Homeಕರ್ನಾಟಕಮೋದಿಯವರು ‘ಮನ್ ಕಿ ಬಾತ್‍ನಲ್ಲಿ ಅಂತ್ಯೋದಯ; ದಿಲ್ ಕಾ ಕಾಮ್‍ನಲ್ಲಿ ಉಳ್ಳವರ ಸೇವಕ’ - ದೇವನೂರು

ಮೋದಿಯವರು ‘ಮನ್ ಕಿ ಬಾತ್‍ನಲ್ಲಿ ಅಂತ್ಯೋದಯ; ದಿಲ್ ಕಾ ಕಾಮ್‍ನಲ್ಲಿ ಉಳ್ಳವರ ಸೇವಕ’ – ದೇವನೂರು

- Advertisement -
- Advertisement -

ಸಂದರ್ಶನ
| ಡಾ.ಎಸ್ ತುಕಾರಾಂ |

ಪರ್ಯಾಯ ರಾಜಕಾರಣದ ಪ್ರಯತ್ನಗಳನ್ನು ನಡೆಸುತ್ತಾ ಸಕ್ರಿಯವಾಗಿರುವ ಕನ್ನಡದ ಮಹತ್ವದ ಲೇಖಕ ದೇವನೂರ ಮಹಾದೇವ ಅವರನ್ನು ತುಕಾರಾಂ ಅವರು ಸಂಯುಕ್ತ ಕರ್ನಾಟಕಕ್ಕಾಗಿ ಸಂದರ್ಶಿಸಿದ್ದರು. ಆ ಸಂದರ್ಶನದ ಪೂರ್ಣಪಾಠ ಇಲ್ಲಿದೆ. ಇದನ್ನು ಪ್ರಕಟಿಸಲು ಅನುಮತಿ ಕೊಟ್ಟ ದೇವನೂರ ಮಹಾದೇವ, ತುಕಾರಾಂ ಮತ್ತು ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕರಾದ ಹುಣಸವಾಡಿ ರಾಜನ್ ಅವರಿಗೆ ಧನ್ಯವಾದಗಳು ತಿಳಿಸಲು ಬಯಸುತ್ತೇವೆ.

ನಿಮ್ಮ ಸ್ವರಾಜ್ ಇಂಡಿಯಾ ಪಕ್ಷ ಲೋಕಸಭೆಗೆ ರಾಜ್ಯದಲ್ಲಿ ಯಾವ ಅಭ್ಯರ್ಥಿಯನ್ನು ಚುನಾವಣೆಗೆ ನಿಲ್ಲಿಸಿಲ್ಲವಲ್ಲ, ಯಾಕೆ?
ರೈತ ಮತ್ತು ದಲಿತ ಸಂಘಟನೆಗಳ ಕೂಡಿಕೆಯ ಸ್ವರಾಜ್ ಇಂಡಿಯಾದ ನೆಲೆ ಇರುವುದು ಜಿಲ್ಲಾ ಪಂಚಾಯ್ತ್, ತಾಲ್ಲೂಕು ಪಂಚಾಯ್ತ್ ಕ್ಷೇತ್ರಗಳಲ್ಲಿ. ಹಾಗಾಗಿ ನಿಲ್ಲಿಸಿಲ್ಲ. ಈ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರಾಜ್ ಅವರಿಗೆ ಬೆಂಬಲ ನೀಡಿದ್ದೇವೆ.

• ಹಾಗದರೆ ಉಳಿದೆಡೆ ಲೋಕಸಭಾ ಕ್ಷೇತ್ರಗಳಲ್ಲಿ ನಿಮ್ಮ ಕೆಲಸ ಏನು?
ಸ್ವರಾಜ್ ಇಂಡಿಯಾ “ದೇಶಕ್ಕಾಗಿ ನಾವು” ಎಂಬ ಜಾಗೃತಿಯ ಆಂದೋಲನದ ಭಾಗವಾಗಿದೆ. ದೇಶವನ್ನು ಕಿತ್ತು ತಿನ್ನುತ್ತಿರುವ ನಿರುದ್ಯೋಗ, ತತ್ತರಿಸುತ್ತಿರುವ ಕೃಷಿ ಇತ್ಯಾದಿ ವಿಷಯಗಳನ್ನು ಮುನ್ನೆಲೆಗೆ ತಂದು ಚುನಾವಣಾ ಸಂದರ್ಭದಲ್ಲಿ ಚರ್ಚೆಯಾಗುವಂತೆ ವಾತಾವರಣ ಉಂಟುಮಾಡಿದ್ದೇವೆ. ಇದೇನು ಕಮ್ಮಿ ರಾಜಕಾರಣವಲ್ಲ!

