Homeಮುಖಪುಟಶಿವಸೇನಾ ಸಂಸದನಿಂದ ಬೆದರಿಕೆ, ಆಸಿಡ್ ದಾಳಿ ಎಚ್ಚರಿಕೆ: ಸಂಸದೆ ನವನೀತ್ ಕೌರ್ ರಾಣಾ ಆರೋಪ

ಶಿವಸೇನಾ ಸಂಸದನಿಂದ ಬೆದರಿಕೆ, ಆಸಿಡ್ ದಾಳಿ ಎಚ್ಚರಿಕೆ: ಸಂಸದೆ ನವನೀತ್ ಕೌರ್ ರಾಣಾ ಆರೋಪ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಸದನದಲ್ಲಿ ಮಾತನಾಡಿದ್ದಕ್ಕಾಗಿ, ಶಿವಸೇನೆಯ ಸಂಸದ ಅರವಿಂದ ಸಾವಂತ್ ಅವರು ಲೋಕಸಭೆಯ ಮೊಗಸಾಲೆಯಲ್ಲಿ ಜೈಲಿಗಟ್ಟುವುದಾಗಿ ಎಚ್ಚರಿಕೆ ನೀಡುವ ಬೆದರಿಕೆ ಹಾಕಿದ್ದಾರೆ ಎಂದು ಅಮರಾವತಿಯ ಸ್ವತಂತ್ರ ಸಂಸದೆ ನವನೀತ್ ಕೌರ್ ರಾಣಾ ಆರೋಪಿಸಿದ್ದಾರೆ.

ಪೋನ್ ಕರೆಗಳ ಮೂಲಕ ಮತ್ತು ಶಿವಸೇನೆಯ ಲೆಟರ್‌ಹೆಡ್‌ಗಳಲ್ಲಿ ಆಸಿಡ್-ಅಟ್ಯಾಕ್ ಬೆದರಿಕೆಗಳು ಬರುತ್ತಿವೆ ಎಂದು ಆರೋಪಿಸಿ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಮಾಹಿತಿ ನೀಡಿದ್ದಾರೆ. ಜೊತೆಗೆ ಪ್ರಧಾನಿ ಮತ್ತು ಗೃಹಸಚಿವರಿಗೆ ಪತ್ರ ಬರೆದಿದ್ದಾರೆ.

ಆದರೆ, ಆರೋಪಗಳನ್ನು ನಿರಾಕರಿಸಿರುವ ಸಂಸದ, ಯಾರಾದರೂ ಮಹಿಳಾ ಸಂಸದರಿಗೆ ಬೆದರಿಕೆ ಹಾಕಿದ್ದರೇ, ದೈಹಿಕ ಹಾನಿ ಮಾಡುವುದಾಗಿ ಎಚ್ಚರಿಕೆ ನೀಡಿದ್ದರೇ ನಾನು ಮಹಿಳಾ ಸದಸ್ಯರೊಂದಿಗೆ ನಿಲ್ಲುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ತುಮಕೂರು: ಸಮಾಧಿ ಗುಂಡಿಯಿಂದ ದಲಿತ ಶಿಶುವಿನ ಮೃತದೇಹ ಹೊರತೆಗೆಸಿ ಅಮಾನವೀಯತೆ!

ಮಾರ್ಚ್ 22 ರಂದು ಸ್ಪೀಕರ್‌ಗೆ ಬರೆದಿರುವ ಪತ್ರವೊಂದರಲ್ಲಿ ನವನೀತ್ ಕೌರ್‌ ರಾಣಾ ಅವರು, “ಇಂದು ಶಿವಸೇನೆ ಸಂಸದ ಅರವಿಂದ ಸಾವಂತ್ ನನಗೆ ಬೆದರಿಕೆ ಹಾಕಿದ ರೀತಿ ನನಗೆ ಮಾತ್ರವಲ್ಲ, ದೇಶದ ಎಲ್ಲ ಮಹಿಳೆಯರಿಗೂ ಮಾಡಿದ ಅವಮಾನವಾಗಿದೆ. ಆದ್ದರಿಂದ ಅರವಿಂದ ಸಾವಂತ್ ವಿರುದ್ಧ ನಾನು ಕಠಿಣ ಕ್ರಮಗಳನ್ನು ಬಯಸುತ್ತೇನೆ” ಎಂದಿದ್ದಾರೆ.

