Homeಮುಖಪುಟಶಿವಸೇನಾ ಸಂಸದನಿಂದ ಬೆದರಿಕೆ, ಆಸಿಡ್ ದಾಳಿ ಎಚ್ಚರಿಕೆ: ಸಂಸದೆ ನವನೀತ್ ಕೌರ್ ರಾಣಾ ಆರೋಪ

ಶಿವಸೇನಾ ಸಂಸದನಿಂದ ಬೆದರಿಕೆ, ಆಸಿಡ್ ದಾಳಿ ಎಚ್ಚರಿಕೆ: ಸಂಸದೆ ನವನೀತ್ ಕೌರ್ ರಾಣಾ ಆರೋಪ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಸದನದಲ್ಲಿ ಮಾತನಾಡಿದ್ದಕ್ಕಾಗಿ, ಶಿವಸೇನೆಯ ಸಂಸದ ಅರವಿಂದ ಸಾವಂತ್ ಅವರು ಲೋಕಸಭೆಯ ಮೊಗಸಾಲೆಯಲ್ಲಿ ಜೈಲಿಗಟ್ಟುವುದಾಗಿ ಎಚ್ಚರಿಕೆ ನೀಡುವ ಬೆದರಿಕೆ ಹಾಕಿದ್ದಾರೆ ಎಂದು ಅಮರಾವತಿಯ ಸ್ವತಂತ್ರ ಸಂಸದೆ ನವನೀತ್ ಕೌರ್ ರಾಣಾ ಆರೋಪಿಸಿದ್ದಾರೆ.

ಪೋನ್ ಕರೆಗಳ ಮೂಲಕ ಮತ್ತು ಶಿವಸೇನೆಯ ಲೆಟರ್‌ಹೆಡ್‌ಗಳಲ್ಲಿ ಆಸಿಡ್-ಅಟ್ಯಾಕ್ ಬೆದರಿಕೆಗಳು ಬರುತ್ತಿವೆ ಎಂದು ಆರೋಪಿಸಿ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಮಾಹಿತಿ ನೀಡಿದ್ದಾರೆ. ಜೊತೆಗೆ ಪ್ರಧಾನಿ ಮತ್ತು ಗೃಹಸಚಿವರಿಗೆ ಪತ್ರ ಬರೆದಿದ್ದಾರೆ.

ಆದರೆ, ಆರೋಪಗಳನ್ನು ನಿರಾಕರಿಸಿರುವ ಸಂಸದ, ಯಾರಾದರೂ ಮಹಿಳಾ ಸಂಸದರಿಗೆ ಬೆದರಿಕೆ ಹಾಕಿದ್ದರೇ, ದೈಹಿಕ ಹಾನಿ ಮಾಡುವುದಾಗಿ ಎಚ್ಚರಿಕೆ ನೀಡಿದ್ದರೇ ನಾನು ಮಹಿಳಾ ಸದಸ್ಯರೊಂದಿಗೆ ನಿಲ್ಲುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ತುಮಕೂರು: ಸಮಾಧಿ ಗುಂಡಿಯಿಂದ ದಲಿತ ಶಿಶುವಿನ ಮೃತದೇಹ ಹೊರತೆಗೆಸಿ ಅಮಾನವೀಯತೆ!

ಮಾರ್ಚ್ 22 ರಂದು ಸ್ಪೀಕರ್‌ಗೆ ಬರೆದಿರುವ ಪತ್ರವೊಂದರಲ್ಲಿ ನವನೀತ್ ಕೌರ್‌ ರಾಣಾ ಅವರು, “ಇಂದು ಶಿವಸೇನೆ ಸಂಸದ ಅರವಿಂದ ಸಾವಂತ್ ನನಗೆ ಬೆದರಿಕೆ ಹಾಕಿದ ರೀತಿ ನನಗೆ ಮಾತ್ರವಲ್ಲ, ದೇಶದ ಎಲ್ಲ ಮಹಿಳೆಯರಿಗೂ ಮಾಡಿದ ಅವಮಾನವಾಗಿದೆ. ಆದ್ದರಿಂದ ಅರವಿಂದ ಸಾವಂತ್ ವಿರುದ್ಧ ನಾನು ಕಠಿಣ ಕ್ರಮಗಳನ್ನು ಬಯಸುತ್ತೇನೆ” ಎಂದಿದ್ದಾರೆ.

