Homeಮುಖಪುಟಬಿಹಾರ ವಿಧಾನಸಭೆಯಲ್ಲಿ ವಿಪಕ್ಷ ಶಾಸಕರ ಮೇಲೆ ಪೊಲೀಸರಿಂದ ತೀವ್ರ ಹಲ್ಲೆ ಆರೋಪ

ಬಿಹಾರ ವಿಧಾನಸಭೆಯಲ್ಲಿ ವಿಪಕ್ಷ ಶಾಸಕರ ಮೇಲೆ ಪೊಲೀಸರಿಂದ ತೀವ್ರ ಹಲ್ಲೆ ಆರೋಪ

ಪ್ರತಿಪಕ್ಷದ ಶಾಸಕರನ್ನು ಬಿಹಾರ ವಿಧಾನಸಭೆಯಲ್ಲಿ ಪೊಲೀಸರು ಎಳೆದೊಯ್ದರು, ಹಲ್ಲೆ ನಡೆಸಿದರು... ಕೆಲವು ಶಾಸಕರ ತಲೆಗೆ, ಕೈ ಕಾಲಿಗೆ ಗಾಯಗಳಾದವು... ಹಲವರನ್ನು ಸ್ಟ್ರೆಚರ್ ಮೇಲೆ ಒಯ್ಯಬೇಕಾಗಿತ್ತು..

- Advertisement -
- Advertisement -

ಮಂಗಳವಾರ ಬಿಹಾರ ರಾಜ್ಯ ಪೊಲೀಸ್ ಪಡೆಗೆ ಹೆಚ್ಚಿನ ಅಧಿಕಾರವನ್ನು ನೀಡುವ ಮಸೂದೆಯ ಮೇಲೆ ಚರ್ಚೆ ನಡೆಯುವ ವೇಳೆ ನಿರಾಯುಧ ಶಾಸಕರನ್ನು ಸದನದೊಳಗೆ ಥಳಿಸಲಾಯಿತು ಮತ್ತು ಪೊಲೀಸರು ಮತ್ತು ಸ್ಥಳೀಯ ಗೂಂಡಾಗಳಿಂದ ಹಲ್ಲೆ ನಡೆಸಲಾಗಿತು’ ಎಂದು ಬಿಹಾರದ ವಿರೋಧ ಪಕ್ಷದ ನಾಯಕ ತೇಜಶ್ವಿ ಯಾದವ್ ಆರೋಪಿಸಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಅವರ ಸರ್ಕಾರ ಪೊಲೀಸರನ್ನು ಸದನಕ್ಕೆ ಪ್ರವೇಶಿಸಲು ಅವಕಾಶ ನೀಡಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೇಜಸ್ವಿ ಯಾದವ್ ತಮ್ಮ ಟ್ವಿಟರ್‌ನಲ್ಲಿ ರಾಷ್ಟ್ರೀಯ ಜನತಾದಳದ (ಆರ್‌ಜೆಡಿ) ಶಾಸಕರೊಬ್ಬರನ್ನು ವಿಧಾನಸಭೆಯಿಂದ ಸ್ಟ್ರೆಚರ್‌ನಲ್ಲಿ ಸಾಗಿಸುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

“ನನ್ನ ಕ್ರಾಂತಿಕಾರಿ ಸಹ ಶಾಸಕ, ಬಡ ಕುಟುಂಬಕ್ಕೆ ಸೇರಿದ ಸತೀಶ್ ದಾಸ್, ನಿತೀಶ್ ಕುಮಾರ್ ಅವರ ಗೂಂಡಾಗಿರಿಗೆ ಬಲಿಪಶುವಾಗಿದ್ದಾರೆ. ಅವರ ತಲೆಗೆ ಪೆಟ್ಟು ಬಿದ್ದಿದೆ. ಈ ಚಿತ್ರ ಇದಕ್ಕೆ ಪುರಾವೆಯಾಗಿದೆ” ಎಂದು ಆರ್‌ಜೆಡಿ ನಾಯಕ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಆರ್‌ಜೆಡಿ, ಕಾಂಗ್ರೆಸ್ ಮತ್ತು ಎಡಪಂಥೀಯರನ್ನು ಒಳಗೊಂಡ ಪ್ರತಿಪಕ್ಷಗಳ ಮಹಾ ಮೈತ್ರಿಯ ಸದಸ್ಯರು, 2021 ರ ಬಿಹಾರ ವಿಶೇಷ ಸಶಸ್ತ್ರ ಪೊಲೀಸ್ ಮಸೂದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದರಿಂದ ಈ ಘರ್ಷಣೆ ಭುಗಿಲೆದ್ದಿತು. ವಿಧಾನಸಭೆಯನ್ನು ಮಂಗಳವಾರ ಐದು ಬಾರಿ ಮುಂದೂಡಲಾಯಿತು.

