Homeಮುಖಪುಟಶಿವಸೇನಾ ಸಂಸದನಿಂದ ಬೆದರಿಕೆ, ಆಸಿಡ್ ದಾಳಿ ಎಚ್ಚರಿಕೆ: ಸಂಸದೆ ನವನೀತ್ ಕೌರ್ ರಾಣಾ ಆರೋಪ

ಶಿವಸೇನಾ ಸಂಸದನಿಂದ ಬೆದರಿಕೆ, ಆಸಿಡ್ ದಾಳಿ ಎಚ್ಚರಿಕೆ: ಸಂಸದೆ ನವನೀತ್ ಕೌರ್ ರಾಣಾ ಆರೋಪ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಸದನದಲ್ಲಿ ಮಾತನಾಡಿದ್ದಕ್ಕಾಗಿ, ಶಿವಸೇನೆಯ ಸಂಸದ ಅರವಿಂದ ಸಾವಂತ್ ಅವರು ಲೋಕಸಭೆಯ ಮೊಗಸಾಲೆಯಲ್ಲಿ ಜೈಲಿಗಟ್ಟುವುದಾಗಿ ಎಚ್ಚರಿಕೆ ನೀಡುವ ಬೆದರಿಕೆ ಹಾಕಿದ್ದಾರೆ ಎಂದು ಅಮರಾವತಿಯ ಸ್ವತಂತ್ರ ಸಂಸದೆ ನವನೀತ್ ಕೌರ್ ರಾಣಾ ಆರೋಪಿಸಿದ್ದಾರೆ.

ಪೋನ್ ಕರೆಗಳ ಮೂಲಕ ಮತ್ತು ಶಿವಸೇನೆಯ ಲೆಟರ್‌ಹೆಡ್‌ಗಳಲ್ಲಿ ಆಸಿಡ್-ಅಟ್ಯಾಕ್ ಬೆದರಿಕೆಗಳು ಬರುತ್ತಿವೆ ಎಂದು ಆರೋಪಿಸಿ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಮಾಹಿತಿ ನೀಡಿದ್ದಾರೆ. ಜೊತೆಗೆ ಪ್ರಧಾನಿ ಮತ್ತು ಗೃಹಸಚಿವರಿಗೆ ಪತ್ರ ಬರೆದಿದ್ದಾರೆ.

ಆದರೆ, ಆರೋಪಗಳನ್ನು ನಿರಾಕರಿಸಿರುವ ಸಂಸದ, ಯಾರಾದರೂ ಮಹಿಳಾ ಸಂಸದರಿಗೆ ಬೆದರಿಕೆ ಹಾಕಿದ್ದರೇ, ದೈಹಿಕ ಹಾನಿ ಮಾಡುವುದಾಗಿ ಎಚ್ಚರಿಕೆ ನೀಡಿದ್ದರೇ ನಾನು ಮಹಿಳಾ ಸದಸ್ಯರೊಂದಿಗೆ ನಿಲ್ಲುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ತುಮಕೂರು: ಸಮಾಧಿ ಗುಂಡಿಯಿಂದ ದಲಿತ ಶಿಶುವಿನ ಮೃತದೇಹ ಹೊರತೆಗೆಸಿ ಅಮಾನವೀಯತೆ!

ಮಾರ್ಚ್ 22 ರಂದು ಸ್ಪೀಕರ್‌ಗೆ ಬರೆದಿರುವ ಪತ್ರವೊಂದರಲ್ಲಿ ನವನೀತ್ ಕೌರ್‌ ರಾಣಾ ಅವರು, “ಇಂದು ಶಿವಸೇನೆ ಸಂಸದ ಅರವಿಂದ ಸಾವಂತ್ ನನಗೆ ಬೆದರಿಕೆ ಹಾಕಿದ ರೀತಿ ನನಗೆ ಮಾತ್ರವಲ್ಲ, ದೇಶದ ಎಲ್ಲ ಮಹಿಳೆಯರಿಗೂ ಮಾಡಿದ ಅವಮಾನವಾಗಿದೆ. ಆದ್ದರಿಂದ ಅರವಿಂದ ಸಾವಂತ್ ವಿರುದ್ಧ ನಾನು ಕಠಿಣ ಕ್ರಮಗಳನ್ನು ಬಯಸುತ್ತೇನೆ” ಎಂದಿದ್ದಾರೆ.

