Homeಮುಖಪುಟಬಿಹಾರ ವಿಧಾನಸಭೆಯಲ್ಲಿ ವಿಪಕ್ಷ ಶಾಸಕರ ಮೇಲೆ ಪೊಲೀಸರಿಂದ ತೀವ್ರ ಹಲ್ಲೆ ಆರೋಪ

ಬಿಹಾರ ವಿಧಾನಸಭೆಯಲ್ಲಿ ವಿಪಕ್ಷ ಶಾಸಕರ ಮೇಲೆ ಪೊಲೀಸರಿಂದ ತೀವ್ರ ಹಲ್ಲೆ ಆರೋಪ

ಪ್ರತಿಪಕ್ಷದ ಶಾಸಕರನ್ನು ಬಿಹಾರ ವಿಧಾನಸಭೆಯಲ್ಲಿ ಪೊಲೀಸರು ಎಳೆದೊಯ್ದರು, ಹಲ್ಲೆ ನಡೆಸಿದರು... ಕೆಲವು ಶಾಸಕರ ತಲೆಗೆ, ಕೈ ಕಾಲಿಗೆ ಗಾಯಗಳಾದವು... ಹಲವರನ್ನು ಸ್ಟ್ರೆಚರ್ ಮೇಲೆ ಒಯ್ಯಬೇಕಾಗಿತ್ತು..

- Advertisement -
- Advertisement -

ಮಂಗಳವಾರ ಬಿಹಾರ ರಾಜ್ಯ ಪೊಲೀಸ್ ಪಡೆಗೆ ಹೆಚ್ಚಿನ ಅಧಿಕಾರವನ್ನು ನೀಡುವ ಮಸೂದೆಯ ಮೇಲೆ ಚರ್ಚೆ ನಡೆಯುವ ವೇಳೆ ನಿರಾಯುಧ ಶಾಸಕರನ್ನು ಸದನದೊಳಗೆ ಥಳಿಸಲಾಯಿತು ಮತ್ತು ಪೊಲೀಸರು ಮತ್ತು ಸ್ಥಳೀಯ ಗೂಂಡಾಗಳಿಂದ ಹಲ್ಲೆ ನಡೆಸಲಾಗಿತು’ ಎಂದು ಬಿಹಾರದ ವಿರೋಧ ಪಕ್ಷದ ನಾಯಕ ತೇಜಶ್ವಿ ಯಾದವ್ ಆರೋಪಿಸಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಅವರ ಸರ್ಕಾರ ಪೊಲೀಸರನ್ನು ಸದನಕ್ಕೆ ಪ್ರವೇಶಿಸಲು ಅವಕಾಶ ನೀಡಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೇಜಸ್ವಿ ಯಾದವ್ ತಮ್ಮ ಟ್ವಿಟರ್‌ನಲ್ಲಿ ರಾಷ್ಟ್ರೀಯ ಜನತಾದಳದ (ಆರ್‌ಜೆಡಿ) ಶಾಸಕರೊಬ್ಬರನ್ನು ವಿಧಾನಸಭೆಯಿಂದ ಸ್ಟ್ರೆಚರ್‌ನಲ್ಲಿ ಸಾಗಿಸುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

“ನನ್ನ ಕ್ರಾಂತಿಕಾರಿ ಸಹ ಶಾಸಕ, ಬಡ ಕುಟುಂಬಕ್ಕೆ ಸೇರಿದ ಸತೀಶ್ ದಾಸ್, ನಿತೀಶ್ ಕುಮಾರ್ ಅವರ ಗೂಂಡಾಗಿರಿಗೆ ಬಲಿಪಶುವಾಗಿದ್ದಾರೆ. ಅವರ ತಲೆಗೆ ಪೆಟ್ಟು ಬಿದ್ದಿದೆ. ಈ ಚಿತ್ರ ಇದಕ್ಕೆ ಪುರಾವೆಯಾಗಿದೆ” ಎಂದು ಆರ್‌ಜೆಡಿ ನಾಯಕ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಆರ್‌ಜೆಡಿ, ಕಾಂಗ್ರೆಸ್ ಮತ್ತು ಎಡಪಂಥೀಯರನ್ನು ಒಳಗೊಂಡ ಪ್ರತಿಪಕ್ಷಗಳ ಮಹಾ ಮೈತ್ರಿಯ ಸದಸ್ಯರು, 2021 ರ ಬಿಹಾರ ವಿಶೇಷ ಸಶಸ್ತ್ರ ಪೊಲೀಸ್ ಮಸೂದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದರಿಂದ ಈ ಘರ್ಷಣೆ ಭುಗಿಲೆದ್ದಿತು. ವಿಧಾನಸಭೆಯನ್ನು ಮಂಗಳವಾರ ಐದು ಬಾರಿ ಮುಂದೂಡಲಾಯಿತು.