• ನೀವು “ದೇಶಕ್ಕಾಗಿ ನಾವು” ಅನ್ನುತ್ತಿದ್ದರೆ ಬಿಜೆಪಿಯವರು “ದೇಶಕ್ಕಾಗಿ ಮೋದಿ” ಅನ್ನುತ್ತಿದ್ದಾರಲ್ಲ!
ಅವರು ಭಾವನಾತ್ಮಕ ವಿಷಯಗಳನ್ನು ಚುನಾವಣಾ ವಿಷಯವಾಗಿ ಮಾಡಲು ಪ್ರಯತ್ನಿಸಿ ವಿಫಲರಾಗಿ ದಿಕ್ಕೆಟ್ಟು ‘ಮೋದಿ ಮೋದಿ’ ಎಂದು ಕಿರುಚುತ್ತಿದ್ದಾರೆ. ಹೀಗೆ ಕಿರುಚುತ್ತಿರುವವರು ಬಹುತೇಕ ನಿರುದ್ಯೋಗ ಯುವಕರು. ನಿರುದ್ಯೋಗ ಕಳೆದ ನಲವತ್ತೈದು ವರ್ಷಗಳಲ್ಲಿ ಇಷ್ಟೊಂದು ಕೆಳಮಟ್ಟಕ್ಕೆ ಇಳಿದಿರಲಿಲ್ಲ ಎಂದು ಅಂಕಿಅಂಶಗಳು ಹೇಳುತ್ತವೆ. ವರ್ಷಕ್ಕೆ ಕೋಟಿಗಟ್ಟಲೆ ಉದ್ಯೋಗ ನೀಡುತ್ತೇವೆ ಎಂದು ಜನತೆಗೆ ವಚನ ನೀಡಿ ಅಧಿಕಾರಕ್ಕೆ ಬಂದ ವ್ಯಕ್ತಿಯೊಬ್ಬ ನೀಡುವುದಿರಲಿ, ಯಥಾಸ್ಥಿತಿಯನ್ನು ಉಳಿಸಿಕೊಳ್ಳಲಿಲ್ಲ. ಬದಲಾಗಿ ಉದ್ಯೋಗ ನಷ್ಟ ಮಾಡಿಬಿಟ್ಟ. ವಚನಪಾಲಕ ರಾಮನನ್ನು ಈ ವಚನ ಭ್ರಷ್ಟರು ಹೇಗೆ ಉಚ್ಚಾರಣೆ ಮಾಡುತ್ತಾರೋ ನನಗೆ ಅರ್ಥವಾಗುತ್ತಿಲ್ಲ. ಬಹುಶಃ ಆತ್ಮಸಾಕ್ಷಿ ಅಳುಕು ಇಲ್ಲದವರಿಗೆ ಇದು ಸಾಧ್ಯವಾಗಬಹುದು. ಅದಕ್ಕೇ ಬಿಜೆಪಿ ಅಧ್ಯಕ್ಷ ಅಮಿತ್ ಷಾ ತಮ್ಮನ್ನು ಅಧಿಕಾರಕ್ಕೆ ತಂದ ತಮ್ಮ ಪ್ರಣಾಳಿಕೆಯ ಚುನಾವಣಾ ಭರವಸೆಗಳನ್ನು `ಚುನಾವಣಾ ಜುಮ್ಲಾ (ಸುಳ್ಳು)’ ಎಂದು ಹೇಳುತ್ತಾರೆ. ಇದು ನಿರ್ಲಜ್ಜತೆಯ ತುಟ್ಟತುದಿ.

