Homeಕರೋನಾ ತಲ್ಲಣಕೊರೊನಾ ಲಸಿಕೆ ಕೊರತೆ: ಕೋವಾಕ್ಸಿನ್‌ ತಯಾರಿಕೆ ಗಮನಾರ್ಹವಾಗಿ ಹೆಚ್ಚಿಸಲು ಕೇಳಿಕೊಂಡ ಕೇಂದ್ರ

ಕೊರೊನಾ ಲಸಿಕೆ ಕೊರತೆ: ಕೋವಾಕ್ಸಿನ್‌ ತಯಾರಿಕೆ ಗಮನಾರ್ಹವಾಗಿ ಹೆಚ್ಚಿಸಲು ಕೇಳಿಕೊಂಡ ಕೇಂದ್ರ

ಸೀರಮ್‌‌ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ 10 ಕೋಟಿ ಡೋಸ್‌ಗಳನ್ನು ತಯಾರಿಸಲು ಒಪ್ಪಿದೆಯಾದರೂ, ವಿದೇಶಗಳಿಗೆ ರಫ್ತು ಮಾಡುವ ಡೋಸ್‌ಗಳು ಕೂಡಾ ಅದರಲ್ಲೇ ಸೇರಿದೆ.

- Advertisement -
- Advertisement -

ದೇಶದಲ್ಲಿ 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಜನರಿಗೆ ಕೊರೊನಾ ಲಸಿಕೆ ನೀಡುವ ಪ್ರಕ್ರಿಯೆ ಏಪ್ರಿಲ್ 1 ರಿಂದ ಪ್ರಾರಂಭವಾಗುತ್ತಿದ್ದು ಈ ನಡುವೆ, ಕೋವಾಕ್ಸಿನ್ ತಯಾರಕರಾದ ಭಾರತ್ ಬಯೋಟೆಕ್‌‌ ಅನ್ನು ಉತ್ಪಾದನಾ ಸಾಮರ್ಥ್ಯವನ್ನು ಗಮನಾರ್ಹವಾಗಿ ಹೆಚ್ಚಿಸಲು ಕೇಂದ್ರವು ಕೇಳಿಕೊಂಡಿದೆ ಎಂದು TNIE ಪತ್ರಿಕೆಯು ವರದಿ ಮಾಡಿದೆ.

ಪ್ರಸ್ತುತ ಲಸಿಕೆಗಳ ಪೂರೈಕೆ ಸಮಸ್ಯೆಯನ್ನು ಎದುರಿಸುತ್ತಿರುವ ಕೇಂದ್ರ ಸರ್ಕಾರವು ಕೊರೊನಾಕ್ಕಾಗಿ ತಯಾರಿಸಿದ “ದೇಶೀಯ ಲಸಿಕೆಗಳ ಸಾಮರ್ಥ್ಯ ವೃದ್ಧಿಗೆ” ಅನುಕೂಲವಾಗುವಂತೆ ಒಂದು ಸಮಿತಿಯನ್ನು ರಚಿಸಿದೆ. ಭಾರತದಲ್ಲಿ ಇಲ್ಲಿಯವರೆಗೆ ನೀಡಲಾದ 5,33,24,811 ಡೋಸ್‌ಗಳಲ್ಲಿ, 50 ಲಕ್ಷಕ್ಕಿಂತ ಕಡಿಮೆ ಅಥವಾ 10% ಲಸಿಕೆ ಪ್ರಮಾಣವು ದೇಶದ ಮೊದಲ ದೇಶೀಯ ಕೋವಿಡ್‌ ಲಸಿಕೆಯಾದ ಕೊವಾಕ್ಸಿನ್ ಅನ್ನು ಒಳಗೊಂಡಿದೆ.

ಇದನ್ನೂ ಓದಿ: ರಾಜ್ಯದಲ್ಲಿ ನಾಲ್ಕು ದಿನಗಳಿಗೆ ಸಾಕಾಗುವಷ್ಟು ಮಾತ್ರ ಕೊರೊನಾ ಲಸಿಕೆ ದಾಸ್ತಾನು!

ಆರೋಗ್ಯ ಸಚಿವಾಲಯದ ಉನ್ನತ ಅಧಿಕಾರಿಗಳು ಹೇಳುವಂತೆ ಭಾರತದಲ್ಲಿ ಅನುಮತಿ ಲಭಿಸಿದ ಎರಡು ಲಸಿಕೆಗಳ ಸುಮಾರು 8.7 ಕೋಟಿ ಡೋಸೇಜ್‌ಗಳನ್ನು ಇಲ್ಲಿಯವರೆಗೆ ರಾಜ್ಯಗಳಿಗೆ ಕಳುಹಿಸಲಾಗಿದೆ. ಆದರೆ ಈಗ ಉದ್ದೇಶಿತ ಫಲಾನುಭವಿಗಳ ಸಂಖ್ಯೆ ಈಗ 34 ಕೋಟಿಗೆ ತಲುಪಿರುವುದರಿಂದ, ಮುಂದಿನ ಕೆಲವು ತಿಂಗಳುಗಳಲ್ಲಿ ಆದ್ಯತೆಯ ಜನಸಂಖ್ಯೆಗಾಗಿ ದೇಶಕ್ಕೆ 64 ಕೋಟಿ ಪ್ರಮಾಣದ ಲಸಿಕೆಗಳು ಬೇಕಾಗುತ್ತವೆ.

