Homeಮುಖಪುಟದೆಹಲಿ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ಬಿಲ್ ಪಾಸ್: ಜನತೆಗೆ ಅವಮಾನ ಎಂದ ಕೇಜ್ರಿವಾಲ್

ದೆಹಲಿ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ಬಿಲ್ ಪಾಸ್: ಜನತೆಗೆ ಅವಮಾನ ಎಂದ ಕೇಜ್ರಿವಾಲ್

ಚುನಾಯಿತ ಸರ್ಕಾರ ತನ್ನ ಎಲ್ಲ ಪ್ರಮುಖ ನಿರ್ಧಾರಗಳಿಗೆ ಲೆಫ್ಟಿನೆಂಟ್ ಜನರಲ್ ಒಪ್ಪಿಗೆ ಪಡೆಯಬೇಕಾಗುತ್ತದೆ. ಒಂದರ್ಥದಲ್ಲಿ ಎಲ್-ಜಿ ಅವರೇ ಸರ್ಕಾರವಾಗುತ್ತಾರೆ ಎನ್ನಲಾಗಿದೆ.

- Advertisement -
- Advertisement -

ದೆಹಲಿಯ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ಉದ್ದೇಶ ಹೊಂದಿರುವ 2021 ರ ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆಯನ್ನು ಲೋಕಸಭೆ ಸೋಮವಾರ ಅಂಗೀಕರಿಸಿದೆ. ದೆಹಲಿಯಲ್ಲಿ ಚುನಾಯಿತ ಸರ್ಕಾರ ಮತ್ತು ನಾಮನಿರ್ದೇಶಿತ ಲೆಫ್ಟಿನೆಂಟ್ ಗವರ್ನರ್ ಪಾತ್ರಗಳನ್ನು ನಿರ್ದಿಷ್ಟಪಡಿಸುವ ಕಾಯಿದೆಯ ತಿದ್ದುಪಡಿಗಳನ್ನು ಮಸೂದೆ ಸೂಚಿಸುತ್ತದೆ.

ಲೋಕಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸುವುದು ದೆಹಲಿ ಜನರಿಗೆ ಮಾಡಿದ ಅವಮಾನ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಏಕೆಂದರೆ ಇದು ಜನರಿಂದ ಚುನಾಯಿತರಾದವರ ಅಧಿಕಾರವನ್ನು ಕಿತ್ತುಕೊಳ್ಳುತ್ತದೆ ಮತ್ತು ಸೋಲಿಸಲ್ಪಟ್ಟವರಿಗೆ ನಿಯಂತ್ರಣವನ್ನು ನೀಡುತ್ತದೆ ಎಂದು ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ಈ ತಿದ್ದುಪಡಿಗಳು ದೆಹಲಿಯಲ್ಲಿ ಚುನಾವಣೆಗಳು ಮತ್ತು ಚುನಾಯಿತ ಸರ್ಕಾರವನ್ನು ಅಪ್ರಸ್ತುತಗೊಳಿಸುತ್ತವೆ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟೀಕಿಸಿದ್ದಾರೆ.

ರಾಷ್ಟ್ರ ರಾಜಧಾನಿಯ ವ್ಯವಹಾರಗಳನ್ನು ನಡೆಸುವಲ್ಲಿನ ಅಸ್ಪಷ್ಟತೆಯನ್ನು ಕೊನೆಗೊಳಿಸಲು ಈ ಮಸೂದೆಯನ್ನು ತರಲಾಗಿದೆ ಎಂದು ಕೇಂದ್ರವು ಹೇಳಿದೆ. ಇದು ನಗರದ ಜನರಿಗೆ ಪ್ರಯೋಜನಕಾರಿ ಆಗುವುದರಿಂದ ಇದನ್ನು “ರಾಜಕೀಯ ನಡೆ” ಎಂದು ಕರೆಯಬೇಡಿ ಎಂದು ಎಲ್ಲರಿಗೂ ಮನವಿ ಮಾಡಿದೆ.

