Homeಫ್ಯಾಕ್ಟ್‌ಚೆಕ್ಭಾರತದ ಮಾನವ ಹಕ್ಕುಗಳು ಬಗ್ಗೆ ಯುಎಸ್ ರಕ್ಷಣಾ ಕಾರ್ಯದರ್ಶಿ ಹೇಳಿಕೆ: ಸತ್ಯ ಹೇಳಿದ ಎನ್‌ಡಿಟಿವಿ ಟಾರ್ಗೆಟ್...

ಭಾರತದ ಮಾನವ ಹಕ್ಕುಗಳು ಬಗ್ಗೆ ಯುಎಸ್ ರಕ್ಷಣಾ ಕಾರ್ಯದರ್ಶಿ ಹೇಳಿಕೆ: ಸತ್ಯ ಹೇಳಿದ ಎನ್‌ಡಿಟಿವಿ ಟಾರ್ಗೆಟ್ ಮಾಡಿದ ಬಿಜೆಪಿಗಳು!

- Advertisement -
- Advertisement -

ಕಳೆದ ವಾರ ಅಮೆರಿಕಾದ ರಕ್ಷಣಾ ಕಾರ್ಯದರ್ಶಿ ಜನರಲ್ (ನಿವೃತ್ತ) ಲಾಯ್ಡ್ ಜೆ. ಆಸ್ಟಿನ್ ಅವರು ಮೂರು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದರು. ಮಾನವ ಹಕ್ಕುಗಳ ವಿಷಯದ ಬಗ್ಗೆ ಭಾರತೀಯ ಮಂತ್ರಿಗಳೊಂದಿಗೆ ಚರ್ಚಿಸಿದ್ದೇನೆ ಎಂದು ಯುಎಸ್ ರಕ್ಷಣಾ ಕಾರ್ಯದರ್ಶಿ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿತ್ತು. (ಇದನ್ನು ಆಧರಿಸಿ ನಾನುಗೌರಿ.ಕಾಂ ಕೂಡ ವರದಿ ಮಾಡಿತ್ತು)

ಸಾಮಾಜಿಕ ಮಾಧ್ಯಮದಲ್ಲಿ ಎನ್‌ಡಿಟಿವಿ ಸುಳ್ಳು ವರದಿ ಮಾಡಿದೆ, ಅದು ಪಾಕಿಸ್ತಾನದ ಏಜೆಂಟ್ ಎಂದೆಲ್ಲ ಬಿಜೆಪಿ ಬೆಂಬಲಿಗರು ಎಂದು ಟೀಕಿಸಿದ್ದಾರೆ. ಎಎನ್‌ಐ ಟ್ವೀಟ್ ಒಂದರಲ್ಲಿ ಅಂತಹ ಚರ್ಚೆ ನಡೆದಿಲ್ಲ ಎಂದು ಹೇಳಿದ್ದನ್ನು ಆಧಾರವಾಗಿ ಇಟ್ಟುಕೊಂಡು ಎನ್‌ಡಿಟಿವಿ ಮೇಲೆ ಮುಗಿ ಬಿದ್ದಿದ್ದಾರೆ.

ಅವಿನಾಶ್ ಶ್ರೀವಾಸ್ತವ ಎನ್‌ಡಿಟಿವಿಯ ವರದಿಯನ್ನು ಎಎನ್‌ಐ ಟ್ವೀಟ್‌ನೊಂದಿಗೆ ಹೋಲಿಕೆ ಮಾಡಿದ್ದಾರೆ, ಎಎನ್‌ಐ ಟ್ವೀಟ್‌ನಲ್ಲಿ, ‘ಭಾರತೀಯ ಮೂಲಗಳು’ ತಿಳಿಸಿರುವಂತೆ ಮಾನವ ಹಕ್ಕುಗಳ ಕುರಿತು ಚರ್ಚೆ ನಡೆದಿಲ್ಲ ಎಂದಿದೆ.

ಇನ್ನೊಬ್ಬ ಬಳಕೆದಾರ ಅತುಲ್ ಅಹುಜಾ ಎನ್‌ಡಿಟಿವಿ ‘ಪಾಕಿಸ್ತಾನ ಮೀಡಿಯಾ ಹೌಸ್’ ಎಂದು ಬರೆದಿದ್ದಾರೆ. ಇನ್ನೂ ಹಲವರು ಇದೇ ಬಗೆಯ ಸಂದೇಶ ಹರಡಿದ್ದಾರೆ.