ಮಹಾರಾಷ್ಟ್ರ ಸರ್ಕಾರದಲ್ಲಿನ ಅವ್ಯವಹಾರಗಳ ವಿಷಯವನ್ನು ಪ್ರಸ್ತಾಪಿಸಿದಕ್ಕೆ, ಸಚಿನ್ ವಾಜೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದಕ್ಕೆ ಅರವಿಂದ್ ಸಾವಂತ್ ಕೋಪಗೊಂಡಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. “ನೀವು ಮಹಾರಾಷ್ಟ್ರದಲ್ಲಿ ಹೇಗೆ ತಿರುಗಾಡುತ್ತೀರಿ ಎಂದು ನಾನು ನೋಡುತ್ತೇನೆ” ಮತ್ತು “ನಾವು ನಿಮ್ಮನ್ನು ಜೈಲಿಗಟ್ಟುತ್ತೇವೆ” ಎಂದು ಹೇಳಿದ್ದಾರೆ ಎಂದಿದ್ದಾರೆ. ಈ ಘಟನೆಗೆ ರಾಜಮುಂದ್ರ ಸಂಸದ ಭಾರತ್ ಮಾರ್ಗನಿ ಸಾಕ್ಷಿಯಾಗಿದ್ದಾರೆ ಎಂದು ತಿಳಿಸಿದ್ದಾರೆ ಎಂದು ಎಎನ್‌ಐ ಉಲ್ಲೇಖಿಸಿದೆ.

ನವನೀತ್ ಕೌರ್‌ ರಾಣಾ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅರವಿಂದ್ ಸಾವಂತ್, ಅವರ ಆರೋಪಗಳು “ಸಂಪೂರ್ಣ ಸುಳ್ಳು” ಎಂದಿದ್ದಾರೆ. ಸಂಸತ್ತಿನಲ್ಲಿ ನವನೀತ್ ಕೌರ್‌ ರಾಣಾ ಅಗೌರವ ಮತ್ತು ಅಸಭ್ಯತೆಯಿಂದ ಮಾತನಾಡುತ್ತಾರೆ. ಎಲ್ಲರಿಗೂ ಬೆದರಿಕೆ ಹಾಕುವವರು ಅವರೇ ಎಂದು ಆರೋಪಿಸಿದ್ದಾರೆ.

“ನಾನು ನನ್ನ ಜೀವನದಲ್ಲಿ ಯಾರಿಗೂ ಬೆದರಿಕೆ ಹಾಕಿಲ್ಲ. ಅಂತಹದರಲ್ಲಿ ಮಹಿಳೆಗೆ ಬೆದರಿಕೆ ಹಾಕುವ ಪ್ರಶ್ನೆಯಿಲ್ಲ” ಎಂದು ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ. “ಸದನವು ಹೊರಗಿನಿಂದ ಯಾರನ್ನಾದರೂ ಹೆಸರಿಸುವುದನ್ನು ನಿಷೇಧಿಸುತ್ತದೆ. ಆದರೆ ಅವರು ಅದನ್ನು ಮಾಡುತ್ತಿದ್ದಾರೆ. ಅದೆಲ್ಲಾ ದಾಖಲೆಯಲ್ಲಿ ಇರುತ್ತದೆ. ಕೆಲವರು ವಿಷಯಗಳನ್ನು ತಿರುಚಲು ಮತ್ತು ಪ್ರಚಾರವನ್ನು ಪಡೆಯಲು ಪರಿಣತರಾಗಿದ್ದಾರೆ” ಎಂದಿದ್ದಾರೆ.

ಆಸಿಡ್-ಅಟ್ಯಾಕ್ ಬೆದರಿಕೆಗಳನ್ನು ಉಲ್ಲೇಖಿಸಿದ ಅರವಿಂದ್ ಸಾವಂತ್ “ಅಂತಹ ಕೃತ್ಯಗಳನ್ನು ಯಾರು ಮಾಡಿದರೂ ನಾನು ಖಂಡಿಸುತ್ತೇನೆ. ಯಾರಾದರೂ ಅಂತಹ ಕೃತ್ಯಕ್ಕೆ ಪ್ರಯತ್ನಿಸಿದರೆ, ನಾನು ನವನೀತ್ ಕೌರ್‌ ರಾಣಾ ಅವರೊಂದಿಗೆ ನಿಲ್ಲುತ್ತೇನೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕನ್ನಡದ ಅಕ್ಷಿ ಚಿತ್ರಕ್ಕೆ ಪ್ರಶಸ್ತಿ: ನಟ ಧನುಷ್‌ಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...