Homeಕರ್ನಾಟಕಏಕಪತ್ನಿ ವ್ರತಸ್ಥ ವಿವಾದ: ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ತಮ್ಮ ವೈವಾಹಿಕ ಸಂಬಂಧವನ್ನು ಬಹಿರಂಗಪಡಿಸಲಿ- ಸಿದ್ದರಾಮಯ್ಯ

ಏಕಪತ್ನಿ ವ್ರತಸ್ಥ ವಿವಾದ: ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ತಮ್ಮ ವೈವಾಹಿಕ ಸಂಬಂಧವನ್ನು ಬಹಿರಂಗಪಡಿಸಲಿ- ಸಿದ್ದರಾಮಯ್ಯ

- Advertisement -
- Advertisement -

“ರಾಜ್ಯದ ಯಾವ ಶಾಸಕರೂ ಏಕಪತ್ನಿ ವ್ರತಸ್ಥರಲ್ಲ” ಎಂಬ ಸಚಿವ ಸುಧಾಕರ್‌ ಹೇಳಿಕೆ ಬಿಜೆಪಿ ಶಾಸಕರಿಗೂ ಅನ್ವಯವಾಗುವ ಕಾರಣ, ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಎಲ್ಲರೂ ತಕ್ಷಣ ತಮ್ಮ ವೈವಾಹಿಕ ಸಂಬಂಧವನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗುರುವಾರ ಆ‌ಗ್ರಹಿಸಿದ್ದಾರೆ.

ಸಚಿವ ಸುಧಾಕರ ಅವರು ಬುಧವಾರ ಮಾತನಾಡುತ್ತಾ ಎಲ್ಲಾ ಶಾಸಕರು ಏಕಪತ್ನಿ ವ್ರತಸ್ಥರೇ ಎಂದು ಪ್ರಶ್ನಿಸಿದ್ದರು. ಇದು ಸದನದಲ್ಲಿ ಭಾರಿ ಗದ್ದಲವನ್ನು ಸೃಷ್ಟಿಸಿತ್ತು. ಈ ಬಗ್ಗೆ ಸಿದ್ದರಾಮಯ್ಯ ಗುರುವಾರ ಸರಣಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: 224 ಶಾಸಕರು ಶ್ರೀರಾಮಚಂದ್ರರೇ?: ಹೇಳಿಕೆಗೆ ವಿಷಾಧ ವ್ಯಕ್ತಪಡಿಸಿದ ಸಚಿವ ಸುಧಾಕರ್!

“ಸಚಿವ ಸುಧಾಕರ್‌ ಹೇಳಿಕೆಯನ್ನು ಕರ್ನಾಟಕದ ಬಿಜೆಪಿ ಶಾಸಕರು ಶಾಸಕರು ವಿರೋಧಿಸುವುದಾಗಿದ್ದರೆ ನಮ್ಮ ಪಕ್ಷದ ಶಾಸಕರೆಲ್ಲರೂ ಸ್ವ ಇಚ್ಚೆಯಿಂದ ತನಿಖೆಗೆ ಒಳಪಡಲು ನಿರ್ಧರಿಸಿದಂತೆ ಅವರೂ ಕೂಡಾ ಮುಖ್ಯಮಂತ್ರಿಗೆ ತಕ್ಷಣ ಪತ್ರ ಬರೆದು ತಮ್ಮ ಬಗ್ಗೆ ಕೂಡಾ ತನಿಖೆ ನಡೆಯಬೇಕೆಂದು ಮನವಿ ಮಾಡಬೇಕು” ಎಂದು ಅವರು ಆಗ್ರಹಿಸಿದ್ದಾರೆ.

“ಸಚಿವ ಸುಧಾಕರ್‌ ಹೇಳಿಕೆಯನ್ನು ಬಿಜೆಪಿ ಶಾಸಕರು ಒಪ್ಪಿಕೊಳ್ಳುವುದಾದರೆ, ರಾಜ್ಯ ಸರ್ಕಾರ ತಕ್ಷಣ ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 494 ಮತ್ತು 495ರ ಅನ್ವಯ ಕಾನೂನು ಕ್ರಮಕೈಗೊಳ್ಳಬೇಕು. 1955ರ ಹಿಂದೂ ವಿವಾಹ ಕಾಯ್ದೆಯಡಿ ಬಹುಪತ್ನಿತ್ವ ಕಾನೂನು ಪ್ರಕಾರ ಅಪರಾಧವಾಗಿದೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಭಾಧ್ಯಕ್ಷರು ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜ್ಯದ 225 ಶಾಸಕರ ಮಾನಹಾನಿ:ಸಿದ್ದರಾಮಯ್ಯ