ಫ್ಯಾಕ್ಟ್-ಚೆಕ್

ಎನ್‌ಡಿಟಿವಿ ಮಾತ್ರ ಈ ರೀತಿಯ ಸುದ್ದಿ ವರದಿ ಮಾಡಿಲ್ಲ. ಹಲವಾರು ಮಾಧ್ಯಮಗಳು ಎನ್‌‌ಡಿಟಿವಿಯಂತೆಯೇ ವರದಿ ಮಾಡಿವೆ. ಆದರೆ ಬಿಜೆಪಿ ಬೆಂಬಲಿಗರಿಗೆ ಎನ್‌ಡಿಟಿವಿ, ದಿ ವೈರ್, ನ್ಯೂಸ್‌ಕ್ಲಿಕ್, ದಿ ಪ್ರಿಂಟ್ ನಂತಹ ಸ್ವತಂತ್ರ ಮಾಧ್ಯಮಗಳನ್ನು ಕಂಡರೆ ಆಗದೇನೋ? ಅದಿರಲಿ….

ಅಮೆರಿಕದ ರಕ್ಷಣಾ ಕಾರ್ಯದರ್ಶಿಯೊಂದಿಗಿನ ಸಭೆಯಲ್ಲಿ ಮಾನವ ಹಕ್ಕುಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ವಾಸ್ತವವಾಗಿ, ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ‘ಉನ್ನತ ಮಟ್ಟದ ಮೂಲಗಳನ್ನು’ ಉಲ್ಲೇಖಿಸಿ ಎಎನ್‌ಐ ಮಾಡಿದ ಟ್ವೀಟ್ ಅನ್ನು ಸಾಮಾಜಿಕ ಮಾಧ್ಯಮದ ಬಿಜೆಪಿ ಬೆಂಬಲಿಗ ಬಳಕೆದಾರರು ಹಂಚಿಕೊಂಡಿದ್ದಾರೆ.
ಆದರೆ ಅದಕ್ಕೂ ಮೊದಲು ಇದೇ ಎಎನ್‌ಐ ‘ವಿಶ್ವಾಸಾರ್ಹ’ ಮೂಲಗಳನ್ನು ಉಲ್ಲೇಖಿಸಿ, “ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಮತ್ತು ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ನಡುವೆ ನಡೆದ ಒಂದು ಗಂಟೆಯ ಚರ್ಚೆಯಲ್ಲಿ ಮಾನವ ಹಕ್ಕುಗಳ ವಿಷಯವೂ ಸಹ ಕಾಣಿಸಿಕೊಂಡಿದೆ’ ಎಂದು ವರದಿ ಮಾಡಿದೆ.

ಮೇಲಿನ ವರದಿಯ ಎರಡು ದಿನಗಳ ನಂತರ, ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಜೆ ಆಸ್ಟಿನ್ ಅವರೊಂದಿಗೆ ಭಾರತದಲ್ಲಿ ಮಾನವ ಹಕ್ಕುಗಳ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ‘ಉನ್ನತ ಮಟ್ಟದ ಭಾರತೀಯ ಮೂಲಗಳು’ ಖಚಿತಪಡಿಸುತ್ತವೆ ಎಂದು ಎಎನ್‌ಐ ಹೇಳಿಕೊಂಡಿದೆ. ಈ ಎರಡನೇ ಟ್ವೀಟ್ ಅಷ್ಟೇ ಬಿಜೆಪಿ ಬೆಂಬಲಿಗರಿಗೆ ಮುಖ್ಯವಾಗಿದೆ.

ಭಾರತದಲ್ಲಿ ಮಾನವ ಹಕ್ಕುಗಳ ವಿಷಯವನ್ನು ಅಮೆರಿಕದ ರಕ್ಷಣಾ ಕಾರ್ಯದರ್ಶಿಯೊಂದಿಗೆ ಚರ್ಚಿಸಲಾಗಿದೆಯೇ?

ಲಾಯ್ಡ್ ಜೆ ಆಸ್ಟಿನ್ ಭಾಗವಹಿಸಿದ ನಡೆದ ಸಮ್ಮೇಳನದ ಸಂಪೂರ್ಣ ಪ್ರತಿಲೇಖನವನ್ನು ಯುಎಸ್ ರಕ್ಷಣಾ ಇಲಾಖೆ ಅಪ್‌ಲೋಡ್ ಮಾಡಿದೆ. ಪ್ರಧಾನಿ ಮೋದಿ ಅವರೊಂದಿಗಿನ ಸಂವಾದದ ಸಂದರ್ಭದಲ್ಲಿ ಭಾರತದಲ್ಲಿ, ವಿಶೇಷವಾಗಿ ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧ ಮಾನವ ಹಕ್ಕುಗಳ ಉಲ್ಲಂಘನೆಯ ವಿಷಯವನ್ನು ಎತ್ತಿದ್ದೀರಾ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿಯನ್ನು ಕೇಳಲಾಯಿತು.

