Homeಮುಖಪುಟ‘ಪ್ರಜಾಪ್ರಭುತ್ವ ನಾಶ ಮಾಡುವ ಮಸೂದೆ’: ದೆಹಲಿ ಮಸೂದೆ ವಿರುದ್ಧ ಖರ್ಗೆ ವಾಗ್ದಾಳಿ

‘ಪ್ರಜಾಪ್ರಭುತ್ವ ನಾಶ ಮಾಡುವ ಮಸೂದೆ’: ದೆಹಲಿ ಮಸೂದೆ ವಿರುದ್ಧ ಖರ್ಗೆ ವಾಗ್ದಾಳಿ

- Advertisement -
- Advertisement -

ಸೋಮವಾರ ಲೋಕಸಭೆಯಲ್ಲಿ ಅಂಗೀಕರಿಸಿದ ದೆಹಲಿಯ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರವನ್ನು ನೀಡುವ ಮಸೂದೆ ಮಂಗಳವಾರ ರಾಜ್ಯಸಭೆಯಲ್ಲಿ ಪದೇ ಪದೇ ಅಡೆತಡೆಗಳನ್ನು ಉಂಟುಮಾಡಿತು, ಪ್ರತಿಪಕ್ಷಗಳು ಇದನ್ನು “ಅಪಾಯಕಾರಿ” ಶಾಸನ ಎಂದು ಕರೆದವು.

‘ಚುನಾಯಿತ ಸರ್ಕಾರದ ಅಧಿಕಾರವನ್ನು ಕಸಿದುಕೊಳ್ಳುವ ಉದ್ದೇಶದಿಂದ ಈ ಮಸೂದೆ ತರಲಾಗಿದೆ’ ಎಂದು ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.

“ಇದು ತುಂಬಾ ಅಪಾಯಕಾರಿ ಮಸೂದೆ. ಇದು ಪ್ರಜಾಪ್ರಭುತ್ವವನ್ನು ಹಾಳು ಮಾಡುತ್ತದೆ. ನೀವು ಲೆಫ್ಟಿನೆಂಟ್ ಗವರ್ನರ್ ಅವರನ್ನು ‘ಸರ್ಕಾರ’ವನ್ನಾಗಿ ಮಾಡಿ, ಚುನಾಯಿತ ಜನಪ್ರತಿನಿಧಿಗಳನ್ನು ಅವರ ಸೇವಕರನ್ನಾಗಿ ಮಾಡಲು ಬಯಸುತ್ತೀರಿ” ಎಂದು ಅವರು ಕಿಡಿಕಾರಿದರು.

ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆ, 2021 ಅನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದ್ದು, ಇದೀಗ ರಾಜ್ಯಸಭೆಯಲ್ಲಿ ಕೈಗೆತ್ತಿಕೊಳ್ಳಲಾಗುವುದು.
ಚುನಾಯಿತ ಸರ್ಕಾರಕ್ಕೆ ಹೋಲಿಸಿದರೆ ಈ ಮಸೂದೆಯು ದೆಹಲಿಯ ಕೇಂದ್ರದ ಪ್ರತಿನಿಧಿಯಾದ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರವನ್ನು ನೀಡುತ್ತದೆ. ಇದು ಅರವಿಂದ್ ಕೇಜ್ರಿವಾಲ್ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ. 2013ರಲ್ಲಿ ಆಮ್ ಆದ್ಮಿ ಪಕ್ಷ ಮೊದಲ ಬಾರಿ ಅಧಿಕಾರಕ್ಕೆ ಬಂದಾಗಿನಿಂದ ಅದು ಮತ್ತು ಲೆಫ್ಟಿನೆಂಟ್ ಗವರ್ನರ್ ನಡುವೆ ಸಂಘರ್ಷ, ಜಗಳ ನಡೆದೇ ಇದೆ.

ಮಸೂದೆಯನ್ನು ಮಂಡಿಸಲು ಉಪ ಸಭಾಪತಿ ಹರಿವನಶ್ ನಾರಾಯಣ್ ಸಿಂಗ್ ಅವರು ಗೃಹ ಸಚಿವ ಜಿ. ಕಿಶನ್ ರೆಡ್ಡಿ ಅವರನ್ನು ಕೇಳಿದ ಕೂಡಲೇ ಅವ್ಯವಸ್ಥೆ ಭುಗಿಲೆದ್ದಿತು. ಎಎಪಿ ಸದಸ್ಯ ಸಂಜಯ್ ಸಿಂಗ್ ಅವರು ಮಂಡನೆಗೆ ಅವಕಾಶ ನೀಡುವುದನ್ನು ವಿರೋಧಿಸಿದರು, ತನ್ನ ನೋಟಿಸ್ ಸದನದಲ್ಲಿ ಬಾಕಿ ಇದೆ, ಅದರ ಬಗ್ಗೆ ಚರ್ಚೆ ಆಗಬೇಕು ಎಂದು ಹೇಳಿದರು.

ಮಸೂದೆಯ ಮೇಲಿನ ‘ಮೋಷನ್’ ಮಂಡಿಸಿದ ನಂತರ ಅವರ ನೋಟಿಸ್ ಅನ್ನು ಪರಿಗಣಿಸಲಾಗುವುದು ಎಂದು ಉಪಾಧ್ಯಕ್ಷರು ಎಎಪಿ ಸದಸ್ಯರಿಗೆ ಭರವಸೆ ನೀಡಿದರು, ಆದರೆ ಸಂಜಯ್ ಸಿಂಗ್ ಇದನ್ನು “ಅಸಂವಿಧಾನಿಕ” ಎಂದು ಕರೆದರು.

ಶಾಸಕಾಂಗವು ರಚಿಸುವ ಯಾವುದೇ ಕಾನೂನಿನಲ್ಲಿ “ಸರ್ಕಾರ” ಎಂಬ ಪದವು ಲೆಫ್ಟಿನೆಂಟ್ ಗವರ್ನರ್ ಅನ್ನು ಅರ್ಥೈಸುತ್ತದೆ ಮತ್ತು ದೆಹಲಿ ಸರ್ಕಾರವು ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ಅವರ ಅಭಿಪ್ರಾಯವನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೊಸ ಮಸೂದೆ ಸ್ಪಷ್ಟಪಡಿಸುತ್ತದೆ.

ಅರವಿಂದ್ ಕೇಜ್ರಿವಾಲ್ ಅವರು ಲೋಕಸಭೆಯಲ್ಲಿ ಮಸೂದೆ ಅಂಗೀಕಾರವನ್ನು ದೆಹಲಿ ಜನರಿಗೆ “ಅವಮಾನ” ಎಂದು ಕರೆದಿದ್ದಾರೆ. “ಮಸೂದೆ ಜನರಿಂದ, ಮತ ಚಲಾಯಿಸಿದವರಿಂದ ಅಧಿಕಾರವನ್ನು ಕಿತ್ತುಕೊಳ್ಳುತ್ತದೆ ಮತ್ತು ಸೋಲಿಸಲ್ಪಟ್ಟವರಿಗೆ ದೆಹಲಿಯನ್ನು ನಡೆಸುವ ಅಧಿಕಾರವನ್ನು ನೀಡುತ್ತದೆ. ಬಿಜೆಪಿ ಜನರಿಗೆ ಮೋಸ ಮಾಡಿದೆ” ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ಕೇಂದ್ರದ ಇಂಟರ್ನೆಟ್ ನಿಯಂತ್ರಣ: ಮಾಧ್ಯಮ ಸ್ವಾತಂತ್ಯ್ರ & ಮಾಹಿತಿ ಹಕ್ಕಿಗೆ ಧಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...