Homeಕರ್ನಾಟಕಮೋದಿಯವರು ‘ಮನ್ ಕಿ ಬಾತ್‍ನಲ್ಲಿ ಅಂತ್ಯೋದಯ; ದಿಲ್ ಕಾ ಕಾಮ್‍ನಲ್ಲಿ ಉಳ್ಳವರ ಸೇವಕ’ - ದೇವನೂರು

ಮೋದಿಯವರು ‘ಮನ್ ಕಿ ಬಾತ್‍ನಲ್ಲಿ ಅಂತ್ಯೋದಯ; ದಿಲ್ ಕಾ ಕಾಮ್‍ನಲ್ಲಿ ಉಳ್ಳವರ ಸೇವಕ’ – ದೇವನೂರು

- Advertisement -
- Advertisement -

ಸಂದರ್ಶನ
| ಡಾ.ಎಸ್ ತುಕಾರಾಂ |

ಪರ್ಯಾಯ ರಾಜಕಾರಣದ ಪ್ರಯತ್ನಗಳನ್ನು ನಡೆಸುತ್ತಾ ಸಕ್ರಿಯವಾಗಿರುವ ಕನ್ನಡದ ಮಹತ್ವದ ಲೇಖಕ ದೇವನೂರ ಮಹಾದೇವ ಅವರನ್ನು ತುಕಾರಾಂ ಅವರು ಸಂಯುಕ್ತ ಕರ್ನಾಟಕಕ್ಕಾಗಿ ಸಂದರ್ಶಿಸಿದ್ದರು. ಆ ಸಂದರ್ಶನದ ಪೂರ್ಣಪಾಠ ಇಲ್ಲಿದೆ. ಇದನ್ನು ಪ್ರಕಟಿಸಲು ಅನುಮತಿ ಕೊಟ್ಟ ದೇವನೂರ ಮಹಾದೇವ, ತುಕಾರಾಂ ಮತ್ತು ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕರಾದ ಹುಣಸವಾಡಿ ರಾಜನ್ ಅವರಿಗೆ ಧನ್ಯವಾದಗಳು ತಿಳಿಸಲು ಬಯಸುತ್ತೇವೆ.

ನಿಮ್ಮ ಸ್ವರಾಜ್ ಇಂಡಿಯಾ ಪಕ್ಷ ಲೋಕಸಭೆಗೆ ರಾಜ್ಯದಲ್ಲಿ ಯಾವ ಅಭ್ಯರ್ಥಿಯನ್ನು ಚುನಾವಣೆಗೆ ನಿಲ್ಲಿಸಿಲ್ಲವಲ್ಲ, ಯಾಕೆ?
ರೈತ ಮತ್ತು ದಲಿತ ಸಂಘಟನೆಗಳ ಕೂಡಿಕೆಯ ಸ್ವರಾಜ್ ಇಂಡಿಯಾದ ನೆಲೆ ಇರುವುದು ಜಿಲ್ಲಾ ಪಂಚಾಯ್ತ್, ತಾಲ್ಲೂಕು ಪಂಚಾಯ್ತ್ ಕ್ಷೇತ್ರಗಳಲ್ಲಿ. ಹಾಗಾಗಿ ನಿಲ್ಲಿಸಿಲ್ಲ. ಈ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರಾಜ್ ಅವರಿಗೆ ಬೆಂಬಲ ನೀಡಿದ್ದೇವೆ.

• ಹಾಗದರೆ ಉಳಿದೆಡೆ ಲೋಕಸಭಾ ಕ್ಷೇತ್ರಗಳಲ್ಲಿ ನಿಮ್ಮ ಕೆಲಸ ಏನು?
ಸ್ವರಾಜ್ ಇಂಡಿಯಾ “ದೇಶಕ್ಕಾಗಿ ನಾವು” ಎಂಬ ಜಾಗೃತಿಯ ಆಂದೋಲನದ ಭಾಗವಾಗಿದೆ. ದೇಶವನ್ನು ಕಿತ್ತು ತಿನ್ನುತ್ತಿರುವ ನಿರುದ್ಯೋಗ, ತತ್ತರಿಸುತ್ತಿರುವ ಕೃಷಿ ಇತ್ಯಾದಿ ವಿಷಯಗಳನ್ನು ಮುನ್ನೆಲೆಗೆ ತಂದು ಚುನಾವಣಾ ಸಂದರ್ಭದಲ್ಲಿ ಚರ್ಚೆಯಾಗುವಂತೆ ವಾತಾವರಣ ಉಂಟುಮಾಡಿದ್ದೇವೆ. ಇದೇನು ಕಮ್ಮಿ ರಾಜಕಾರಣವಲ್ಲ!