ಪ್ರಧಾನ ಮಂತ್ರಿಯೊಂದಿಗೆ ಚರ್ಚಿಸಲು ತನಗೆ ಅವಕಾಶ ಸಿಗಲಿಲ್ಲ ಎಂದು ಆಸ್ಟಿನ್ ಉತ್ತರಿಸಿದರು ಆದರೆ ಅವರು ಕ್ಯಾಬಿನೆಟ್‌ನ ಇತರ ಸದಸ್ಯರೊಂದಿಗೆ ಸಂಭಾಷಣೆ ನಡೆಸಿದರು ಎಂದು ಹೇಳಿದ್ದಾರೆ ಎಂದು ಅಮೆರಿಕ ರಕ್ಷಣಾ ಇಲಾಖೆ ಅಪ್‌ಲೋಡ್ ಮಾಡಿದೆ.

ಅವರ ಉತ್ತರದ ವೀಡಿಯೊವನ್ನು ಸಹ ಕೆಳಗೆ ನೋಡಬಹುದು.

ಮಾನವ ಹಕ್ಕುಗಳ ಸಮಸ್ಯೆಯನ್ನು ಸಮ್ಮೇಳನದಲ್ಲಿ ತರಲಾಗಿಲ್ಲ ಎಂದು ಹೇಳಲು ಎಎನ್‌ಐ ‘ಮೂಲಗಳನ್ನು’ ಉಲ್ಲೇಖಿಸಿದೆ. ಚರ್ಚೆ ನಡೆದಿಲ್ಲ ಎಂದು ಭಾರತ ಸರ್ಕಾರ ನಿರಾಕರಣೆ ಮಾಡಿದ್ದು ದಾಖಲೆಯಲ್ಲಿಲ್ಲ. ಮತ್ತೊಂದೆಡೆ, ಅಮೆರಿಕವು ಆಸ್ಟಿನ್ ಹೇಳಿಕೆಯನ್ನು ದಾಖಲೆಯಲ್ಲಿ ಇರಿಸಿದೆ.

ಈ ದಾಖಲೆಯನ್ನು ಭಾರತ ಸರ್ಕಾರ ನಿರಾಕರಿಸಬೇಕಿದೆ ಎಂದು ಹಲವಾರು ಪತ್ರಕರ್ತರು ಗಮನಸೆಳೆದಿದ್ದಾರೆ.

ಅನೇಕ ಸುದ್ದಿವಾಹಿನಿಗಳು ನಡೆಸಿದ ವರದಿಗೆ ಎನ್‌ಡಿಟಿವಿಯನ್ನು ಮಾತ್ರ ಅನ್ಯಾಯವಾಗಿ ಗುರಿಯಾಗಿಸಲಾಗಿತ್ತು ಮಾತ್ರವಲ್ಲ, ಎನ್‌ಡಿಟಿವಿಯ ವರದಿ ತಪ್ಪಾಗಿಲ್ಲ ಎಂಬುದು ಸ್ಪಷ್ಟವಾಗಿದ್ದರೂ ಅದನ್ನು ಟೀಕಿಸಲಾಗಿತು. ಭಾರತದಲ್ಲಿ ಮಾನವ ಹಕ್ಕುಗಳ ಕುರಿತ ವಿಷಯವನ್ನು ಭಾರತೀಯ ಕ್ಯಾಬಿನೆಟ್ ಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಜೆ ಆಸ್ಟಿನ್ ಹೇಳಿಕೆ ದಾಖಲೆಯಲ್ಲಿದೆ.

ಆದರೆ ಎಎನ್‌ಐ ಮೊದಲಿಗೆ ಸರಿಯಾಗಿಯೇ ಟ್ವೀಟ್ ಮಾಡಿ, ನಂತರ ‘ಭಾರತ ಸರ್ಕಾರದ ಉನ್ನತ ಮೂಲಗಳನ್ನು’ ಆಧರಿಸಿ ಚರ್ಚೆ ನಡೆದಿಲ್ಲ ಎಂದಿದೆ. ಆದರೆ ಸರ್ಕಾರ ಚರ್ಚೆ ನಡೆದಿದೆ ಎಂಬುದನ್ನು ನಿರಾಕರಿಸಿಲ್ಲ.

ಅಂದರೆ, ಬೇಕೆಂತಲೇ ಎನ್‌ಡಿಟಿವಿ ವಿರುದ್ಧ ಬಿಜಿಪಿ ಬೆಂಬಲಿಗರು ಜಾಲತಾಣದಲ್ಲಿ ಅಪಪ್ರಚಾರ ಮಾಡಿದ್ದಾರೆ,

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ; ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...