Homeಮುಖಪುಟಕೇರಳ: ಮೊದಲ ಬಾರಿ ಚುನಾವಣಾ ಕಣದಲ್ಲಿ ತೃತೀಯಲಿಂಗಿ ಅಭ್ಯರ್ಥಿ ಅನನ್ಯಾ

ಕೇರಳ: ಮೊದಲ ಬಾರಿ ಚುನಾವಣಾ ಕಣದಲ್ಲಿ ತೃತೀಯಲಿಂಗಿ ಅಭ್ಯರ್ಥಿ ಅನನ್ಯಾ

ಅನನ್ಯಾ ಕುಮಾರಿ ಅಲೆಕ್ಸ್, ಕೇರಲದ ಮೊದಲ ತೃತೀಯಲಿಂಗಿ ರೇಡಿಯೋ ಜಾಕಿ ಮತ್ತು ಸುದ್ದಿ ನಿರೂಪಕರಾಗುವ ಮೂಲಕ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ.

- Advertisement -
- Advertisement -

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ತೃತೀಯಲಿಂಗಿಯೊಬ್ಬರು ಸ್ಫರ್ಧಿಸಲಿದ್ದಾರೆ. 28 ವರ್ಷದ ಅನನ್ಯಾ ಕುಮಾರಿ ಅಲೆಕ್ಸ್ ಅವರು ಕೇರಳದ ವೆಂಗಾರಾ ಕ್ಷೇತ್ರದಿಂದ ಸ್ಫರ್ಧಿಸಲಿದ್ದು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಮೊದಲ ತೃತೀಯಲಿಂಗಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮಲ್ಲಾಪುರಂನ ವೆಂಗಾರಾ ಕ್ಷೇತ್ರದಲ್ಲಿ ಡೆಮಾಕ್ರೆಟಿಕ್ ಸೋಷಿಯಲ್ ಜಸ್ಟಿಸ್ ಪಾರ್ಟಿ (DSJP)ಯಿಂದ ಸ್ಫರ್ಧಿಸಲಿದ್ದಾರೆ. ಈ ಕ್ಷೇತ್ರದಲ್ಲಿ ಪ್ರಭಾವಿಯಾಗಿರುವ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಅಭ್ಯರ್ಥಿ ಪಿ.ಕೆ.ಕುನ್ಹಾಲಿಕುಟ್ಟಿ ಮತ್ತು ಎಲ್‌ಡಿಎಫ್ ಅಭ್ಯರ್ಥಿ ಪಿ.ಜಿಜಿ ವಿರುದ್ಧ ಅವರು ಕಣಕ್ಕಿಳಿದಿದ್ದಾರೆ.

ಅನನ್ಯಾ ಕುಮಾರಿ ಅಲೆಕ್ಸ್, ಕೇರಲದ ಮೊದಲ ತೃತೀಯಲಿಂಗಿ ರೇಡಿಯೋ ಜಾಕಿ ಮತ್ತು ಸುದ್ದಿ ನಿರೂಪಕರಾಗುವ ಮೂಲಕ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮಾತಿನ ಮೂಲಕ ದೇಹದ ಅಸ್ಪೃಶ್ಯತೆ ಮೀರಿದ ಟ್ರಾನ್ಸ್ ಜೆಂಡರ್ ರೇಡಿಯೊ ಜಾಕಿ ಪ್ರಿಯಾಂಕಾ

ಸಮಾಜದಲ್ಲಿ ಪುರುಷರು ಮತ್ತು ಮಹಿಳೆಯರಂತೆ ಸಮನಾಗಿ ಟ್ರಾನ್ಸ್‌ಜೆಂಡರ್‌ಗಳು ಸಹ ಉತ್ತಮ ನಾಯಕರಾಗಬಹು ಎಂಬುದನ್ನು ಸಾಬೀತುಪಡಿಸಲು ಬಯಸುತ್ತೇನೆ ಎಂದು ಅನನ್ಯಾ ಕುಮಾರಿ ಹೇಳಿದ್ದಾರೆ.

