Homeಮುಖಪುಟ‘ಭಾರತೀಯ ಸೇನೆಯಲ್ಲಿ ಲಿಂಗ ತಾರತಮ್ಯ’ - ಸರಿಪಡಿಸಲು ಸುಪ್ರೀಂ ಆದೇಶ

‘ಭಾರತೀಯ ಸೇನೆಯಲ್ಲಿ ಲಿಂಗ ತಾರತಮ್ಯ’ – ಸರಿಪಡಿಸಲು ಸುಪ್ರೀಂ ಆದೇಶ

2020ರ ಫೆಬ್ರುವರಿಯಲ್ಲಿ ನೀಡಿದ ತೀರ್ಪನ್ನು ಪಾಲಿಸುವ ಮೂಲಕ ಮಹಿಳಾ ಅಧಿಕಾರಿಗಳಿಗೆ ನ್ಯಾಯ ಒದಗಿಸಲು ಸೂಚನೆ.

- Advertisement -
- Advertisement -

ಸೈನ್ಯದಲ್ಲಿ ಶಾಶ್ವತ ಹುದ್ದೆ (ಪರ್ಮನೆಂಟ್ ಕಮಿಷನ್-ಅಂದರೆ ನಿವೃತ್ತಿ ವಯಸ್ಸಿನವರೆಗೂ ಸೈನ್ಯದಲ್ಲಿ ಸೇವೆ ಮಾಡುವ ಅವಕಾಶ) ಪಡೆಯಲು ಮಹಿಳೆಯರಿಗೆ ಅನುಸರಿಸುತ್ತಿರುವ ವೈದ್ಯಕೀಯ ಫಿಟ್‌ನೆಸ್ ಅವಶ್ಯಕತೆ “ಅನಿಯಂತ್ರಿತ”ವಾಗಿದೆ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ.

ಸೈನ್ಯದಲ್ಲಿ ಶಾಶ್ವತ ಹುದ್ದೆಗಾಗಿ ಸುಮಾರು 80 ಮಹಿಳಾ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಗಳ ಬಗ್ಗೆ ಇಂದು ತೀರ್ಪು ಪ್ರಕಟಿಸಿದೆ.
“ನಮ್ಮ ಸಮಾಜದ ರಚನೆಯನ್ನು ಪುರುಷರಿಂದ, ಪುರುಷರಿಗಾಗಿ ರಚಿಸಲಾಗಿದೆ ಎಂದು ನಾವು ಇಲ್ಲಿ ಗುರುತಿಸಬೇಕು” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸೈನ್ಯದ ಆಯ್ದ ವಾರ್ಷಿಕ ಗೌಪ್ಯ ವರದಿ (ಎಸಿಆರ್) ಮೌಲ್ಯಮಾಪನ ಮತ್ತು ವೈದ್ಯಕೀಯ ಫಿಟ್‌ನೆಸ್ ಮಾನದಂಡವನ್ನು ತಡವಾಗಿ ಅನುಷ್ಠಾನಗೊಳಿಸುವುದರಿಂದ ಮಹಿಳಾ ಅಧಿಕಾರಿಗಳ ವಿರುದ್ಧ ತಾರತಮ್ಯ ಕಂಡು ಬಂದಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ತ್ರಿವಳಿ ಕೊಲೆ ಪ್ರಕರಣ: ಹೆಂಡತಿ, ಮಕ್ಕಳನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಬಂಧನ

“ಮೌಲ್ಯಮಾಪನದ ಮಾದರಿಯು ಎಸ್‌ಎಸ್‌ಸಿ (ಕಿರು ಸೇವಾ ಅವಧಿ) ಮಹಿಳಾ ಅಧಿಕಾರಿಗಳಿಗೆ ಆರ್ಥಿಕ ಮತ್ತು ಮಾನಸಿಕ ಹಾನಿಯನ್ನುಂಟು ಮಾಡುತ್ತದೆ” ಎಂದು ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎಂ.ಆರ್. ಶಾ ಅವರಿದ್ದ ಪೀಠ ಹೇಳಿದೆ.
ಈ ತಾರತಮ್ಯವನ್ನು ಹೋಗಲಾಡಿಸಬೇಕು ಎಂದು ತೀರ್ಪು ಆದೇಶಿಸಿದೆ ಎಂಬುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ನ್ಯಾಯಾಲಯದ ಹಿಂದಿನ ತೀರ್ಪನ್ನು ಪಾಲಿಸಲಿಲ್ಲ ಎಂದು ಆರೋಪಕ್ಕೆ ಒಳಗಾದವರ ವಿರುದ್ಧ ಕಂಟೆಂಪ್ಟ್ ಕ್ರಮ ಕೈಗೊಳ್ಳಬೇಕೆಂದು ಮಹಿಳಾ ಅಧಿಕಾರಿಗಳು ಬಯಸಿದ್ದರು.

“ನ್ಯಾಯಾಲಯದ ಎದುರು ಬಂದಿರುವ ಹಲವಾರು ಮಹಿಳಾ ಅಧಿಕಾರಿಗಳು ಹಲವಾರು ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಹಲವಾರು ಸಾಗರೋತ್ತರ ಕಾರ್ಯಯೋಜನೆಗಳನ್ನು ಉತ್ತಮವಾಗಿ ನಿರ್ವಹಿಸಿದ್ದಾರೆ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.

“ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿದವರನ್ನು ನಿರ್ಲಕ್ಷಿಸಲಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ಮಹಿಳೆಯರ ಸಾಧನೆಗಳ ವಿವರವಾದ ಪಟ್ಟಿಯನ್ನು ತೀರ್ಪಿನಲ್ಲಿ ನೀಡಲಾಗಿದೆ. ಆಯ್ಕೆಗಿಂತ ಮಂಡಳಿಯು ನಿರಾಕರಣೆಗಾಗಿ ಕುಳಿತಿದೆ ಎಂದು ತೋರುತ್ತಿದೆ” ಎಂದು ಪೀಠ ಅಭಿಪ್ರಾಯ ಪಟ್ಟಿದೆ.

ಇದನ್ನೂ ಓದಿ: ಹೊರರಾಜ್ಯ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ: ಸಚಿವ ಸುಧಾಕರ್

ಸುಪ್ರೀಂ ಕೋರ್ಟ್ 2020 ರ ಫೆಬ್ರವರಿಯ ಮಹತ್ವದ ತೀರ್ಪಿನಲ್ಲಿ, ಸೈನ್ಯದ ಮಹಿಳಾ ಅಧಿಕಾರಿಗಳಿಗೆ ಪುರುಷ ಅಧಿಕಾರಿಗಳಿಗೆ ಸಮನಾಗಿ ಕಮಾಂಡ್ ಹುದ್ದೆಗಳಿಗೆ ಅರ್ಹತೆ ಪಡೆಯಲು ಅವಕಾಶ ನೀಡಿತು. ಇದರ ವಿರುದ್ಧ ಸರ್ಕಾರದ ವಾದಗಳು “ತಾರತಮ್ಯ”, “ಗೊಂದಲ” ಮತ್ತು ಸ್ಟೀರಿಯೊಟೈಪ್ ಗ್ರಹಿಕೆಗಳನ್ನು ಆಧರಿಸಿದೆ ಎಂದು ಸರ್ಕಾರವನ್ನು ಟೀಕಿಸಿತ್ತು. ಅವರ ಸೇವೆಯ ವರ್ಷಗಳನ್ನು ಲೆಕ್ಕಿಸದೆ ಎಲ್ಲಾ ಮಹಿಳೆಯರಿಗೆ ಶಾಶ್ವತ ಹುದ್ದೆ ಲಭ್ಯವಿರುತ್ತದೆ ಎಂದು ನ್ಯಾಯಾಲಯ ಹೇಳಿತ್ತು.

2020ರ ಫೆಬ್ರುವರಿಯಲ್ಲಿ ನೀಡಿದ ತೀರ್ಪನ್ನು ಪಾಲಿಸುವ ಮೂಲಕ ಮಹಿಳಾ ಅಧಿಕಾರಿಗಳಿಗೆ ನ್ಯಾಯ ಒದಗಿಸಬೇಕು ಇಂದು ಸುಪ್ರೀಂಕೋರ್ಟ್ ಹೇಳಿದೆ.

ಭಾರತೀಯ ವಾಯುಪಡೆ ಮತ್ತು ಭಾರತೀಯ ನೌಕಾಪಡೆ ಈಗಾಗಲೇ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಹುದ್ದೆಯನ್ನು ನೀಡಿವೆ, ಏಕೆಂದರೆ ಎರಡೂ ವಿಭಾಗಗಳು, ಮಹಿಳೆಯರಿಗಾಗಿ ಕೆಲವು ಯುದ್ಧ ಪಾತ್ರಗಳನ್ನು ಮುಕ್ತವಾಗಿರಿಸಿದೆ. ಐಎಎಫ್ ಮಹಿಳೆಯರಿಗೆ ವಾಯು ಮತ್ತು ಭೂ ಸೇನೆಗಳಲ್ಲಿ ಅಧಿಕಾರಿಗಳಾಗಿ ಸೇವೆ ಸಲ್ಲಿಸಲು ಅವಕಾಶ ನೀಡುತ್ತದೆ. ಮಹಿಳಾ ಐಎಎಫ್ ಶಾರ್ಟ್ ಸರ್ವಿಸ್ ಕಮಿಷನ್ ಅಧಿಕಾರಿಗಳು ಹೆಲಿಕಾಪ್ಟರ್, ಸಾರಿಗೆ ವಿಮಾನ ಮತ್ತು ಈಗ ಫೈಟರ್ ಜೆಟ್‌ಗಳನ್ನು ಚಾಲನೆ ಮಾಡುತ್ತಿದ್ದಾರೆ.

ನೌಕಾಪಡೆಯ, ಎಸ್‌ಎಸ್‌ಸಿ ಮೂಲಕ ಸೇರ್ಪಡೆಗೊಂಡ ಮಹಿಳಾ ಅಧಿಕಾರಿಗಳಿಗೆ ಲಾಜಿಸ್ಟಿಕ್ಸ್, ಕಾನೂನು, ವಾಯು ಸಂಚಾರ ನಿಯಂತ್ರಣ, ಕಡಲ ವಿಚಕ್ಷಣ ಪೈಲಟ್‌ಗಳು ಮತ್ತು ನೌಕಾ ಶಸ್ತ್ರಾಸ್ತ್ರ ಇನ್ಸ್ಪೆಕ್ಟರೇಟ್ ಕೇಡರ್‌ನಲ್ಲಿ ಅವಕಾಶ ನೀಡಲಾಗಿದೆ.


ಇದನ್ನೂ ಓದಿ: ಹೆಲಿಕಾಪ್ಟರ್‌, ಚಂದ್ರಯಾನ, ಐಪೋನ್, ಕೋಟಿ ಹಣ-ತಮಿಳುನಾಡು ಚುನಾವಣಾ ಅಭ್ಯರ್ಥಿಯ ಪ್ರಣಾಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...