Homeಮುಖಪುಟಇಂಧನ ತೆರಿಗೆ ಸಂಗ್ರಹ: 2014 ಕ್ಕಿಂತ 2021 ರಲ್ಲಿ 456% ದಷ್ಟು ಹೆಚ್ಚಳ!

ಇಂಧನ ತೆರಿಗೆ ಸಂಗ್ರಹ: 2014 ಕ್ಕಿಂತ 2021 ರಲ್ಲಿ 456% ದಷ್ಟು ಹೆಚ್ಚಳ!

- Advertisement -
- Advertisement -

ಇಂಧನ ತೆರಿಗೆಗಳು ಸರ್ಕಾರದ ಕಾಮಧೇನು ಆಗಿ ಮಾರ್ಪಟ್ಟಿದೆಯೇ ಎಂಬ ಬಗ್ಗೆ ಯಾವುದೇ ಸಂದೇಹಗಳು ಉಳಿದಿದ್ದರೆ, ಸೋಮವಾರ ಲೋಕಸಭೆಗೆ ಹಣಕಾಸು ಸಚಿವಾಲಯ ನೀಡಿರುವ ಉತ್ತರದಲ್ಲಿ ಅವುಗಳನ್ನು ಪರಿಹರಿಸಿ ಕೊಳ್ಳಬಹುದಾಗಿದೆ. ಪೆಟ್ರೋಲ್, ಡೀಸೆಲ್ ಮತ್ತು ನೈಸರ್ಗಿಕ ಅನಿಲದ ಮೇಲೆ ಅಬಕಾರಿ ಸುಂಕ ಸಂಗ್ರಹಣೆ ಮಾತ್ರವಲ್ಲ, ಭಾರತದ ಒಟ್ಟು ತೆರಿಗೆ ಆದಾಯದಲ್ಲಿ ಅಂತಹ ತೆರಿಗೆಗಳ ಪಾಲು ವರ್ಷದಿಂದ ವರ್ಷಕ್ಕೆ ತೀವ್ರವಾಗಿ ಏರಿಕೆಯಾಗುವುದನ್ನು ನೋಡಬಹುದಾಗಿದೆ. ಇದು ಇಂಧನ ತೆರಿಗೆ ಆದಾಯದ ಮೇಲೆ ಸ್ಥಿರವಾಗಿ ಹೆಚ್ಚುತ್ತಿರುವ ಅವಲಂಬನೆಯನ್ನು ಸೂಚಿಸುತ್ತದೆ.

ಹಣಕಾಸು ಸಚಿವಾಲಯವು ಲೋಕಸಭೆಗೆ ಸಲ್ಲಿಸಿದ ಅಂಕಿಅಂಶಗಳ ಪ್ರಕಾರ, ಈ ಹಣಕಾಸು ವರ್ಷದ (FY-21) ಮೊದಲ 10 ತಿಂಗಳಲ್ಲಿ ಇಂಧನ ಮತ್ತು ನೈಸರ್ಗಿಕ ಅನಿಲದಿಂದಾದ ಅಬಕಾರಿ ಸುಂಕ ಸಂಗ್ರಹವು ಈಗಾಗಲೇ ಕಳೆದ ಹಣಕಾಸು ವರ್ಷ(FY-20)ದ ಅವಧಿಯಲ್ಲಿ ದಾಖಲಾದ ಸಂಗ್ರಹಕ್ಕಿಂತ 45% ಹೆಚ್ಚಾಗಿದೆ!.

ಈ ಅಂಕಿ-ಅಂಶವು, ಏಪ್ರಿಲ್‌ 2020 ಮತ್ತು ಜನವರಿ 2021 ರಲ್ಲಿ 2.94 ಲಕ್ಷ ಕೋಟಿ ರೂ. ಸಂಗ್ರಹವಾಗಿದ್ದರೆ, FY-20 ರಲ್ಲಿ ಕೇವಲ 2,03,010 ಲಕ್ಷ ಕೋಟಿ ರೂ. ಸಂಗ್ರಹವಾಗಿತ್ತು. ಈ ಹಣಕಾಸು ವರ್ಷದ ಮೊದಲ 10 ತಿಂಗಳಲ್ಲಿ ಮಾಡಿದ ತೆರಿಗೆ ಸಂಗ್ರಹಗಳು FY-14 ರಲ್ಲಿ ದಾಖಲಾದ 53,090 ಕೋಟಿ ರೂ.ಗಳಿಗಿಂತ ಐದು ಪಟ್ಟು (456%) ಹೆಚ್ಚಾಗಿದೆ.

