Homeಮುಖಪುಟಜಾರಕಿಹೊಳಿ ಲೈಂಗಿಕ ಪ್ರಕರಣ: ಸದನದಲ್ಲಿ ಸಿಡಿ ಹಿಡಿದು ಕಾಂಗ್ರೆಸ್ ನಾಯಕರ ಪ್ರತಿಭಟನೆ

ಜಾರಕಿಹೊಳಿ ಲೈಂಗಿಕ ಪ್ರಕರಣ: ಸದನದಲ್ಲಿ ಸಿಡಿ ಹಿಡಿದು ಕಾಂಗ್ರೆಸ್ ನಾಯಕರ ಪ್ರತಿಭಟನೆ

- Advertisement -
- Advertisement -

ರಮೇಶ್ ಜಾರಕಿಹೊಳಿ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸ್ವತಂತ್ರ ಸಂಸ್ಥೆಯಿಂದ ನಡೆಸಬೇಕೆಂದು ಆಗ್ರಹಿಸಿ ವಿಧಾನ ಮಂಡಲದ ಅಧಿವೇಶನದಲ್ಲಿ ಸಿಡಿ ಹಿಡಿದು ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು, ಸಿಡಿಗಳನ್ನು ಕೈಯಲ್ಲಿ ಹಿಡಿದು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.

ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಧರಣಿ ಆರಂಭಿಸಿದರು. ಉದ್ಯೋಗ ಕೇಳಿದ ಯುವತಿ ಮೇಲೆ ಅತ್ಯಾಚಾವೆಸಗಿದ ರಮೇಶ್ ಜಾರಕಿಹೊಳಿ ಮೇಲೆ ಅತ್ಯಾಚಾರದ ಎಫ್‌ಐಆರ್‌ ದಾಖಲಿಸಬೇಕು. ತನಿಖೆಯನ್ನು ಸ್ವತಂತ್ರ ಸಂಸ್ಥೆಗೆ ನೀಡಬೇಕು ಎಂದು ಆಗ್ರಹಿಸಿದರು.

ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ಬೆಳಗ್ಗೆ ನಡೆದ ಹಿರಿಯ ನಾಯಕರ ಸಭೆಯಲ್ಲಿ ಎರಡೂ ಸದನಗಳಲ್ಲಿ ಸಿಡಿ ತೋರಿಸಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ತೀರ್ಮಾನ ತೆಗೆದುಕೊಂಡಿತ್ತು. ಎಲ್ಲಾ ನಾಯಕರಿಗೂ ಎಂ.ಬಿ.ಪಾಟೀಲ್ ಸಿಡಿ ವಿತರಿಸಿದ್ದರು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ನನಗೆ ರಕ್ಷಣೆ ಕೊಡಿ ಎಂದ ಯುವತಿ – ವೀಡಿಯೋ ವೈರಲ್

ಹಿರಿಯ ನಾಯಕರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಸ್.ಆರ್. ಪಾಟೀಲ, ಎಚ್.ಕೆ. ಪಾಟೀಲ, ಅಜಯ್ ಸಿಂಗ್, ತುಕಾರಾಂ, ರಮೇಶ್ ಕುಮಾರ್, ಜಮೀರ್ ಅಹ್ಮದ್ ಖಾನ್, ಅಮರೇಗೌಡ ಭಯ್ಯಾಪುರ್ ಮತ್ತು ನಾರಾಯಣಸ್ವಾಮಿ ಭಾಗವಹಿಸಿದ್ದರು.

ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ಕಲಾಪದಲ್ಲಿಯೂ ಪ್ರತಿಭಟನೆ ನಡೆಸಲಾಯಿತು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಕಾಂಗ್ರೆಸ್ ನಾಯಕರ ಮನವೊಲಿಸಲು ಪ್ರಯತ್ನಿಸಿ ವಿಫಲರಾದರು. ಪ್ರಶ್ನೋತ್ತರ ವೇಳೆ ಬಳಿಕ ಪ್ರತಿಭಟನೆ ನಡೆಸುವಂತೆ ಕೇಳಿದರು ಆದರೆ ಕಾಂಗ್ರೆಸ್ ನಾಯಕರು ಇದಾವುದಕ್ಕೂ ಬಗ್ಗದೆ ಇದ್ದಾಗ ಕಲಾಪವನ್ನು 10 ನಿಮಿಷ ಮುಂದೂಡಿಕೆ ಮಾಡಿದರು.

https://twitter.com/INCKarnataka/status/1374301690250207232

ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಾಗುವವರೆಗೆ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಹೇಳಿದೆ. ಜೊತೆಗೆ ಸಿಡಿ ಪ್ರಕರಣದ ನಂತರ ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್​ನಿಂದ ತಡೆಯಾಜ್ಞೆ ತಂದಿದ್ದ ಆರು ಮಂದಿ ಸಚಿವರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಬಿಗಿ ಪಟ್ಟು ಹಿಡಿದಿದೆ.

ಇದನ್ನೂ ಓದಿ: ತುಮಕೂರು: ಸಮಾಧಿ ಗುಂಡಿಯಿಂದ ದಲಿತ ಶಿಶುವಿನ ಮೃತದೇಹ ಹೊರತೆಗೆಸಿ ಅಮಾನವೀಯತೆ!

ಸಚಿವರಾದ ಡಾ. ಕೆ. ಸುಧಾಕರ್, ಎಸ್​.ಟಿ. ಸೋಮಶೇಖರ್, ನಾರಾಯಣ ಗೌಡ, ಶಿವರಾಮ್ ಹೆಬ್ಬಾರ್, ಬಿ.ಸಿ ಪಾಟೀಲ್, ಭೈರತಿ ಬಸವರಾಜ್ ಕೂಡ ರಾಜೀನಾಮೆ ನೀಡುವವರೆಗೂ ಧರಣಿ ನಡೆಸುವುದಾಗಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

 

ಬಿಜೆಪಿ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲೂ ಕಾಂಗ್ರೆಸ್ ದಾಳಿ ನಡೆಸುತ್ತಿದೆ. ರಮೇಶ್ ಜಾರಕಿಹೊಳಿಯವರನ್ನು ರೇಪಿಸ್ಟ್ ರಮೇಶ್ ಎಂದು ಕರೆದಿರುವ ಕಾಂಗ್ರೆಸ್, ಅವರ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿ, ಸಂತ್ರಸ್ತೆಗೆ ನ್ಯಾಯ ಕೊಡಿಸಬೇಕು ಎಂದಿದೆ.

‌ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮೇಲೆ ಯುವತಿಯೊಬ್ಬರಿಗೆ ಕೆಲಸದ ಆಮಿವೊಡ್ಡಿ ಲೈಂಗಿಕವಾಗಿ ಬಳಸಿಕೊಂಡ ಆರೋಪವಿದೆ. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ವಿಡಿಯೋ ಸಿ.ಡಿ ಜೊತೆಗೆ ಕಬ್ಬನ್ ಪಾರ್ಕ್ ಪೊಲೀಸರಿಗೆ ದೂರು ನೀಡಿದ್ದರು.


ಇದನ್ನೂ ಓದಿ: ಸಿಡಿ ಪ್ರಕರಣ: ಸಿಡಿ ನಕಲಿ, ನಾನು ನಿರಪರಾಧಿ ಎಂದು ರಮೇಶ್ ಜಾರಕಿಹೊಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...