Homeಕರ್ನಾಟಕಹೊರರಾಜ್ಯ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ: ಸಚಿವ ಸುಧಾಕರ್

ಹೊರರಾಜ್ಯ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ: ಸಚಿವ ಸುಧಾಕರ್

- Advertisement -
- Advertisement -

ಭಾರತದ ಯಾವುದೇ ರಾಜ್ಯದಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರು ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಮಾಡಿಸಿರಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಬರುವ ಅಂತರ್‌ರಾಜ್ಯ ಪ್ರಯಾಣಿಕರು ಕೊರೊನಾ ನಕಾರಾತ್ಮಕತೆಯ ಪ್ರಮಾಣ ಪತ್ರ ಹೊಂದಿರಬೇಕು ಎಂದು ಹೇಳಿದ್ದಾರೆ.

ಈ ಹಿಂದೆ ಕೇರಳ, ಮಹಾರಾಷ್ಟ್ರ, ಪಂಜಾಬ್ ಮತ್ತು ಚಂಡೀಗಢ್‌ನಿಂದ ಬರುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿತ್ತು.

ಬೆಂಗಳೂರಿನಲ್ಲಿ ದಾಖಲಾಗಿರುವ 60% ಪ್ರಕರಣಗಳು ಅಂತರರಾಜ್ಯ ಪ್ರಯಾಣದ ಇತಿಹಾಸವನ್ನು ಹೊಂದಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.

“ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳು ಕ್ರಮೇಣ ಹೆಚ್ಚಾಗುತ್ತಿರುವುದರಿಂದ ಈ ಸೋಂಕು ದೃಢಪಟ್ಟಿರುವ ಎಲ್ಲರಿಗೂ ಮುದ್ರೆ (ಸೀಲ್) ಹಾಕಲಾಗುವುದು 20 ರಿಂದ 40 ವರ್ಷದೊಳಗಿರುವವರಲ್ಲೂ ಸೋಂಕು ಹೆಚ್ಚಾಗಿ ಕಂಡುಬರುತ್ತಿದೆ. 70 ವರ್ಷ ಮೇಲ್ಪಟ್ಟವರಲ್ಲಿ ಗಂಭೀರ ಪ್ರಕರಣಗಳು ಹೆಚ್ಚಾಗುತ್ತಿವೆ. ರೋಗ ಲಕ್ಷಣ ಇಲ್ಲದ ಸೋಂಕಿತರು ಮನೆಯಲ್ಲೇ ಪ್ರತ್ಯೇಕವಾಗಿರುವಂತೆ ಸೂಚಿಸಲಾಗಿದೆ. ಅಂತಹವರು ಹೊರಗಡೆ ಓಡಾಟ ಮಾಡಬಾರದೆಂಬ ಉದ್ದೇಶದಿಂದ ಅವರಿಗೆ ಮುದ್ರೆ ಹಾಕಲಾಗುತ್ತದೆ” ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ಸದನದಲ್ಲಿ ಶರ್ಟ್ ಬಿಚ್ಚಿದ ಸಂಗಮೇಶ್; ಅಸಲಿಗೆ ಕಬಡ್ಡಿ ಗಲಾಟೆಯಲ್ಲಿ ನಡೆದದ್ದೇನು?

“ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ಪ್ರಕರಣಗಳು ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿವೆ. ಬುಧವಾರ ಸುಮಾರು 1,400 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ನಾಲ್ಕು ತಿಂಗಳುಗಳಲ್ಲಿ ಮೊದಲ ಬಾರಿ ಇಷ್ಟೊಂದು ಪ್ರಕರಣಗಳು ಕಂಡುಬಂದಿವೆ. ಈ ಪೈಕಿ ಹಲವಾರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕೋವಿಡ್ ಉಲ್ಭಣವಾಗುವುದನ್ನು ನಿಯಂತ್ರಿಸಲು ಪಾಲಿಕೆ ಕ್ರಮವಹಿಸುತ್ತಿದೆ” ಎಂದು ಹೇಳಿದರು.

