Homeಮುಖಪುಟದೆಹಲಿ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ಬಿಲ್ ಪಾಸ್: ಜನತೆಗೆ ಅವಮಾನ ಎಂದ ಕೇಜ್ರಿವಾಲ್

ದೆಹಲಿ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ಬಿಲ್ ಪಾಸ್: ಜನತೆಗೆ ಅವಮಾನ ಎಂದ ಕೇಜ್ರಿವಾಲ್

ಚುನಾಯಿತ ಸರ್ಕಾರ ತನ್ನ ಎಲ್ಲ ಪ್ರಮುಖ ನಿರ್ಧಾರಗಳಿಗೆ ಲೆಫ್ಟಿನೆಂಟ್ ಜನರಲ್ ಒಪ್ಪಿಗೆ ಪಡೆಯಬೇಕಾಗುತ್ತದೆ. ಒಂದರ್ಥದಲ್ಲಿ ಎಲ್-ಜಿ ಅವರೇ ಸರ್ಕಾರವಾಗುತ್ತಾರೆ ಎನ್ನಲಾಗಿದೆ.

- Advertisement -
- Advertisement -

ದೆಹಲಿಯ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ಉದ್ದೇಶ ಹೊಂದಿರುವ 2021 ರ ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆಯನ್ನು ಲೋಕಸಭೆ ಸೋಮವಾರ ಅಂಗೀಕರಿಸಿದೆ. ದೆಹಲಿಯಲ್ಲಿ ಚುನಾಯಿತ ಸರ್ಕಾರ ಮತ್ತು ನಾಮನಿರ್ದೇಶಿತ ಲೆಫ್ಟಿನೆಂಟ್ ಗವರ್ನರ್ ಪಾತ್ರಗಳನ್ನು ನಿರ್ದಿಷ್ಟಪಡಿಸುವ ಕಾಯಿದೆಯ ತಿದ್ದುಪಡಿಗಳನ್ನು ಮಸೂದೆ ಸೂಚಿಸುತ್ತದೆ.

ಲೋಕಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸುವುದು ದೆಹಲಿ ಜನರಿಗೆ ಮಾಡಿದ ಅವಮಾನ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಏಕೆಂದರೆ ಇದು ಜನರಿಂದ ಚುನಾಯಿತರಾದವರ ಅಧಿಕಾರವನ್ನು ಕಿತ್ತುಕೊಳ್ಳುತ್ತದೆ ಮತ್ತು ಸೋಲಿಸಲ್ಪಟ್ಟವರಿಗೆ ನಿಯಂತ್ರಣವನ್ನು ನೀಡುತ್ತದೆ ಎಂದು ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ಈ ತಿದ್ದುಪಡಿಗಳು ದೆಹಲಿಯಲ್ಲಿ ಚುನಾವಣೆಗಳು ಮತ್ತು ಚುನಾಯಿತ ಸರ್ಕಾರವನ್ನು ಅಪ್ರಸ್ತುತಗೊಳಿಸುತ್ತವೆ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟೀಕಿಸಿದ್ದಾರೆ.

ರಾಷ್ಟ್ರ ರಾಜಧಾನಿಯ ವ್ಯವಹಾರಗಳನ್ನು ನಡೆಸುವಲ್ಲಿನ ಅಸ್ಪಷ್ಟತೆಯನ್ನು ಕೊನೆಗೊಳಿಸಲು ಈ ಮಸೂದೆಯನ್ನು ತರಲಾಗಿದೆ ಎಂದು ಕೇಂದ್ರವು ಹೇಳಿದೆ. ಇದು ನಗರದ ಜನರಿಗೆ ಪ್ರಯೋಜನಕಾರಿ ಆಗುವುದರಿಂದ ಇದನ್ನು “ರಾಜಕೀಯ ನಡೆ” ಎಂದು ಕರೆಯಬೇಡಿ ಎಂದು ಎಲ್ಲರಿಗೂ ಮನವಿ ಮಾಡಿದೆ.

