Homeಮುಖಪುಟಅಸೆಂಬ್ಲಿ ಎಲೆಕ್ಷನ್: ಚುನಾವಣಾ ಬಾಂಡ್ ತಡೆಗೆ ಸುಪ್ರೀಂಗೆ ಅರ್ಜಿ

ಅಸೆಂಬ್ಲಿ ಎಲೆಕ್ಷನ್: ಚುನಾವಣಾ ಬಾಂಡ್ ತಡೆಗೆ ಸುಪ್ರೀಂಗೆ ಅರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆಯೊಂದಿಗೆ, ಚುನಾವಣಾ ಬಾಂಡ್‌ಗಳ ಮಾರಾಟವನ್ನು ತಡೆಯಲು ಮಧ್ಯಂತರ ನಿರ್ದೇಶನ ಕೋರಿ, ‘ಅಸೋಸಿಯೇಷನ್‌ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ಎಡಿಆರ್)’ ಎಂಬ ಎನ್‌ಜಿಒ, ಸುಪ್ರೀಂ ಕೋರ್ಟ್‌ಗೆ ಸರ್ಜಿ ಸಲ್ಲಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಈ ನಿಟ್ಟಿನಲ್ಲಿ, ಎನ್‌ಜಿಒ ತನ್ನ 2017 ರ ರಿಟ್ ಅರ್ಜಿ ಕುರಿತು ತುರ್ತು ಪಟ್ಟಿಯನ್ನು ಕೋರಿದೆ.
ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಅಸ್ಸಾಂನಲ್ಲಿ ಮುಂಬರುವ ರಾಜ್ಯ ಚುನಾವಣೆಗಳಿಗೆ ಮುಂಚಿತವಾಗಿ ಚುನಾವಣಾ ಬಾಂಡ್‌ಗಳ ಯಾವುದೇ ಮಾರಾಟವು “ಶೆಲ್ ಕಂಪನಿಗಳ ಮೂಲಕ ರಾಜಕೀಯ ಪಕ್ಷಗಳ ಅಕ್ರಮ ಹಣವನ್ನು ಮತ್ತಷ್ಟು ಹೆಚ್ಚಿಸುತ್ತದೆ” ಎಂಬ ಗಂಭೀರ ಆತಂಕವಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

“ಬಾಕಿ ಚುನಾವಣಾ ಬಾಂಡ್‌ಗಳ ಸಲ್ಲಿಕೆಗೆ ಈಗ ಅನುಮತಿಸಬಾರದು ಎಂದು ಅರ್ಜಿದಾರರು ಬಯಸುತ್ತಾರೆ” ಎಂದು ತುರ್ತು ಅರ್ಜಿ ಹೇಳಿದೆ.

ಇದನ್ನೂ ಓದಿ: ಕೇರಳ ಚುನಾವಣೆ : ಪಿಣರಾಯಿ ತೆಕ್ಕೆಗೆ ಮತ್ತೆ ಅಧಿಕಾರ ಎಂದ ಸಿ-ವೋಟರ್‌ ಸಮೀಕ್ಷೆಗಳು

ಈ ಪ್ರಕರಣವನ್ನು ಕೊನೆಯದಾಗಿ 2020 ರ ಜನವರಿಯಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ಎನ್‌ಜಿಒ ಸುಪ್ರೀಂಕೋರ್ಟ್‌ಗೆ ತಿಳಿಸಿದೆ ಮತ್ತು ಈ ಪ್ರಕರಣದ ತುರ್ತು ವಿಚಾರಣೆಯನ್ನು ಕೋರಿ 2020 ರ ಡಿಸೆಂಬರ್ 27 ರಂದು ಇದೇ ರೀತಿಯ ಅರ್ಜಿಯನ್ನು ಸಲ್ಲಿಸಿದ ನಂತರವೂ ಈ ವಿಷಯವನ್ನು ಪಟ್ಟಿ ಮಾಡಲಾಗಿಲ್ಲ.

ಚುನಾವಣಾ ಬಾಂಡ್ ಎನ್ನುವುದು ಪ್ರಾಮಿಸರಿ ನೋಟ್ ಅಥವಾ ಬೇರರ್ ಬಾಂಡ್‌ನ ಸ್ವರೂಪದಲ್ಲಿರುವ ಒಂದು ಸಾಧನವಾಗಿದ್ದು, ವ್ಯಕ್ತಿ ಅಥವಾ ಸಂಸ್ಥೆಯು ಭಾರತದ ಪ್ರಜೆಯಾಗಿದ್ದರೆ ಅಥವಾ ಭಾರತದಲ್ಲಿ ಸಂಘಟಿತ ಅಥವಾ ಸ್ಥಾಪಿತವಾದ ಯಾವುದೇ ವ್ಯಕ್ತಿ, ಕಂಪನಿ, ಸಂಸ್ಥೆ ಅಥವಾ ವ್ಯಕ್ತಿಗಳ ಸಂಘದಿಂದ ಖರೀದಿಸಬಹುದು.

