Homeಮುಖಪುಟದೆಹಲಿ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ಬಿಲ್ ಪಾಸ್: ಜನತೆಗೆ ಅವಮಾನ ಎಂದ ಕೇಜ್ರಿವಾಲ್

ದೆಹಲಿ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ಬಿಲ್ ಪಾಸ್: ಜನತೆಗೆ ಅವಮಾನ ಎಂದ ಕೇಜ್ರಿವಾಲ್

ಚುನಾಯಿತ ಸರ್ಕಾರ ತನ್ನ ಎಲ್ಲ ಪ್ರಮುಖ ನಿರ್ಧಾರಗಳಿಗೆ ಲೆಫ್ಟಿನೆಂಟ್ ಜನರಲ್ ಒಪ್ಪಿಗೆ ಪಡೆಯಬೇಕಾಗುತ್ತದೆ. ಒಂದರ್ಥದಲ್ಲಿ ಎಲ್-ಜಿ ಅವರೇ ಸರ್ಕಾರವಾಗುತ್ತಾರೆ ಎನ್ನಲಾಗಿದೆ.

- Advertisement -
- Advertisement -

ದೆಹಲಿಯ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ಉದ್ದೇಶ ಹೊಂದಿರುವ 2021 ರ ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆಯನ್ನು ಲೋಕಸಭೆ ಸೋಮವಾರ ಅಂಗೀಕರಿಸಿದೆ. ದೆಹಲಿಯಲ್ಲಿ ಚುನಾಯಿತ ಸರ್ಕಾರ ಮತ್ತು ನಾಮನಿರ್ದೇಶಿತ ಲೆಫ್ಟಿನೆಂಟ್ ಗವರ್ನರ್ ಪಾತ್ರಗಳನ್ನು ನಿರ್ದಿಷ್ಟಪಡಿಸುವ ಕಾಯಿದೆಯ ತಿದ್ದುಪಡಿಗಳನ್ನು ಮಸೂದೆ ಸೂಚಿಸುತ್ತದೆ.

ಲೋಕಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸುವುದು ದೆಹಲಿ ಜನರಿಗೆ ಮಾಡಿದ ಅವಮಾನ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಏಕೆಂದರೆ ಇದು ಜನರಿಂದ ಚುನಾಯಿತರಾದವರ ಅಧಿಕಾರವನ್ನು ಕಿತ್ತುಕೊಳ್ಳುತ್ತದೆ ಮತ್ತು ಸೋಲಿಸಲ್ಪಟ್ಟವರಿಗೆ ನಿಯಂತ್ರಣವನ್ನು ನೀಡುತ್ತದೆ ಎಂದು ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ಈ ತಿದ್ದುಪಡಿಗಳು ದೆಹಲಿಯಲ್ಲಿ ಚುನಾವಣೆಗಳು ಮತ್ತು ಚುನಾಯಿತ ಸರ್ಕಾರವನ್ನು ಅಪ್ರಸ್ತುತಗೊಳಿಸುತ್ತವೆ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟೀಕಿಸಿದ್ದಾರೆ.

ರಾಷ್ಟ್ರ ರಾಜಧಾನಿಯ ವ್ಯವಹಾರಗಳನ್ನು ನಡೆಸುವಲ್ಲಿನ ಅಸ್ಪಷ್ಟತೆಯನ್ನು ಕೊನೆಗೊಳಿಸಲು ಈ ಮಸೂದೆಯನ್ನು ತರಲಾಗಿದೆ ಎಂದು ಕೇಂದ್ರವು ಹೇಳಿದೆ. ಇದು ನಗರದ ಜನರಿಗೆ ಪ್ರಯೋಜನಕಾರಿ ಆಗುವುದರಿಂದ ಇದನ್ನು “ರಾಜಕೀಯ ನಡೆ” ಎಂದು ಕರೆಯಬೇಡಿ ಎಂದು ಎಲ್ಲರಿಗೂ ಮನವಿ ಮಾಡಿದೆ.