ಬುಧವಾರ ರಾತ್ರಿ ಕೂಡಾ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, “ಸಚಿವ ಡಾ.ಸುಧಾಕರ್ ನೀಡಿರುವ ಉದ್ದಟತನದ ಹೇಳಿಕೆಯಿಂದ ವಿಧಾನಸಭಾ ಸಭಾಧ್ಯಕ್ಷರು ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೂ ಸೇರಿದಂತೆ ರಾಜ್ಯದ 225 ಶಾಸಕರ ಮಾನಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಮೇಶ್ ಜಾರಕಿಹೊಳಿಯವರಿಗೆ ಸಂಬಂಧಿಸಿದ ಸಿಡಿ ಹಗರಣದ ಜೊತೆ ಈ ಆರೋಪದ ಬಗ್ಗೆಯೂ ಹೈಕೋರ್ಟ್ ಹಾಲಿ ನ್ಯಾಯಾಧೀಶರ ಮೇಲುಸ್ತುವಾರಿಯಲ್ಲಿ ವಿಶೇಷ ತನಿಖಾ ತಂಡ ತನಿಖೆ ನಡೆಸಿ ಸತ್ಯಸಂಗತಿಯನ್ನು ಬಹಿರಂಗ ಪಡಿಸಬೇಕು” ಎಂದು ಆಗ್ರಹಿಸಿದ್ದರು.

ಇದನ್ನೂ ಓದಿ: ’ಗೋಮಾಂಸ ರಾಷ್ಟ್ರೀಯ ಆಹಾರ’ ಎಂದ ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್‌ಐಆರ್ ದಾಖಲು‌

“ಕಾನೂನಿನ ಹೋರಾಟದ ಮೂಲಕ ಈ ಪ್ರಕರಣವನ್ನು ಹೇಗೆ ಎದುರಿಸಬೇಕು ಎಂಬ ಬಗ್ಗೆ ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸುತ್ತಿದ್ದೇವೆ. ಇಂತಹ ನಿಂದನಾತ್ಮಕ ಹೇಳಿಕೆ ನೀಡಿರುವ ಸಚಿವ ಡಾ.ಸುಧಾಕರ್ ವಿರುದ್ದ ಪ್ರತ್ಯೇಕವಾಗಿ ಮಾನನಷ್ಟ ಮೊಕದ್ದಮೆ ಹಾಕಬೇಕು ಎಂದು ಕೆಲವು ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳುತ್ತೇವೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯದೆ ನಾವು ಬಿಡುವುದಿಲ್ಲ. ಸುಧಾಕರ್ ಒಬ್ಬ ಸಾಮಾನ್ಯ ವ್ಯಕ್ತಿ ಅಲ್ಲ, ಅವರೊಬ್ಬ ಜನಪ್ರತಿನಿಧಿ ಮತ್ತು ಸಚಿವ. ಇಂತಹವರು ನಾಲಿಗೆ ಸಡಿಲು ಬಿಟ್ಟು ಬೇರೆ ಜನಪ್ರತಿನಿಧಿಗಳನ್ನು ನಿಂದಿಸಿರುವುದು ಸ್ಪಷ್ಟವಾಗಿ ಸದಸ್ಯರ ವಿಶೇಷ ರಕ್ಷಣೆಯ (Privilage) ಉಲ್ಲಂಘಣೆಯಾಗಿದೆ. ಸುಧಾಕರ್ ಸ್ಥಿತಿ ತಾ ಕಳ್ಳ ಇತರರನ್ನು ನಂಬ ಎಂಬಂತಾಗಿದೆ” ಎಂದು ಅವರು ವ್ಯಂಗ್ಯವಾಡಿದ್ದಾರೆ.

“ಪುರುಷಪ್ರಧಾನ ಸಮಾಜದಲ್ಲಿ ಪುರುಷ ಶಾಸಕರು ಇಂತಹ ಆರೋಪಗಳನ್ನು ಸುಲಭವಾಗಿ ಜೀರ್ಣಿಸಿಕೊಳ್ಳಬಲ್ಲರು. ಆದರೆ ಮಹಿಳಾ ಶಾಸಕರಿಗೆ ಇಂತಹ ಸುಳ್ಳು ಆರೋಪಗಳು ಬಹಳ ಹಾನಿ ಉಂಟುಮಾಡುತ್ತದೆ. ಅವರು ಮನೆಯಲ್ಲಿ ಕುಟುಂಬದವರನ್ನು ಹೇಗೆ ಎದುರಿಸಬೇಕು? ಇಂತಹ ಕೀಳು ಮನಸ್ಸಿನ ಪುರುಷ ರಾಜಕಾರಣಿಗಳ ಕಾರಣದಿಂದಾಗಿಯೇ ರಾಜಕೀಯ ಪ್ರವೇಶಕ್ಕೆ ಮಹಿಳೆಯರು ಹಿಂದೇಟು ಹಾಕುತ್ತಿದ್ದಾರೆ” ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ’ಮಮತಾ ಬರ್ಮೋಡಾ ಧರಿಸಲಿ’ ಎಂಬ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿಕೆಗೆ ವ್ಯಾಪಕ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...