Homeಮುಖಪುಟ‘ಭಾರತೀಯ ಸೇನೆಯಲ್ಲಿ ಲಿಂಗ ತಾರತಮ್ಯ’ - ಸರಿಪಡಿಸಲು ಸುಪ್ರೀಂ ಆದೇಶ

‘ಭಾರತೀಯ ಸೇನೆಯಲ್ಲಿ ಲಿಂಗ ತಾರತಮ್ಯ’ – ಸರಿಪಡಿಸಲು ಸುಪ್ರೀಂ ಆದೇಶ

2020ರ ಫೆಬ್ರುವರಿಯಲ್ಲಿ ನೀಡಿದ ತೀರ್ಪನ್ನು ಪಾಲಿಸುವ ಮೂಲಕ ಮಹಿಳಾ ಅಧಿಕಾರಿಗಳಿಗೆ ನ್ಯಾಯ ಒದಗಿಸಲು ಸೂಚನೆ.

- Advertisement -
- Advertisement -

ಸೈನ್ಯದಲ್ಲಿ ಶಾಶ್ವತ ಹುದ್ದೆ (ಪರ್ಮನೆಂಟ್ ಕಮಿಷನ್-ಅಂದರೆ ನಿವೃತ್ತಿ ವಯಸ್ಸಿನವರೆಗೂ ಸೈನ್ಯದಲ್ಲಿ ಸೇವೆ ಮಾಡುವ ಅವಕಾಶ) ಪಡೆಯಲು ಮಹಿಳೆಯರಿಗೆ ಅನುಸರಿಸುತ್ತಿರುವ ವೈದ್ಯಕೀಯ ಫಿಟ್‌ನೆಸ್ ಅವಶ್ಯಕತೆ “ಅನಿಯಂತ್ರಿತ”ವಾಗಿದೆ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ.

ಸೈನ್ಯದಲ್ಲಿ ಶಾಶ್ವತ ಹುದ್ದೆಗಾಗಿ ಸುಮಾರು 80 ಮಹಿಳಾ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಗಳ ಬಗ್ಗೆ ಇಂದು ತೀರ್ಪು ಪ್ರಕಟಿಸಿದೆ.
“ನಮ್ಮ ಸಮಾಜದ ರಚನೆಯನ್ನು ಪುರುಷರಿಂದ, ಪುರುಷರಿಗಾಗಿ ರಚಿಸಲಾಗಿದೆ ಎಂದು ನಾವು ಇಲ್ಲಿ ಗುರುತಿಸಬೇಕು” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸೈನ್ಯದ ಆಯ್ದ ವಾರ್ಷಿಕ ಗೌಪ್ಯ ವರದಿ (ಎಸಿಆರ್) ಮೌಲ್ಯಮಾಪನ ಮತ್ತು ವೈದ್ಯಕೀಯ ಫಿಟ್‌ನೆಸ್ ಮಾನದಂಡವನ್ನು ತಡವಾಗಿ ಅನುಷ್ಠಾನಗೊಳಿಸುವುದರಿಂದ ಮಹಿಳಾ ಅಧಿಕಾರಿಗಳ ವಿರುದ್ಧ ತಾರತಮ್ಯ ಕಂಡು ಬಂದಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ತ್ರಿವಳಿ ಕೊಲೆ ಪ್ರಕರಣ: ಹೆಂಡತಿ, ಮಕ್ಕಳನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಬಂಧನ

“ಮೌಲ್ಯಮಾಪನದ ಮಾದರಿಯು ಎಸ್‌ಎಸ್‌ಸಿ (ಕಿರು ಸೇವಾ ಅವಧಿ) ಮಹಿಳಾ ಅಧಿಕಾರಿಗಳಿಗೆ ಆರ್ಥಿಕ ಮತ್ತು ಮಾನಸಿಕ ಹಾನಿಯನ್ನುಂಟು ಮಾಡುತ್ತದೆ” ಎಂದು ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎಂ.ಆರ್. ಶಾ ಅವರಿದ್ದ ಪೀಠ ಹೇಳಿದೆ.
ಈ ತಾರತಮ್ಯವನ್ನು ಹೋಗಲಾಡಿಸಬೇಕು ಎಂದು ತೀರ್ಪು ಆದೇಶಿಸಿದೆ ಎಂಬುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ನ್ಯಾಯಾಲಯದ ಹಿಂದಿನ ತೀರ್ಪನ್ನು ಪಾಲಿಸಲಿಲ್ಲ ಎಂದು ಆರೋಪಕ್ಕೆ ಒಳಗಾದವರ ವಿರುದ್ಧ ಕಂಟೆಂಪ್ಟ್ ಕ್ರಮ ಕೈಗೊಳ್ಳಬೇಕೆಂದು ಮಹಿಳಾ ಅಧಿಕಾರಿಗಳು ಬಯಸಿದ್ದರು.

“ನ್ಯಾಯಾಲಯದ ಎದುರು ಬಂದಿರುವ ಹಲವಾರು ಮಹಿಳಾ ಅಧಿಕಾರಿಗಳು ಹಲವಾರು ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಹಲವಾರು ಸಾಗರೋತ್ತರ ಕಾರ್ಯಯೋಜನೆಗಳನ್ನು ಉತ್ತಮವಾಗಿ ನಿರ್ವಹಿಸಿದ್ದಾರೆ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.

“ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿದವರನ್ನು ನಿರ್ಲಕ್ಷಿಸಲಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ಮಹಿಳೆಯರ ಸಾಧನೆಗಳ ವಿವರವಾದ ಪಟ್ಟಿಯನ್ನು ತೀರ್ಪಿನಲ್ಲಿ ನೀಡಲಾಗಿದೆ. ಆಯ್ಕೆಗಿಂತ ಮಂಡಳಿಯು ನಿರಾಕರಣೆಗಾಗಿ ಕುಳಿತಿದೆ ಎಂದು ತೋರುತ್ತಿದೆ” ಎಂದು ಪೀಠ ಅಭಿಪ್ರಾಯ ಪಟ್ಟಿದೆ.

ಇದನ್ನೂ ಓದಿ: ಹೊರರಾಜ್ಯ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ: ಸಚಿವ ಸುಧಾಕರ್

ಸುಪ್ರೀಂ ಕೋರ್ಟ್ 2020 ರ ಫೆಬ್ರವರಿಯ ಮಹತ್ವದ ತೀರ್ಪಿನಲ್ಲಿ, ಸೈನ್ಯದ ಮಹಿಳಾ ಅಧಿಕಾರಿಗಳಿಗೆ ಪುರುಷ ಅಧಿಕಾರಿಗಳಿಗೆ ಸಮನಾಗಿ ಕಮಾಂಡ್ ಹುದ್ದೆಗಳಿಗೆ ಅರ್ಹತೆ ಪಡೆಯಲು ಅವಕಾಶ ನೀಡಿತು. ಇದರ ವಿರುದ್ಧ ಸರ್ಕಾರದ ವಾದಗಳು “ತಾರತಮ್ಯ”, “ಗೊಂದಲ” ಮತ್ತು ಸ್ಟೀರಿಯೊಟೈಪ್ ಗ್ರಹಿಕೆಗಳನ್ನು ಆಧರಿಸಿದೆ ಎಂದು ಸರ್ಕಾರವನ್ನು ಟೀಕಿಸಿತ್ತು. ಅವರ ಸೇವೆಯ ವರ್ಷಗಳನ್ನು ಲೆಕ್ಕಿಸದೆ ಎಲ್ಲಾ ಮಹಿಳೆಯರಿಗೆ ಶಾಶ್ವತ ಹುದ್ದೆ ಲಭ್ಯವಿರುತ್ತದೆ ಎಂದು ನ್ಯಾಯಾಲಯ ಹೇಳಿತ್ತು.

2020ರ ಫೆಬ್ರುವರಿಯಲ್ಲಿ ನೀಡಿದ ತೀರ್ಪನ್ನು ಪಾಲಿಸುವ ಮೂಲಕ ಮಹಿಳಾ ಅಧಿಕಾರಿಗಳಿಗೆ ನ್ಯಾಯ ಒದಗಿಸಬೇಕು ಇಂದು ಸುಪ್ರೀಂಕೋರ್ಟ್ ಹೇಳಿದೆ.

ಭಾರತೀಯ ವಾಯುಪಡೆ ಮತ್ತು ಭಾರತೀಯ ನೌಕಾಪಡೆ ಈಗಾಗಲೇ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಹುದ್ದೆಯನ್ನು ನೀಡಿವೆ, ಏಕೆಂದರೆ ಎರಡೂ ವಿಭಾಗಗಳು, ಮಹಿಳೆಯರಿಗಾಗಿ ಕೆಲವು ಯುದ್ಧ ಪಾತ್ರಗಳನ್ನು ಮುಕ್ತವಾಗಿರಿಸಿದೆ. ಐಎಎಫ್ ಮಹಿಳೆಯರಿಗೆ ವಾಯು ಮತ್ತು ಭೂ ಸೇನೆಗಳಲ್ಲಿ ಅಧಿಕಾರಿಗಳಾಗಿ ಸೇವೆ ಸಲ್ಲಿಸಲು ಅವಕಾಶ ನೀಡುತ್ತದೆ. ಮಹಿಳಾ ಐಎಎಫ್ ಶಾರ್ಟ್ ಸರ್ವಿಸ್ ಕಮಿಷನ್ ಅಧಿಕಾರಿಗಳು ಹೆಲಿಕಾಪ್ಟರ್, ಸಾರಿಗೆ ವಿಮಾನ ಮತ್ತು ಈಗ ಫೈಟರ್ ಜೆಟ್‌ಗಳನ್ನು ಚಾಲನೆ ಮಾಡುತ್ತಿದ್ದಾರೆ.

ನೌಕಾಪಡೆಯ, ಎಸ್‌ಎಸ್‌ಸಿ ಮೂಲಕ ಸೇರ್ಪಡೆಗೊಂಡ ಮಹಿಳಾ ಅಧಿಕಾರಿಗಳಿಗೆ ಲಾಜಿಸ್ಟಿಕ್ಸ್, ಕಾನೂನು, ವಾಯು ಸಂಚಾರ ನಿಯಂತ್ರಣ, ಕಡಲ ವಿಚಕ್ಷಣ ಪೈಲಟ್‌ಗಳು ಮತ್ತು ನೌಕಾ ಶಸ್ತ್ರಾಸ್ತ್ರ ಇನ್ಸ್ಪೆಕ್ಟರೇಟ್ ಕೇಡರ್‌ನಲ್ಲಿ ಅವಕಾಶ ನೀಡಲಾಗಿದೆ.


ಇದನ್ನೂ ಓದಿ: ಹೆಲಿಕಾಪ್ಟರ್‌, ಚಂದ್ರಯಾನ, ಐಪೋನ್, ಕೋಟಿ ಹಣ-ತಮಿಳುನಾಡು ಚುನಾವಣಾ ಅಭ್ಯರ್ಥಿಯ ಪ್ರಣಾಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...