ಎರಡು ಪ್ರಸ್ತಾವಿತ ತಿದ್ದುಪಡಿಗಳು, ನಿರ್ದಿಷ್ಟವಾಗಿ, ಚುನಾಯಿತ ಸರ್ಕಾರವನ್ನು ಅಪ್ರಸ್ತುತಗೊಳಿಸುವ ಸಾಮರ್ಥ್ಯವನ್ನು ಹೊಂದಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಕಾರ್ಯಾಂಗೀಯ ಕ್ರಮಕ್ಕೆ ಲೆಫ್ಟಿನೆಂಟ್ ಜನರಲ್ ಅಭಿಪ್ರಾಯವನ್ನು ಪಡೆಯಬೇಕಾಗುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

‘ಕೇಂದ್ರವು ಪ್ರಜಾಪ್ರಭುತ್ವ ವಿರೋಧಿ ಮತ್ತು ಅಸಂವಿಧಾನಿಕ ಮಸೂದೆಯನ್ನು ತಂದಿದೆ. ಎಲ್-ಜಿ ಅವರೇ ಸರ್ಕಾರ ಎಂದು ಅದು ಹೇಳುತ್ತದೆ. ಎಲ್ಲಾ ನಿರ್ಧಾರಗಳು ಮತ್ತು ಫೈಲ್‌ಗಳನ್ನು ಅವರ ಮೂಲಕ ರವಾನಿಸಬೇಕಾಗಿದೆ” ಎಂದು ಸಿಸೋಡಿಯಾ ಸೋಮವಾರ ಹೇಳಿದ್ದಾರೆ. “ಈ ಮಸೂದೆ ಸುಪ್ರೀಂ ಕೋರ್ಟ್ ಸಂವಿಧಾನ ಪೀಠದ ಆದೇಶಕ್ಕೆ ವಿರುದ್ಧವಾಗಿದೆ. ಕೇಂದ್ರವು ಇದನ್ನೇ ಮಾಡಲು ಬಯಸಿದರೆ, ಚುನಾವಣೆಗಳನ್ನು ನಡೆಸುವ ಮತ್ತು ರಾಜ್ಯದಲ್ಲಿ ಚುನಾಯಿತ ಸರ್ಕಾರ ರಚನೆಯ ಅರ್ಥವೇನು? ಕೇಂದ್ರವು ತಾನು ಪ್ರಜಾತಾಂತ್ರಿಕ ಎಂದು ಏಕೆ ನಟಿಸುತ್ತದೆ? ” ಎಂದು ಅವರು ಪ್ರಶ್ನಿಸಿದ್ದಾರೆ.

ಮಾರ್ಚ್ 15 ರಂದು ಲೋಕಸಭೆಯಲ್ಲಿ ಈ ಮಸೂದೆಯನ್ನು ಪರಿಚಯಿಸಲಾಯಿತು. ಇದರ ನಂತರ ದೆಹಲಿ ಮಂತ್ರಿಗಳು ಮತ್ತು ಎಎಪಿ ಸಂಸದರು, ಶಾಸಕರು ಮತ್ತು ಕೌನ್ಸಿಲರ್‌ಗಳು ಇದರ ವಿರುದ್ಧ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದರು, ಇದು ಎಲ್-ಜಿಗೆ ಹೆಚ್ಚಿನ ಶಕ್ತಿಯನ್ನು ನೀಡುತ್ತದೆ ಎಂದು ಅಪಾದಿಸಿದ್ದರು.

ಗೃಹ ಖಾತೆ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಅವರು ಪರಿಚಯಿಸಿದ 2021 ರ ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆ 1991 ರ ಕಾಯಿದೆಯ ನಾಲ್ಕು ಷರತ್ತುಗಳನ್ನು ತಿದ್ದುಪಡಿ ಮಾಡಲು ಪ್ರಸ್ತಾಪಿಸಿದೆ.

ಮೊದಲನೆಯದು ಸೆಕ್ಷನ್ 21, ಅಂದರೆ ಇದು ಕೆಲವು ವಿಷಯಗಳಿಗೆ ಸಂಬಂಧಿಸಿದಂತೆ ಶಾಸಕಾಂಗವು ಅಂಗೀಕರಿಸಿದ ಕಾನೂನುಗಳ ಮೇಲಿನ ನಿರ್ಬಂಧಗಳನ್ನು ಸೂಚಿಸುತ್ತದೆ. ಶಾಸಕಾಂಗವು ಮಾಡಬೇಕಾದ ಯಾವುದೇ ಕಾನೂನಿನಲ್ಲಿ ಉಲ್ಲೇಖಿಸಲಾದ “ಸರ್ಕಾರ” ಎಂಬ ಅಭಿವ್ಯಕ್ತಿ ಲೆಫ್ಟಿನೆಂಟ್ ಗವರ್ನರ್ ಎಂದು ಅರ್ಥೈಸುತ್ತದೆ” ಎಂದು ಸ್ಪಷ್ಟಪಡಿಸುವ ಮೂಲಕ ಉಪವಿಭಾಗವನ್ನು ಸೇರಿಸಲು ಮಸೂದೆ ಪ್ರಯತ್ನಿಸುತ್ತದೆ.