ಈ ಬಾಂಡ್‌ಗಳನ್ನು ರಾಜಕೀಯ ಪಕ್ಷಗಳಿಗೆ ಹಣ ನೀಡುವ ಉದ್ದೇಶದಿಂದ ನಿರ್ದಿಷ್ಟವಾಗಿ ನೀಡಲಾಗುತ್ತದೆ.

ಚುನಾವಣಾ ಬಾಂಡ್‌ಗಳನ್ನು ಹಣಕಾಸು ಕಾಯ್ದೆ 2017 ರ ಮೂಲಕ ಪರಿಚಯಿಸಲಾಯಿತು, ಇದು ಚುನಾವಣಾ ಬಾಂಡ್‌ಗಳ ಪರಿಚಯವನ್ನು ಸಕ್ರಿಯಗೊಳಿಸಲು ಆರ್‌ಬಿಐ ಕಾಯ್ದೆ, ಆದಾಯ ತೆರಿಗೆ ಕಾಯ್ದೆ ಮತ್ತು ಜನರ ಪ್ರಾತಿನಿಧ್ಯ ಕಾಯ್ದೆ ಎಂಬ ಮೂರು ಕಾನೂನುಗಳನ್ನು ತಿದ್ದುಪಡಿ ಮಾಡಿತು.
ಹಣಕಾಸು ಕಾಯ್ದೆ-2017 ಚುನಾವಣಾ ಧನಸಹಾಯದ ಉದ್ದೇಶಕ್ಕಾಗಿ ಯಾವುದೇ ನಿಗದಿತ ಬ್ಯಾಂಕ್ ನೀಡುವ ಚುನಾವಣಾ ಬಾಂಡ್‌ಗಳ ವ್ಯವಸ್ಥೆಯನ್ನು ಪರಿಚಯಿಸಿತು.

ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿರುದ್ದ FIR ರದ್ದು ಮಾಡಿ: ಕುಮಾರಸ್ವಾಮಿ ಆಗ್ರಹ

ಹಣ ಕಾಯ್ದೆಯಾಗಿ ಅಂಗೀಕರಿಸಲ್ಪಟ್ಟ ಹಣಕಾಸು ಕಾಯ್ದೆ, ಇದಕ್ಕೆ ರಾಜ್ಯಸಭೆಯ ಒಪ್ಪಿಗೆಯ ಅಗತ್ಯವಿಲ್ಲ. ಆಡಳಿತಾರೂಢ ಬಿಜೆಪಿ ಸರ್ಕಾರಕ್ಕೆ ಬಹುಮತವಿಲ್ಲದ ರಾಜ್ಯಸಭೆಯನ್ನು ಬೈಪಾಸ್ ಮಾಡುವ ಸಲುವಾಗಿ ಇದನ್ನು ಹಣಕಾಸು ಮಸೂದೆಯನ್ನಾಗಿ ಜಾರಿ ಮಾಡಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ತಿದ್ದುಪಡಿಗಳ ಪರಿಣಾಮವೆಂದರೆ, ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ಗಳ ಮೂಲಕ ಕೊಡುಗೆ ನೀಡುವವರ ಹೆಸರುಗಳು ಮತ್ತು ವಿಳಾಸಗಳನ್ನು ನಮೂದಿಸಬೇಕಾಗಿಲ್ಲ ಮತ್ತು ಆ ಮೂಲಕ ರಾಜಕೀಯ ನಿಧಿಯಲ್ಲಿ ಪಾರದರ್ಶಕತೆಯನ್ನು ಕೊಲ್ಲುತ್ತದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಕಂಪನಿಯ ಕೊನೆಯ 3 ವರ್ಷಗಳ ನಿವ್ವಳ ಲಾಭದ ಮೇಲಿನ 7.5% ಕ್ಯಾಪ್ ಅನ್ನು ತೆಗೆದುಹಾಕುವುದರೊಂದಿಗೆ, ಈಗ ಕಾರ್ಪೊರೇಟ್ ಧನಸಹಾಯವು “ಕಂಪನಿಯು ಎಷ್ಟು ದಾನ ಮಾಡಬಹುದು ಎಂಬುದಕ್ಕೆ ಯಾವುದೇ ಮಿತಿಯಿಲ್ಲದ ಕಾರಣ ಅನೇಕ ಪಟ್ಟು ಹೆಚ್ಚಾಗಿದೆ” ಎಂದು ವಕೀಲ ಪ್ರಶಾಂತ್ ಭೂಷಣ್ ಅವರ ಮೂಲಕ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಏಕಪತ್ನಿ ವ್ರತಸ್ಥ ವಿವಾದ: ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ತಮ್ಮ ವೈವಾಹಿಕ ಸಂಬಂಧವನ್ನು ಬಹಿರಂಗಪಡಿಸಲಿ- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...