• ಆದರೆ ಬಿಜೆಪಿಯವರು ‘ದೇಶ ಮೊದಲು, ಪಕ್ಷ ನಂತರ, ಕೊನೆಗೆ ವ್ಯಕ್ತಿ’ ಅನ್ನುತ್ತಾರಲ್ಲ?
ಅವರ ನುಡಿ ನೋಡಬೇಡಿ, ನಡೆ ನೋಡಿ. ದೇಶದ ಸಾರ್ವಜನಿಕ ಸಂಪತ್ತನ್ನು ಮಾರುತ್ತಿರುವವರು ಯಾವ ನಾಲಿಗೆಯಲ್ಲಿ ದೇಶ ಮೊದಲು ಅನ್ನುತ್ತಿದ್ದಾರೆ? ಇದು ದೇಶವನ್ನೇ ಮಾರಿದಂತಾಗುವುದಿಲ್ಲವೇ? ಜೊತೆಗೆ ಪ್ರಧಾನ ಮಂತ್ರಿ ಮೋದಿಯವರ ಮಾತುಗಾರಿಕೆಯ ಏರಿಳಿತ, ಹಾವಭಾವ ನೋಡಿದರೆ ಏನನ್ನಿಸುತ್ತದೆ? ಇದು ಹಾರಾಜು ಹಾಕುವವರ ಹಾವಭಾವ, ಮಾತುಗಾರಿಕೆಯಂತೆ ಕಾಣುವುದಿಲ್ಲವೆ? ಇನ್ನು ಪಕ್ಷಕ್ಕೆ ಬಂದರೆ ಬಿಜೆಪಿ ಪಕ್ಷ ಎಲ್ಲಿದೆ? ಅದೊಂದು ಕೂಗುಮಾರಿ ಗುಂಪುಮಂದೆಯಾಗಿದೆ. ಅಲ್ಲಿರುವುದು ಇಬ್ಬರೆ. ಮೂರನೆಯವರಿಗೆ ಸ್ಥಾನವಿಲ್ಲ. ಜೊತೆಗೆ ಕೇಂದ್ರ ಸಚಿವ ಸಂಪುಟವನ್ನೇ ನೋಡಿ- ಅಲ್ಲಿರುವುದು ಒಬ್ಬರೆ! ಉಳಿದ ಸಚಿವರು ಪ್ರಧಾನಮಂತ್ರಿಗಳ ಪರಿಚಾರಕರು. ಬಿಜೆಪಿಯವರು ದೇಶ ಮೊದಲು, ಪಕ್ಷ ನಂತರ, ಕೊನೆಗೆ ವ್ಯಕ್ತಿ ಅಂತಾರಲ್ಲ ಅದನ್ನು ಮೋದಿಯವರು ತಲೆಕೆಳಗೆ ಮಾಡಿಬಿಟ್ಟರು. ಈ ಸಲದ ಚುನಾವಣಾ ಪ್ರಣಾಳಿಕೆ ನೋಡಿ- ಅಲ್ಲಿ ಮೋದಿಯವರೊಬ್ಬರ ಫೋಟೋ ಮಾತ್ರವಿದೆ.

• ಅಂದರೆ ಮೋದಿಯವರು ಏಕವ್ಯಕ್ತಿ ಅಧಿಕಾರ ಕೇಂದ್ರದತ್ತ ನಡೆಯುತ್ತಿದ್ದಾರೆ ಎನ್ನುವುದು ನಿಮ್ಮ ಆರೋಪವೇ?
ಶಾಸ್ತ್ರ ಕೇಳಲೇಬೇಕಾಗಿಲ್ಲ. ಮೋದಿಯವರದು ಏಕವ್ಯಕ್ತಿ ಕೇಂದ್ರಿತ ಅಧಿಕಾರ ಅನ್ನುವ ಮಾತು ಬಿಜೆಪಿ ಪಕ್ಷದ ನಾಯಕರ ಅಸಹಾಯಕ ಪಿಸುನುಡಿಗಳು.