ಎರಡನೇ ತಿದ್ದುಪಡಿಯನ್ನು ಸೆಕ್ಷನ್ 24 ರಲ್ಲಿ ಕೋರಲಾಗಿದೆ, ಇದು ವಿಧಾನಸಭೆಯು ಅಂಗೀಕರಿಸಿದ ಮಸೂದೆಗಳಿಗೆ ಒಪ್ಪಿಗೆ ನೀಡುತ್ತದೆ. ಶಾಸಕಾಂಗ ಸಭೆಗೆ ನೀಡಲಾಗಿರುವ ಅಧಿಕಾರಗಳ ವ್ಯಾಪ್ತಿಯಿಂದ ಹೊರಗುಳಿಯುವ ಯಾವುದೇ ವಿಷಯಗಳನ್ನು ಒಳಗೊಳ್ಳುವ ಯಾವುದೇ ಮಸೂದೆಯನ್ನು ಪರಿಗಣಿಸಲು ಮತ್ತು ರಾಷ್ಟ್ರಪತಿಗೆ ರವಾನಿಸಲು ಎಲ್-ಜಿ ಒಪ್ಪದಿರುವ ಅಧಿಕಾರವನ್ನು ನೀಡಲಾಗಿದೆ.

ಮೂರನೆಯದಾಗಿ, ಮಸೂದೆಯು ಸೆಕ್ಷನ್ 33, ಕಾರ್ಯವಿಧಾನದ ನಿಯಮಗಳು ಮಾರ್ಪಾಟಿಗೆ ಬಯಸಿದೆ. ಅದರ ವಿಧಾನ ಮತ್ತು ಸದನ ನಡವಳಿಕೆಯನ್ನು ನಿಯಂತ್ರಿಸಲು ಅಸೆಂಬ್ಲಿ ಮಾಡಿದ ನಿಯಮಗಳ ಮೇಲೆ ಇದು ನಿಯಂತ್ರಣ ಸಾಧಿಸುತ್ತದೆ.

ಅಲ್ಲದೆ, “ ಹೊಸ ಮಸೂದೆ ಜಾರಿಗೆ ಬರುವ ಮುನ್ನ ರಾಜಧಾನಿಯ ದಿನನಿತ್ಯದ ಆಡಳಿತದ ವಿಷಯಗಳನ್ನು ಪರಿಗಣಿಸಲು ಅಥವಾ ಆಡಳಿತಾತ್ಮಕ ನಿರ್ಧಾರಗಳಿಗೆ ಸಂಬಂಧಿಸಿದಂತೆ ವಿಚಾರಣೆಗಳನ್ನು ನಡೆಸಲು ಮತ್ತು ಯಾವುದೇ ನಿಯಮದಲ್ಲಿ ಶಾಸಕಾಂಗವು ತನ್ನನ್ನು ಅಥವಾ ಅದರ ಸಮಿತಿಗಳನ್ನು ಸಕ್ರಿಯಗೊಳಿಸಲು ಯಾವುದೇ ನಿಯಮವನ್ನು ಮಾಡಬಾರದು. ಎಂದು ನಿರ್ಬಂಧಿಸಿದೆ.

ತಿದ್ದುಪಡಿ ಮಸೂದೆಯು, “ಮಂತ್ರಿ ಮಂಡಲ ಅಥವಾ ಸಚಿವರ ನಿರ್ಧಾರದ ಅನುಸಾರ” ಅಥವಾ “ಸರ್ಕಾರದ ಅಧಿಕಾರವನ್ನು ಚಲಾಯಿಸಲು” ಯಾವುದೇ ಕಾರ್ಯಕಾರಿ ಕ್ರಮ ತೆಗೆದುಕೊಳ್ಳುವ ಮೊದಲು, ಎಲ್-ಜಿ ಅಭಿಪ್ರಾಯವನ್ನು ಪಡೆಯಬೇಕಾಗಿದೆ.


ಇದನ್ನೂ ಓದಿ: ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...