• ನೀವು “ದೇಶಕ್ಕಾಗಿ ನಾವು” ಅನ್ನುತ್ತಿದ್ದರೆ ಬಿಜೆಪಿಯವರು “ದೇಶಕ್ಕಾಗಿ ಮೋದಿ” ಅನ್ನುತ್ತಿದ್ದಾರಲ್ಲ!
ಅವರು ಭಾವನಾತ್ಮಕ ವಿಷಯಗಳನ್ನು ಚುನಾವಣಾ ವಿಷಯವಾಗಿ ಮಾಡಲು ಪ್ರಯತ್ನಿಸಿ ವಿಫಲರಾಗಿ ದಿಕ್ಕೆಟ್ಟು ‘ಮೋದಿ ಮೋದಿ’ ಎಂದು ಕಿರುಚುತ್ತಿದ್ದಾರೆ. ಹೀಗೆ ಕಿರುಚುತ್ತಿರುವವರು ಬಹುತೇಕ ನಿರುದ್ಯೋಗ ಯುವಕರು. ನಿರುದ್ಯೋಗ ಕಳೆದ ನಲವತ್ತೈದು ವರ್ಷಗಳಲ್ಲಿ ಇಷ್ಟೊಂದು ಕೆಳಮಟ್ಟಕ್ಕೆ ಇಳಿದಿರಲಿಲ್ಲ ಎಂದು ಅಂಕಿಅಂಶಗಳು ಹೇಳುತ್ತವೆ. ವರ್ಷಕ್ಕೆ ಕೋಟಿಗಟ್ಟಲೆ ಉದ್ಯೋಗ ನೀಡುತ್ತೇವೆ ಎಂದು ಜನತೆಗೆ ವಚನ ನೀಡಿ ಅಧಿಕಾರಕ್ಕೆ ಬಂದ ವ್ಯಕ್ತಿಯೊಬ್ಬ ನೀಡುವುದಿರಲಿ, ಯಥಾಸ್ಥಿತಿಯನ್ನು ಉಳಿಸಿಕೊಳ್ಳಲಿಲ್ಲ. ಬದಲಾಗಿ ಉದ್ಯೋಗ ನಷ್ಟ ಮಾಡಿಬಿಟ್ಟ. ವಚನಪಾಲಕ ರಾಮನನ್ನು ಈ ವಚನ ಭ್ರಷ್ಟರು ಹೇಗೆ ಉಚ್ಚಾರಣೆ ಮಾಡುತ್ತಾರೋ ನನಗೆ ಅರ್ಥವಾಗುತ್ತಿಲ್ಲ. ಬಹುಶಃ ಆತ್ಮಸಾಕ್ಷಿ ಅಳುಕು ಇಲ್ಲದವರಿಗೆ ಇದು ಸಾಧ್ಯವಾಗಬಹುದು. ಅದಕ್ಕೇ ಬಿಜೆಪಿ ಅಧ್ಯಕ್ಷ ಅಮಿತ್ ಷಾ ತಮ್ಮನ್ನು ಅಧಿಕಾರಕ್ಕೆ ತಂದ ತಮ್ಮ ಪ್ರಣಾಳಿಕೆಯ ಚುನಾವಣಾ ಭರವಸೆಗಳನ್ನು `ಚುನಾವಣಾ ಜುಮ್ಲಾ (ಸುಳ್ಳು)’ ಎಂದು ಹೇಳುತ್ತಾರೆ. ಇದು ನಿರ್ಲಜ್ಜತೆಯ ತುಟ್ಟತುದಿ.

