಅಧಿಕಾರವನ್ನು ಕಿತ್ತುಕೊಳ್ಳುತ್ತದೆ ಮತ್ತು ಸೋಲಿಸಲ್ಪಟ್ಟವರಿಗೆ ನಿಯಂತ್ರಣವನ್ನು ನೀಡುತ್ತದೆ ಎಂದು ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ಈ ತಿದ್ದುಪಡಿಗಳು ದೆಹಲಿಯಲ್ಲಿ ಚುನಾವಣೆಗಳು ಮತ್ತು ಚುನಾಯಿತ ಸರ್ಕಾರವನ್ನು ಅಪ್ರಸ್ತುತಗೊಳಿಸುತ್ತವೆ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟೀಕಿಸಿದ್ದಾರೆ.

ರಾಷ್ಟ್ರ ರಾಜಧಾನಿಯ ವ್ಯವಹಾರಗಳನ್ನು ನಡೆಸುವಲ್ಲಿನ ಅಸ್ಪಷ್ಟತೆಯನ್ನು ಕೊನೆಗೊಳಿಸಲು ಈ ಮಸೂದೆಯನ್ನು ತರಲಾಗಿದೆ ಎಂದು ಕೇಂದ್ರವು ಹೇಳಿದೆ. ಇದು ನಗರದ ಜನರಿಗೆ ಪ್ರಯೋಜನಕಾರಿ ಆಗುವುದರಿಂದ ಇದನ್ನು “ರಾಜಕೀಯ ನಡೆ” ಎಂದು ಕರೆಯಬೇಡಿ ಎಂದು ಎಲ್ಲರಿಗೂ ಮನವಿ ಮಾಡಿದೆ.

ಎರಡು ಪ್ರಸ್ತಾವಿತ ತಿದ್ದುಪಡಿಗಳು, ನಿರ್ದಿಷ್ಟವಾಗಿ, ಚುನಾಯಿತ ಸರ್ಕಾರವನ್ನು ಅಪ್ರಸ್ತುತಗೊಳಿಸುವ ಸಾಮರ್ಥ್ಯವನ್ನು ಹೊಂದಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಕಾರ್ಯಾಂಗೀಯ ಕ್ರಮಕ್ಕೆ ಲೆಫ್ಟಿನೆಂಟ್ ಜನರಲ್ ಅಭಿಪ್ರಾಯವನ್ನು ಪಡೆಯಬೇಕಾಗುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

‘ಕೇಂದ್ರವು ಪ್ರಜಾಪ್ರಭುತ್ವ ವಿರೋಧಿ ಮತ್ತು ಅಸಂವಿಧಾನಿಕ ಮಸೂದೆಯನ್ನು ತಂದಿದೆ. ಎಲ್-ಜಿ ಅವರೇ ಸರ್ಕಾರ ಎಂದು ಅದು ಹೇಳುತ್ತದೆ. ಎಲ್ಲಾ ನಿರ್ಧಾರಗಳು ಮತ್ತು ಫೈಲ್‌ಗಳನ್ನು ಅವರ ಮೂಲಕ ರವಾನಿಸಬೇಕಾಗಿದೆ” ಎಂದು ಸಿಸೋಡಿಯಾ ಸೋಮವಾರ ಹೇಳಿದ್ದಾರೆ. “ಈ ಮಸೂದೆ ಸುಪ್ರೀಂ ಕೋರ್ಟ್ ಸಂವಿಧಾನ ಪೀಠದ ಆದೇಶಕ್ಕೆ ವಿರುದ್ಧವಾಗಿದೆ. ಕೇಂದ್ರವು ಇದನ್ನೇ ಮಾಡಲು ಬಯಸಿದರೆ, ಚುನಾವಣೆಗಳನ್ನು ನಡೆಸುವ ಮತ್ತು ರಾಜ್ಯದಲ್ಲಿ ಚುನಾಯಿತ ಸರ್ಕಾರ ರಚನೆಯ ಅರ್ಥವೇನು? ಕೇಂದ್ರವು ತಾನು ಪ್ರಜಾತಾಂತ್ರಿಕ ಎಂದು ಏಕೆ ನಟಿಸುತ್ತದೆ? ” ಎಂದು ಅವರು ಪ್ರಶ್ನಿಸಿದ್ದಾರೆ.

ಮಾರ್ಚ್ 15 ರಂದು ಲೋಕಸಭೆಯಲ್ಲಿ ಈ ಮಸೂದೆಯನ್ನು ಪರಿಚಯಿಸಲಾಯಿತು. ಇದರ ನಂತರ ದೆಹಲಿ ಮಂತ್ರಿಗಳು ಮತ್ತು ಎಎಪಿ ಸಂಸದರು, ಶಾಸಕರು ಮತ್ತು ಕೌನ್ಸಿಲರ್‌ಗಳು ಇದರ ವಿರುದ್ಧ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದರು, ಇದು ಎಲ್-ಜಿಗೆ ಹೆಚ್ಚಿನ ಶಕ್ತಿಯನ್ನು ನೀಡುತ್ತದೆ ಎಂದು ಅಪಾದಿಸಿದ್ದರು.

ಗೃಹ ಖಾತೆ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಅವರು ಪರಿಚಯಿಸಿದ 2021 ರ ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆ 1991 ರ ಕಾಯಿದೆಯ ನಾಲ್ಕು ಷರತ್ತುಗಳನ್ನು ತಿದ್ದುಪಡಿ ಮಾಡಲು ಪ್ರಸ್ತಾಪಿಸಿದೆ.