“ನಾವು ಯಾವುದೇ ಗಂಡು ಅಥವಾ ಹೆಣ್ಣಿನಂತೆಯೇ ಸಾಮರ್ಥ್ಯಗಳನ್ನು ಹೊಂದಿದ್ದೇವೆ. ನಮಗೆ ಯಾವುದೇ ಸಹಾನುಭೂತಿ ಬೇಡ. ಇತರರಂತೆ ನಮಗೂ ಸಮಾನವಾಗಿ ಪರಿಗಣಿಸಿದರೆ ಸಾಕು. ತೃತೀಯಲಿಂಗಿ ಸಮುದಾಯದವರು ಸಹ ಇತರರಂತೆ ಪ್ರತಿಭಾವಂತರು ಮತ್ತು ಯಾವುದೇ ಕ್ಷೇತ್ರದಲ್ಲಿ ತಮ್ಮನ್ನು ಪ್ರತಿನಿಧಿಸಬಹುದು” ಎಂದು ಅನನ್ಯಾ ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅನನ್ಯಾ ಅವರ ನಿರ್ಧಾರವನ್ನು ಅವರ ಪ್ರತಿಸ್ಫರ್ಧಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಅಭ್ಯರ್ಥಿ ಪಿ.ಕೆ.ಕುನ್ಹಾಲಿಕುಟ್ಟಿ ಸ್ವಾಗತಿಸಿದ್ದಾರೆ. ತೃತೀಯಲಿಂಗಿಗಳು ಸಹ ಸಮಾಜದ ಭಾಗವಾಗಿದ್ದಾರೆ ಮತ್ತು ಚುನಾವಣೆಯಲ್ಲಿ ಹೋರಾಡುವ ಹಕ್ಕನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್ 1 ವರ್ಷ: ಬೀದಿ ವ್ಯಾಪಾರಿಗಳಿಗೆ ಇನ್ನೂ ಕಾಡುತ್ತಿರುವ ಲಾಕ್‌ಡೌನ್ ಭೂತ

ಚುನಾವಣಾ ಪ್ರಚಾರ ಮಾಡುವಾಗ ಯಾವುದೇ ತಾರತಮ್ಯವನ್ನು ಎದುರಿಸದ ಕಾರಣ ಚುನಾವಣೆಯಲ್ಲಿ ಮಾತ್ರವಲ್ಲದೆ ಜನರ ಹೃದಯವನ್ನೂ ಗೆಲ್ಲುವ ಭರವಸೆ ಇದೆ ಎಂದು ಅನನ್ಯಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆದರೂ, ತೃತೀಯಲಿಂಗಿ ಸಮುದಾಯದವರು ತಮ್ಮ ಮನೆಗಳಲ್ಲಿ ತಾರತಮ್ಯವನ್ನು ಎದುರಿಸುತ್ತಿದ್ದಾರೆ. ಚುನಾವಣೆಯಲ್ಲಿ ತಾನು ಗೆದ್ದರೆ, ಇವರುಗಳು ತಮ್ಮ ಮನೆಗಳಲ್ಲಿ ಮತ್ತು ಸಮಾಜದಲ್ಲಿ ಸುರಕ್ಷತವಾಗಿರಲು ಕೆಲಸ ಮಾಡುತ್ತೇನೆ ಎಂದಿದ್ದಾರೆ.

ನೆರೆಯ ರಾಜ್ಯ ತಮಿಳುನಾಡಿನಲ್ಲಿ, ಮಧುರೈ ದಕ್ಷಿಣ ಕ್ಷೇತ್ರದಿಂದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭಾರತಿ ಕನ್ನಮ್ಮ ಎಂಬ ತೃತೀಯಲಿಂಗಿ ಸ್ಪರ್ಧಿಸುತ್ತಿದ್ದು, ಮಧುರೈಯನ್ನು ಮಾದರಿ ನಗರವನ್ನಾಗಿ ಮಾಡುವ ಭರವಸೆ ನೀಡಿದ್ದಾರೆ.


ಇದನ್ನೂ ಓದಿ: ಹೆಚ್ಚು ಪಡಿತರಕ್ಕಾಗಿ 20 ಮಕ್ಕಳನ್ನು ಹೆರಬಾರದೆ..? ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ತಿರತ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...