Homeಮುಖಪುಟಗುಜರಾತ್: ನಾಲ್ಕು ವರ್ಷದ ಹಿಂದೆ ಮೃತಪಟ್ಟ ವ್ಯಕ್ತಿಗೆ ಉದ್ಯೋಗ ಖಾತ್ರಿಯ ವೇತನ ನೀಡಿದ ಇಲಾಖೆ!

ಗುಜರಾತ್: ನಾಲ್ಕು ವರ್ಷದ ಹಿಂದೆ ಮೃತಪಟ್ಟ ವ್ಯಕ್ತಿಗೆ ಉದ್ಯೋಗ ಖಾತ್ರಿಯ ವೇತನ ನೀಡಿದ ಇಲಾಖೆ!

- Advertisement -
- Advertisement -

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ 2005 (MGNREGA) ಗೆ ಸಂಬಂಧಿಸಿದ ಹಗರಣಗಳಲ್ಲಿ ಇತ್ತೀಚಿನ ಉದಾಹರಣೆಯಾಗಿ ನಾಲ್ಕು ವರ್ಷದ ಹಿಂದೆ ಮೃತಪಟ್ಟವರಿಗೆ ಉದ್ಯೋಗ ಕಾರ್ಡ್ ನೀಡಿ, ವೇತನ ನೀಡಿರುವುದು ಪತ್ತೆಯಾಗಿದೆ.

ಗುಜರಾತ್‌ನ ಛೋಟ್ಟಾ ಉದಯಪುರ ಜಿಲ್ಲೆಯ ಬೊಡೆಲಿ ತಹಸಿಲ್ ಎಂಬ ವ್ಯಕ್ತಿ ನಿಧನರಾಗಿ ನಾಲ್ಕು ವರ್ಷಗಳು ಸಂದಿವೆ. ಆದರೆ ಇವರ ಹೆಸರಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಉದ್ಯೋಗ ಕಾರ್ಡ್ ನೀಡಲಾಗಿದೆ. ಜೊತೆಗೆ ಕೆಲಸ ಮಾಡಿರುವುದಕ್ಕಾಗಿ ವೇತನವನ್ನುಅವರ ಖಾತೆಗೆ  ಪಾವತಿಸಲಾಗಿದೆ ಎಂಬುದು ಬೆಳಕಿಗೆ ಬಂದಿದೆ.

ಈ ಹಗರಣವನ್ನು ಸ್ಥಳೀಯ ಶಾಸಕ ಮೋಹನ್‌ಸಿನ್ಹ್ ರಾಥ್ವಾ ಗುಜರಾತ್ ರಾಜ್ಯ ವಿಧಾನಸಭೆಯಲ್ಲಿ ಬೆಳಕಿಗೆ ತಂದಿದ್ದಾರೆ. ಇದನ್ನು ಗುಜರಾತ್ ಕೃಷಿ ಸಚಿವರು ಸಹ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ದಲಿತ ಆರ್‌ಟಿಐ ಕಾರ್ಯಕರ್ತನ ಹತ್ಯೆ ವಿರೋಧಿಸಿ ಪ್ರತಿಭಟನೆ: ಗುಜರಾತ್‌ ಶಾಸಕ ಜಿಗ್ನೇಶ್ ಮೇವಾನಿ ಬಂಧನ

ಉದ್ಯೋಗ ಖಾತ್ರಿ ಯೋಜನೆಯಡಿ ವೇತನ ಪಾವತಿಗೆ ಸಂಬಂಧಿಸಿದ ಹಗರಣಗಳು ಗುಜರಾತ್‌ನಲ್ಲಿ ಮುಂದುವರೆದಿದೆ ಎಂದು ಬಜೆಟ್ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಮೋಹನ್‌ಸಿನ್ಹ್ ರಾಥ್ವಾ,  ತಮ್ಮ ಕ್ಷೇತ್ರವಾದ ಛೋಟ್ಟಾ ಉದಯಪುರದ ಹಲವಾರು ಅಕ್ರಮಗಳನ್ನು ಪ್ರಸ್ತಾಪಿಸಿದ್ದಾರೆ. ಎಂಜಿಎನ್‌ಆರ್‌ಇಜಿಎ ದಾಖಲೆಗಳಲ್ಲಿ, ಅಪ್ರಾಪ್ತ ವಯಸ್ಕರಿಗೆ ಮತ್ತು ಸರ್ಕಾರಿ ವಲಯದಲ್ಲಿ ಉದ್ಯೋಗದಲ್ಲಿರುವವರಿಗೆ ಸಹ ಅನೇಕ ಬಾರಿ ವೇತನ ಪಾವತಿ ಮಾಡಲಾಗಿದೆ ಎಂದು ಸದನದಲ್ಲಿ ತಿಳಿಸಿದ್ದಾರೆ.