“ಪೊಲೀಸರಿಗೆ ಸಂಪೂರ್ಣ ಅಧಿಕಾರವನ್ನು ನೀಡುವ ಡ್ರಾಕೋನಿಯನ್ ಕಾಯ್ದೆಯಿದು. ಇದು ನಿತೀಶ್ ಅವರ ಸರ್ವಾಧಿಕಾರಿ ರಾಜಕಾರಣದ ನಿಜವಾದ ಅಸ್ತ್ರವಾಗಿ ಕಾರ್ಯನಿರ್ವಹಿಸಬಲ್ಲದು. ಪೊಲೀಸರನ್ನು ಬಳಸಿಕೊಂಡು ಶಾಸಕರನ್ನು ಅಸೆಂಬ್ಲಿಯಿಂದ ಹೊರಹಾಕುವ ಮೂಲಕ ಪೊಲೀಸ್ ರಕ್ಷಣೆಯಲ್ಲಿ ಇದನ್ನು ಅಂಗೀಕರಿಸಲಾಗಿದೆ” ಎಂದು ಯಾದವ್ ಆರೋಪಿಸಿ ಅವ್ಯವಸ್ಥೆಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಅಸೆಂಬ್ಲಿ ಸ್ಪೀಕರ್ ತನ್ನ ಕೊಠಡಿಯಿಂದ ಹೊರಬರದಂತೆ ವಿಪಕ್ಷ ಶಾಸಕರು ತಡೆದರು. ಮಹಿಳಾ ಶಾಸಕರನ್ನು ಸಹ ಮಹಿಳಾ ಭದ್ರತಾ ಸಿಬ್ಬಂದಿ ವಿಧಾನಸಭೆ ಕಟ್ಟಡದಿಂದ ಎಳೆದೊಯ್ದರು.
ತೇಜಸ್ವಿ ಯಾದವ್ ಅವರ ತಾಯಿ ರಾಬ್ರಿ ದೇವಿ ಮಹಿಳಾ ಶಾಸಕರನ್ನು ಮಹಿಳಾ ಭದ್ರತಾ ಸಿಬ್ಬಂದಿ ಹೊತ್ತೊಯ್ಯುವ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ. “ನೀವು ಇಂದು ಹೊರಡಿಸಿದ ಈ ಕಿಡಿಗಳು, ನಿಮ್ಮ ಕರಾಳ ಆಡಳಿತವನ್ನು ನಾಳೆ ಬೂದಿಯಾಗಿ ಸುಡುತ್ತವೆ. ಬಿಹಾರ ಲೆಕ್ಕಾಚಾರ ಮಾಡುತ್ತದೆ ಮತ್ತು ಅದೂ ಶೀಘ್ರದಲ್ಲೇ” ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಹಲವಾರು ಹಕ್ಕೊತ್ತಾಯಗಳ ಜೊತೆಗೆ ಈ ಮಸೂದೆ ವಿರುದ್ಧ ಮೆರವಣಿಗೆಯಲ್ಲಿ ಭಾಗವಹಿಸುವಾಗ ತೇಜಸ್ವಿ ಯಾದವ್ ಅವರನ್ನು ಕೂಡ ಅಲ್ಪಕಾಲ ವಶಕ್ಕೆ ಪಡೆಯಲಾಗಿತ್ತು.


ಇದನ್ನೂ ಓದಿ: ‘ಪ್ರಜಾಪ್ರಭುತ್ವ ನಾಶ ಮಾಡುವ ಮಸೂದೆ’: ದೆಹಲಿ ಮಸೂದೆ ವಿರುದ್ಧ ಖರ್ಗೆ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...