Homeಮುಖಪುಟಸಾಲ ಮರುಪಾವತಿ ವಿನಾಯತಿ ಅವಧಿ ವಿಸ್ತರಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಸಾಲ ಮರುಪಾವತಿ ವಿನಾಯತಿ ಅವಧಿ ವಿಸ್ತರಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಸುಪ್ರೀಂ ಕೋರ್ಟ್ ಹಸ್ತಕ್ಷೇಪ ಮಾಡಲು ನಿರಾಕರಿಸಿದ ಕಾರಣ ಆರ್‌ಬಿಐ ತನ್ನ ನಿಲುವಿನಂತೆ ಸಾಲ ಮರುಪಾವತಿ ವಿನಯತಿ ಯೋಜನೆಯನ್ನು ವಿಸ್ತರಿಸಲಾರದು/ ಕೇಂದ್ರದ ನಿಲುವು ಇದೇ ಆಗಿತ್ತು.

- Advertisement -
- Advertisement -

ಹಣಕಾಸು ಮತ್ತು ಆರ್ಥಿಕ ಆರೋಗ್ಯದ ವಿಷಯಗಳ ಬಗ್ಗೆ ತಾನು ಪರಿಣತಿಯನ್ನು ಹೊಂದಿಲ್ಲ ಎಂದಿರುವ ಸುಪ್ರೀಂಕೋರ್ಟ್ ಸಾಲ ಪರಿಹಾರ ನೀತಿಯಲ್ಲಿ ಹಸ್ತಕ್ಷೇಪ ಮಾಡಲು ಮಂಗಳವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್ ಸುಭಾಷ್ ರೆಡ್ಡಿ ಮತ್ತು ಎಂ.ಆರ್. ಷಾ ಅವರ ಸುಪ್ರೀಂ ಕೋರ್ಟ್ ನ್ಯಾಯಪೀಠವು ಲಕ್ಷಾಂತರ ಜನರಿಗೆ ಪರಿಹಾರ ನೀಡುವಂತಹ ಒಂದು ಕ್ರಮದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕದ ನಿಮಿತ್ತ ಸಾಲಗಳ ಮೇಲಿನ ಬಡ್ಡಿ ಪಾವತಿಗಳನ್ನು ಮನ್ನಾ ಮಾಡಬೇಕೆ ಎಂಬ ಅರ್ಜಿಯ ವಿಚಾರಣೆಯನ್ನು ಆಲಿಸಿತು.

ಆರ್‌ಬಿಐ ತನ್ನ ಅಫಿಡವಿಟ್‌ನಲ್ಲಿ, ಬಡ್ಡಿ ಮೇಲಿನ ಯಾವುದೇ ಬಡ್ಡಿ (ಚಕ್ರಬಡ್ಡಿ) ಮನ್ನಾ ಮಾಡುವುದರಿಂದ ಬ್ಯಾಂಕುಗಳ ಮೇಲೆ ಗಮನಾರ್ಹವಾದ ಆರ್ಥಿಕ ವೆಚ್ಚಗಳು ಉಂಟಾಗುತ್ತವೆ ಮತ್ತು ಇದು ಠೇವಣಿದಾರರು ಮತ್ತು ವ್ಯಾಪಕವಾದ ಆರ್ಥಿಕ ಸ್ಥಿರತೆ ಮೇಲೆ ಭಾರಿ ಪರಿಣಾಮ ಬೀರುತ್ತದೆ ಎಂದು ಸೂಚಿಸಿತ್ತು.

ಕಳೆದ ವರ್ಷ ನವೆಂಬರ್ 5 ರೊಳಗೆ ಮಾರ್ಚ್ ಮತ್ತು ಆಗಸ್ಟ್ ನಡುವೆ ಬಾಕಿ ಇರುವ ಅರ್ಹ ಸಾಲಗಳನ್ನು 2 ಕೋಟಿ ರೂ.ವರೆಗೆ ಮರುಪಾವತಿ ಮಾಡಿದರೆ, ಸಂಯುಕ್ತ ಬಡ್ಡಿ ಮತ್ತು ಸರಳ ಬಡ್ಡಿಯಲ್ಲಿನ ವ್ಯತ್ಯಾಸವನ್ನು ಪಡೆಯದಂತೆ ಕೇಂದ್ರ ಬ್ಯಾಂಕ್ ಈ ಹಿಂದೆ ಬ್ಯಾಂಕುಗಳು ಮತ್ತು ಇತರ ಹಣಕಾಸು ಸಂಸ್ಥೆಗಳಿಗೆ ಸೂಚನೆ ನೀಡಿತ್ತು.