“ನಗರದ ಮಾರುಕಟ್ಟೆ, ಚಿತ್ರಮಂದಿರ, ಬಸ್ ನಿಲ್ದಾಣ, ರೈಲು ನಿಲ್ದಾಣ, ಮದುವೆ ಮಂಟಪ, ಧಾರ್ಮಿಕ ಸ್ಥಳ, ಶಾಲಾ-ಕಾಲೇಜು ಆವರಣ ಮುಂತಾದ ಹೆಚ್ಚು ಜನಸಂದಣಿ ಇರುವ ಕಡೆ ಮಾರ್ಷಲ್‌ಗಳು ಕೋವಿಡ್‌ ನಿಯಂತ್ರಣ ನಿಯಮ ಪಾಲನೆ ಬಗ್ಗೆ ನಿಗಾ ವಹಿಸಲಿದ್ದಾರೆ. ಕನಿಷ್ಠ 2 ಮೀ ಅಂತರ ಕಾಪಾಡದಿದ್ದರೆ, ಮಾಸ್ಕ್ ಧರಿಸದೇ ಇದ್ದರೆ ದಂಡ ವಿಧಿಸಲಿದ್ದಾರೆ. ನಗರದಲ್ಲಿ ಯಾವುದಾದರು ಕಾರ್ಯಕ್ರಮಗಳಲ್ಲಿ, ಸಮಾರಂಭಗಳಲ್ಲಿ ಕೋವಿಡ್ ನಿಯಮ ಪಾಲನೆ ಮಾಡದಿರುವುದು ಕಂಡುಬಂದರೆ ಆಯೋಜಕರನ್ನೂ ಹೊಣೆಗಾರರನ್ನಾಗಿಸಿ, ಅವರಿಗೂ ದಂಡ ವಿಧಿಸಲಾಗುವುದು. ಯಾವುದೇ ಕಾರ್ಯಕ್ರಮಗಳಲ್ಲಿ ಅಥವಾ ಸಮಾರಂಭಗಳಲ್ಲಿ ತೆರೆದ ಸಭಾಂಗಣದಲ್ಲಿ 500 ಮಂದಿ ಹಾಗೂ ಮುಚ್ಚಿದ ಸಭಾಂಗಣಗದಲ್ಲಿ 200 ಮಂದಿ ಮಾತ್ರ ಭಾಗವಹಿಸಬೇಕು. ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುವುದು” ಎಂದು ಎಚ್ಚರಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕಣಗಳು ಕ್ರಮೇಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಪ್ರತಿ ವಾರ್ಡ್‌ಗೆ ತಲಾ ಒಂದು ಆಂಬ್ಯುಲೆನ್ಸ್ ನಿಯೋಜನೆ ಮಾಡಲಾಗಿದೆ. ಸೋಂಕು ಪತ್ತೆ ಪ್ರಮಾಣ ನೋಡಿಕೊಂಡು ಅವಶ್ಯಕ್ಕನುಗುಣವಾಗಿ ಹೆಚ್ಚಿನ ಆಂಬ್ಯುಲೆನ್ಸ್ ನಿಯೋಜನೆ ಮಾಡಲು ಪಾಲಿಕೆ ಕ್ರಮವಹಿಸಲಿದೆ ಎಂದು ತಿಳಿಸಿದರು.

“ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಹಲವಾರು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಹೆಚ್ಚು ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ಬುಧವಾರ 51,000 ಪರೀಕ್ಷೆಗಳನ್ನು ಮಾಡಲಾಗಿದೆ. ಕೋವಿಡ್ ನಿಯಮ ಉಲ್ಲಂಘಿಸಿದವರ ಮೇಲೆ ದಂಡ ವಿಧಿಸಲು 216 ಮಾರ್ಷಲ್‌ಗಳನ್ನು ನಿಯೋಜನೆ ಮಾಡಲಾಗಿದೆ” ಎಂದು ವಿವರಿಸಿದರು.


ಇದನ್ನೂ ಓದಿ: ನಾಳೆ ಸಂಪೂರ್ಣ ಭಾರತ್ ಬಂದ್‌: ಹೋರಾಟನಿರತ ರೈತರ ಬೇಡಿಕೆಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...