Homeಮುಖಪುಟಮುಂದಿನ 8-10 ವರ್ಷಗಳಲ್ಲಿ ಪೆಟ್ರೋಲನ್ನು ಜಿಎಸ್‌ಟಿ ಅಡಿಯಲ್ಲಿ ತರಲು ಸಾಧ್ಯವಿಲ್ಲ: ಸುಶಿಲ್ ಮೋದಿ

ಮುಂದಿನ 8-10 ವರ್ಷಗಳಲ್ಲಿ ಪೆಟ್ರೋಲನ್ನು ಜಿಎಸ್‌ಟಿ ಅಡಿಯಲ್ಲಿ ತರಲು ಸಾಧ್ಯವಿಲ್ಲ: ಸುಶಿಲ್ ಮೋದಿ

- Advertisement -
- Advertisement -

ಮುಂದಿನ ಎಂಟರಿಂದ ಹತ್ತು ವರ್ಷಗಳವರೆಗೆ ಪೆಟ್ರೋಲ್ ಮತ್ತು ಡೀಸೆಲ್‌ಗಳನ್ನು ಜಿಎಸ್‌ಟಿ ಅಡಿಯಲ್ಲಿ ತರಲು ಸಾಧ್ಯವಿಲ್ಲ, ಯಾಕೆಂದರೆ ಇದು ಎಲ್ಲಾ ರಾಜ್ಯಗಳಿಗೆ ವಾರ್ಷಿಕ 2 ಲಕ್ಷ ಕೋಟಿ ಆದಾಯ ನಷ್ಟವನ್ನುಂಟು ಮಾಡುತ್ತದೆ ಎಂದು ಬಿಜೆಪಿ ಮುಖಂಡ ಸುಶೀಲ್ ಕುಮಾರ್ ಮೋದಿ ಬುಧವಾರ ಹೇಳಿದ್ದಾರೆ.

ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 5 ಲಕ್ಷ ಕೋಟಿ ರೂ.ಗಳ ತೆರಿಗೆಯನ್ನು ವಸೂಲಿ ಮಾಡುತ್ತವೆ. ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ಅಡಿಯಲ್ಲಿ ತಂದರೆ, ಅವುಗಳ ಮೇಲೆ ಶೇಕಡಾ 28 ಕ್ಕಿಂತ ಜಾಸ್ತಿ ತೆರಿಗೆ ವಸೂಲಿ ಮಾಡಲಾಗುವುದಿಲ್ಲ, ಏಕೆಂದರೆ ಇದು ಜಿಎಸ್‌‌ಟಿಯ ಅತ್ಯುನ್ನತ ತೆರಿಗೆ ಆಗಿದೆ ಎಂದು ಹಣಕಾಸು ಮಸೂದೆ 2021 ಕುರಿತು ಚರ್ಚೆಯಲ್ಲಿ ಭಾಗವಹಿಸಿ ಸುಶಿಲ್ ಮೋದಿ ರಾಜ್ಯಸಭೆಗೆ ತಿಳಿಸಿದ್ದಾರೆ.

ಪ್ರಸ್ತುತ, ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಶೇಕಡಾ 60 ರಷ್ಟು ತೆರಿಗೆ ಸಂಗ್ರಹಿಸಲಾಗುತ್ತಿದೆ. ಇದರಿಂದಾಗಿ ಕೇಂದ್ರ ಮತ್ತು ರಾಜ್ಯಗಳಿಗೆ 2 ಲಕ್ಷ ಕೋಟಿ ರೂ.ಗಳಿಂದ 2.5 ಲಕ್ಷ ಕೋಟಿಗಳಷ್ಟು ಕೊರತೆ ಉಂಟಾಗುತ್ತದೆ ಎಂದು ಅವರು ಸದನದಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿ ಸಾಕ್ಷರತೆಯಿದೆ, ಜನ ಯೋಚಿಸುತ್ತಾರೆ ಹಾಗಾಗಿ ಪಕ್ಷ ಬೆಳೆದಿಲ್ಲ: ಬಿಜೆಪಿಯ ಏಕೈಕ ಶಾಸಕ

ಕಳೆದ ಒಂದು ವರ್ಷದಿಂದ ಪೆಟ್ರೋಲ್ ದರ ಏರಿಕೆಯಾಗುತ್ತಿದ್ದು, ಈ ದೃಷ್ಟಿಯಿಂದ ಸುಶಿಲ್ ಮೋದಿಯ ಹೇಳಿಕೆಯು ಮಹತ್ವವನ್ನು ಪಡೆದುಕೊಂಡಿದೆ. ಪೆಟ್ರೋಲ್‌ ಈಗಾಗಲೇ ಕೆಲವು ರಾಜ್ಯಗಳಲ್ಲಿ ಪ್ರತಿ ಲೀಟರ್‌ಗೆ 100 ರೂ.ಗಳಾಗಿದೆ.

ಒಂದು ವರ್ಷದ ಅವಧಿಯಲ್ಲಿ ಮಾಡಲಾದ ಬೆಲೆಗಳ ಮೊದಲ ಕಡಿತದಲ್ಲಿ, ಫೆಬ್ರವರಿಯ ಆರಂಭದಿಂದ ಅಂತರರಾಷ್ಟ್ರೀಯ ತೈಲ ಬೆಲೆಗಳು ಅತ್ಯಂತ ಕೆಳಮಟ್ಟಕ್ಕೆ ಇಳಿದಿದ್ದರಿಂದ ಬುಧವಾರ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 18 ಪೈಸೆ ಮತ್ತು ಡೀಸೆಲ್‌ ಬೆಲೆಯನ್ನು ಲೀಟರ್‌ಗೆ 17 ಪೈಸೆ ಕಡಿತಗೊಳಿಸಲಾಯಿತು.

ಇದರಿಂದಾಗಿ ದೇಶಾದ್ಯಂತ ದರಗಳನ್ನು ಕಡಿಮೆ ಮಾಡಲಾಗಿದೆ ಮತ್ತು ಸ್ಥಳೀಯ ತೆರಿಗೆ ವಿಧಿಸುವಿಕೆಯನ್ನು (ವ್ಯಾಟ್) ಅವಲಂಬಿಸಿ ರಾಜ್ಯದಿಂದ ರಾಜ್ಯಕ್ಕೆ ಇದು ಬದಲಾಗುತ್ತದೆ. ಒಂದು ವರ್ಷದಲ್ಲಿ ಇಂಧನ ಬೆಲೆಯಲ್ಲಿ ಮಾಡಲಾದ ಮೊದಲ ಕಡಿತವಾಗಿದೆ. ಬೆಲೆಗಳನ್ನು ಕೊನೆಯದಾಗಿ ಮಾರ್ಚ್ 16, 2020 ರಂದು ಕಡಿಮೆಗೊಳಿಸಲಾಗಿತ್ತು.

ಇದನ್ನೂ ಓದಿ: ದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...