ಇದನ್ನೂ ಓದಿ: ಭಗತ್ ಸಿಂಗ್ ಹುತಾತ್ಮ ದಿನ: ದೆಹಲಿಯ ಗಡಿಗಳಲ್ಲಿ ನೆರೆಯಲಿದ್ದಾರೆ ಯುವಜನರ ದಂಡು!

ಅಬಕಾರಿ ತೆರಿಗೆಯ ಸಂಗ್ರಹ ಕಡಿಮೆಯಾದರೂ ಸಹ, ರಾಜ್ಯ ವ್ಯಾಟ್‌ ಸಂಗ್ರಹ ಇನ್ನೂ ಗಮನಾರ್ಹವಾಗಿ ಹೆಚ್ಚಳವಾಗಿದೆ. ಕಚ್ಚಾ ತೈಲ ಬೆಲೆಗಳು 2014 ಜೂನ್‌ ತಿಂಗಳಲ್ಲಿ‌‌‌ ಬ್ಯಾರೆಲ್‌ಗೆ 114 ಡಾಲರ್‌‌ನಿಂದ ಪ್ರಸ್ತುತ ಪ್ರತಿ ಬಾರ್‌ಗೆ 64 ಡಾಲರ್‌ಗೆ ಇಳಿದಿದ್ದರೂ ಚಿಲ್ಲರೆ ಇಂಧನದ ಬೆಲೆಗಳು ಇನ್ನೂ ಇಳಿದಿಲ್ಲ.

ಈ ಅವಧಿಯಲ್ಲಿ ಕಚ್ಚಾ ತೈಲ ಬೆಲೆಗಳು 90 ಡಾಲರ್‌‌ನಿಂದ 16 ಡಾಲರ್‌ನಷ್ಟು ಆಗಿತ್ತು, ಅಂದರೆ ಪ್ರತಿ ಬ್ಯಾರೆಲ್‌ಗೆ ಸರಾಸರಿ 50-60 ಡಾಲರ್‌ನಷ್ಟಾಗಿತ್ತು. ಆದರೆ ಈ ಬೆಲೆ ಕುಸಿತದ ಹೆಚ್ಚಿನ ಲಾಭಗಳನ್ನು ಬೊಕ್ಕಸಕ್ಕೆ ತಳ್ಳಲಾಗಿದೆ.

ಚಿಲ್ಲರೆ ಬೆಲೆಯಲ್ಲಿ ಕೇಂದ್ರದ ತೆರಿಗೆ 39%!

ಜೂನ್ 7, 2014 ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ ಪ್ರತಿ ಲೀಟರ್‌ಗೆ 71.51 ರೂ. ಮತ್ತು 57.28 ರೂ. ಆಗಿತ್ತು. ಕಚ್ಚಾ ಬೆಲೆ ಕುಸಿದರೂ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೆರಿಗೆಯನ್ನು ಹೆಚ್ಚಿಸುತ್ತಲೇ ಇದ್ದವು. ಪ್ರಸ್ತುತ ದೆಹಲಿಯನ್ನು ಉದಾಹರಣೆಯಾಗಿ ತೆಗೆದುಕೊಂಡರೆ ಕೇಂದ್ರ ಮತ್ತು ರಾಜ್ಯ ತೆರಿಗೆಗಳು ಪೆಟ್ರೋಲ್‌‌ ಚಿಲ್ಲರೆ ಬೆಲೆಯ 60% ಮತ್ತು ಡೀಸೆಲ್ ಬೆಲೆಯ 53% ವನ್ನು ಹೊಂದಿವೆ. ಕೇಂದ್ರ ಅಬಕಾರಿ ಸುಂಕವೆ ಚಿಲ್ಲರೆ ಬೆಲೆಯ ಸುಮಾರು 39% ಒಳಗೊಂಡಿದೆ.

ಇದನ್ನೂ ಓದಿ: 100 ಕೋಟಿ ಲಂಚದ ಆರೋಪ, ಮೈತ್ರಿ ಪಕ್ಷಗಳ ಸಭೆಯಲ್ಲಿ ಅನಿಲ್ ದೇಶ್‌ಮುಖ್ ಭವಿಷ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....