Homeಮುಖಪುಟಗುಜರಾತ್: ನಾಲ್ಕು ವರ್ಷದ ಹಿಂದೆ ಮೃತಪಟ್ಟ ವ್ಯಕ್ತಿಗೆ ಉದ್ಯೋಗ ಖಾತ್ರಿಯ ವೇತನ ನೀಡಿದ ಇಲಾಖೆ!

ಗುಜರಾತ್: ನಾಲ್ಕು ವರ್ಷದ ಹಿಂದೆ ಮೃತಪಟ್ಟ ವ್ಯಕ್ತಿಗೆ ಉದ್ಯೋಗ ಖಾತ್ರಿಯ ವೇತನ ನೀಡಿದ ಇಲಾಖೆ!

- Advertisement -
- Advertisement -

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ 2005 (MGNREGA) ಗೆ ಸಂಬಂಧಿಸಿದ ಹಗರಣಗಳಲ್ಲಿ ಇತ್ತೀಚಿನ ಉದಾಹರಣೆಯಾಗಿ ನಾಲ್ಕು ವರ್ಷದ ಹಿಂದೆ ಮೃತಪಟ್ಟವರಿಗೆ ಉದ್ಯೋಗ ಕಾರ್ಡ್ ನೀಡಿ, ವೇತನ ನೀಡಿರುವುದು ಪತ್ತೆಯಾಗಿದೆ.

ಗುಜರಾತ್‌ನ ಛೋಟ್ಟಾ ಉದಯಪುರ ಜಿಲ್ಲೆಯ ಬೊಡೆಲಿ ತಹಸಿಲ್ ಎಂಬ ವ್ಯಕ್ತಿ ನಿಧನರಾಗಿ ನಾಲ್ಕು ವರ್ಷಗಳು ಸಂದಿವೆ. ಆದರೆ ಇವರ ಹೆಸರಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಉದ್ಯೋಗ ಕಾರ್ಡ್ ನೀಡಲಾಗಿದೆ. ಜೊತೆಗೆ ಕೆಲಸ ಮಾಡಿರುವುದಕ್ಕಾಗಿ ವೇತನವನ್ನುಅವರ ಖಾತೆಗೆ  ಪಾವತಿಸಲಾಗಿದೆ ಎಂಬುದು ಬೆಳಕಿಗೆ ಬಂದಿದೆ.

ಈ ಹಗರಣವನ್ನು ಸ್ಥಳೀಯ ಶಾಸಕ ಮೋಹನ್‌ಸಿನ್ಹ್ ರಾಥ್ವಾ ಗುಜರಾತ್ ರಾಜ್ಯ ವಿಧಾನಸಭೆಯಲ್ಲಿ ಬೆಳಕಿಗೆ ತಂದಿದ್ದಾರೆ. ಇದನ್ನು ಗುಜರಾತ್ ಕೃಷಿ ಸಚಿವರು ಸಹ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ದಲಿತ ಆರ್‌ಟಿಐ ಕಾರ್ಯಕರ್ತನ ಹತ್ಯೆ ವಿರೋಧಿಸಿ ಪ್ರತಿಭಟನೆ: ಗುಜರಾತ್‌ ಶಾಸಕ ಜಿಗ್ನೇಶ್ ಮೇವಾನಿ ಬಂಧನ

ಉದ್ಯೋಗ ಖಾತ್ರಿ ಯೋಜನೆಯಡಿ ವೇತನ ಪಾವತಿಗೆ ಸಂಬಂಧಿಸಿದ ಹಗರಣಗಳು ಗುಜರಾತ್‌ನಲ್ಲಿ ಮುಂದುವರೆದಿದೆ ಎಂದು ಬಜೆಟ್ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಮೋಹನ್‌ಸಿನ್ಹ್ ರಾಥ್ವಾ,  ತಮ್ಮ ಕ್ಷೇತ್ರವಾದ ಛೋಟ್ಟಾ ಉದಯಪುರದ ಹಲವಾರು ಅಕ್ರಮಗಳನ್ನು ಪ್ರಸ್ತಾಪಿಸಿದ್ದಾರೆ. ಎಂಜಿಎನ್‌ಆರ್‌ಇಜಿಎ ದಾಖಲೆಗಳಲ್ಲಿ, ಅಪ್ರಾಪ್ತ ವಯಸ್ಕರಿಗೆ ಮತ್ತು ಸರ್ಕಾರಿ ವಲಯದಲ್ಲಿ ಉದ್ಯೋಗದಲ್ಲಿರುವವರಿಗೆ ಸಹ ಅನೇಕ ಬಾರಿ ವೇತನ ಪಾವತಿ ಮಾಡಲಾಗಿದೆ ಎಂದು ಸದನದಲ್ಲಿ ತಿಳಿಸಿದ್ದಾರೆ.

