Homeಮುಖಪುಟಮೀಸಲಾತಿಯ ಜೊತೆಗೇ ಸರ್ಕಾರಗಳು ಶಿಕ್ಷಣಕ್ಕೆ ಒತ್ತು ನೀಡಬೇಕು: ಸುಪ್ರೀಂ ಅಭಿಮತ

ಮೀಸಲಾತಿಯ ಜೊತೆಗೇ ಸರ್ಕಾರಗಳು ಶಿಕ್ಷಣಕ್ಕೆ ಒತ್ತು ನೀಡಬೇಕು: ಸುಪ್ರೀಂ ಅಭಿಮತ

- Advertisement -
- Advertisement -

“ದೃಢೀಕರಣದ ಕ್ರಮ” (ಅಫರ್‌ಮೇಟಿವ್ ಆಕ್ಷನ್) ಕೇವಲ ಮೀಸಲಾತಿಗೆ ಸೀಮಿತವಾಗಿಲ್ಲವಾದ್ದರಿಂದ ಶಿಕ್ಷಣವನ್ನು ಉತ್ತೇಜಿಸಲು ಮತ್ತು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ಉನ್ನತಿಗಾಗಿ ಸಂಸ್ಥೆಗಳನ್ನು ಸ್ಥಾಪಿಸಲು ರಾಜ್ಯಗಳು ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮರಾಠಾ ಕೋಟಾ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಐದು ನ್ಯಾಯಾಧೀಶರ ಸಂವಿಧಾನ ಪೀಠವು ಈ ಉದ್ದೇಶಕ್ಕಾಗಿ ರಾಜ್ಯಗಳು ಇನ್ನೂ ಹಲವಾರು ಕೆಲಸಗಳನ್ನು ಮಾಡಬಹುದು ಎಂದು ಹೇಳಿದರು.

“ಇತರ ಕೆಲಸಗಳನ್ನು ಏಕೆ ಮಾಡಬಾರದು? ಶಿಕ್ಷಣವನ್ನು ಉತ್ತೇಜಿಸಲು ಮತ್ತು ಹೆಚ್ಚಿನ ಸಂಸ್ಥೆಗಳನ್ನು ಏಕೆ ಸ್ಥಾಪಿಸಬಾರದು? ಎಲ್ಲೋ ಈ ಮ್ಯಾಟ್ರಿಕ್ಸ್ ಮೀಸಲಾತಿಯನ್ನು ಮೀರಿ ಸಾಗಬೇಕಾಗಿದೆ. ಅಫರ್‌ಮೆಟಿವ್ ಆಕ್ಷನ್ ಕ್ರಮವು ಕೇವಲ ಮೀಸಲಾತಿ ಅಲ್ಲ” ಎಂದು ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ್ ರಾವ್, ಅಬ್ದುಲ್ ನಜೀರ್, ಹೇಮಂತ್ ಗುಪ್ತಾ ಮತ್ತು ಎಸ್ ರವೀಂದ್ರ ಭಟ್ ಅವರೂ ಇರುವ ಪೀಠ ಅಭಿಪ್ರಾಯ ಪಟ್ಟಿತು.

ಜಾರ್ಖಂಡ್ ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್, ಇದು ರಾಜ್ಯದ ಆರ್ಥಿಕ ಸಂಪನ್ಮೂಲಗಳು, ಅಲ್ಲಿನ ಶಾಲೆಗಳು ಮತ್ತು ಶಿಕ್ಷಕರ ಸಂಖ್ಯೆ ಸೇರಿದಂತೆ ಇತರ ಸಮಸ್ಯೆಗಳನ್ನು ಒಳಗೊಂಡಿರುತ್ತದೆ ಎಂದು ಹೇಳಿದರು.

ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯ ಪ್ರಮಾಣವು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತದೆ ಮತ್ತು ಆದ್ದರಿಂದ, ಇದಕ್ಕಾಗಿ ‘ಸರ್ವಸಮ್ಮತ ಸೂತ್ರ ಇರಲು ಸಾಧ್ಯವಿಲ್ಲ’ ಎಂದು ಸಿಬಲ್ ವಾದಿಸಿದರು.

ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಮರಾಠರಿಗೆ ಮೀಸಲಾತಿ ನೀಡುವ 2018 ಮಹಾರಾಷ್ಟ್ರ ಕಾನೂನಿನ ಮಾನ್ಯತೆಯನ್ನು ಪ್ರಶ್ನಿಸಿದ ಮೇಲ್ಮನವಿಗಳನ್ನು ಸುಪ್ರಿಂಕೋರ್ಟ್ ವಿಚಾರಣೆ ನಡೆಸುತ್ತಿದೆ.

ಇಂದ್ರ ಸಾಹ್ನಿ ಪ್ರಕರಣದಲ್ಲಿ 1992 ರ ಹೆಗ್ಗುರುತಾದ ತೀರ್ಪು, (ಮಂಡಲ್ ತೀರ್ಪು ಎಂದೂ ಕರೆಯಲ್ಪಡುತ್ತದೆ) ಶೇಕಡಾ 50 ರಷ್ಟು ಕೋಟಾವನ್ನು ಗರಿಷ್ಠ ಮಿತಿ ಎಂದು ನಿಗದಿ ಮಾಡಿತ್ತು. ನಂತರದ ತಿದ್ದುಪಡಿಗಳು, ತೀರ್ಪುಗಳು ಮತ್ತು ಸಮಾಜದ ಬದಲಾದ ಸಾಮಾಜಿಕ ಚಲನಶೀಲತೆಗಳ ಬೆಳಕಿನಲ್ಲಿ, ಮರುಪರಿಶೀಲಿಸುವ ಅಗತ್ಯವಿದೆಯೇ ಎಂಬ ವಿಷಯಗಳನ್ನೂ ಉನ್ನತ ನ್ಯಾಯಾಲಯ ಪರಿಶೀಲಿಸುತ್ತಿದೆ.

ಸೋಮವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆಸಿದ ವಿಚಾರಣೆಯ ಸಂದರ್ಭದಲ್ಲಿ, ಮಹಾರಾಷ್ಟ್ರ ಪರ ಹಾಜರಾದ ಹಿರಿಯ ವಕೀಲ ಪಿ.ಎಸ್ ಪಟ್ವಾಲಿಯಾ, ಈ ವಿಷಯದ ಬಗ್ಗೆ ರಾಜ್ಯದಲ್ಲಿ ಈ ಹಿಂದೆ ನಡೆದ ಪ್ರತಿಭಟನೆಗಳನ್ನು ಉಲ್ಲೇಖಿಸಿ, ಅದು ಅಲ್ಲಿ “ಬರ್ನಿಂಗ್ ಇಶ್ಯೂ” ಆಗಿದೆ ಎಂದು ಹೇಳಿದರು.

“ಮುಂಬಯಿಯಲ್ಲಿ ನಡೆದ ಒಂದು ರ‍್ಯಾಲಿಯ ಕಾರಣಕ್ಕೆ ಇಡೀ ನಗರವು ಸ್ಥಗಿತಗೊಂಡಿತ್ತು ಎಂದೂ ಅವರು ಸಮರ್ಥನೆ ನೀಡಿದರು. ಇದು ರಾಜ್ಯದಲ್ಲಿ ಒಂದು ದೊಡ್ಡ ಸಾಮಾಜಿಕ ಸಮಸ್ಯೆಯಾಗಿದೆ” ಎಂದು ಪಟ್ವಾಲಿಯಾ ಹೇಳಿದರು.

ಪ್ರಕರಣದ ವಾದಗಳು ಅಪೂರ್ಣವಾಗಿದ್ದು, ಮಂಗಳವಾರ ಪುನರಾರಂಭಗೊಳ್ಳಲಿವೆ.
ಒಟ್ಟಾರೆ 50 ಪ್ರತಿಶತದ ಮಿತಿಯನ್ನು ತೆಗೆದುಹಾಕಬೇಕಾದರೆ ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ ಎಷ್ಟು ತಲೆಮಾರುಗಳ ಮೀಸಲಾತಿ ಮುಂದುವರಿಯುತ್ತದೆ ಎಂದು ಸುಪ್ರೀಂಕೋರ್ಟ್ ಹಿಂದಿನ ವಿಚಾರಣೆ ವೇಳೆ ಪ್ರಶ್ನೆ ಎತ್ತಿತ್ತು.


ಇದನ್ನೂ ಓದಿ: ಎಷ್ಟು ತಲೆಮಾರುಗಳವರೆಗೆ ಮೀಸಲಾತಿ ಮುಂದುವರಿಕೆ? : ಸುಪ್ರೀಂ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...