ಎರಡು ಪ್ರಸ್ತಾವಿತ ತಿದ್ದುಪಡಿಗಳು, ನಿರ್ದಿಷ್ಟವಾಗಿ, ಚುನಾಯಿತ ಸರ್ಕಾರವನ್ನು ಅಪ್ರಸ್ತುತಗೊಳಿಸುವ ಸಾಮರ್ಥ್ಯವನ್ನು ಹೊಂದಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಕಾರ್ಯಾಂಗೀಯ ಕ್ರಮಕ್ಕೆ ಲೆಫ್ಟಿನೆಂಟ್ ಜನರಲ್ ಅಭಿಪ್ರಾಯವನ್ನು ಪಡೆಯಬೇಕಾಗುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

‘ಕೇಂದ್ರವು ಪ್ರಜಾಪ್ರಭುತ್ವ ವಿರೋಧಿ ಮತ್ತು ಅಸಂವಿಧಾನಿಕ ಮಸೂದೆಯನ್ನು ತಂದಿದೆ. ಎಲ್-ಜಿ ಅವರೇ ಸರ್ಕಾರ ಎಂದು ಅದು ಹೇಳುತ್ತದೆ. ಎಲ್ಲಾ ನಿರ್ಧಾರಗಳು ಮತ್ತು ಫೈಲ್‌ಗಳನ್ನು ಅವರ ಮೂಲಕ ರವಾನಿಸಬೇಕಾಗಿದೆ” ಎಂದು ಸಿಸೋಡಿಯಾ ಸೋಮವಾರ ಹೇಳಿದ್ದಾರೆ. “ಈ ಮಸೂದೆ ಸುಪ್ರೀಂ ಕೋರ್ಟ್ ಸಂವಿಧಾನ ಪೀಠದ ಆದೇಶಕ್ಕೆ ವಿರುದ್ಧವಾಗಿದೆ. ಕೇಂದ್ರವು ಇದನ್ನೇ ಮಾಡಲು ಬಯಸಿದರೆ, ಚುನಾವಣೆಗಳನ್ನು ನಡೆಸುವ ಮತ್ತು ರಾಜ್ಯದಲ್ಲಿ ಚುನಾಯಿತ ಸರ್ಕಾರ ರಚನೆಯ ಅರ್ಥವೇನು? ಕೇಂದ್ರವು ತಾನು ಪ್ರಜಾತಾಂತ್ರಿಕ ಎಂದು ಏಕೆ ನಟಿಸುತ್ತದೆ? ” ಎಂದು ಅವರು ಪ್ರಶ್ನಿಸಿದ್ದಾರೆ.

ಮಾರ್ಚ್ 15 ರಂದು ಲೋಕಸಭೆಯಲ್ಲಿ ಈ ಮಸೂದೆಯನ್ನು ಪರಿಚಯಿಸಲಾಯಿತು. ಇದರ ನಂತರ ದೆಹಲಿ ಮಂತ್ರಿಗಳು ಮತ್ತು ಎಎಪಿ ಸಂಸದರು, ಶಾಸಕರು ಮತ್ತು ಕೌನ್ಸಿಲರ್‌ಗಳು ಇದರ ವಿರುದ್ಧ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದರು, ಇದು ಎಲ್-ಜಿಗೆ ಹೆಚ್ಚಿನ ಶಕ್ತಿಯನ್ನು ನೀಡುತ್ತದೆ ಎಂದು ಅಪಾದಿಸಿದ್ದರು.

ಗೃಹ ಖಾತೆ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಅವರು ಪರಿಚಯಿಸಿದ 2021 ರ ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆ 1991 ರ ಕಾಯಿದೆಯ ನಾಲ್ಕು ಷರತ್ತುಗಳನ್ನು ತಿದ್ದುಪಡಿ ಮಾಡಲು ಪ್ರಸ್ತಾಪಿಸಿದೆ.

ಮೊದಲನೆಯದು ಸೆಕ್ಷನ್ 21, ಅಂದರೆ ಇದು ಕೆಲವು ವಿಷಯಗಳಿಗೆ ಸಂಬಂಧಿಸಿದಂತೆ ಶಾಸಕಾಂಗವು ಅಂಗೀಕರಿಸಿದ ಕಾನೂನುಗಳ ಮೇಲಿನ ನಿರ್ಬಂಧಗಳನ್ನು ಸೂಚಿಸುತ್ತದೆ. ಶಾಸಕಾಂಗವು ಮಾಡಬೇಕಾದ ಯಾವುದೇ ಕಾನೂನಿನಲ್ಲಿ ಉಲ್ಲೇಖಿಸಲಾದ “ಸರ್ಕಾರ” ಎಂಬ ಅಭಿವ್ಯಕ್ತಿ ಲೆಫ್ಟಿನೆಂಟ್ ಗವರ್ನರ್ ಎಂದು ಅರ್ಥೈಸುತ್ತದೆ” ಎಂದು ಸ್ಪಷ್ಟಪಡಿಸುವ ಮೂಲಕ ಉಪವಿಭಾಗವನ್ನು ಸೇರಿಸಲು ಮಸೂದೆ ಪ್ರಯತ್ನಿಸುತ್ತದೆ.

