Homeಮುಖಪುಟಸೈನಿಕರ ಬಲಿಕೊಟ್ಟು ಅವರ ಹೆಸರಿನಲ್ಲಿ ವೋಟು ಕೇಳುವವರಿಗೆ ಮತ ನೀಡಬೇಡಿ.- ಹುತಾತ್ಮ ಯೋಧನ ಪತ್ನಿ

ಸೈನಿಕರ ಬಲಿಕೊಟ್ಟು ಅವರ ಹೆಸರಿನಲ್ಲಿ ವೋಟು ಕೇಳುವವರಿಗೆ ಮತ ನೀಡಬೇಡಿ.- ಹುತಾತ್ಮ ಯೋಧನ ಪತ್ನಿ

- Advertisement -
- Advertisement -

ನಾನು ಮೊನ್ನೆ ನಮ್ಮ ಪ್ರಧಾನಿಗಳ ಭಾಷಣ ಕೇಳಿದೆ. ಪ್ರಧಾನಿಗಳು ಮೊದಲ ಬಾರಿ ಮತಚಲಾಯಿಸುವವರನ್ನು ಉದ್ದೇಶಿಸಿ ನಮ್ಮ ದೇಶದ ಸೈನಿಕರ ಮೇಲೆ ಫುಲ್ವಾಮಾದಲ್ಲಿ ಆದ ಹಲ್ಲೆಯನ್ನು ನೆನಪಿಸಿಕೊಳ್ಳಿ, ಅದರ ನಂತರ ಆದ ಬಾಲಾಕೋಟ್‍ನಲ್ಲಿ ಭಾರತೀಯ ಸೈನ್ಯ ಮಾಡಿದ ಸರ್ಜಿಕಲ್ ಸ್ಟ್ರೈಕ್ ನೆನಪಿಸಿಕೊಳ್ಳಿ, ನೀವು ಮತಚಲಾಯಿಸುವಾಗ ಹುತಾತ್ಮರಾದ ಸೈನಿಕರನ್ನು, ಸರ್ಜಿಕಲ್ ಸ್ಟ್ರೈಕ್ ಮಾಡಿದ ಶೂರಯೋಧರನ್ನು ಗಮನದಲ್ಲಿಟ್ಟುಕೊಂಡು ಮತಚಲಾಯಿಸಿ ಎಂದು ಯುವಜನತೆಗೆ ಅಪೀಲ್ ಮಾಡಿದರು.

ಕೇಳಿ ತುಂಬಾ ದುಃಖವಾಯಿತು. ನನ್ನ ಪ್ರಶ್ನೆ, ಇಂದು ರಾಜಕೀಯ ಮಾಡಲು, ಚುನಾವಣೆಗಳಲ್ಲಿ ಗೆಲ್ಲಲು, ಹುತಾತ್ಮರಾದ ಸೈನಿಕರನ್ನು, ಧೈರ್ಯ ತೋರಿದ ಶೂರಯೋಧರನ್ನು ಬಳಸಿಕೊಳ್ಳಬೇಕೇ? ಚುನಾವಣೆಗಳಲ್ಲಿ ಗೆಲ್ಲಲು ನಮ್ಮ ಯೋಧರನ್ನು ಬಳಸಿಕೊಳ್ಳುವುದು ತಪ್ಪಲ್ಲವೇ? ಪ್ರಧಾನಿಗಳು ದೇಶಕ್ಕೆ ಹೇಳಬೇಕಾದದ್ದೇನೆಂದರೆ, ಹುತಾತ್ಮರಾದ 40 ಸೈನಿಕರನ್ನು ಉಳಿಸಲು ನೀವು ಏನು ಮಾಡಿದಿರಿ? ನಮ್ಮ ಗೂಢಚರ್ಯೆಯ ಸಂಸ್ಥೆಗಳು ಇದರ ಜವಾಬ್ದಾರಿ ಹೊರಬೇಕಲ್ಲವೇ? ಹೌದು ನೀವು ಏರ್‍ಸ್ಟ್ರೀಕ್ ಮಾಡಿಸಿದಿರಿ, ಆದರೆ ಅದನ್ನು ನಮ್ಮ 40 ಸೈನಿಕರು ಹತರಾಗುವುದಕ್ಕಿಂತ ಮುಂಚೆ ಯಾಕೆ ಮಾಡಲಾಗಲಿಲ್ಲ. ಇಂಟೆಲಿಜೆನ್ಸ್‍ದಿಂದ ಮಾಹಿತಿ ಪಡೆದು ಫುಲ್ವಾಮಾ ಹಲ್ಲೆ ಆಗದಂತೆ ಅದಕ್ಕಿಂತ ಮುಂಚೆಯೇ ಸರ್ಜಿಕಲ್ ಸ್ಟ್ರೈಕ್ ಮಾಡಬಹುದಿತ್ತಲ್ಲ? ಯಾಕೆ ಮಾಡಲಿಲ್ಲ? ನಿಮಗೆ ಇದೊಂದು ವಿಕ್ಟರಿ ಆಗಿ ಕಾಣಿಸುತ್ತಿದೆ ಆದರೆ ನನಗೆ ಇದು ಒಂದು ದೊಡ್ಡ ವೈಫಲ್ಯವೆಂದೇ ಕಾಣಿಸುತ್ತಿದೆ. 40 ಜನರು ಹುತಾತ್ಮರಾಗುವುದು ಸಣ್ಣ ಮಾತಲ್ಲ. ಇದು ದೇಶಕ್ಕೆ ಒಂದು ದೊಡ್ಡ ಆಘಾತ. ಒಂದೇ ಕ್ಷಣದಲ್ಲಿ ಎಷ್ಟೋ ಮಕ್ಕಳು ಅನಾಥರಾದರು, ಎಷ್ಟೋ ತಂದೆತಾಯಿಗಳು ತಮ್ಮ ಮಕ್ಕಳನ್ನು ಕಳೆದುಕೊಂಡರು, ಈಗ ನೀವು ಹೇಳುತ್ತಿರುವುದೇನು? ಮೊದಲ ಬಾರಿ ಮತಚಲಾಯಿಸುವವರು ಅವರ ಹೆಸರಿನಲ್ಲಿ ಮತ ಚಲಾಯಿಸಬೇಕೆಂದು? ಇದಕ್ಕಿಂತ ದುಃಖಕರ ಮತ್ತೇನಿದೆ ದೇಶಕ್ಕೆ?

ವಿಡಿಯೋ ನೋಡಿ

ನಾನು ಮೊದಲ ಬಾರಿ ಮತಚಲಾಯಿಸುವವರಿಗೆ ಮತ್ತು ಇತರರಿಗೆ ವಿನಂತಿ ಮಾಡುತ್ತಿದ್ದೇನೆ. ನೀವು ನಿಮ್ಮ ಮತವನ್ನು ನಮ್ಮ ಸೈನಿಕರ ಸುರಕ್ಷತೆಯ ಜವಾಬ್ದಾರಿ ತೆಗೆದುಕೊಳ್ಳುವ, ಅದನ್ನು ಖಾತ್ರಿಪಡಿಸುವ ರಾಜಕಾರಿಣಿಗಳಿಗೆ ಮತ ನೀಡಿ. ನಮ್ಮ ಸೈನಿಕರ ಬಲಿಕೊಟ್ಟು ಅವರ ಹೆಸರಿನಲ್ಲಿ ವೋಟು ಕೇಳುವವರಿಗೆ ನೀಡಬೇಡಿ. ಜೈ ಹಿಂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...