Homeಅಂತರಾಷ್ಟ್ರೀಯಬಾಂಗ್ಲಾದೇಶ: ರೋಹಿಂಗ್ಯಾ ನಿರಾಶ್ರಿತರ ಶಿಬಿರದಲ್ಲಿ ಬೆಂಕಿ - 15 ಮಂದಿ ಸಾವು, 400 ಮಂದಿ ಕಣ್ಮರೆ

ಬಾಂಗ್ಲಾದೇಶ: ರೋಹಿಂಗ್ಯಾ ನಿರಾಶ್ರಿತರ ಶಿಬಿರದಲ್ಲಿ ಬೆಂಕಿ – 15 ಮಂದಿ ಸಾವು, 400 ಮಂದಿ ಕಣ್ಮರೆ

- Advertisement -
- Advertisement -

ದಕ್ಷಿಣ ಬಾಂಗ್ಲಾದೇಶದ ರೋಹಿಂಗ್ಯಾ ನಿರಾಶ್ರಿತರ ಶಿಬಿರದಲ್ಲಿ ಸೋಮವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ ಮತ್ತು 400 ಮಂದಿ ಕಾಣೆಯಾಗಿದ್ದಾರೆ. ಸಾವಿರಾರು ಮನೆಗಳು ನಾಶವಾಗಿವೆ ಎಂದು ಅಧಿಕಾರಿಗಳು ಮತ್ತು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಕಾಕ್ಸ್ ಬಜಾರ್‌ನ ಬಾಲುಖಾಲಿ ಕ್ಯಾಂಪ್‌ನ ನಿವಾಸಿಯೊಬ್ಬರು ಚಿತ್ರೀಕರಿಸಿದ ವೀಡಿಯೊದಲ್ಲಿ ಈ ಭಯಂಕರ ದೃಶ್ಯಗಳು ಕಾಣಿಸಿಕೊಂಡಿವೆ. ಧಗಧಗಿಸುತ್ತಿರುವ ಬೆಂಕಿಯ ಮಧ್ಯೆ ಜನರು ತಪ್ಪಿಸಿಕೊಳ್ಳಲು ಮತ್ತು ತಮ್ಮ ವಸ್ತುಗಳನ್ನು ಕಾಪಾಡಿಕೊಳ್ಳಲು ಹೆಣಗಾಡುತ್ತಿರುವುದನ್ನು ಕಾಣಬಹುದಾಗಿದೆ.

“ಅಗ್ನಿಶಾಮಕ ದಳಗಳು, ರಕ್ಷಣಾ ದಳ ತಂಡಗಳು ಮತ್ತು ಸ್ವಯಂಸೇವಕರು ಬೆಂಕಿಯನ್ನು ನಿಯಂತ್ರಿಸಲು ಮತ್ತು ಮತ್ತಷ್ಟು ಹರಡುವುದನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ” ಎಂದು ಕಾಕ್ಸ್ ಬಜಾರ್‌ನಲ್ಲಿ ಯು.ಎನ್. ನಿರಾಶ್ರಿತರ ಸಂಸ್ಥೆ UNHCR ವಕ್ತಾರ ಲೂಯಿಸ್ ಡೊನೊವನ್ ತಿಳಿಸಿದ್ದಾರೆ.

ಇದನ್ನೂ ಓದಿ: ಜಾರಕಿಹೊಳಿ ಲೈಂಗಿಕ ಪ್ರಕರಣ: ಸದನದಲ್ಲಿ ಸಿಡಿ ಹಿಡಿದು ಕಾಂಗ್ರೆಸ್ ನಾಯಕರ ಪ್ರತಿಭಟನೆ

