Homeಮುಖಪುಟತ್ರಿವಳಿ ಕೊಲೆ ಪ್ರಕರಣ: ಹೆಂಡತಿ, ಮಕ್ಕಳನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಬಂಧನ

ತ್ರಿವಳಿ ಕೊಲೆ ಪ್ರಕರಣ: ಹೆಂಡತಿ, ಮಕ್ಕಳನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಬಂಧನ

- Advertisement -
- Advertisement -

ಕಳೆದ ಎರಡು ತಿಂಗಳ ಹಿಂದೆ ಹರಿಯಾಣದಲ್ಲಿ ಆತಂಕ ಮೂಡಿಸಿದ್ದ ತ್ರಿವಳಿ ಕೊಲೆ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ಭದೋಹಿಯಲ್ಲಿ ಪಾಣಿಪತ್ ಅಪರಾಧ ವಿಭಾಗವು ಉತ್ತರ ಪ್ರದೇಶ ಪೊಲೀಸರ ಸಹಾಯದಿಂದ ಆರೋಪಿಯನ್ನು ಬಂಧಿಸಿದೆ.

ಹರಿಯಾಣದ ಮನೆಯೊಂದರಲ್ಲಿ ಕಳೆದ ಎರಡು ತಿಂಗಳ ಹಿಂದೆ ಮೂರು ಅಸ್ಥಿಪಂಜರಗಳನ್ನು ವಶಪಡಿಸಿಕೊಳ್ಳಲಾಗಿತ್ತು. ನಂತರ ಪೊಲೀಸರು ಎಂಟು ಮಂದಿಯ ತಂಡವನ್ನು ರಚಿಸಿ ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದರು.

ಆರೋಪಿ ಎಹ್ಸಾನ್ ತನ್ನ ಪತ್ನಿ ಮತ್ತು 10 ಮತ್ತು 14 ವರ್ಷ ವಯಸ್ಸಿನ ಇಬ್ಬರು ಮಕ್ಕಳನ್ನು ಪಾಣಿಪತ್‌ನ ಶಿವನಗರ ಪ್ರದೇಶದಲ್ಲಿ ಸುಮಾರು ಮೂರು ವರ್ಷಗಳ ಹಿಂದೆ ಕೊಲೆ ಮಾಡಿದ್ದನು. ಶವಗಳನ್ನು ಮನೆಯಲ್ಲಿ ಹೂಳಿದ್ದ ಆರೋಪಿ, ಏನು ನಡೆದಿಲ್ಲ ಎನ್ನುವಂತೆ ಮನೆಯನ್ನು ಪವನ್ ಎಂಬ ವ್ಯಕ್ತಿಗೆ ಮಾರಿ ಅಲ್ಲಿಂದ ಪರಾರಿಯಾಗಿದ್ದರು.

ಇದನ್ನೂ ಓದಿ: ಹೆಲಿಕಾಪ್ಟರ್‌, ಚಂದ್ರಯಾನ, ಐಪೋನ್, ಕೋಟಿ ಹಣ-ತಮಿಳುನಾಡು ಚುನಾವಣಾ ಅಭ್ಯರ್ಥಿಯ ಪ್ರಣಾಳಿಕೆ!

ಕಳೆದ ಎರಡು ತಿಂಗಳ ಹಿಂದೆ ಮನೆಯಲ್ಲಿ ಇರುವೆಗಳು ಹೆಚ್ಚಾದ ಕಾರಣ ಅವುಗಳನ್ನು ನಾಶಗೊಳಿಸಲು, ಮನೆಯನ್ನು ಸ್ವಚ್ಛಗೊಳಿಸುವ ಉದ್ದೇಶದಿಂದ ಮನೆಯ ಹೊಸ ಮಾಲೀಕ ಪವನ್, ನೆಲವನ್ನು ಆಗಿದಾಗ ಮೂರು ಅಸ್ಥಿ ಪಂಜರಗಳು ಕಾಣಿಸಿಕೊಂಡಿದ್ದವು. ನಂತರ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು ಎಂದು ಅಪರಾಧ ವಿಭಾಗದ ಇನ್ಸ್‌ಪೆಕ್ಟರ್ ಚಿತ್ರಕೂಟ್ ಪುರಿ ತಿಳಿಸಿದ್ದಾರೆ.

ಪಾಣಿಪತ್‌ನ ಎಂಟು ಸದಸ್ಯರ ಪೊಲೀಸ್ ತಂಡ ಭದೋಹಿ ಪೊಲೀಸರ ಸಹಾಯದಿಂದ ಬುಧವಾರ ಮರಿಯಾದ್‌ಪಟ್‌ನ ಕಾನ್ಶಿರಾಮ್ ಕಾಲೋನಿಯಲ್ಲಿರುವ ಬಾಡಿಗೆ ಮನೆಯಲ್ಲಿ ತ್ರಿವಳಿ ಕೊಲೆ ಆರೋಪಿ ಎಹ್ಸಾನ್‌ನನ್ನು ಪತ್ತೆ ಹಚ್ಚಿ ಬಂಧಿಸಿದೆ.

ಹೆಂಡತಿ ಮಕ್ಕಳನ್ನು ಕೊಲೆ ಮಾಡಿ ಮನೆಯಲ್ಲಿ ಹೂಳಿದ್ದ ಆರೋಪಿ ಕಳೆದ ಎರಡೂವರೆ ವರ್ಷಗಳಿಂದ ಕಾನ್ಶಿರಾಮ್ ಕಾಲೋನಿಯಲ್ಲಿ ವಾಸಿಸುತ್ತಿದ್ದರು ಎಂದು ಕಾನ್ಶಿರಾಮ್ ಕಾಲೋನಿ ನಿವಾಸಿಗಳು ಪೊಲೀಸರಿಗೆ ತಿಳಿಸಿದ್ದಾರೆ.


ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿರುದ್ದ FIR: ಕೇಸು ರದ್ದು ಮಾಡಿ ಎಂದು ಕುಮಾರಸ್ವಾಮಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...