Homeಅಂತರಾಷ್ಟ್ರೀಯಬಾಂಗ್ಲಾದೇಶ: ರೋಹಿಂಗ್ಯಾ ನಿರಾಶ್ರಿತರ ಶಿಬಿರದಲ್ಲಿ ಬೆಂಕಿ - 15 ಮಂದಿ ಸಾವು, 400 ಮಂದಿ ಕಣ್ಮರೆ

ಬಾಂಗ್ಲಾದೇಶ: ರೋಹಿಂಗ್ಯಾ ನಿರಾಶ್ರಿತರ ಶಿಬಿರದಲ್ಲಿ ಬೆಂಕಿ – 15 ಮಂದಿ ಸಾವು, 400 ಮಂದಿ ಕಣ್ಮರೆ

- Advertisement -
- Advertisement -

ದಕ್ಷಿಣ ಬಾಂಗ್ಲಾದೇಶದ ರೋಹಿಂಗ್ಯಾ ನಿರಾಶ್ರಿತರ ಶಿಬಿರದಲ್ಲಿ ಸೋಮವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ ಮತ್ತು 400 ಮಂದಿ ಕಾಣೆಯಾಗಿದ್ದಾರೆ. ಸಾವಿರಾರು ಮನೆಗಳು ನಾಶವಾಗಿವೆ ಎಂದು ಅಧಿಕಾರಿಗಳು ಮತ್ತು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಕಾಕ್ಸ್ ಬಜಾರ್‌ನ ಬಾಲುಖಾಲಿ ಕ್ಯಾಂಪ್‌ನ ನಿವಾಸಿಯೊಬ್ಬರು ಚಿತ್ರೀಕರಿಸಿದ ವೀಡಿಯೊದಲ್ಲಿ ಈ ಭಯಂಕರ ದೃಶ್ಯಗಳು ಕಾಣಿಸಿಕೊಂಡಿವೆ. ಧಗಧಗಿಸುತ್ತಿರುವ ಬೆಂಕಿಯ ಮಧ್ಯೆ ಜನರು ತಪ್ಪಿಸಿಕೊಳ್ಳಲು ಮತ್ತು ತಮ್ಮ ವಸ್ತುಗಳನ್ನು ಕಾಪಾಡಿಕೊಳ್ಳಲು ಹೆಣಗಾಡುತ್ತಿರುವುದನ್ನು ಕಾಣಬಹುದಾಗಿದೆ.

“ಅಗ್ನಿಶಾಮಕ ದಳಗಳು, ರಕ್ಷಣಾ ದಳ ತಂಡಗಳು ಮತ್ತು ಸ್ವಯಂಸೇವಕರು ಬೆಂಕಿಯನ್ನು ನಿಯಂತ್ರಿಸಲು ಮತ್ತು ಮತ್ತಷ್ಟು ಹರಡುವುದನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ” ಎಂದು ಕಾಕ್ಸ್ ಬಜಾರ್‌ನಲ್ಲಿ ಯು.ಎನ್. ನಿರಾಶ್ರಿತರ ಸಂಸ್ಥೆ UNHCR ವಕ್ತಾರ ಲೂಯಿಸ್ ಡೊನೊವನ್ ತಿಳಿಸಿದ್ದಾರೆ.

ಇದನ್ನೂ ಓದಿ: ಜಾರಕಿಹೊಳಿ ಲೈಂಗಿಕ ಪ್ರಕರಣ: ಸದನದಲ್ಲಿ ಸಿಡಿ ಹಿಡಿದು ಕಾಂಗ್ರೆಸ್ ನಾಯಕರ ಪ್ರತಿಭಟನೆ