“ನಮ್ಮಲ್ಲಿ ಇನ್ನೂ 400 ಜನರು ಕಾಣಿಸುತ್ತಿಲ್ಲ, ಬಹುಶಃ ಎಲ್ಲೋ ಅವಶೇಷಗಳ ಅಡಿಯಲ್ಲಿದ್ದಾರೆ” ಎಂದು  ಹೇಳಿದ್ದಾರೆ. ಯುಎನ್‌ಹೆಚ್‌ಸಿಆರ್‌ ಪ್ರಕಾರ 560 ಜನರು ಗಾಯಗೊಂಡಿದ್ದಾರೆ ಮತ್ತು 45,000 ಜನರು ಇಲ್ಲಿಂದ ಸ್ಥಳಾಂತರಗೊಂಡಿದ್ದಾರೆ ಎಂದು ವರದಿಯಾಗಿದೆ

ಕೃಪೆ: PressTV

ದಕ್ಷಿಣ ಬಾಂಗ್ಲಾದೇಶದ ಮುಖ್ಯ ಶಿಬಿರಗಳಲ್ಲಿ ಒಂದು ದಶಲಕ್ಷಕ್ಕೂ ಹೆಚ್ಚು ರೋಹಿಂಗ್ಯಾಗಳು ವಾಸಿಸುತ್ತಿದ್ದಾರೆ. ಮಿಲಿಟರಿ ನೇತೃತ್ವದ ದೌರ್ಜನ್ಯದಿಂದ 2017 ರಲ್ಲಿ ಮ್ಯಾನ್ಮಾರ್‌ನಿಂದ ಪಲಾಯನಗೈದ ಬಹುಪಾಲು ಜನರನ್ನು “ಜನಾಂಗೀಯ ಉದ್ದೇಶದಿಂದ” ಹತ್ಯೆ ಮಾಡಿದ್ದಾರೆ ಎಂದು ಯುಎನ್ ತನಿಖಾಧಿಕಾರಿಗಳು  ಹೇಳಿದ್ದಾರೆ. ಆದರೆ ಮ್ಯಾನ್ಮಾರ್ ಇದನ್ನು ನಿರಾಕರಿಸಿದೆ.

“ಬೆಂಕಿ ಎಷ್ಟು ಬೇಗನೆ ಹರಡಿತು ಎಂದರೆ, ಏನಾಯಿತು ಎಂದು ತಿಳಿಯುವ ಮೊದಲೇ ಅದು ನಮ್ಮ ಮನೆಯನ್ನು ಆವರಿಸಿತ್ತು. ಜನರು ಕಿರುಚುತ್ತಾ ಓಡುತ್ತಿದ್ದರು. ಮಕ್ಕಳು ಕೂಡ ಮನೆ ಬಿಟ್ಟು ಓಡುತ್ತಾ, ತಮ್ಮ ಕುಟುಂಬಕ್ಕಾಗಿ ಅಳುತ್ತಿದ್ದರು” ಎಂದು ಸೇವ್ ದಿ ಚಿಲ್ಡ್ರನ್ ಸ್ವಯಂಸೇವಕ ತೆಯೆಬಾ ಬೇಗಮ್ ಹೇಳಿದ್ದಾರೆ.

PC: Reuters

ಕಾಣೆಯಾಗಿರುವವರನ್ನು ಅವಶೇಷಗಳ ಅಡಿಯಲ್ಲಿ ಹುಡುಕುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದು, ಈ ಪ್ರಮಾಣದ ಬೆಂಕಿ ಕಾಣಿಸಿಕೊಳ್ಳಲು ಕಾರಣವಾಗಿರುವ ಅಂಶವನ್ನು ತನಿಖೆ ಮಾಡುತ್ತಿದ್ದೇವೆ ಎಂದು ಬಾಂಗ್ಲಾದೇಶದ ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: ತುಮಕೂರು: ಸಮಾಧಿ ಗುಂಡಿಯಿಂದ ದಲಿತ ಶಿಶುವಿನ ಮೃತದೇಹ ಹೊರತೆಗೆಸಿ ಅಮಾನವೀಯತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...