“ನಾಲ್ಕು ವರ್ಷಗಳ ಹಿಂದೆ ನಿಧನರಾದ ವ್ಯಕ್ತಿಯೊಬ್ಬನಿಗೆ ಪಾವತಿ ಮಾಡಲಾಗಿದೆ. ಅದೇ ರೀತಿ, ಪ್ರಾಥಮಿಕ ಶಾಲಾ ಶಿಕ್ಷಕ ಮಲ್ಸಿಂಹ ರಾಥ್ವಾ ಅವರಿಗೆ ಈ ಯೋಜನೆಯಡಿ 1,120 ರೂ. ನೀಡಲಾಗಿದೆ. ಜಿಇಬಿಯಲ್ಲಿ ಕೆಲಸ ಮಾಡುತ್ತಿರುವ ಅಶ್ವಿನ್ ರಾಥ್ವಾ ಅವರಿಗೆ 1,120 ರೂ. ನೀಡಲಾಗಿದೆ. ಇಂತಹ ಘಟನೆಗಳು ಈ ಹಗರಣದಲ್ಲಿ ಅನೇಕ ಕಂಡುಬಂದಿವೆ” ಎಂದಿದ್ದಾರೆ.

ಸರ್ಕಾರಿ ನೌಕರರಾಗಿರುವ ವ್ಯಕ್ತಿಗಳಿಗೆ ಅನೇಕ ಜಾಬ್ ಕಾರ್ಡ್‌ಗಳನ್ನು ನೀಡಲಾಗಿದೆ ಎಂದು ರಾಜ್ಯ ವಿಧಾನಸಭೆಯ ಹಿರಿಯ ಶಾಸಕರು ಹೇಳಿದ್ದಾರೆ. “ಹಗರಣದ ಮತ್ತೊಂದು ದುರಂತವೆಂದರೆ, 13 ವರ್ಷದ ಮತ್ತು 15 ವರ್ಷದ ಮಕ್ಕಳನ್ನು ಸಹ ಫಲಾನುಭವಿಗಳೆಂದು ತೋರಿಸಲಾಗಿದೆ ಮತ್ತು 1,120 ರೂ.ಗಳ ಪಾವತಿಯನ್ನು ಅವರ ಖಾತೆಗಳಿಗೆ ಜಮಾ ಮಾಡಲಾಗಿದೆ” ಎಂದಿದ್ದಾರೆ.

ಇದಕ್ಕೆ ಉತ್ತರಿಸಿದ ಕೃಷಿ, ಗ್ರಾಮೀಣಾಭಿವೃದ್ಧಿ ಮತ್ತು ಸಾರಿಗೆ ಸಚಿವ ಆರ್.ಸಿ.ಫಾಲ್ಡು, ಶಾಸಕ ಮೋಹನ್‌ಸಿನ್ಹ್ ರಾಥ್ವಾ ಅವರ ಆರೋಪ ಮತ್ತು ಯೋಜನೆಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ಒಪ್ಪಿಕೊಂಡಿದ್ದಾರೆ. “ಪಾವತಿಯಲ್ಲಿ ಕೆಲವು ಅಕ್ರಮಗಳನ್ನು ನಾವು ಕಂಡುಕೊಂಡಿದ್ದೇವೆ ಮತ್ತು 2020 ರಲ್ಲಿ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕೆಲವು ಉದ್ಯೋಗಿಗಳನ್ನು ವಜಾಗೊಳಿಸಲಾಗಿದೆ” ಎಂದಿದ್ದಾರೆ.


ಇದನ್ನೂ ಓದಿ: ಗುಜರಾತ್: ಮಗಳ ಕಣ್ಣ ಮುಂದೆಯೆ ದಲಿತ ಹೋರಾಟಗಾರನನ್ನು ಕೊಂದ ಮೇಲ್ಜಾತಿಯ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....