Homeಮುಖಪುಟದಲಿತ ಆರ್‌ಟಿಐ ಕಾರ್ಯಕರ್ತನ ಹತ್ಯೆ ವಿರೋಧಿಸಿ ಪ್ರತಿಭಟನೆ: ಗುಜರಾತ್‌ ಶಾಸಕ ಜಿಗ್ನೇಶ್ ಮೇವಾನಿ ಬಂಧನ

ದಲಿತ ಆರ್‌ಟಿಐ ಕಾರ್ಯಕರ್ತನ ಹತ್ಯೆ ವಿರೋಧಿಸಿ ಪ್ರತಿಭಟನೆ: ಗುಜರಾತ್‌ ಶಾಸಕ ಜಿಗ್ನೇಶ್ ಮೇವಾನಿ ಬಂಧನ

- Advertisement -
- Advertisement -

ದಲಿತ ಆರ್‌ಟಿಐ ಕಾರ್ಯಕರ್ತ ಅಮ್ರಾಬಾಯಿ ಬೋರಿಚಾ ಕೊಲೆ ಪ್ರಕರಣದ ವಿರುದ್ಧ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಊನಾ ಚಳವಳಿ ನಾಯಕ, ಗುಜರಾತ್‌ನ ಸ್ವತಂತ್ರ ಶಾಸಕ ಜಿಗ್ನೇಶ್ ಮೇವಾನಿ ಮತ್ತು ನೂರಾರು ದಲಿತ ಪ್ರತಿಭಟನಾಕಾರರನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ.

ಗುಜರಾತ್‌ನ ಭವನಗರದ ಘೋಘಾ ತಾಲೂಕಿನ ಸನೋದರ್ ನಿವಾಸಿ 50 ವರ್ಷದ ಆರ್‌ಟಿಐ ಕಾರ್ಯಕರ್ತ ಅಮ್ರಾಬಾಯಿ ಬೋರಿಚಾ (50) ಎಂಬುವವರನ್ನು ಸ್ಥಳೀಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಉಪಸ್ಥಿತಿಯಲ್ಲಿಯೇ ಕೊಲೆ ಮಾಡಲಾಗಿದೆ. ತಮಗೆ ಜೀವ ಬೆದರಿಕೆ ಇದೆ ಎಂದು ಹಲವು ಬಾರಿ ಅಮ್ರಾಬಾಯಿ ಬೋರಿಚಾ ದೂರು ದಾಖಲಿಸಿದ್ದರೂ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ ಎನ್ನಲಾಗಿದೆ.

ಈ ಘಟನೆ ಸಂಬಂಧ ವಿಧಾನಸಭಾ ಅಧಿವೇಶನದಲ್ಲಿಯೂ ಶಾಸಕ ಜಿಗ್ನೇಶ್ ಮೇವಾನಿ ಪೋಸ್ಟರ್ ಹಿಡಿದು ಪ್ರತಿಭಟನೆ ನಡೆಸಿದ್ದರು. ಹತ್ಯೆ ವಿಚಾರದ ಬಗ್ಗೆ ಮಾತನಾಡಲು ಅವಕಾಶ ನಿಡುವಂತೆ ಕೇಳಿದ್ದರು. ಆದರೆ, ಅಶಿಸ್ತಿನ ನೆಪವೊಡ್ಡಿ ಅವರನ್ನು ಸದನದಿಂದ ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ನಮ್ಮ ಮೇಲೆ ದಾಳಿ ನಡೆಸಿದರೆ ಹೋರಾಟವನ್ನು ನಿಲ್ಲಿಸುತ್ತೇವೆಂದು ಭಾವಿಸಿದ್ದೀರಾ, ಮನುವಾದಿಗಳೇ ?- ಜಿಗ್ನೇಶ್

ಮಂಗಳವಾರ ಸದನದಲ್ಲಿ ಮಾತನಾಡಲು ಅವಕಾಶ ನೀಡದಿದ್ದರೇ, ನೂರಾರು ದಲಿತ ಪ್ರತಿಭಟನಾಕಾರರೊಂದಿಗೆ ಗುಜರಾತ್ ವಿಧಾನಸೌಧದ ಗೇಟ್ ನಂಬರ್ ಒಂದರಲ್ಲಿ ಬೆಳಗ್ಗೆ 11.15ಕ್ಕೆ ಪ್ರತಿಭಟನೆ ನಡೆಸಲು ಸಿದ್ಧತೆ ನಡೆದಿತ್ತು. ಈ ಬಗ್ಗೆ ಮುಖ್ಯಮಂತ್ರಿ ವಿಜಯ್ ರೂಪಾನಿಯವರಿಗೆ ಟ್ವಿಟರ್‌ನಲ್ಲಿ ಮಾಹಿತಿ ನಿಡಲಾಗಿತ್ತು.