“ನಮ್ಮಲ್ಲಿ ಇನ್ನೂ 400 ಜನರು ಕಾಣಿಸುತ್ತಿಲ್ಲ, ಬಹುಶಃ ಎಲ್ಲೋ ಅವಶೇಷಗಳ ಅಡಿಯಲ್ಲಿದ್ದಾರೆ” ಎಂದು  ಹೇಳಿದ್ದಾರೆ. ಯುಎನ್‌ಹೆಚ್‌ಸಿಆರ್‌ ಪ್ರಕಾರ 560 ಜನರು ಗಾಯಗೊಂಡಿದ್ದಾರೆ ಮತ್ತು 45,000 ಜನರು ಇಲ್ಲಿಂದ ಸ್ಥಳಾಂತರಗೊಂಡಿದ್ದಾರೆ ಎಂದು ವರದಿಯಾಗಿದೆ

ಕೃಪೆ: PressTV

ದಕ್ಷಿಣ ಬಾಂಗ್ಲಾದೇಶದ ಮುಖ್ಯ ಶಿಬಿರಗಳಲ್ಲಿ ಒಂದು ದಶಲಕ್ಷಕ್ಕೂ ಹೆಚ್ಚು ರೋಹಿಂಗ್ಯಾಗಳು ವಾಸಿಸುತ್ತಿದ್ದಾರೆ. ಮಿಲಿಟರಿ ನೇತೃತ್ವದ ದೌರ್ಜನ್ಯದಿಂದ 2017 ರಲ್ಲಿ ಮ್ಯಾನ್ಮಾರ್‌ನಿಂದ ಪಲಾಯನಗೈದ ಬಹುಪಾಲು ಜನರನ್ನು “ಜನಾಂಗೀಯ ಉದ್ದೇಶದಿಂದ” ಹತ್ಯೆ ಮಾಡಿದ್ದಾರೆ ಎಂದು ಯುಎನ್ ತನಿಖಾಧಿಕಾರಿಗಳು  ಹೇಳಿದ್ದಾರೆ. ಆದರೆ ಮ್ಯಾನ್ಮಾರ್ ಇದನ್ನು ನಿರಾಕರಿಸಿದೆ.

“ಬೆಂಕಿ ಎಷ್ಟು ಬೇಗನೆ ಹರಡಿತು ಎಂದರೆ, ಏನಾಯಿತು ಎಂದು ತಿಳಿಯುವ ಮೊದಲೇ ಅದು ನಮ್ಮ ಮನೆಯನ್ನು ಆವರಿಸಿತ್ತು. ಜನರು ಕಿರುಚುತ್ತಾ ಓಡುತ್ತಿದ್ದರು. ಮಕ್ಕಳು ಕೂಡ ಮನೆ ಬಿಟ್ಟು ಓಡುತ್ತಾ, ತಮ್ಮ ಕುಟುಂಬಕ್ಕಾಗಿ ಅಳುತ್ತಿದ್ದರು” ಎಂದು ಸೇವ್ ದಿ ಚಿಲ್ಡ್ರನ್ ಸ್ವಯಂಸೇವಕ ತೆಯೆಬಾ ಬೇಗಮ್ ಹೇಳಿದ್ದಾರೆ.

PC: Reuters

ಕಾಣೆಯಾಗಿರುವವರನ್ನು ಅವಶೇಷಗಳ ಅಡಿಯಲ್ಲಿ ಹುಡುಕುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದು, ಈ ಪ್ರಮಾಣದ ಬೆಂಕಿ ಕಾಣಿಸಿಕೊಳ್ಳಲು ಕಾರಣವಾಗಿರುವ ಅಂಶವನ್ನು ತನಿಖೆ ಮಾಡುತ್ತಿದ್ದೇವೆ ಎಂದು ಬಾಂಗ್ಲಾದೇಶದ ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: ತುಮಕೂರು: ಸಮಾಧಿ ಗುಂಡಿಯಿಂದ ದಲಿತ ಶಿಶುವಿನ ಮೃತದೇಹ ಹೊರತೆಗೆಸಿ ಅಮಾನವೀಯತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...