Homeಚಳವಳಿರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿರುದ್ದ FIR: ಕೇಸು ರದ್ದು ಮಾಡಿ ಎಂದು ಕುಮಾರಸ್ವಾಮಿ ಆಗ್ರಹ

ರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿರುದ್ದ FIR: ಕೇಸು ರದ್ದು ಮಾಡಿ ಎಂದು ಕುಮಾರಸ್ವಾಮಿ ಆಗ್ರಹ

"ಹೋರಾಟ, ಹೋರಾಟಕ್ಕೆ ಕರೆ ನೀಡುವುದು ಸಂವಿಧಾನ ಬದ್ಧ. ಅವರು ಕೊಚ್ಚಿ ಎನ್ನಲಿಲ್ಲ, ಕೊಲ್ಲಿರಿ ಎನ್ನಲಿಲ್ಲ. ಟಿಕಾಯತ್ ವಿರುದ್ಧದ ಕೇಸು ರದ್ದಾಗಬೇಕು"- ಎಚ್.ಡಿ.ಕುಮಾರಸ್ವಾಮಿ

- Advertisement -
- Advertisement -

‌‌ರೈತ ಮುಖಂಡ ರಾಕೇಶ್ ಟಿಕಾಯತ್‌ ಅವರ ವಿರುದ್ದ ಪ್ರಚೋದನಾಕಾರಿ ಭಾಷಣ’ ಮಾಡಿದ್ದಾರೆ ಎಂಬ ಆರೋಪದಲ್ಲಿ ಶಿವಮೊಗ್ಗದಲ್ಲಿ FIR ದಾಖಲಾಗಿತ್ತು. ಇದಕ್ಕೆ ರಾಜ್ಯಾದ್ಯಂತ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೂಡ ಸರ್ಕಾರದ ವಿರುದ್ಧ ಕೆಂಡ ಕಾರಿದ್ದು, ಟಿಕಾಯತ್ ವಿರುದ್ಧದ ಕೇಸು ರದ್ದಾಗಬೇಕು ಎಂದು ಆಗ್ರಹಿಸಿದ್ದಾರೆ.

ಮಾರ್ಚ್ 20 ರ ಶನಿವಾರದಂದು ನಡೆದ ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್‌ನಲ್ಲಿ ಭಾಗವಹಿಸಿ ಮಾತನಾಡಿದ್ದ ರಾಕೇಶ್ ಟಿಕಾಯತ್ ಅವರ ಮೇಲೆ ’ಪ್ರಚೋದನಾಕಾರಿ ಭಾಷಣ’ ಮಾಡಿದ್ದಾರೆ ಎಂಬ ಆರೋಪದಲ್ಲಿ ಪ್ರಕರಣದ ದಾಖಲಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, “ರೈತ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಶಿವಮೊಗ್ಗ, ಹಾವೇರಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಅವರ ಮೇಲಿದೆ. ರೈತರ ಧ್ವನಿ ಹತ್ತಿಕ್ಕುವ ಸರ್ಕಾರದ ಪ್ರಯತ್ನಗಳಿವು. ಪ್ರಚೋದನಕಾರಿ ಭಾಷಣದ ಆರೋಪದ ಮೇಲೆ ನಿಜಕ್ಕೂ ಕೇಸು ದಾಖಲಿಸುವುದೇ ಆದರೆ ಬಿಜೆಪಿಯ ಎಷ್ಟು ನಾಯಕರ ಮೇಲೆ ಎಷ್ಟೆಷ್ಟು ಪ್ರಕರಣ ದಾಖಲಾಗಬೇಕಿತ್ತು..?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿರುದ್ದ ಶಿವಮೊಗ್ಗದಲ್ಲಿ FIR ದಾಖಲು

“ಹೋರಾಟ ಮಾಡಲು ರೈತರು ದೆಹಲಿಗೇ ಬರಬೇಕಿಲ್ಲ, ದೆಹಲಿಯಂತೆ ಇಲ್ಲೇ ಹೋರಾಟ ಮಾಡಿ,” ಎಂಬ ಟಿಕಾಯತ್ ಹೇಳಿಕೆಯಲ್ಲಿ ಪ್ರಚೋದನೆ ಏನೂ ಇಲ್ಲ. ಇದರಲ್ಲಿ ತಪ್ಪು ಕಂಡವರದ್ದು ಗ್ರಹಿಕೆ ದೋಷವಷ್ಟೇ. ಹೋರಾಟ, ಹೋರಾಟಕ್ಕೆ ಕರೆ ನೀಡುವುದು ಸಂವಿಧಾನ ಬದ್ಧ. ಅವರು ಕೊಚ್ಚಿ ಎನ್ನಲಿಲ್ಲ, ಕೊಲ್ಲಿರಿ ಎನ್ನಲಿಲ್ಲ. ಟಿಕಾಯತ್ ವಿರುದ್ಧದ ಕೇಸು ರದ್ದಾಗಬೇಕು” ಎಂದು ಆಗ್ರಹಿಸಿದ್ದಾರೆ.