ಅಸೆಂಬ್ಲಿಯಲ್ಲಿ ಮಾತನಾಡಲು ಅವಕಾಶ ನೀಡದಿದ್ದರೇ, ಬೀದಿಗಳಲ್ಲಿ ನಿಮ್ಮನ್ನು ನಾನು ಪ್ರಶ್ನಿಸುತ್ತೇನೆ ಎಂದಿದ್ದರು. ಮಾರ್ಚ್ 23 ಭಗತ್ ಸಿಂಗ್ ಅವರ ಹುತಾತ್ಮ ದಿನ. ಇದಕ್ಕಿಂತ  ಉತ್ತಮ ದಿನ ಮತ್ತೊಂದಿಲ್ಲ. ಇಂಕ್ವಿಲಾಬ್ ಜಿಂದಾಬಾದ್! ಎಂದು ತಮ್ಮ ಟ್ವಿಟರ್‌ ಖಾತೆಯಲ್ಲಿ ಜಿಗ್ನೇಶ್ ಬರೆದುಕೊಂಡಿದ್ದರು.

ಸದ್ಯ ಪ್ರತಿಭಟನೆ ನಡೆಸುತ್ತಿದ್ದ ಜಿಗ್ನೇಶ್ ಮೇವಾನಿ ಮತ್ತು ನೂರಾರು ದಲಿತ ಪ್ರತಿಭಟನಾಕಾರರನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ ಎಂದು ಜಿಗ್ನೇಶ್ ಮೇವಾನಿ ಅವರ ಸೋಶೀಯಲ್ ಮೀಡಿಯಾ ತಂಡ ಟ್ವೀಟ್ ಮಾಡಿದೆ.

ಇದನ್ನೂ ಓದಿ: ತುಮಕೂರು: ಸಮಾಧಿ ಗುಂಡಿಯಿಂದ ದಲಿತ ಶಿಶುವಿನ ಮೃತದೇಹ ಹೊರತೆಗೆಸಿ ಅಮಾನವೀಯತೆ!

ಮಾರ್ಚ್ 2 ರಂದು ಹತ್ಯೆಗೊಳಗಾದ ಆರ್‌ಟಿಐ ಕಾರ್ಯಕರ್ತ, ರೈತ ಅಮ್ರಾಬಾಯಿ ಬೋರಿಚಾ ಅವರಿಗೆ ಸಂತಾಪ ಸೂಚಿಸಲು ಮಾರ್ಚ್ 14ರಂದು ಗುಜರಾತ್ ರಾಜ್ಯದಾದ್ಯಂತದ ಸುಮಾರು 2,500 ಪರಿಶಿಷ್ಟ ಜಾತಿ (ಎಸ್‌ಸಿ) ಪುರುಷರು ಮತ್ತು ಮಹಿಳೆಯರು ಭಾವನಗರ ಜಿಲ್ಲೆಯ ಸನೋದರ್ ಗ್ರಾಮಕ್ಕೆ ಆಗಮಿಸಿದ್ದರು.

Image
PC: Twitter@jigneshmevani80

ಸ್ಪೀಕರ್ ಅನುಮತಿಯಿಲ್ಲದೆ ದಲಿತ ವ್ಯಕ್ತಿಯ ಹತ್ಯೆಯ ವಿಷಯವನ್ನು ಸದನದಲ್ಲಿ ಎತ್ತಿದ ಕಾರಣ ಜಿಗ್ನೇಶ್ ಮೇವಾನಿ ಅವರನ್ನು “ಅಶಿಸ್ತು” ಎಂದು ರಾಜ್ಯ ವಿಧಾನಸಭೆಯಿಂದ ಅಮಾನತುಗೊಳಿಸಲಾಗಿತ್ತು. ಸ್ಪೀಕರ್ ರಾಜೇಂದ್ರ ತ್ರಿವೇದಿ ಅವರ ಆದೇಶದ ಮೇರೆಗೆ ಅವರನ್ನು ಸದನದಿಂದ ಹೊರಹಾಕಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದ ಪೋಸ್ಟರ್‌ ಹಿಡಿದು ಮೇವಾನಿ, ಮೈಕ್ ಆಫ್ ಆಗಿದ್ದರೂ, ಕೂಗಲು ಪ್ರಾರಂಭಿಸಿದರು ಮತ್ತು ರಾಜ್ಯದ ಬಿಜೆಪಿ ಸರ್ಕಾರ ಇನ್ನೂ ಪಿಎಸ್ಐ ಅನ್ನು ಏಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದ್ದರು.


ಇದನ್ನೂ ಓದಿ: ಬಹುಜನ ಭಾರತ; ಚಂಬಲ್ ಸೀಮೆಯಲ್ಲೊಂದು ಹೆಣ್ಣುನೋಟದ ದಲಿತ ಪತ್ರಿಕೋದ್ಯಮ: ಡಿ. ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...