ಎರಡು ಪ್ರಸ್ತಾವಿತ ತಿದ್ದುಪಡಿಗಳು, ನಿರ್ದಿಷ್ಟವಾಗಿ, ಚುನಾಯಿತ ಸರ್ಕಾರವನ್ನು ಅಪ್ರಸ್ತುತಗೊಳಿಸುವ ಸಾಮರ್ಥ್ಯವನ್ನು ಹೊಂದಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಕಾರ್ಯಾಂಗೀಯ ಕ್ರಮಕ್ಕೆ ಲೆಫ್ಟಿನೆಂಟ್ ಜನರಲ್ ಅಭಿಪ್ರಾಯವನ್ನು ಪಡೆಯಬೇಕಾಗುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

‘ಕೇಂದ್ರವು ಪ್ರಜಾಪ್ರಭುತ್ವ ವಿರೋಧಿ ಮತ್ತು ಅಸಂವಿಧಾನಿಕ ಮಸೂದೆಯನ್ನು ತಂದಿದೆ. ಎಲ್-ಜಿ ಅವರೇ ಸರ್ಕಾರ ಎಂದು ಅದು ಹೇಳುತ್ತದೆ. ಎಲ್ಲಾ ನಿರ್ಧಾರಗಳು ಮತ್ತು ಫೈಲ್‌ಗಳನ್ನು ಅವರ ಮೂಲಕ ರವಾನಿಸಬೇಕಾಗಿದೆ” ಎಂದು ಸಿಸೋಡಿಯಾ ಸೋಮವಾರ ಹೇಳಿದ್ದಾರೆ. “ಈ ಮಸೂದೆ ಸುಪ್ರೀಂ ಕೋರ್ಟ್ ಸಂವಿಧಾನ ಪೀಠದ ಆದೇಶಕ್ಕೆ ವಿರುದ್ಧವಾಗಿದೆ. ಕೇಂದ್ರವು ಇದನ್ನೇ ಮಾಡಲು ಬಯಸಿದರೆ, ಚುನಾವಣೆಗಳನ್ನು ನಡೆಸುವ ಮತ್ತು ರಾಜ್ಯದಲ್ಲಿ ಚುನಾಯಿತ ಸರ್ಕಾರ ರಚನೆಯ ಅರ್ಥವೇನು? ಕೇಂದ್ರವು ತಾನು ಪ್ರಜಾತಾಂತ್ರಿಕ ಎಂದು ಏಕೆ ನಟಿಸುತ್ತದೆ? ” ಎಂದು ಅವರು ಪ್ರಶ್ನಿಸಿದ್ದಾರೆ.

ಮಾರ್ಚ್ 15 ರಂದು ಲೋಕಸಭೆಯಲ್ಲಿ ಈ ಮಸೂದೆಯನ್ನು ಪರಿಚಯಿಸಲಾಯಿತು. ಇದರ ನಂತರ ದೆಹಲಿ ಮಂತ್ರಿಗಳು ಮತ್ತು ಎಎಪಿ ಸಂಸದರು, ಶಾಸಕರು ಮತ್ತು ಕೌನ್ಸಿಲರ್‌ಗಳು ಇದರ ವಿರುದ್ಧ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದರು, ಇದು ಎಲ್-ಜಿಗೆ ಹೆಚ್ಚಿನ ಶಕ್ತಿಯನ್ನು ನೀಡುತ್ತದೆ ಎಂದು ಅಪಾದಿಸಿದ್ದರು.

ಗೃಹ ಖಾತೆ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಅವರು ಪರಿಚಯಿಸಿದ 2021 ರ ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆ 1991 ರ ಕಾಯಿದೆಯ ನಾಲ್ಕು ಷರತ್ತುಗಳನ್ನು ತಿದ್ದುಪಡಿ ಮಾಡಲು ಪ್ರಸ್ತಾಪಿಸಿದೆ.

ಮೊದಲನೆಯದು ಸೆಕ್ಷನ್ 21, ಅಂದರೆ ಇದು ಕೆಲವು ವಿಷಯಗಳಿಗೆ ಸಂಬಂಧಿಸಿದಂತೆ ಶಾಸಕಾಂಗವು ಅಂಗೀಕರಿಸಿದ ಕಾನೂನುಗಳ ಮೇಲಿನ ನಿರ್ಬಂಧಗಳನ್ನು ಸೂಚಿಸುತ್ತದೆ. ಶಾಸಕಾಂಗವು ಮಾಡಬೇಕಾದ ಯಾವುದೇ ಕಾನೂನಿನಲ್ಲಿ ಉಲ್ಲೇಖಿಸಲಾದ “ಸರ್ಕಾರ” ಎಂಬ ಅಭಿವ್ಯಕ್ತಿ ಲೆಫ್ಟಿನೆಂಟ್ ಗವರ್ನರ್ ಎಂದು ಅರ್ಥೈಸುತ್ತದೆ” ಎಂದು ಸ್ಪಷ್ಟಪಡಿಸುವ ಮೂಲಕ ಉಪವಿಭಾಗವನ್ನು ಸೇರಿಸಲು ಮಸೂದೆ ಪ್ರಯತ್ನಿಸುತ್ತದೆ.