ಬುಧವಾರ ಕೂಡ ಶಿವಮೊಗ್ಗ, ಬೆಂಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ರೈತ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ದೂರು ಹಿಂಪಡೆಯಲು ಆಗ್ರಹಿಸಿದ್ದರು. ರಾಕೇಶ್ ಟಿಕಾಯತ್‌ ಅವರ ವಿರುದ್ಧ ರಾಜ್ಯದ ವಿವಿಧೆಡೆ ದಾಖಲಿಸಿರುವ ಪ್ರಕರಣಗಳನ್ನು ತಕ್ಷಣ ಹಿಂಪಡೆಯುವಂತೆ ಒತ್ತಾಯಿಸಿದ್ದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಬುಧವಾರ ಬಹಿರಂಗ ಪತ್ರ ಬರೆದಿರುವ ರೈತ ಮುಖಂಡರು, ಮಾರ್ಚ್ 20 ರಂದು ಶಿವಮೊಗ್ಗ ದ ಸೈನ್ಸ್ ಮೈದಾನದಲ್ಲಿ ನಡೆದ ರೈತ ಮಹಾಪಂಚಾಯತ್ ನಲ್ಲಿ ಭಾಗವಹಿಸಿದ್ದ ಸಂಯುಕ್ತ ಕಿಸಾನ್ ಮೋರ್ಚಾದ ನಾಯಕ ರಾಕೇಶ್ ಟಿಕಾಯತ್ ತಮ್ಮ ಭಾಷಣದಲ್ಲಿ “ರಾಜ್ಯದ ರೈತರು ಬೆಂಗಳೂರಿಗೆ ದಿಗ್ಭಂಧನ ಹಾಕಬೇಕು. ಟ್ರಾಕ್ಟರ್ ಗಳನ್ನೇ ಅಸ್ತ್ರವಾಗಿ ಬಳಸಬೇಕು” ಎಂದು ಹೇಳಿದ್ದರೆನ್ನಲಾದ ಅಂಶವನ್ನು ಆಧರಿಸಿ ಐಪಿಸಿ ಕಲಂ 153 ರ ಅಡಿ ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿಕೊಂಡಿರುತ್ತಾರೆ” ಈ ಪ್ರಕರಣ ವಾಪಸ್ ಪಡೆಯಬೇಕು ಎಂದಿದ್ದರು.

’ಪೊಲೀಸರು ಒಂದು ಪಕ್ಷದ ವಕ್ತಾರಿಕೆಯನ್ನು ವಹಿಸಿಕೊಂಡು ಪ್ರಭುತ್ವದ ವಿರುದ್ಧದ ಧ್ವನಿಯನ್ನು ಅಡಗಿಸಲು ಕೆಲಸ ಮಾಡುತ್ತಿರುವಂತೆ ತೋರುತ್ತಿದೆ. ಹಾಗಾಗಿ ಈ ಕೂಡಲೇ ಕರ್ನಾಟಕ ರಾಜ್ಯದಲ್ಲಿ ರಾಕೇಶ್ ಟಿಕಾಯತ್ ವಿರುದ್ಧ ದಾಖಲಿಸಿರುವ ಎಲ್ಲಾ ಕೇಸುಗಳನ್ನು ಹಿಂಪಡೆಯಬೇಕೆಂದು ಈ ಮೂಲಕ ನಾಡಿನ ಸಮಸ್ತ ರೈತ ಕುಲದ ಪರವಾಗಿ ನಮ್ಮ ಹಕ್ಕೋತ್ತಾಯವನ್ನು ಮಂಡಿಸುತ್ತಿದ್ದೇವೆ’ ಎಂದು ಪತ್ರದಲ್ಲಿ ತಿಳಿಸಲಾಗಿತ್ತು.

ರೈತ ಮುಖಂಡರಾದ ಚುಕ್ಕಿ ನಂಜುಂಡಸ್ವಾಮಿ, ಕೆ.ಟಿ. ಗಂಗಾಧರ್, ಎಚ್‌.ಆರ್‌. ಬಸವರಾಜಪ್ಪ, ಕೋಡಿಹಳ್ಳಿ ಚಂದ್ರಶೇಖರ್, ವೀರಸಂಗಯ್ಯ, ಚಾಮರಸ ಮಾಲಿಪಾಟೀಲ, ಕುರುಬೂರು ಶಾಂತಕುಮಾರ್ ಮತ್ತು ಬಡಗಲಪುರ ನಾಗೇಂದ್ರ ಈ ಕುರಿತು  ಬಹಿರಂಗ ಪತ್ರ ಬರೆದಿದ್ದಾರೆ.


ಇದನ್ನೂ ಓದಿ: ಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾಡುತ್ತಾರೆ ಎಚ್ಚರ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...