Homeಕರ್ನಾಟಕಬಿಡಿಎ ಲೇಔಟ್‌‌ಗಾಗಿ ಕೃಷಿ ಭೂಮಿ ಒತ್ತುವರಿಗೆ ವಿರೋಧ - ರೈತರಿಂದ ಪ್ರತಿಭಟನೆ

ಬಿಡಿಎ ಲೇಔಟ್‌‌ಗಾಗಿ ಕೃಷಿ ಭೂಮಿ ಒತ್ತುವರಿಗೆ ವಿರೋಧ – ರೈತರಿಂದ ಪ್ರತಿಭಟನೆ

- Advertisement -
- Advertisement -

ಡಾ.ಕೆ.ಶಿವರಾಮ ಕಾರಂತ್ ಲೇಔಟ್‌‌‌‌‌ಗಾಗಿ ಭೂಮಿಯನ್ನು ಕಳೆದುಕೊಳ್ಳಲಿರುವ ರೈತರು ಮತ್ತು ಭೂಮಾಲೀಕರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಯೋಜನೆಯನ್ನು ಕೈಬಿಡಬೇಕೆಂದು ಒತ್ತಾಯಿಸಿ ಬುಧವಾರ ಬೆಂಗಳೂರಿನ ಮೌರ್ಯ ಸರ್ಕಲ್‌ ಬಳಿ ಪ್ರತಿಭಟನೆ ನಡೆಸಿದರು.

ಲೇಔಟ್‌ಗೆ ಸಂಬಂಧಿಸಿದಂತೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ನೇಮಿಸಿದ್ದ ಮೂರು ಸದಸ್ಯರ ಸಮಿತಿಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ರೈತರು, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆಯು ಅರಮನೆ ಮೈದಾನದ 9ನೇ ಗೇಟ್ ಬಳಿಯ ಬಿಡಿಎ ಕೇಂದ್ರ ಕಚೇರಿ ಮುಂದೆ ಆಯೋಜನೆಗೊಂಡಿತ್ತಾದರೂ, ಅಲ್ಲಿ ಪ್ರತಿಭಟನೆ ನಡೆಸಲು ಪೊಲೀಸರು ಅನುಮತಿ ನೀಡಿರಲಿಲ್ಲ. ಹೀಗಾಗಿ ಪ್ರತಿಭಟನೆ ಮೌರ್ಯಸರ್ಕಲ್ ಬಳಿಗೆ ಸ್ಥಳಾಂತರಗೊಂಡಿದೆ.

ಇದನ್ನೂ ಓದಿ: ಲಾಕ್‌ಡೌನ್ 1 ವರ್ಷ: ಬೀದಿ ವ್ಯಾಪಾರಿಗಳಿಗೆ ಇನ್ನೂ ಕಾಡುತ್ತಿರುವ ಲಾಕ್‌ಡೌನ್ ಭೂತ

ಬಿಡಿಎ ವಿರುದ್ದ ರೈತರ ಆಕ್ರೋಶ ಹೆಚ್ಚುತ್ತಿರುವುದನ್ನು ಮನಗಂಡಿದ್ದ ಬಿಡಿಎ ಅಧ್ಯಕ್ಷ, ಯಲಹಂಕ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಅವರು ನಿನ್ನೆ ರಾತ್ರಿಯೇ ಲೇಔಟ್‌‌ ಇರುವ 16 ಹಳ್ಳಿಯ ರೈತರಿಗೆ ಪ್ರತಿಭಟನೆಗೆ ತೆರಳದಂತೆ ಪೊಲೀಸರ ಮುಖಾಂತರ ಕೇಳಿಕೊಂಡಿದ್ದರು. ಇಂದು ಮುಂಜಾನೆ ಕೂಡಾ ಪೊಲೀಸರು ಪ್ರತಿಭಟನೆಗೆ ತೆರಳದಂತೆ ರೈತರಿಗೆ ತಡೆ ಒಡ್ಡಿದ್ದರು ಎನ್ನಲಾಗಿದೆ. ಆದರೂ ಇದನ್ನು ಮೀರಿ ರೈತರು ಬೆಂಗಳೂರಿನ ಮೌರ್ಯ ಸರ್ಕಲ್‌ಗೆ ತಲುಪಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಹೋರಾಟಗಾರರಾದ ಪ್ರಸನ್ನ ಲಕ್ಷ್ಮೀಪುರ, “ಪ್ರತಿಭಟನೆಗೆ ಹೊರಡುತ್ತಿದ್ದ ರೈತರನ್ನು ಅವರ ಹಳ್ಳಿಯಲ್ಲೆ ತಡೆದು ಲೇಔಟ್‌ಗೆ ಯಾರದ್ದೂ ವಿರೋಧವಿಲ್ಲ ಎಂದು ತೋರಿಸಿಕೊಳ್ಳುವ ಉಪಾಯವನ್ನು ಶಾಸಕ ವಿಶ್ವನಾಥ್‌ ಹೂಂದಿದ್ದರು. ಅದಕ್ಕಾಗಿ ಹಳ್ಳಿಗಳಲ್ಲೇ ರೈತರನ್ನು ಪೊಲೀಸರು ತಡೆದಿದ್ದರು, ಆದರೆ ಇಲ್ಲಿ ಯಾವ ರೈತರು ಲೇಔಟ್ ಪರವಾಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಜಾವೇದ್ ಅಖ್ತರ್ V/s ಕಂಗನಾ: ವಾರೆಂಟ್ ಪ್ರಶ್ನಿಸಿ ಅರ್ಜಿ ಸಲ್ಲಿಸಿದ ನಟಿ