• ಆದರೆ ಬಿಜೆಪಿಯವರು ‘ದೇಶ ಮೊದಲು, ಪಕ್ಷ ನಂತರ, ಕೊನೆಗೆ ವ್ಯಕ್ತಿ’ ಅನ್ನುತ್ತಾರಲ್ಲ?
ಅವರ ನುಡಿ ನೋಡಬೇಡಿ, ನಡೆ ನೋಡಿ. ದೇಶದ ಸಾರ್ವಜನಿಕ ಸಂಪತ್ತನ್ನು ಮಾರುತ್ತಿರುವವರು ಯಾವ ನಾಲಿಗೆಯಲ್ಲಿ ದೇಶ ಮೊದಲು ಅನ್ನುತ್ತಿದ್ದಾರೆ? ಇದು ದೇಶವನ್ನೇ ಮಾರಿದಂತಾಗುವುದಿಲ್ಲವೇ? ಜೊತೆಗೆ ಪ್ರಧಾನ ಮಂತ್ರಿ ಮೋದಿಯವರ ಮಾತುಗಾರಿಕೆಯ ಏರಿಳಿತ, ಹಾವಭಾವ ನೋಡಿದರೆ ಏನನ್ನಿಸುತ್ತದೆ? ಇದು ಹಾರಾಜು ಹಾಕುವವರ ಹಾವಭಾವ, ಮಾತುಗಾರಿಕೆಯಂತೆ ಕಾಣುವುದಿಲ್ಲವೆ? ಇನ್ನು ಪಕ್ಷಕ್ಕೆ ಬಂದರೆ ಬಿಜೆಪಿ ಪಕ್ಷ ಎಲ್ಲಿದೆ? ಅದೊಂದು ಕೂಗುಮಾರಿ ಗುಂಪುಮಂದೆಯಾಗಿದೆ. ಅಲ್ಲಿರುವುದು ಇಬ್ಬರೆ. ಮೂರನೆಯವರಿಗೆ ಸ್ಥಾನವಿಲ್ಲ. ಜೊತೆಗೆ ಕೇಂದ್ರ ಸಚಿವ ಸಂಪುಟವನ್ನೇ ನೋಡಿ- ಅಲ್ಲಿರುವುದು ಒಬ್ಬರೆ! ಉಳಿದ ಸಚಿವರು ಪ್ರಧಾನಮಂತ್ರಿಗಳ ಪರಿಚಾರಕರು. ಬಿಜೆಪಿಯವರು ದೇಶ ಮೊದಲು, ಪಕ್ಷ ನಂತರ, ಕೊನೆಗೆ ವ್ಯಕ್ತಿ ಅಂತಾರಲ್ಲ ಅದನ್ನು ಮೋದಿಯವರು ತಲೆಕೆಳಗೆ ಮಾಡಿಬಿಟ್ಟರು. ಈ ಸಲದ ಚುನಾವಣಾ ಪ್ರಣಾಳಿಕೆ ನೋಡಿ- ಅಲ್ಲಿ ಮೋದಿಯವರೊಬ್ಬರ ಫೋಟೋ ಮಾತ್ರವಿದೆ.

• ಅಂದರೆ ಮೋದಿಯವರು ಏಕವ್ಯಕ್ತಿ ಅಧಿಕಾರ ಕೇಂದ್ರದತ್ತ ನಡೆಯುತ್ತಿದ್ದಾರೆ ಎನ್ನುವುದು ನಿಮ್ಮ ಆರೋಪವೇ?
ಶಾಸ್ತ್ರ ಕೇಳಲೇಬೇಕಾಗಿಲ್ಲ. ಮೋದಿಯವರದು ಏಕವ್ಯಕ್ತಿ ಕೇಂದ್ರಿತ ಅಧಿಕಾರ ಅನ್ನುವ ಮಾತು ಬಿಜೆಪಿ ಪಕ್ಷದ ನಾಯಕರ ಅಸಹಾಯಕ ಪಿಸುನುಡಿಗಳು.

