Homeಮುಖಪುಟಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆದ್ದರೆ ಕೇರಳದಲ್ಲಿ ‘NYAY’ ಪ್ರಯೋಗ: ರಾಹುಲ್ ಗಾಂಧಿ

ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆದ್ದರೆ ಕೇರಳದಲ್ಲಿ ‘NYAY’ ಪ್ರಯೋಗ: ರಾಹುಲ್ ಗಾಂಧಿ

ನ್ಯಾಯ್ ಯೋಜನೆಯಂತೆ ವರ್ಷಕ್ಕೆ 72,000 ರೂ. ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹೋಗುತ್ತದೆ ಎನ್ನಲಾಗಿದೆ.

- Advertisement -
- Advertisement -

ನೀವು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಧಿಕಾರಕ್ಕೆ ತಂದರೆ ಪ್ರಸ್ತಾವಿತ ಕನಿಷ್ಠ ಆದಾಯ ಖಾತರಿ ಯೋಜನೆ- ‘NYAY’ (ನ್ಯಾಯುತ್ತಮ್ ಆಯ್ ಯೋಜನಾ) ಅನ್ನು ಕೇರಳ ರಾಜ್ಯದಲ್ಲಿ ಪ್ರಯೋಗಕ್ಕೆ ತರಲಾಗುವುದು ಎಂದು ಮಂಗಳವಾರ ರಾಹುಲ್ ಗಾಂಧಿ ಭರವಸೆ ನೀಡಿದರು.

ಕಳೆದ 50 ವರ್ಷಗಳಿಂದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಉಮ್ಮನ್ ಚಾಂಡಿ ಪ್ರತಿನಿಧಿಸುವ ಪುತ್ತುಪಲ್ಲಿ ವಿಧಾನಸಭಾ ಕ್ಷೇತ್ರದ ಮನಾರ್‌ಕಾಡ್‌ನಲ್ಲಿ ಆಯೋಜಿಸಿದ್ದ ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಇದನ್ನು ಪರೀಕ್ಷಿಸಲು ನನಗೆ ಸ್ವಾರ್ಥ ಕಾರಣವಿದೆ ಎಂದಿದ್ದಾರೆ.

ಚಾಂಡಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರೊಂದಿಗೆ ತೆರೆದ ಪ್ರಚಾರ ವಾಹನದಲ್ಲಿ ಮಾತನಾಡಿದ ಅವರು, ಯೋಜನೆಯ ಯಶಸ್ಸಿನ ಬಗ್ಗೆ ನನಗೆ ವಿಶ್ವಾಸವಿದೆ ಎಂದು ಹೇಳಿದರು

“ವರ್ಷಕ್ಕೆ 72,000 ರೂ. ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹೋಗುತ್ತದೆ. ಮತ್ತು ಮುಂದೆ ಏನಾಗಲಿದೆ ಎಂದು ನಮಗೆ ತಿಳಿದಿದೆ. ನಾವು ಕೇರಳದಲ್ಲಿ ಹೊಸ ಆಲೋಚನೆಯನ್ನು ಪರೀಕ್ಷಿಸುತ್ತಿದ್ದೇವೆ” ಹೇಳಿದ್ದಾರೆ.

2019 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಈ ವಿಚಾರವನ್ನು ರೂಪಿಸಿದ ಗಾಂಧಿ, ಬಡತನದ ಮೇಲಿನ ಅಂತಿಮ ದಾಳಿಯ ಆರಂಭವನ್ನು ಸೂಚಿಸುವ ಈ ಯೋಜನೆಯನ್ನು ಅಪ್ರತಿಮ (ಗ್ರೌಂಡ್ ಬ್ರೇಕಿಂಗ್) ಎಂದು ಬಣ್ಣಿಸಿದ್ದರು.

ಆದರೆ, ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ‘ನ್ಯಾಯ್’ ಭರವಸೆಯನ್ನು ಎತ್ತಿ ತೋರಿಸಿದ್ದರೂ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ವಿಫಲವಾಗಿತ್ತು.

ಈ ಯೋಜನೆಯನ್ನು ಕೇರಳದಲ್ಲಿ “ಪರೀಕ್ಷಿಸಲು” ಬಯಸಿದ್ದೇನೆ. ಅದು ಕೇರಳದಲ್ಲಿ ಸರಿಯಾಗಿ ಸ್ವೀಕಾರಾರ್ಹವಾದರೆ, ದೇಶದ ಎಲ್ಲಾ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿಯೂ ಅದನ್ನು ಪುನರಾವರ್ತಿಸಲು ಬಯಸುತ್ತೇನೆ ಎಂದು ರಾಹುಲ್ ಹೇಳಿದರು.