• ಹಾಗಾದರೆ ಈ ಹಿಂದೆ ಇಂದಿರಾಗಾಂಧಿಯವರಿಗೂ ಏಕವ್ಯಕ್ತಿ ಅಧಿಕಾರ ಕೇಂದ್ರಿತ ಎಂಬ ಆರೋಪ ಇತ್ತಲ್ಲ?
ಹೌದು ಇತ್ತು. ಆದರೆ ಈ ಇಬ್ಬರ ನಡುವೆ ಒಂದು ವ್ಯತ್ಯಾಸವಿದೆ. ಇಂದಿರಾ ಅವರ ಆಡಳಿತದಲ್ಲಿ- ಬಡವರು, ಧ್ವನಿ ಇಲ್ಲದವರು, ಅಸಹಾಯಕರು ಉಸಿರಾಡುವಂತಹ ಸುಧಾರಣೆಗಳನ್ನು ತಂದರು. ಆದರೆ ಮೋದಿಯವರ ಆಡಳಿತದಲ್ಲಿ ಕೆಲವೇ ಕೆಲವು ಕಾರ್ಪೋರೇಟ್ ಕಂಪನಿಗಳ ಲಕ್ಷಾಂತರ ಕೋಟಿ ರೂಪಾಯಿಗಳ ಬಂಡವಾಳ ಬೆಳವಣಿಗೆಯಾಗುವುದಕ್ಕೆ ದೇಶದ ಪ್ರಧಾನಿ ಮೋದಿಯವರು ಒಬ್ಬ ವ್ಯವಸ್ಥಾಪಕನಂತೆ ಕಾರ್ಯ ನಿರ್ವಹಿಸಿಬಿಟ್ಟರು. ಅದಕ್ಕಾಗೇ, ಮೋದಿಯವರ ‘ಮನ್ ಕಿ ಬಾತ್‍ನಲ್ಲಿ ಅಂತ್ಯೋದಯ; ದಿಲ್ ಕಾ ಕಾಮ್‍ನಲ್ಲಿ ಉಳ್ಳವರ ಸೇವಕ’ ಎಂಬ ನಾಣ್ಣುಡಿ ಹುಟ್ಟಿಕೊಂಡಿದೆ.

• ನೀವು ವಿದ್ಯಾರ್ಥಿದೆಸೆಯಲ್ಲಿ ಲೋಹಿಯಾ ವಿಚಾರಧಾರೆಯ ಸಮಾಜವಾದಿ ಯುವಜನ ಸಭಾದಲ್ಲಿ ಇದ್ದವರು. ಲೋಹಿಯಾ ಅವರ ‘ಕಾಂಗ್ರೆಸ್ ವಿರೋಧಿ’ (Anti-Congress) ನಿಲುವಿಗೆ ಈಗ ನಿಮ್ಮ ಅಭಿಪ್ರಾಯ?
ಅಕ್ಷರ, ಪದಕ್ಕೆ ಅರ್ಥ ನೀಡಬಾರದು. ಅದರ ಆಂತರ್ಯ (Spirit) ನೋಡಬೇಕು. ಆ ಕಾಲಘಟ್ಟದಲ್ಲಿ ಲೋಹಿಯಾ ಹಾಗೂ ಅಂಬೇಡ್ಕರ್ ಅವರ ‘ಕಾಂಗ್ರೆಸ್ ವಿರೋಧಿ’ ಎಂದರೆ ಅದು ಆಂತರ್ಯದಲ್ಲಿ `ವ್ಯವಸ್ಥೆ ವಿರೋಧಿ’ (Anti- establishment) ಎಂದೇ ಅರ್ಥ. ಈ ಅರ್ಥದಲ್ಲಿ ಇಂದು ‘ವ್ಯವಸ್ಥೆ ವಿರೋಧಿ’ ನಿಲುವು ಎಂದರೆ ಏನು? ಇಂದು ಬಿಜೆಪಿ ದೇಶವನ್ನು ಆಳುತ್ತಿದೆ. ಈಗ ವ್ಯವಸ್ಥೆ ವಿರೋಧಿ ನಿಲುವು ಎಂದರೆ ಅದು ಬಿಜೆಪಿ ವಿರೋಧಿ ನಿಲುವು ಎಂದೇ ಆಗುತ್ತದೆ. ಸಮಾಜದ ಸಾಮರಸ್ಯ ಮತ್ತು ಸಮಾನತೆಗಾಗಿ ಅಂದರೆ ಮುಂಚಲನೆಗಾಗಿ ಬದಲಾವಣೆ ಬೇಕೆಂದಿದ್ದರೆ ಸಮುದಾಯ ಪ್ರಜ್ಞೆ ಯಾವಾಗಲೂ ವ್ಯವಸ್ಥೆ ವಿರೋಧಿ ನಿಲುವನ್ನು ಜಾಗೃತವಾಗಿರಿಸಿಕೊಂಡಿರಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...