ಮಹಾರಾಷ್ಟ್ರ ಸರ್ಕಾರದಲ್ಲಿನ ಅವ್ಯವಹಾರಗಳ ವಿಷಯವನ್ನು ಪ್ರಸ್ತಾಪಿಸಿದಕ್ಕೆ, ಸಚಿನ್ ವಾಜೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದಕ್ಕೆ ಅರವಿಂದ್ ಸಾವಂತ್ ಕೋಪಗೊಂಡಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. “ನೀವು ಮಹಾರಾಷ್ಟ್ರದಲ್ಲಿ ಹೇಗೆ ತಿರುಗಾಡುತ್ತೀರಿ ಎಂದು ನಾನು ನೋಡುತ್ತೇನೆ” ಮತ್ತು “ನಾವು ನಿಮ್ಮನ್ನು ಜೈಲಿಗಟ್ಟುತ್ತೇವೆ” ಎಂದು ಹೇಳಿದ್ದಾರೆ ಎಂದಿದ್ದಾರೆ. ಈ ಘಟನೆಗೆ ರಾಜಮುಂದ್ರ ಸಂಸದ ಭಾರತ್ ಮಾರ್ಗನಿ ಸಾಕ್ಷಿಯಾಗಿದ್ದಾರೆ ಎಂದು ತಿಳಿಸಿದ್ದಾರೆ ಎಂದು ಎಎನ್‌ಐ ಉಲ್ಲೇಖಿಸಿದೆ.

ನವನೀತ್ ಕೌರ್‌ ರಾಣಾ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅರವಿಂದ್ ಸಾವಂತ್, ಅವರ ಆರೋಪಗಳು “ಸಂಪೂರ್ಣ ಸುಳ್ಳು” ಎಂದಿದ್ದಾರೆ. ಸಂಸತ್ತಿನಲ್ಲಿ ನವನೀತ್ ಕೌರ್‌ ರಾಣಾ ಅಗೌರವ ಮತ್ತು ಅಸಭ್ಯತೆಯಿಂದ ಮಾತನಾಡುತ್ತಾರೆ. ಎಲ್ಲರಿಗೂ ಬೆದರಿಕೆ ಹಾಕುವವರು ಅವರೇ ಎಂದು ಆರೋಪಿಸಿದ್ದಾರೆ.

“ನಾನು ನನ್ನ ಜೀವನದಲ್ಲಿ ಯಾರಿಗೂ ಬೆದರಿಕೆ ಹಾಕಿಲ್ಲ. ಅಂತಹದರಲ್ಲಿ ಮಹಿಳೆಗೆ ಬೆದರಿಕೆ ಹಾಕುವ ಪ್ರಶ್ನೆಯಿಲ್ಲ” ಎಂದು ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ. “ಸದನವು ಹೊರಗಿನಿಂದ ಯಾರನ್ನಾದರೂ ಹೆಸರಿಸುವುದನ್ನು ನಿಷೇಧಿಸುತ್ತದೆ. ಆದರೆ ಅವರು ಅದನ್ನು ಮಾಡುತ್ತಿದ್ದಾರೆ. ಅದೆಲ್ಲಾ ದಾಖಲೆಯಲ್ಲಿ ಇರುತ್ತದೆ. ಕೆಲವರು ವಿಷಯಗಳನ್ನು ತಿರುಚಲು ಮತ್ತು ಪ್ರಚಾರವನ್ನು ಪಡೆಯಲು ಪರಿಣತರಾಗಿದ್ದಾರೆ” ಎಂದಿದ್ದಾರೆ.

ಆಸಿಡ್-ಅಟ್ಯಾಕ್ ಬೆದರಿಕೆಗಳನ್ನು ಉಲ್ಲೇಖಿಸಿದ ಅರವಿಂದ್ ಸಾವಂತ್ “ಅಂತಹ ಕೃತ್ಯಗಳನ್ನು ಯಾರು ಮಾಡಿದರೂ ನಾನು ಖಂಡಿಸುತ್ತೇನೆ. ಯಾರಾದರೂ ಅಂತಹ ಕೃತ್ಯಕ್ಕೆ ಪ್ರಯತ್ನಿಸಿದರೆ, ನಾನು ನವನೀತ್ ಕೌರ್‌ ರಾಣಾ ಅವರೊಂದಿಗೆ ನಿಲ್ಲುತ್ತೇನೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕನ್ನಡದ ಅಕ್ಷಿ ಚಿತ್ರಕ್ಕೆ ಪ್ರಶಸ್ತಿ: ನಟ ಧನುಷ್‌ಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...