ಎರಡನೇ ತಿದ್ದುಪಡಿಯನ್ನು ಸೆಕ್ಷನ್ 24 ರಲ್ಲಿ ಕೋರಲಾಗಿದೆ, ಇದು ವಿಧಾನಸಭೆಯು ಅಂಗೀಕರಿಸಿದ ಮಸೂದೆಗಳಿಗೆ ಒಪ್ಪಿಗೆ ನೀಡುತ್ತದೆ. ಶಾಸಕಾಂಗ ಸಭೆಗೆ ನೀಡಲಾಗಿರುವ ಅಧಿಕಾರಗಳ ವ್ಯಾಪ್ತಿಯಿಂದ ಹೊರಗುಳಿಯುವ ಯಾವುದೇ ವಿಷಯಗಳನ್ನು ಒಳಗೊಳ್ಳುವ ಯಾವುದೇ ಮಸೂದೆಯನ್ನು ಪರಿಗಣಿಸಲು ಮತ್ತು ರಾಷ್ಟ್ರಪತಿಗೆ ರವಾನಿಸಲು ಎಲ್-ಜಿ ಒಪ್ಪದಿರುವ ಅಧಿಕಾರವನ್ನು ನೀಡಲಾಗಿದೆ.

ಮೂರನೆಯದಾಗಿ, ಮಸೂದೆಯು ಸೆಕ್ಷನ್ 33, ಕಾರ್ಯವಿಧಾನದ ನಿಯಮಗಳು ಮಾರ್ಪಾಟಿಗೆ ಬಯಸಿದೆ. ಅದರ ವಿಧಾನ ಮತ್ತು ಸದನ ನಡವಳಿಕೆಯನ್ನು ನಿಯಂತ್ರಿಸಲು ಅಸೆಂಬ್ಲಿ ಮಾಡಿದ ನಿಯಮಗಳ ಮೇಲೆ ಇದು ನಿಯಂತ್ರಣ ಸಾಧಿಸುತ್ತದೆ.

ಅಲ್ಲದೆ, “ ಹೊಸ ಮಸೂದೆ ಜಾರಿಗೆ ಬರುವ ಮುನ್ನ ರಾಜಧಾನಿಯ ದಿನನಿತ್ಯದ ಆಡಳಿತದ ವಿಷಯಗಳನ್ನು ಪರಿಗಣಿಸಲು ಅಥವಾ ಆಡಳಿತಾತ್ಮಕ ನಿರ್ಧಾರಗಳಿಗೆ ಸಂಬಂಧಿಸಿದಂತೆ ವಿಚಾರಣೆಗಳನ್ನು ನಡೆಸಲು ಮತ್ತು ಯಾವುದೇ ನಿಯಮದಲ್ಲಿ ಶಾಸಕಾಂಗವು ತನ್ನನ್ನು ಅಥವಾ ಅದರ ಸಮಿತಿಗಳನ್ನು ಸಕ್ರಿಯಗೊಳಿಸಲು ಯಾವುದೇ ನಿಯಮವನ್ನು ಮಾಡಬಾರದು. ಎಂದು ನಿರ್ಬಂಧಿಸಿದೆ.

ತಿದ್ದುಪಡಿ ಮಸೂದೆಯು, “ಮಂತ್ರಿ ಮಂಡಲ ಅಥವಾ ಸಚಿವರ ನಿರ್ಧಾರದ ಅನುಸಾರ” ಅಥವಾ “ಸರ್ಕಾರದ ಅಧಿಕಾರವನ್ನು ಚಲಾಯಿಸಲು” ಯಾವುದೇ ಕಾರ್ಯಕಾರಿ ಕ್ರಮ ತೆಗೆದುಕೊಳ್ಳುವ ಮೊದಲು, ಎಲ್-ಜಿ ಅಭಿಪ್ರಾಯವನ್ನು ಪಡೆಯಬೇಕಾಗಿದೆ.


ಇದನ್ನೂ ಓದಿ: ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....