Homeಮುಖಪುಟಸೈನಿಕರ ಬಲಿಕೊಟ್ಟು ಅವರ ಹೆಸರಿನಲ್ಲಿ ವೋಟು ಕೇಳುವವರಿಗೆ ಮತ ನೀಡಬೇಡಿ.- ಹುತಾತ್ಮ ಯೋಧನ ಪತ್ನಿ

ಸೈನಿಕರ ಬಲಿಕೊಟ್ಟು ಅವರ ಹೆಸರಿನಲ್ಲಿ ವೋಟು ಕೇಳುವವರಿಗೆ ಮತ ನೀಡಬೇಡಿ.- ಹುತಾತ್ಮ ಯೋಧನ ಪತ್ನಿ

- Advertisement -
- Advertisement -

ನಾನು ಮೊನ್ನೆ ನಮ್ಮ ಪ್ರಧಾನಿಗಳ ಭಾಷಣ ಕೇಳಿದೆ. ಪ್ರಧಾನಿಗಳು ಮೊದಲ ಬಾರಿ ಮತಚಲಾಯಿಸುವವರನ್ನು ಉದ್ದೇಶಿಸಿ ನಮ್ಮ ದೇಶದ ಸೈನಿಕರ ಮೇಲೆ ಫುಲ್ವಾಮಾದಲ್ಲಿ ಆದ ಹಲ್ಲೆಯನ್ನು ನೆನಪಿಸಿಕೊಳ್ಳಿ, ಅದರ ನಂತರ ಆದ ಬಾಲಾಕೋಟ್‍ನಲ್ಲಿ ಭಾರತೀಯ ಸೈನ್ಯ ಮಾಡಿದ ಸರ್ಜಿಕಲ್ ಸ್ಟ್ರೈಕ್ ನೆನಪಿಸಿಕೊಳ್ಳಿ, ನೀವು ಮತಚಲಾಯಿಸುವಾಗ ಹುತಾತ್ಮರಾದ ಸೈನಿಕರನ್ನು, ಸರ್ಜಿಕಲ್ ಸ್ಟ್ರೈಕ್ ಮಾಡಿದ ಶೂರಯೋಧರನ್ನು ಗಮನದಲ್ಲಿಟ್ಟುಕೊಂಡು ಮತಚಲಾಯಿಸಿ ಎಂದು ಯುವಜನತೆಗೆ ಅಪೀಲ್ ಮಾಡಿದರು.

ಕೇಳಿ ತುಂಬಾ ದುಃಖವಾಯಿತು. ನನ್ನ ಪ್ರಶ್ನೆ, ಇಂದು ರಾಜಕೀಯ ಮಾಡಲು, ಚುನಾವಣೆಗಳಲ್ಲಿ ಗೆಲ್ಲಲು, ಹುತಾತ್ಮರಾದ ಸೈನಿಕರನ್ನು, ಧೈರ್ಯ ತೋರಿದ ಶೂರಯೋಧರನ್ನು ಬಳಸಿಕೊಳ್ಳಬೇಕೇ? ಚುನಾವಣೆಗಳಲ್ಲಿ ಗೆಲ್ಲಲು ನಮ್ಮ ಯೋಧರನ್ನು ಬಳಸಿಕೊಳ್ಳುವುದು ತಪ್ಪಲ್ಲವೇ? ಪ್ರಧಾನಿಗಳು ದೇಶಕ್ಕೆ ಹೇಳಬೇಕಾದದ್ದೇನೆಂದರೆ, ಹುತಾತ್ಮರಾದ 40 ಸೈನಿಕರನ್ನು ಉಳಿಸಲು ನೀವು ಏನು ಮಾಡಿದಿರಿ? ನಮ್ಮ ಗೂಢಚರ್ಯೆಯ ಸಂಸ್ಥೆಗಳು ಇದರ ಜವಾಬ್ದಾರಿ ಹೊರಬೇಕಲ್ಲವೇ? ಹೌದು ನೀವು ಏರ್‍ಸ್ಟ್ರೀಕ್ ಮಾಡಿಸಿದಿರಿ, ಆದರೆ ಅದನ್ನು ನಮ್ಮ 40 ಸೈನಿಕರು ಹತರಾಗುವುದಕ್ಕಿಂತ ಮುಂಚೆ ಯಾಕೆ ಮಾಡಲಾಗಲಿಲ್ಲ. ಇಂಟೆಲಿಜೆನ್ಸ್‍ದಿಂದ ಮಾಹಿತಿ ಪಡೆದು ಫುಲ್ವಾಮಾ ಹಲ್ಲೆ ಆಗದಂತೆ ಅದಕ್ಕಿಂತ ಮುಂಚೆಯೇ ಸರ್ಜಿಕಲ್ ಸ್ಟ್ರೈಕ್ ಮಾಡಬಹುದಿತ್ತಲ್ಲ? ಯಾಕೆ ಮಾಡಲಿಲ್ಲ? ನಿಮಗೆ ಇದೊಂದು ವಿಕ್ಟರಿ ಆಗಿ ಕಾಣಿಸುತ್ತಿದೆ ಆದರೆ ನನಗೆ ಇದು ಒಂದು ದೊಡ್ಡ ವೈಫಲ್ಯವೆಂದೇ ಕಾಣಿಸುತ್ತಿದೆ. 40 ಜನರು ಹುತಾತ್ಮರಾಗುವುದು ಸಣ್ಣ ಮಾತಲ್ಲ. ಇದು ದೇಶಕ್ಕೆ ಒಂದು ದೊಡ್ಡ ಆಘಾತ. ಒಂದೇ ಕ್ಷಣದಲ್ಲಿ ಎಷ್ಟೋ ಮಕ್ಕಳು ಅನಾಥರಾದರು, ಎಷ್ಟೋ ತಂದೆತಾಯಿಗಳು ತಮ್ಮ ಮಕ್ಕಳನ್ನು ಕಳೆದುಕೊಂಡರು, ಈಗ ನೀವು ಹೇಳುತ್ತಿರುವುದೇನು? ಮೊದಲ ಬಾರಿ ಮತಚಲಾಯಿಸುವವರು ಅವರ ಹೆಸರಿನಲ್ಲಿ ಮತ ಚಲಾಯಿಸಬೇಕೆಂದು? ಇದಕ್ಕಿಂತ ದುಃಖಕರ ಮತ್ತೇನಿದೆ ದೇಶಕ್ಕೆ?

ವಿಡಿಯೋ ನೋಡಿ

ನಾನು ಮೊದಲ ಬಾರಿ ಮತಚಲಾಯಿಸುವವರಿಗೆ ಮತ್ತು ಇತರರಿಗೆ ವಿನಂತಿ ಮಾಡುತ್ತಿದ್ದೇನೆ. ನೀವು ನಿಮ್ಮ ಮತವನ್ನು ನಮ್ಮ ಸೈನಿಕರ ಸುರಕ್ಷತೆಯ ಜವಾಬ್ದಾರಿ ತೆಗೆದುಕೊಳ್ಳುವ, ಅದನ್ನು ಖಾತ್ರಿಪಡಿಸುವ ರಾಜಕಾರಿಣಿಗಳಿಗೆ ಮತ ನೀಡಿ. ನಮ್ಮ ಸೈನಿಕರ ಬಲಿಕೊಟ್ಟು ಅವರ ಹೆಸರಿನಲ್ಲಿ ವೋಟು ಕೇಳುವವರಿಗೆ ನೀಡಬೇಡಿ. ಜೈ ಹಿಂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...