• ಹಾಗಾದರೆ ಈ ಹಿಂದೆ ಇಂದಿರಾಗಾಂಧಿಯವರಿಗೂ ಏಕವ್ಯಕ್ತಿ ಅಧಿಕಾರ ಕೇಂದ್ರಿತ ಎಂಬ ಆರೋಪ ಇತ್ತಲ್ಲ?
ಹೌದು ಇತ್ತು. ಆದರೆ ಈ ಇಬ್ಬರ ನಡುವೆ ಒಂದು ವ್ಯತ್ಯಾಸವಿದೆ. ಇಂದಿರಾ ಅವರ ಆಡಳಿತದಲ್ಲಿ- ಬಡವರು, ಧ್ವನಿ ಇಲ್ಲದವರು, ಅಸಹಾಯಕರು ಉಸಿರಾಡುವಂತಹ ಸುಧಾರಣೆಗಳನ್ನು ತಂದರು. ಆದರೆ ಮೋದಿಯವರ ಆಡಳಿತದಲ್ಲಿ ಕೆಲವೇ ಕೆಲವು ಕಾರ್ಪೋರೇಟ್ ಕಂಪನಿಗಳ ಲಕ್ಷಾಂತರ ಕೋಟಿ ರೂಪಾಯಿಗಳ ಬಂಡವಾಳ ಬೆಳವಣಿಗೆಯಾಗುವುದಕ್ಕೆ ದೇಶದ ಪ್ರಧಾನಿ ಮೋದಿಯವರು ಒಬ್ಬ ವ್ಯವಸ್ಥಾಪಕನಂತೆ ಕಾರ್ಯ ನಿರ್ವಹಿಸಿಬಿಟ್ಟರು. ಅದಕ್ಕಾಗೇ, ಮೋದಿಯವರ ‘ಮನ್ ಕಿ ಬಾತ್‍ನಲ್ಲಿ ಅಂತ್ಯೋದಯ; ದಿಲ್ ಕಾ ಕಾಮ್‍ನಲ್ಲಿ ಉಳ್ಳವರ ಸೇವಕ’ ಎಂಬ ನಾಣ್ಣುಡಿ ಹುಟ್ಟಿಕೊಂಡಿದೆ.

• ನೀವು ವಿದ್ಯಾರ್ಥಿದೆಸೆಯಲ್ಲಿ ಲೋಹಿಯಾ ವಿಚಾರಧಾರೆಯ ಸಮಾಜವಾದಿ ಯುವಜನ ಸಭಾದಲ್ಲಿ ಇದ್ದವರು. ಲೋಹಿಯಾ ಅವರ ‘ಕಾಂಗ್ರೆಸ್ ವಿರೋಧಿ’ (Anti-Congress) ನಿಲುವಿಗೆ ಈಗ ನಿಮ್ಮ ಅಭಿಪ್ರಾಯ?
ಅಕ್ಷರ, ಪದಕ್ಕೆ ಅರ್ಥ ನೀಡಬಾರದು. ಅದರ ಆಂತರ್ಯ (Spirit) ನೋಡಬೇಕು. ಆ ಕಾಲಘಟ್ಟದಲ್ಲಿ ಲೋಹಿಯಾ ಹಾಗೂ ಅಂಬೇಡ್ಕರ್ ಅವರ ‘ಕಾಂಗ್ರೆಸ್ ವಿರೋಧಿ’ ಎಂದರೆ ಅದು ಆಂತರ್ಯದಲ್ಲಿ `ವ್ಯವಸ್ಥೆ ವಿರೋಧಿ’ (Anti- establishment) ಎಂದೇ ಅರ್ಥ. ಈ ಅರ್ಥದಲ್ಲಿ ಇಂದು ‘ವ್ಯವಸ್ಥೆ ವಿರೋಧಿ’ ನಿಲುವು ಎಂದರೆ ಏನು? ಇಂದು ಬಿಜೆಪಿ ದೇಶವನ್ನು ಆಳುತ್ತಿದೆ. ಈಗ ವ್ಯವಸ್ಥೆ ವಿರೋಧಿ ನಿಲುವು ಎಂದರೆ ಅದು ಬಿಜೆಪಿ ವಿರೋಧಿ ನಿಲುವು ಎಂದೇ ಆಗುತ್ತದೆ. ಸಮಾಜದ ಸಾಮರಸ್ಯ ಮತ್ತು ಸಮಾನತೆಗಾಗಿ ಅಂದರೆ ಮುಂಚಲನೆಗಾಗಿ ಬದಲಾವಣೆ ಬೇಕೆಂದಿದ್ದರೆ ಸಮುದಾಯ ಪ್ರಜ್ಞೆ ಯಾವಾಗಲೂ ವ್ಯವಸ್ಥೆ ವಿರೋಧಿ ನಿಲುವನ್ನು ಜಾಗೃತವಾಗಿರಿಸಿಕೊಂಡಿರಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...