ಮಹಾರಾಷ್ಟ್ರ ಸರ್ಕಾರದಲ್ಲಿನ ಅವ್ಯವಹಾರಗಳ ವಿಷಯವನ್ನು ಪ್ರಸ್ತಾಪಿಸಿದಕ್ಕೆ, ಸಚಿನ್ ವಾಜೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದಕ್ಕೆ ಅರವಿಂದ್ ಸಾವಂತ್ ಕೋಪಗೊಂಡಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. “ನೀವು ಮಹಾರಾಷ್ಟ್ರದಲ್ಲಿ ಹೇಗೆ ತಿರುಗಾಡುತ್ತೀರಿ ಎಂದು ನಾನು ನೋಡುತ್ತೇನೆ” ಮತ್ತು “ನಾವು ನಿಮ್ಮನ್ನು ಜೈಲಿಗಟ್ಟುತ್ತೇವೆ” ಎಂದು ಹೇಳಿದ್ದಾರೆ ಎಂದಿದ್ದಾರೆ. ಈ ಘಟನೆಗೆ ರಾಜಮುಂದ್ರ ಸಂಸದ ಭಾರತ್ ಮಾರ್ಗನಿ ಸಾಕ್ಷಿಯಾಗಿದ್ದಾರೆ ಎಂದು ತಿಳಿಸಿದ್ದಾರೆ ಎಂದು ಎಎನ್‌ಐ ಉಲ್ಲೇಖಿಸಿದೆ.

ನವನೀತ್ ಕೌರ್‌ ರಾಣಾ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅರವಿಂದ್ ಸಾವಂತ್, ಅವರ ಆರೋಪಗಳು “ಸಂಪೂರ್ಣ ಸುಳ್ಳು” ಎಂದಿದ್ದಾರೆ. ಸಂಸತ್ತಿನಲ್ಲಿ ನವನೀತ್ ಕೌರ್‌ ರಾಣಾ ಅಗೌರವ ಮತ್ತು ಅಸಭ್ಯತೆಯಿಂದ ಮಾತನಾಡುತ್ತಾರೆ. ಎಲ್ಲರಿಗೂ ಬೆದರಿಕೆ ಹಾಕುವವರು ಅವರೇ ಎಂದು ಆರೋಪಿಸಿದ್ದಾರೆ.

“ನಾನು ನನ್ನ ಜೀವನದಲ್ಲಿ ಯಾರಿಗೂ ಬೆದರಿಕೆ ಹಾಕಿಲ್ಲ. ಅಂತಹದರಲ್ಲಿ ಮಹಿಳೆಗೆ ಬೆದರಿಕೆ ಹಾಕುವ ಪ್ರಶ್ನೆಯಿಲ್ಲ” ಎಂದು ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ. “ಸದನವು ಹೊರಗಿನಿಂದ ಯಾರನ್ನಾದರೂ ಹೆಸರಿಸುವುದನ್ನು ನಿಷೇಧಿಸುತ್ತದೆ. ಆದರೆ ಅವರು ಅದನ್ನು ಮಾಡುತ್ತಿದ್ದಾರೆ. ಅದೆಲ್ಲಾ ದಾಖಲೆಯಲ್ಲಿ ಇರುತ್ತದೆ. ಕೆಲವರು ವಿಷಯಗಳನ್ನು ತಿರುಚಲು ಮತ್ತು ಪ್ರಚಾರವನ್ನು ಪಡೆಯಲು ಪರಿಣತರಾಗಿದ್ದಾರೆ” ಎಂದಿದ್ದಾರೆ.

ಆಸಿಡ್-ಅಟ್ಯಾಕ್ ಬೆದರಿಕೆಗಳನ್ನು ಉಲ್ಲೇಖಿಸಿದ ಅರವಿಂದ್ ಸಾವಂತ್ “ಅಂತಹ ಕೃತ್ಯಗಳನ್ನು ಯಾರು ಮಾಡಿದರೂ ನಾನು ಖಂಡಿಸುತ್ತೇನೆ. ಯಾರಾದರೂ ಅಂತಹ ಕೃತ್ಯಕ್ಕೆ ಪ್ರಯತ್ನಿಸಿದರೆ, ನಾನು ನವನೀತ್ ಕೌರ್‌ ರಾಣಾ ಅವರೊಂದಿಗೆ ನಿಲ್ಲುತ್ತೇನೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕನ್ನಡದ ಅಕ್ಷಿ ಚಿತ್ರಕ್ಕೆ ಪ್ರಶಸ್ತಿ: ನಟ ಧನುಷ್‌ಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...