ಮೊದಲನೆಯದು ಸೆಕ್ಷನ್ 21, ಅಂದರೆ ಇದು ಕೆಲವು ವಿಷಯಗಳಿಗೆ ಸಂಬಂಧಿಸಿದಂತೆ ಶಾಸಕಾಂಗವು ಅಂಗೀಕರಿಸಿದ ಕಾನೂನುಗಳ ಮೇಲಿನ ನಿರ್ಬಂಧಗಳನ್ನು ಸೂಚಿಸುತ್ತದೆ. ಶಾಸಕಾಂಗವು ಮಾಡಬೇಕಾದ ಯಾವುದೇ ಕಾನೂನಿನಲ್ಲಿ ಉಲ್ಲೇಖಿಸಲಾದ “ಸರ್ಕಾರ” ಎಂಬ ಅಭಿವ್ಯಕ್ತಿ ಲೆಫ್ಟಿನೆಂಟ್ ಗವರ್ನರ್ ಎಂದು ಅರ್ಥೈಸುತ್ತದೆ” ಎಂದು ಸ್ಪಷ್ಟಪಡಿಸುವ ಮೂಲಕ ಉಪವಿಭಾಗವನ್ನು ಸೇರಿಸಲು ಮಸೂದೆ ಪ್ರಯತ್ನಿಸುತ್ತದೆ.

ಎರಡನೇ ತಿದ್ದುಪಡಿಯನ್ನು ಸೆಕ್ಷನ್ 24 ರಲ್ಲಿ ಕೋರಲಾಗಿದೆ, ಇದು ವಿಧಾನಸಭೆಯು ಅಂಗೀಕರಿಸಿದ ಮಸೂದೆಗಳಿಗೆ ಒಪ್ಪಿಗೆ ನೀಡುತ್ತದೆ. ಶಾಸಕಾಂಗ ಸಭೆಗೆ ನೀಡಲಾಗಿರುವ ಅಧಿಕಾರಗಳ ವ್ಯಾಪ್ತಿಯಿಂದ ಹೊರಗುಳಿಯುವ ಯಾವುದೇ ವಿಷಯಗಳನ್ನು ಒಳಗೊಳ್ಳುವ ಯಾವುದೇ ಮಸೂದೆಯನ್ನು ಪರಿಗಣಿಸಲು ಮತ್ತು ರಾಷ್ಟ್ರಪತಿಗೆ ರವಾನಿಸಲು ಎಲ್-ಜಿ ಒಪ್ಪದಿರುವ ಅಧಿಕಾರವನ್ನು ನೀಡಲಾಗಿದೆ.

ಮೂರನೆಯದಾಗಿ, ಮಸೂದೆಯು ಸೆಕ್ಷನ್ 33, ಕಾರ್ಯವಿಧಾನದ ನಿಯಮಗಳು ಮಾರ್ಪಾಟಿಗೆ ಬಯಸಿದೆ. ಅದರ ವಿಧಾನ ಮತ್ತು ಸದನ ನಡವಳಿಕೆಯನ್ನು ನಿಯಂತ್ರಿಸಲು ಅಸೆಂಬ್ಲಿ ಮಾಡಿದ ನಿಯಮಗಳ ಮೇಲೆ ಇದು ನಿಯಂತ್ರಣ ಸಾಧಿಸುತ್ತದೆ.

ಅಲ್ಲದೆ, “ ಹೊಸ ಮಸೂದೆ ಜಾರಿಗೆ ಬರುವ ಮುನ್ನ ರಾಜಧಾನಿಯ ದಿನನಿತ್ಯದ ಆಡಳಿತದ ವಿಷಯಗಳನ್ನು ಪರಿಗಣಿಸಲು ಅಥವಾ ಆಡಳಿತಾತ್ಮಕ ನಿರ್ಧಾರಗಳಿಗೆ ಸಂಬಂಧಿಸಿದಂತೆ ವಿಚಾರಣೆಗಳನ್ನು ನಡೆಸಲು ಮತ್ತು ಯಾವುದೇ ನಿಯಮದಲ್ಲಿ ಶಾಸಕಾಂಗವು ತನ್ನನ್ನು ಅಥವಾ ಅದರ ಸಮಿತಿಗಳನ್ನು ಸಕ್ರಿಯಗೊಳಿಸಲು ಯಾವುದೇ ನಿಯಮವನ್ನು ಮಾಡಬಾರದು. ಎಂದು ನಿರ್ಬಂಧಿಸಿದೆ.

ತಿದ್ದುಪಡಿ ಮಸೂದೆಯು, “ಮಂತ್ರಿ ಮಂಡಲ ಅಥವಾ ಸಚಿವರ ನಿರ್ಧಾರದ ಅನುಸಾರ” ಅಥವಾ “ಸರ್ಕಾರದ ಅಧಿಕಾರವನ್ನು ಚಲಾಯಿಸಲು” ಯಾವುದೇ ಕಾರ್ಯಕಾರಿ ಕ್ರಮ ತೆಗೆದುಕೊಳ್ಳುವ ಮೊದಲು, ಎಲ್-ಜಿ ಅಭಿಪ್ರಾಯವನ್ನು ಪಡೆಯಬೇಕಾಗಿದೆ.


ಇದನ್ನೂ ಓದಿ: ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...