ಎರಡನೇ ತಿದ್ದುಪಡಿಯನ್ನು ಸೆಕ್ಷನ್ 24 ರಲ್ಲಿ ಕೋರಲಾಗಿದೆ, ಇದು ವಿಧಾನಸಭೆಯು ಅಂಗೀಕರಿಸಿದ ಮಸೂದೆಗಳಿಗೆ ಒಪ್ಪಿಗೆ ನೀಡುತ್ತದೆ. ಶಾಸಕಾಂಗ ಸಭೆಗೆ ನೀಡಲಾಗಿರುವ ಅಧಿಕಾರಗಳ ವ್ಯಾಪ್ತಿಯಿಂದ ಹೊರಗುಳಿಯುವ ಯಾವುದೇ ವಿಷಯಗಳನ್ನು ಒಳಗೊಳ್ಳುವ ಯಾವುದೇ ಮಸೂದೆಯನ್ನು ಪರಿಗಣಿಸಲು ಮತ್ತು ರಾಷ್ಟ್ರಪತಿಗೆ ರವಾನಿಸಲು ಎಲ್-ಜಿ ಒಪ್ಪದಿರುವ ಅಧಿಕಾರವನ್ನು ನೀಡಲಾಗಿದೆ.

ಮೂರನೆಯದಾಗಿ, ಮಸೂದೆಯು ಸೆಕ್ಷನ್ 33, ಕಾರ್ಯವಿಧಾನದ ನಿಯಮಗಳು ಮಾರ್ಪಾಟಿಗೆ ಬಯಸಿದೆ. ಅದರ ವಿಧಾನ ಮತ್ತು ಸದನ ನಡವಳಿಕೆಯನ್ನು ನಿಯಂತ್ರಿಸಲು ಅಸೆಂಬ್ಲಿ ಮಾಡಿದ ನಿಯಮಗಳ ಮೇಲೆ ಇದು ನಿಯಂತ್ರಣ ಸಾಧಿಸುತ್ತದೆ.

ಅಲ್ಲದೆ, “ ಹೊಸ ಮಸೂದೆ ಜಾರಿಗೆ ಬರುವ ಮುನ್ನ ರಾಜಧಾನಿಯ ದಿನನಿತ್ಯದ ಆಡಳಿತದ ವಿಷಯಗಳನ್ನು ಪರಿಗಣಿಸಲು ಅಥವಾ ಆಡಳಿತಾತ್ಮಕ ನಿರ್ಧಾರಗಳಿಗೆ ಸಂಬಂಧಿಸಿದಂತೆ ವಿಚಾರಣೆಗಳನ್ನು ನಡೆಸಲು ಮತ್ತು ಯಾವುದೇ ನಿಯಮದಲ್ಲಿ ಶಾಸಕಾಂಗವು ತನ್ನನ್ನು ಅಥವಾ ಅದರ ಸಮಿತಿಗಳನ್ನು ಸಕ್ರಿಯಗೊಳಿಸಲು ಯಾವುದೇ ನಿಯಮವನ್ನು ಮಾಡಬಾರದು. ಎಂದು ನಿರ್ಬಂಧಿಸಿದೆ.

ತಿದ್ದುಪಡಿ ಮಸೂದೆಯು, “ಮಂತ್ರಿ ಮಂಡಲ ಅಥವಾ ಸಚಿವರ ನಿರ್ಧಾರದ ಅನುಸಾರ” ಅಥವಾ “ಸರ್ಕಾರದ ಅಧಿಕಾರವನ್ನು ಚಲಾಯಿಸಲು” ಯಾವುದೇ ಕಾರ್ಯಕಾರಿ ಕ್ರಮ ತೆಗೆದುಕೊಳ್ಳುವ ಮೊದಲು, ಎಲ್-ಜಿ ಅಭಿಪ್ರಾಯವನ್ನು ಪಡೆಯಬೇಕಾಗಿದೆ.


ಇದನ್ನೂ ಓದಿ: ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...