“ಇದು ಕಠಿಣ ಕಾರ್ಯವಾಗಿದೆ ಮತ್ತು ಭಾರತ್ ಬಯೋಟೆಕ್ ತನ್ನ ಉತ್ಪಾದನೆಯನ್ನು ಹೆಚ್ಚಿಸದಿದ್ದರೆ, ದೊಡ್ಡ ಸವಾಲಾಗಿ ಪರಿಣಮಿಸುತ್ತದೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅಧಿಕೃತವಾಗಿ, ಭಾರತದಲ್ಲಿ ಕೋವಿಡ್‌ ಲಸಿಕೆಗಳ ಕೊರತೆಯಿಲ್ಲ ಎಂದು ಸರ್ಕಾರ ಹೇಳುತ್ತಿದೆ. ಸಚಿವಾಲಯದ ಅನೇಕ ಅಧಿಕಾರಿಗಳ ಪ್ರಕಾರ, ಈಗಿನಂತೆ ಸೀರಮ್‌ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಉತ್ಪಾದನಾ ಸಾಮರ್ಥ್ಯ 5-6 ಕೋಟಿ ಆಗಿದ್ದರೆ, ಭಾರತ್ ಬಯೋಟೆಕ್‌‌ ಒಂದು ಕೋಟಿ ಮಿಲಿಯನ್ ಉತ್ಪಾದನಾ ಸಾಮರ್ಥ್ಯ ಹೊಂದಿದೆ. “ಆದಾಗ್ಯೂ, ಸೀರಮ್‌‌ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ 10 ಕೋಟಿ ಡೋಸ್‌ಗಳನ್ನು ತಯಾರಿಸಲು ಒಪ್ಪಿದೆಯಾದರೂ, ವಿದೇಶಗಳಿಗೆ ರಫ್ತು ಮಾಡುವ ಡೋಸ್‌ಗಳು ಕೂಡಾ ಅದರಲ್ಲೇ ಸೇರಿದೆ” ಎಂದು ಮೂಲವನ್ನು ಉಲ್ಲೇಖಿಸಿ TNIE  ವರದಿ ಮಾಡಿದೆ.

ಇದನ್ನೂ ಓದಿ: ಪ್ರತಿದಿನ 10-20 ಕೊರೊನಾ ಪ್ರಕರಣಗಳು: ಕುಂಭಮೇಳದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಕೇಂದ್ರದ ಸೂಚನೆ

“ಆದ್ದರಿಂದ, ಕೊವಾಕ್ಸಿನ್‌ ಎರಡನೇ ಆಯ್ಕೆಯಾಗುದರ ಬದಲಿಗೆ ಮಹತ್ವದ ಪಾತ್ರ ವಹಿಸಬೇಕಾಗುತ್ತದೆ” ಎಂದು ಮೂಲವು ತಿಳಿಸಿದೆ. ಈ ಕಾರಣಕ್ಕಾಗಿಯೇ ಸರ್ಕಾರ ಕಳೆದ ವಾರ ಅಂತರ ಸಚಿವಾಲಯದ ಸಮಿತಿಯನ್ನು ರಚಿಸಿ, ಲಸಿಕೆ ತಯಾರಕರು ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಲು ಮಾರ್ಗಗಳನ್ನು ಕಂಡುಕೊಳ್ಳಲು ಅನೇಕ ಇಲಾಖೆಗಳ ಹಿರಿಯ ಅಧಿಕಾರಿಗಳನ್ನು ಕೇಳಿಕೊಂಡಿದೆ.

“ಸರ್ಕಾರವು ಕೆಲವು ಸಣ್ಣ ಉತ್ಪಾದಕರಿಂದ ಕೂಡಾ ವಿನಂತಿಗಳನ್ನು ಸ್ವೀಕರಿಸಿದೆ. ಕೆಲವು ಲಸಿಕೆ ಉತ್ಪಾದನಾ ಘಟಕಗಳನ್ನು ಕೋವಿಡ್ ಲಸಿಕೆ ಉತ್ಪಾದನಾ ಘಟಕಗಳಾಗಿ ಪರಿವರ್ತಿಸಲು ಕೆಲವು ರಾಜ್ಯ ಸರ್ಕಾರಗಳು ಕೋರಿವೆ ಆದರೆ ಇದಕ್ಕೆ ಜೈವಿಕ ಸುರಕ್ಷತೆಯ ಮಟ್ಟಗಳ ಉನ್ನತ ಮಾನದಂಡಗಳಾಗಿ ಪರಿವರ್ತನೆ ಅಗತ್ಯವಿರುತ್ತದೆ” ಎಂದು ಸಮಿತಿಯ ಸದಸ್ಯರೊಬ್ಬರು ಹೇಳಿದ್ದಾರೆಂದು TNIE ತನ್ನ ವರದಿಯಲ್ಲಿ ಹೇಳಿದೆ.

ಇದನ್ನೂ ಓದಿ: ಕೊರೊನಾ ಸೋಂಕಿಗಿಂತ ರಸ್ತೆ ಅಪಘಾತದಲ್ಲಿ ಮೃತಪಟ್ಟವರೇ ಹೆಚ್ಚು: ಸಚಿವ ನಿತಿನ್ ಗಡ್ಕರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...