ಸಾಲ ಪರಿಹಾರವು ವೈಯಕ್ತಿಕ, ವಸತಿ, ಶಿಕ್ಷಣ, ಆಟೋ ಮತ್ತು ಗ್ರಾಹಕ ಸಾಲಗಳು, ಅತ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ (ಎಂಎಸ್‌ಎಂಇ) ಸಾಲಗಳಿಗೆ ಅನ್ವಯವಾಗಿತ್ತು.
ಸಾಲಗಾರನು ಪರಿಹಾರವನ್ನು ಸಂಪೂರ್ಣವಾಗಿ ಅಥವಾ ಭಾಗಶಃ ಆರಿಸಿದ್ದಾನೆಯೇ ಎಂಬುದನ್ನು ಲೆಕ್ಕಿಸದೆ ಸಾಲವನ್ನು ತುಂಬಲು ಮತ್ತು ಡಿಸೆಂಬರ್ 15 ರೊಳಗೆ ಸರ್ಕಾರದಿಂದ ಮರುಪಾವತಿ ಪಡೆಯಲು ಸೂಚಿಸಲಾಗಿತ್ತು.

6,500 ಕೋಟಿ ರೂ. ಅಂದಾಜು ಮಾಡಲಾದ ಯೋಜನೆಯ ವೆಚ್ಚವನ್ನು ಭರಿಸಲು ಸರ್ಕಾರ ನಿರ್ಧರಿಸಿದೆ. ಇದು ಆರು ತಿಂಗಳ ಅವಧಿಗೆ ಸಂಯುಕ್ತ ಬಡ್ಡಿ ಮತ್ತು ಸರಳ ಬಡ್ಡಿಯ ನಡುವಿನ ವ್ಯತ್ಯಾಸವನ್ನು ನಂತರದಲ್ಲಿ ಸರ್ಕಾರ ಭರಿಸಬೇಕು ನಿಯಮ ಮಾಡಲಾಗಿತ್ತು.

ಸಾಂಕ್ರಾಮಿಕ ರೋಗದ ಕಾರಣದಿಂದ ಮಾರ್ಚ್ 1, 2020 ಮತ್ತು ಮೇ 31,2020 ರ ನಡುವೆ ಸಾಲದ ಕಂತುಗಳನ್ನು ಪಾವತಿಸಲು ವಿನಾಯತಿ ನೀಡಿ ಮಾರ್ಚ್ 27 ರಂದು ಆರ್‌ಬಿಐ ಸುತ್ತೋಲೆ ಹೊರಡಿಸಿತ್ತು. ಇದನ್ನು ನಂತರ ಆಗಸ್ಟ್ 31 ರವರೆಗೆ ವಿಸ್ತರಿಸಲಾಯಿತು.
ಸುಪ್ರಿಂ ಕೋರ್ಟ್ ಹಸ್ತಕ್ಷೇಪ ಮಾಡಲು ನಿರ್ಧರಿಸದ ಕಾರಣ ಆರ್‌ಬಿಐನ ಸಾಲ ಮರುಪಾವತಿ ವಿನಾಯತಿ ಅವಧಿಯನ್ನು ವಿಸ್ತರಿಸದಿರುವ ನಿಲುವಿಗೆ ಗೆಲುವು ಸಿಕ್ಕಮತಾಗಿದೆ.


ಇದನ್ನೂ ಓದಿ; ಮೀಸಲಾತಿಯ ಜೊತೆಗೇ ಸರ್ಕಾರಗಳು ಶಿಕ್ಷಣಕ್ಕೆ ಒತ್ತು ನೀಡಬೇಕು: ಸುಪ್ರೀಂ ಅಭಿಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....