“ಪೊಲೀಸರಿಗೆ ಸಂಪೂರ್ಣ ಅಧಿಕಾರವನ್ನು ನೀಡುವ ಡ್ರಾಕೋನಿಯನ್ ಕಾಯ್ದೆಯಿದು. ಇದು ನಿತೀಶ್ ಅವರ ಸರ್ವಾಧಿಕಾರಿ ರಾಜಕಾರಣದ ನಿಜವಾದ ಅಸ್ತ್ರವಾಗಿ ಕಾರ್ಯನಿರ್ವಹಿಸಬಲ್ಲದು. ಪೊಲೀಸರನ್ನು ಬಳಸಿಕೊಂಡು ಶಾಸಕರನ್ನು ಅಸೆಂಬ್ಲಿಯಿಂದ ಹೊರಹಾಕುವ ಮೂಲಕ ಪೊಲೀಸ್ ರಕ್ಷಣೆಯಲ್ಲಿ ಇದನ್ನು ಅಂಗೀಕರಿಸಲಾಗಿದೆ” ಎಂದು ಯಾದವ್ ಆರೋಪಿಸಿ ಅವ್ಯವಸ್ಥೆಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಅಸೆಂಬ್ಲಿ ಸ್ಪೀಕರ್ ತನ್ನ ಕೊಠಡಿಯಿಂದ ಹೊರಬರದಂತೆ ವಿಪಕ್ಷ ಶಾಸಕರು ತಡೆದರು. ಮಹಿಳಾ ಶಾಸಕರನ್ನು ಸಹ ಮಹಿಳಾ ಭದ್ರತಾ ಸಿಬ್ಬಂದಿ ವಿಧಾನಸಭೆ ಕಟ್ಟಡದಿಂದ ಎಳೆದೊಯ್ದರು.
ತೇಜಸ್ವಿ ಯಾದವ್ ಅವರ ತಾಯಿ ರಾಬ್ರಿ ದೇವಿ ಮಹಿಳಾ ಶಾಸಕರನ್ನು ಮಹಿಳಾ ಭದ್ರತಾ ಸಿಬ್ಬಂದಿ ಹೊತ್ತೊಯ್ಯುವ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ. “ನೀವು ಇಂದು ಹೊರಡಿಸಿದ ಈ ಕಿಡಿಗಳು, ನಿಮ್ಮ ಕರಾಳ ಆಡಳಿತವನ್ನು ನಾಳೆ ಬೂದಿಯಾಗಿ ಸುಡುತ್ತವೆ. ಬಿಹಾರ ಲೆಕ್ಕಾಚಾರ ಮಾಡುತ್ತದೆ ಮತ್ತು ಅದೂ ಶೀಘ್ರದಲ್ಲೇ” ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಹಲವಾರು ಹಕ್ಕೊತ್ತಾಯಗಳ ಜೊತೆಗೆ ಈ ಮಸೂದೆ ವಿರುದ್ಧ ಮೆರವಣಿಗೆಯಲ್ಲಿ ಭಾಗವಹಿಸುವಾಗ ತೇಜಸ್ವಿ ಯಾದವ್ ಅವರನ್ನು ಕೂಡ ಅಲ್ಪಕಾಲ ವಶಕ್ಕೆ ಪಡೆಯಲಾಗಿತ್ತು.


ಇದನ್ನೂ ಓದಿ: ‘ಪ್ರಜಾಪ್ರಭುತ್ವ ನಾಶ ಮಾಡುವ ಮಸೂದೆ’: ದೆಹಲಿ ಮಸೂದೆ ವಿರುದ್ಧ ಖರ್ಗೆ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...