“ರೈತರು ತಮ್ಮ ಭೂಮಿಯನ್ನು ಲೇಔಟ್‌‌ಗೆ ನೀಡುವುದಿಲ್ಲ ಎಂದು ಹೋರಾಟ ಮಾಡುತ್ತಿದ್ದಾರೆ. ನಮ್ಮ ಬಳಿಯಿಂದ ಭೂಮಿಯನ್ನು ಪಡೆದುಕೊಂಡು ಬೇರೆಯವರಿಗೆ ಮನೆ ಕಟ್ಟಲು ನೀಡುತ್ತಿದ್ದಾರೆ. ಹೀಗೆ ನೀಡಲು ಬಿಡಿಎ ಯಾಕೆ ಬೇಕು? ಜನರೆ ನೇರವಾಗಿ ತಮಗೆ ಬೇಕಾದವರಿಗೆ ಭೂಮಿ ನೀಡುವುದಿಲ್ಲವೆ?. ಬಿಡಿಎ ಪ್ರಸ್ತುತ ಅಲ್ಲಿರುವ ಮನೆಗಳನ್ನು ಒಡೆದು ಹಾಕಲು ಹೊರಟಿದೆ. ಅಲ್ಲಿರುವ ಮನೆಗಳನ್ನು ಒಡೆದು ಹಾಕಿ ಅಲ್ಲಿ ಬೇರೆ ಮನೆಗಳನ್ನು ಕಟ್ಟಿ ಬೇರೆ ಜನರಿಗೆ ಮನೆ ನೀಡುತ್ತೇವೆ ಅಂದರೆ ಅದು ಅನ್ಯಾಯವಲ್ಲವೆ?” ಎಂದು ಪ್ರಶ್ನಿಸಿದ್ದಾರೆ.

“ಬಿಡಿಎ ಉದ್ದೇಶವೆ ಸೈಟುಗಳನ್ನು ಮಾರಿ ಮನೆ ಕಟ್ಟುವುದಾದರೆ, ಸೈಟುಗಳಲ್ಲಿ ಈಗಾಗಲೆ ಇರುವ ಮನೆಗಳನ್ನು ಒಡೆಯುವುದು ಯಾಕೆ? ಅದು ಅಲ್ಲದೆ ರೈತರೊಂದಿಗೆ ಬಲವಂತವಾಗಿ ಜಮೀನನ್ನು ಪಡೆಯುವುದು ಯಾತಕ್ಕಾಗಿ? ಇಲ್ಲಿನ ಯಾವುದೇ ರೈತರಿಗೆ ತಮ್ಮ ಭೂಮಿಯನ್ನು ಬಿಡಿಎಗೆ ನೀಡಲು ಮನಸ್ಸಿಲ್ಲ. ಈ ಹಿನ್ನಲೆಯಲ್ಲಿ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶದಲ್ಲಿ ಮತ್ತಿಬ್ಬರು ಯುವ ಸಹೋದರಿಯರ ಸಂಶಯಾಸ್ಪದ ಸಾವು: ಕೊಲೆ ಶಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....