“ನಾಲ್ಕು ವರ್ಷಗಳ ಹಿಂದೆ ನಿಧನರಾದ ವ್ಯಕ್ತಿಯೊಬ್ಬನಿಗೆ ಪಾವತಿ ಮಾಡಲಾಗಿದೆ. ಅದೇ ರೀತಿ, ಪ್ರಾಥಮಿಕ ಶಾಲಾ ಶಿಕ್ಷಕ ಮಲ್ಸಿಂಹ ರಾಥ್ವಾ ಅವರಿಗೆ ಈ ಯೋಜನೆಯಡಿ 1,120 ರೂ. ನೀಡಲಾಗಿದೆ. ಜಿಇಬಿಯಲ್ಲಿ ಕೆಲಸ ಮಾಡುತ್ತಿರುವ ಅಶ್ವಿನ್ ರಾಥ್ವಾ ಅವರಿಗೆ 1,120 ರೂ. ನೀಡಲಾಗಿದೆ. ಇಂತಹ ಘಟನೆಗಳು ಈ ಹಗರಣದಲ್ಲಿ ಅನೇಕ ಕಂಡುಬಂದಿವೆ” ಎಂದಿದ್ದಾರೆ.

ಸರ್ಕಾರಿ ನೌಕರರಾಗಿರುವ ವ್ಯಕ್ತಿಗಳಿಗೆ ಅನೇಕ ಜಾಬ್ ಕಾರ್ಡ್‌ಗಳನ್ನು ನೀಡಲಾಗಿದೆ ಎಂದು ರಾಜ್ಯ ವಿಧಾನಸಭೆಯ ಹಿರಿಯ ಶಾಸಕರು ಹೇಳಿದ್ದಾರೆ. “ಹಗರಣದ ಮತ್ತೊಂದು ದುರಂತವೆಂದರೆ, 13 ವರ್ಷದ ಮತ್ತು 15 ವರ್ಷದ ಮಕ್ಕಳನ್ನು ಸಹ ಫಲಾನುಭವಿಗಳೆಂದು ತೋರಿಸಲಾಗಿದೆ ಮತ್ತು 1,120 ರೂ.ಗಳ ಪಾವತಿಯನ್ನು ಅವರ ಖಾತೆಗಳಿಗೆ ಜಮಾ ಮಾಡಲಾಗಿದೆ” ಎಂದಿದ್ದಾರೆ.

ಇದಕ್ಕೆ ಉತ್ತರಿಸಿದ ಕೃಷಿ, ಗ್ರಾಮೀಣಾಭಿವೃದ್ಧಿ ಮತ್ತು ಸಾರಿಗೆ ಸಚಿವ ಆರ್.ಸಿ.ಫಾಲ್ಡು, ಶಾಸಕ ಮೋಹನ್‌ಸಿನ್ಹ್ ರಾಥ್ವಾ ಅವರ ಆರೋಪ ಮತ್ತು ಯೋಜನೆಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ಒಪ್ಪಿಕೊಂಡಿದ್ದಾರೆ. “ಪಾವತಿಯಲ್ಲಿ ಕೆಲವು ಅಕ್ರಮಗಳನ್ನು ನಾವು ಕಂಡುಕೊಂಡಿದ್ದೇವೆ ಮತ್ತು 2020 ರಲ್ಲಿ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕೆಲವು ಉದ್ಯೋಗಿಗಳನ್ನು ವಜಾಗೊಳಿಸಲಾಗಿದೆ” ಎಂದಿದ್ದಾರೆ.


ಇದನ್ನೂ ಓದಿ: ಗುಜರಾತ್: ಮಗಳ ಕಣ್ಣ ಮುಂದೆಯೆ ದಲಿತ ಹೋರಾಟಗಾರನನ್ನು ಕೊಂದ ಮೇಲ್ಜಾತಿಯ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...