“ಇದು ಸಂಭವಿಸಿದರೆ, ಕೇರಳವು ಬಡತನದ ವಿರುದ್ಧ ಹೇಗೆ ಹೋರಾಡಬೇಕು ಎಂಬುದರ ಕುರಿತು ಭಾರತದ ಉಳಿದ ಭಾಗಗಳಿಗೆ ತೋರಿಸಲಿದೆ” ಎಂದು ಅವರು ಹೇಳಿದರು.

ಇದಕ್ಕೂ ಮೊದಲು ಇಲ್ಲಿನ ಪರುತುಂಪಾರದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಗಾಂಧಿ, “ನಾವು ಹಲವಾರು ದಿನಗಳಲ್ಲಿ ಸರ್ಕಾರ ರಚಿಸಿದಾಗ ಮೊದಲಿಗೆ ನ್ಯಾಯ್ ಯೋಜನೆಯನ್ನು ಆರಂಭಿಸಲಿದ್ದೇವೆ’ ಎಂದು ಹೇಳಿದರು. ಸೋಮವಾರ ನಡೆದ ಚುನಾವಣಾ ಪ್ರಚಾರದ ವೇಳೆಯೂ ನ್ಯಾಯ್ ಯೋಜನೆಗೆ ಅವರು ನೀಡುವ ಮಹತ್ವವನ್ನು ಒತ್ತಿಹೇಳಿದ್ದರು.

‘ಇದನ್ನೇನೂ ಒಂದು ರೀತಿಯ ದಾನಧರ್ಮವಾಗಿ ಮಾಡಲು ಹೋಗುವುದಿಲ್ಲ. ಇದು ದಾನವಲ್ಲ. ನಾವು ನಿಮಗೆ ನ್ಯಾಯಯುತವಾಗಿ ನ್ಯಾಯ್ ಮೂಲಕ ಹಣವನ್ನು ನೀಡುತ್ತಿದ್ದೇವೆ.. ನಾವು ಹಣವನ್ನು ನಿಮ್ಮ ಜೇಬಿನಲ್ಲಿ ಇಡುತ್ತಿದ್ದೇವೆ. ಆದ್ದರಿಂದ ನೀವು ಹಣವನ್ನು ಖರ್ಚು ಮಾಡಬಹುದು’ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ನೋಟು ಅಮಾನ್ಯೀಕರಣ, ಅವರ ದೋಷಪೂರಿತ ಜಿಎಸ್‌ಟಿ ಅನುಷ್ಠಾನ ಮತ್ತು ಕೊವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ “ಕುಸಿದ” ಭಾರತೀಯ ಆರ್ಥಿಕತೆಯನ್ನು ಉನ್ನತೀಕರಿಸುವ ಏಕೈಕ ಮಾರ್ಗ ನ್ಯಾಯ್ ಆಗಿದೆ ಎಂದು ರಾಹುಲ್ ಹೇಳಿದ್ದಾರೆ.

ಏಪ್ರಿಲ್ 6 ರ ವಿಧಾನಸಭಾ ಚುನಾವಣೆಗೆ ತನ್ನ ಪ್ರಣಾಳಿಕೆಯಲ್ಲಿ, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೃಹಿಣಿಯರಿಗೆ 2000 ರೂ ‘ಪಿಂಚಣಿ’, ‘ನ್ಯಾಯ ಯೋಜನೆ’ ಅಡಿಯಲ್ಲಿ ಬಡವರಿಗೆ ವಾರ್ಷಿಕವಾಗಿ 72,000 ರೂ. ಮತ್ತು ದೀನದಲಿತರಿಗೆ ಐದು ಲಕ್ಷ ಮನೆಗಳ ನಿರ್ಮಾಣದ ಭರವಸೆ ನೀಡಿದೆ.


ಇದನ್ನೂ ಓದಿ: ರಾಹುಲ್‍ಗಾಂಧಿಯ `ನ್ಯಾಯ್’ ಸ್ವಾಗತಾರ್ಹ. ಆದರೆ, ಕೇಳಲೇಬೇಕಾದ ಪ್ರಶ್ನೆಗಳಿವೆ…..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...