Homeಮುಖಪುಟಸೈನಿಕರ ಬಲಿಕೊಟ್ಟು ಅವರ ಹೆಸರಿನಲ್ಲಿ ವೋಟು ಕೇಳುವವರಿಗೆ ಮತ ನೀಡಬೇಡಿ.- ಹುತಾತ್ಮ ಯೋಧನ ಪತ್ನಿ

ಸೈನಿಕರ ಬಲಿಕೊಟ್ಟು ಅವರ ಹೆಸರಿನಲ್ಲಿ ವೋಟು ಕೇಳುವವರಿಗೆ ಮತ ನೀಡಬೇಡಿ.- ಹುತಾತ್ಮ ಯೋಧನ ಪತ್ನಿ

- Advertisement -
- Advertisement -

ನಾನು ಮೊನ್ನೆ ನಮ್ಮ ಪ್ರಧಾನಿಗಳ ಭಾಷಣ ಕೇಳಿದೆ. ಪ್ರಧಾನಿಗಳು ಮೊದಲ ಬಾರಿ ಮತಚಲಾಯಿಸುವವರನ್ನು ಉದ್ದೇಶಿಸಿ ನಮ್ಮ ದೇಶದ ಸೈನಿಕರ ಮೇಲೆ ಫುಲ್ವಾಮಾದಲ್ಲಿ ಆದ ಹಲ್ಲೆಯನ್ನು ನೆನಪಿಸಿಕೊಳ್ಳಿ, ಅದರ ನಂತರ ಆದ ಬಾಲಾಕೋಟ್‍ನಲ್ಲಿ ಭಾರತೀಯ ಸೈನ್ಯ ಮಾಡಿದ ಸರ್ಜಿಕಲ್ ಸ್ಟ್ರೈಕ್ ನೆನಪಿಸಿಕೊಳ್ಳಿ, ನೀವು ಮತಚಲಾಯಿಸುವಾಗ ಹುತಾತ್ಮರಾದ ಸೈನಿಕರನ್ನು, ಸರ್ಜಿಕಲ್ ಸ್ಟ್ರೈಕ್ ಮಾಡಿದ ಶೂರಯೋಧರನ್ನು ಗಮನದಲ್ಲಿಟ್ಟುಕೊಂಡು ಮತಚಲಾಯಿಸಿ ಎಂದು ಯುವಜನತೆಗೆ ಅಪೀಲ್ ಮಾಡಿದರು.

ಕೇಳಿ ತುಂಬಾ ದುಃಖವಾಯಿತು. ನನ್ನ ಪ್ರಶ್ನೆ, ಇಂದು ರಾಜಕೀಯ ಮಾಡಲು, ಚುನಾವಣೆಗಳಲ್ಲಿ ಗೆಲ್ಲಲು, ಹುತಾತ್ಮರಾದ ಸೈನಿಕರನ್ನು, ಧೈರ್ಯ ತೋರಿದ ಶೂರಯೋಧರನ್ನು ಬಳಸಿಕೊಳ್ಳಬೇಕೇ? ಚುನಾವಣೆಗಳಲ್ಲಿ ಗೆಲ್ಲಲು ನಮ್ಮ ಯೋಧರನ್ನು ಬಳಸಿಕೊಳ್ಳುವುದು ತಪ್ಪಲ್ಲವೇ? ಪ್ರಧಾನಿಗಳು ದೇಶಕ್ಕೆ ಹೇಳಬೇಕಾದದ್ದೇನೆಂದರೆ, ಹುತಾತ್ಮರಾದ 40 ಸೈನಿಕರನ್ನು ಉಳಿಸಲು ನೀವು ಏನು ಮಾಡಿದಿರಿ? ನಮ್ಮ ಗೂಢಚರ್ಯೆಯ ಸಂಸ್ಥೆಗಳು ಇದರ ಜವಾಬ್ದಾರಿ ಹೊರಬೇಕಲ್ಲವೇ? ಹೌದು ನೀವು ಏರ್‍ಸ್ಟ್ರೀಕ್ ಮಾಡಿಸಿದಿರಿ, ಆದರೆ ಅದನ್ನು ನಮ್ಮ 40 ಸೈನಿಕರು ಹತರಾಗುವುದಕ್ಕಿಂತ ಮುಂಚೆ ಯಾಕೆ ಮಾಡಲಾಗಲಿಲ್ಲ. ಇಂಟೆಲಿಜೆನ್ಸ್‍ದಿಂದ ಮಾಹಿತಿ ಪಡೆದು ಫುಲ್ವಾಮಾ ಹಲ್ಲೆ ಆಗದಂತೆ ಅದಕ್ಕಿಂತ ಮುಂಚೆಯೇ ಸರ್ಜಿಕಲ್ ಸ್ಟ್ರೈಕ್ ಮಾಡಬಹುದಿತ್ತಲ್ಲ? ಯಾಕೆ ಮಾಡಲಿಲ್ಲ? ನಿಮಗೆ ಇದೊಂದು ವಿಕ್ಟರಿ ಆಗಿ ಕಾಣಿಸುತ್ತಿದೆ ಆದರೆ ನನಗೆ ಇದು ಒಂದು ದೊಡ್ಡ ವೈಫಲ್ಯವೆಂದೇ ಕಾಣಿಸುತ್ತಿದೆ. 40 ಜನರು ಹುತಾತ್ಮರಾಗುವುದು ಸಣ್ಣ ಮಾತಲ್ಲ. ಇದು ದೇಶಕ್ಕೆ ಒಂದು ದೊಡ್ಡ ಆಘಾತ. ಒಂದೇ ಕ್ಷಣದಲ್ಲಿ ಎಷ್ಟೋ ಮಕ್ಕಳು ಅನಾಥರಾದರು, ಎಷ್ಟೋ ತಂದೆತಾಯಿಗಳು ತಮ್ಮ ಮಕ್ಕಳನ್ನು ಕಳೆದುಕೊಂಡರು, ಈಗ ನೀವು ಹೇಳುತ್ತಿರುವುದೇನು? ಮೊದಲ ಬಾರಿ ಮತಚಲಾಯಿಸುವವರು ಅವರ ಹೆಸರಿನಲ್ಲಿ ಮತ ಚಲಾಯಿಸಬೇಕೆಂದು? ಇದಕ್ಕಿಂತ ದುಃಖಕರ ಮತ್ತೇನಿದೆ ದೇಶಕ್ಕೆ?

ವಿಡಿಯೋ ನೋಡಿ

ನಾನು ಮೊದಲ ಬಾರಿ ಮತಚಲಾಯಿಸುವವರಿಗೆ ಮತ್ತು ಇತರರಿಗೆ ವಿನಂತಿ ಮಾಡುತ್ತಿದ್ದೇನೆ. ನೀವು ನಿಮ್ಮ ಮತವನ್ನು ನಮ್ಮ ಸೈನಿಕರ ಸುರಕ್ಷತೆಯ ಜವಾಬ್ದಾರಿ ತೆಗೆದುಕೊಳ್ಳುವ, ಅದನ್ನು ಖಾತ್ರಿಪಡಿಸುವ ರಾಜಕಾರಿಣಿಗಳಿಗೆ ಮತ ನೀಡಿ. ನಮ್ಮ ಸೈನಿಕರ ಬಲಿಕೊಟ್ಟು ಅವರ ಹೆಸರಿನಲ್ಲಿ ವೋಟು ಕೇಳುವವರಿಗೆ ನೀಡಬೇಡಿ. ಜೈ ಹಿಂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...